Breaking News

ಜಿಲ್ಲೆ

ಧಾರಾವಾಹಿ ಶೂಟಿಂಗ್‍ಗೆ ಸರ್ಕಾರದಿಂದ ಅನುಮತಿ..!

ಬೆಂಗಳೂರು : ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿರುವ ಧಾರಾವಾಹಿ ಶೂಟಿಂಗ್‍ಗಳಿಗೆ ಸರ್ಕಾರ ಅನುಮತಿ ನೀಡಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಲಾಕ್‌ಡೌನ್‌ನಿಂದ ಕಿರುತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಬಿದ್ದು ಒಂದೂವರೆ ತಿಂಗಳಾಗಿವೆ. ಈ ಮಧ್ಯೆ ಲಾಕ್‌ಡೌನ್ ಕೊಂಚ ಸಡಲಿಕೆಯಾಗಿರುವುದರಿಂದ ಮತ್ತು ಬೇರೆ ಬೇರೆ ವಲಯಗಳಲ್ಲಿ ಕೆಲಸ ಪ್ರಾರಂಭವಾಗುತ್ತಿರುವುದರಿಂದ, ಕಿರುತೆರೆಯ ಚಿತ್ರೀಕರಣಕ್ಕೂ ಅನುವು ಮಾಡಿಕೊಡಬೇಕೆಂದು ಹಲವರು ಇದೀಗ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಕುರಿತು ಮಂಗಳವಾರ ಮಾತನಾಡಿದ್ದ ಕಂದಾಯ ಸಚಿವ ಆರ್​. ಅಶೋಕ್​, ಧಾರಾವಾಹಿ ಮತ್ತು …

Read More »

ಕುಡುಕರ ಅವಾಂತರದಿಂದ ಮತ್ತೊಂದು ಕೊಲೆ!

ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದಾಗಿ 43 ದಿನಗಳಿಂದ ಮದ್ಯ ಸಿಗದೆ ಪರದಾಡಿದ್ದ ಕುಡುಕರು ಸೋಮವಾರ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮದ್ಯ ಸೇವಿಸಿ ಸುಮ್ಮನಿರದ ಕೆಲವರು ಕೊಲೆ, ಹಲ್ಲೆಗೆ ನಡೆಸಿರುವ ಘಟನೆಗಳು ವರದಿಯಾಗುತ್ತಲೇ ಇವೆ. ಇಂತಹದ್ದೇ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ. ಪುರುಷೋತ್ತಮ್ ಕೊಲೆಯಾದ ವ್ಯಕ್ತಿ. ಕಾಮಾಕ್ಷಿಪಾಳ್ಯದ ಆದಿತ್ಯ ಬಾರ್ ಮುಂದೆ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ …

Read More »

2ನೇ ದಿನವೂಮದ್ಯ ಮಾರಾಟದಲ್ಲಿ ಬಂಪರ್- 197 ಕೋಟಿ ರೂ. ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಲಾಕ್‍ಡೌನ್ ನಿಯಮಗಳ ಸಡಿಲಿಕೆಯ 2ನೇ ದಿನವೂ ಮದ್ಯ ಮಾರಾಟ ಜೋರಾಗಿದ್ದು, ಇಂದು 197 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ ಮಾಡಲಾಗಿದೆ ಎಂದು ಕೆಎಸ್‍ಬಿಸಿಎಲ್ ಅಧಿಕಾರಿ ತಿಳಿಸಿದ್ದಾರೆ. ಇಂದು ಬೆಳಿಗ್ಗೆಯಿಂದ ಸಂಜೆಯವರೆಗೂ ಮಾರಾಟವಾಗಿರುವ ಮದ್ಯದ ಮಾಹಿತಿ ನೀಡಲಾಗಿದ್ದು, 36.37 ಲಕ್ಷ ಲೀಟರ್ ಭಾರತೀಯ ಮದ್ಯ ಹಾಗೂ 7.02 ಲಕ್ಷ ಲೀಟರ್ ಬಿಯರ್ ಮಾರಾಟ ಮಾಡಲಾಗಿದೆ. ಉಳಿದಂತೆ ಬೆಳಗ್ಗೆಯಿಂದ ನಾಲ್ಕು ಗಂಟೆಯವರೆಗೆ ಕರ್ನಾಟಕ ಪಾನೀಯ ನಿಗಮ (ಕೆಎಸ್‍ಬಿಸಿಎಲ್‍) ನಿಂದ …

Read More »

ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 34 ಜನರು ಗುಣಮುಖ

ಬೆಳಗಾವಿ: ಕೊರೊನಾ ಸೋಂಕು ತಗುಲಿದ್ದ  ಒಬ್ಬ ಮಹಿಳೆಯು ಸೇರಿದಂತೆ ಒಟ್ಟು 8 ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ರಾಯಬಾಗ ತಾಲ್ಲೂಕು ಕುಡಚಿಯ 5 ಜನರು ಮತ್ತು ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಮೂವರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ ಬಿಡುಗಡೆ ಹೊಂದಿದವರ ವಿವರ:  ಪಿ-224 ಪಿ-225 ಪಿ-243 ಪಿ-244 ಪಿ-245 ಪಿ-289 ಪಿ-294 …

Read More »

ಚಿಕ್ಕೋಡಿ:ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಯಕ್ಸಂಬಾದ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಪೂಗತ್ಯಾನಟ್ಟಿ ಇವರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಬಂದ ಶಮನೇವಾಡಿಯ ಸಂಜೀವಕುಮಾರ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಜಿಲ್ಲೆಯಾದ್ಯಂತ ಸಂಚರಿಸಿ ಜನರ ಅಹವಾಲು ಸ್ವೀಕರಿಸಲಿದ್ದಾರೆ. ನಾಳೆ ದಿ. 6 ರಂದು ಸ್ವ ಕ್ಷೇತ್ರ ಯಮಕನಮರಡಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಭೇಟಿ ನೀಡಲಿದ್ದಾರೆ. ದಿ.7 ರಂದು ಬೆಳಿಗ್ಗೆ 10 ಗಂಟೆಗೆ ಬೆಳಗಾವಿಯಲ್ಲಿ ಲಭ್ಯವಿರುವ ಅವರು ಖಾನಾಪೂರ ತಾಲೂಕಿನ ಇಟಗಿಯಲ್ಲಿ ಬೆಳಿಗ್ಗೆ 11 ಗಂಟೆಗೆ, ಹಿರೇಮುನ್ನೋಳ್ಳಿಯಲ್ಲಿ 11.30 ಗಂಟೆಗೆ, ಪಾರೀಶ್ವಾಡದಲ್ಲಿ12 ಗಂಟೆಗೆ ಮತ್ತು 12.30. ಗಂಟೆಗೆ ಹಿರೇಹಟ್ಟಿಹೋಳಿಯಲ್ಲಿ ಭೇಟಿ ನೀಡಿ ಜನರ …

Read More »

ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಂದು ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣೆಗೆರೆಯಲ್ಲಿ ಕೊರೊನಾ ಸೋಂಕಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಂದು ಒಂದೇ ದಿನ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ದಾವಣಗೆರೆ ಜಿಲ್ಲೆಯೊಂದರಲ್ಲೇ ಇಂದು 12 ಜನರಲ್ಲಿ ಸೋಂಕು …

Read More »

ರಾಯಚೂರಿನಲ್ಲಿ ಮಧ್ಯಾಹ್ನವೇ ಮದ್ಯದಂಗಡಿಗಳು ಕ್ಲೋಸ್

ರಾಯಚೂರು: ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆ ಮದ್ಯದಂಗಡಿಗಳನ್ನ ತೆರೆದಿರುವ ಕಾರಣಕ್ಕೆ ರಾಯಚೂರಿನಲ್ಲಿ ರಸ್ತೆಗಳಲ್ಲಿ ಜನರ ಓಡಾಟವೂ ಹೆಚ್ಚಾಗಿದೆ. ಮದ್ಯದಂಗಡಿ ಮುಂದೆ ಜನರ ಕ್ಯೂ ದೊಡ್ಡದಿದೆ ಇದರ ಜೊತೆಗೆ ಜನ ಎಲ್ಲಾ ನಿಯಮಗಳನ್ನ ಗಾಳಿಗೆ ತೂರಿ ಗುಂಪು ಗುಂಪಾಗಿ ಓಡಾಡುತ್ತಿದ್ದಾರೆ. ಹೀಗಾಗಿ ರಾಯಚೂರಿನಲ್ಲಿ ಮಧ್ಯಾಹ್ನ ಎರಡು ಗಂಟೆಗೆ ಎಲ್ಲ ಬಂದ್ ಮಾಡಲಾಗಿದೆ. ನಿನ್ನೆ ಸಂಜೆ 7 ಗಂಟೆವರೆಗೆ ಮದ್ಯದಂಗಡಿ ತೆರೆಯಲಾಗಿತ್ತು. ಜನರ ಓಡಾಟ ವಿಪರೀತವಾಗಿದ್ದರಿಂದ ಇಂದಿನಿಂದ ಮಧ್ಯಾಹ್ನ ಎರಡು ಗಂಟೆಗೆ ಮದ್ಯದಂಗಡಿ ಬಂದ್ …

Read More »

ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.ಸುವಿದ್ಯಾ ವೆಬ್​ಸೈಟ್​ನಲ್ಲಿ ಲಭ್ಯ

ಬೆಂಗಳೂರು: ಕಳೆದ ಫೆಬ್ರುವರಿ ಯಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಲಾಕ್​ಡೌನ್​ ಹಿನ್ನೆಲೆ ಸುವಿದ್ಯಾ ವೆಬ್​ಸೈಟ್​ನಲ್ಲಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪ್ರಥಮ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಸುವಿದ್ಯಾ ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. ಹಾಗೇ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್​ ನಂಬರ್​ಗಳಿಗೆ ಕೂಡ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಶಾಲೆಗಳಲ್ಲಿ ಫಲಿತಾಂಶ ವೀಕ್ಷಿಸಲು ವಿದ್ಯಾರ್ಥಿಗಳು ಗುಂಪು ಸೇರುವ ಸಾಧ್ಯತೆ ಇರುವುದರಿಂದ ಕೊರೊನಾ ಸೋಂಕು ಹರಡುವ ಭೀತಿಯಿಂದ ಸುವಿದ್ಯಾ …

Read More »

ಲಕ್ಷ್ಮಿ ತಾಯಿ ಫೌಂಡೇಶನ್ನಿಂದ ನಿರಂತರ ಸೇವೆ..:ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಲಕ್ಷ್ಮಿ ತಾಯಿ ಫೌಂಡೇಶನ್ ಹಿಂದಿನಿಂದಲೂ ಬಡವರ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದು, ಇದು ನಿರಂತರವಾಗಿ ಮುಂದುವರಿಯಲಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ. ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರ್ಕಂಡೇಯ ನಗರ, ವಾಲ್ಮೀಕಿ ನಗರ ಹಾಗೂ ಕಲ್ಯಾಣಹಟ್ಟಿ ಪ್ರದೇಶಗಳ ಕೂಲಿ ಕಾರ್ಮಿಕರಿಗೆ, ಬಡ ಜನರಿಗೆ ಹಾಗೂ ನಿರ್ಗತಿಕರಿಗೆ ರೇಷನ್ ಸಾಮಗ್ರಿಗಳ ಕಿಟ್ ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು.  ಲಕ್ಷ್ಮಿ ತಾಯಿ ಫೌಂಡೇಶನ್ ಕೇವಲ ಕೊರೋನಾ ಸಂದರ್ಭದಲ್ಲಿ ಜನರ ಸೇವೆ ಮಾಡುತ್ತಿಲ್ಲ. ಈ …

Read More »