ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ರ ಗಡಿ ದಾಟಿದೆ. ಆದರೂ ಜನ ಸಾಮಾನ್ಯರು ಎಚ್ಚೆತ್ತುಕೊಳ್ಳುತ್ತಿಲ್ಲ. ಇದರಿಂದಾಗಿ ಬಿಬಿಎಂಪಿ ಟೀಂ ಫೀಲ್ಡಿಗೆ ಇಳಿದಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ನಿಮಯಗಳನ್ನು ಬಿಬಿಎಂಪಿ ಜಾರಿಗೆ ತಂದಿದೆ. ಮಾಸ್ಕ್ ಧರಿಸದೇ ಓಡಾಡಿದ್ರೆ 1 ಸಾವಿರ ರೂಪಾಯಿ ದಂಡ ಹಾಕಲಾಗುತ್ತದೆ. 9 ಗಂಟೆವರೆಗೂ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ 9 …
Read More »ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕಹೆಚ್ಚಳ..
ಬೆಂಗಳೂರು: ಕೊರೊನಾ ಲಾಕ್ಡೌನ್ ನಡುವೆ ಮೆಡಿಕಲ್ ಮತ್ತು ಡೆಂಟಲ್ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ದಿಢೀರನೇ ಸರ್ಕಾರ ಪಿಜಿ ಮೆಡಿಕಲ್ ಮತ್ತು ಡೆಂಟಲ್ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಿದೆ. ಖಾಸಗಿ ಕಾಲೇಜ್ಗಳು, ಖಾಸಗಿ ವಿವಿಗಳು, ಡೀಮ್ಡ್ ವಿವಿಗಳ ಸೀಟುಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದ ಸೀಟುಗಳಿಗೆ ಶೇ. 30ರಷ್ಟು ಶುಲ್ಕ ಅಧಿಕವಾಗಿದೆ. ಇನ್ನೂ ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೇರುವ ವಿದ್ಯಾರ್ಥಿಗಳಿಗೆ ಶೇ. 20ರಷ್ಟು ಶುಲ್ಕವನ್ನು ಸರ್ಕಾರ …
Read More »ಹಿರೇಬಾಗೇವಾಡಿ ಗ್ರಾಮವನ್ನ ಸೀಲ್ಡೌನ್ ಮಾಡಿ ಸುಮ್ಮನಾಗಿದೆ. ಸ್ಯಾನಿಟೈಸರ್ ಮಾಡುವ ಗೋಜಿಗೆ ಹೋಗಿಲ್ಲ. ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿಲ್ಲ ಅಂತ ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ..
ಬೆಳಗಾವಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ತಗ್ಲೀಘಿಗಳ ನಂಜು ವ್ಯಾಪಿಸುತ್ತಿದ್ದು, 69 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಂದೇ ಗ್ರಾಮದಲ್ಲಿ 36 ಜನರಲ್ಲಿ ಸೋಂಕು ದೃಢವಾಗಿದೆ. 20 ಸಾವಿರ ಜನಸಂಖ್ಯೆ ಇರುವ ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮದಲ್ಲಿ ಇದೀಗ ಕೊರೊನಾ ರಣಕೇಕೆ ಹಾಕುತ್ತಿದೆ. ಈ ಗ್ರಾಮದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 36 ಜನರಿಗೆ ಕೊರೊನಾ ಸೋಂಕು ತಗುಲಿದೆ. ಓರ್ವ ಯುವಕನಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡಿದೆ. ದೆಹಲಿಯ …
Read More »ಇನ್ನೂ ಮೂರ್ನಾಲ್ಕು ತಿಂಗಳು ಇರುತ್ತೆ ಕೊರೋನಾ : ಸಿಎಂ ಯಡಿಯೂರಪ್ಪ
ಬೆಂಗಳೂರು, ಏ.30- ಕೊರೊನಾ ಮಹಾಮಾರಿ ಇನ್ನೂ ಮೂರ್ನಾಲ್ಕು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಆರ್ಥಿಕ ಚಟುವಟಿಕೆ ವೃದ್ಧಿ ದೃಷ್ಟಿಯಿಂದ ಮೇ 3ರ ನಂತರ ಕೈಗಾರಿಕೆಗಳನ್ನು ತೆರೆಯುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಚಿವ ಸಂಪುಟ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಇಂದು ಸಂಜೆ ಕೈಗಾರಿಕೆ ತೆರೆಯುವ ಕುರಿತಂತೆ ಕೈಗಾರಿಕೋದ್ಯಮಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಮೇ 3ಕ್ಕೆ ಲಾಕ್ಡೌನ್ ಅವಧಿ ಅಂತ್ಯಗೊಳ್ಳಲಿದ್ದು, …
Read More »ಮೇ 5.ರಂದು ಪ್ರಥಮ ಪಿಯುಸಿ ಫಲಿತಾಂಶ………..
ಬೆಂಗಳೂರು : ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಮೇ 5.ರಂದು, ಈಗಾಗಲೇ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜುಮಟ್ಟದಲ್ಲಿಯೇ ನಿರ್ವಹಿಸಲು ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟ ಪಡಿಸಿದೆ. ಖಾಸಗಿ ಕಾಲೇಜುಗಳು ಈ ಸಾಲಿನಲ್ಲಿ ಶುಲ್ಕ ಹೆಚ್ಚಿಸುವ …
Read More »ಲಾಕ್ಡೌನ್ ವೇಳೆ ಸೀಜ್ ಆದನಾಲ್ಕು ಚಕ್ರದ ವಾಹನಗಳಿಗೆ ಒಂದು ಸಾವಿರ ದಂಡ ಮತ್ತು ದ್ವಿಚಕ್ರ ಮತ್ತು ಆಟೋ ರಿಕ್ಷಾಗಳಿಗೆ 500 ದಂಡ
ಬೆಂಗಳೂರು : ಲಾಕ್ಡೌನ್ ವೇಳೆ ಸೀಜ್ ಆದ ವಾಹನಗಳನ್ನು ದಂಡ ವಿಧಿಸಿ ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.ಲಾಕ್ಡೌನ್ ವೇಳೆ ಸೀಜ್ ಆದ ವಾಹನಗಳನ್ನು ಬಿಡುಗಡೆ ಮಾಡುತ್ತೇವೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಸೀಜ್ ಆದ ವಾಹನಗಳಿಗೆ ಫೈನ್ ಹಾಕಿ ನಂತರ ಬಿಡುಗಡೆ ಮಾಡುವಂತೆ ಸೂಚಿಸಿದೆ. ಹೈಕೋರ್ಟ್ ನೀಡಿರುವ ಆದೇಶದಲ್ಲಿ ಲಾಕ್ಡೌನ್ ವೇಳೆ ಸೀಜ್ ಮಾಡಲಾದ ವಾಹನಗಳಿಗೆ ಫೈನ್ …
Read More »ಪಾದರಾಯನಪುರಕ್ಕೆ ‘ಫ್ಯಾಕ್ಟರಿ’ ಕಂಟಕ………….
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ 3 ದಿನಗಳಿಂದ ಕಡಿಮೆಯಾಗಿದ್ದ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇವತ್ತು ಏಕಾಏಕಿ ಜಿಗಿತ ಕಂಡು ಬಂದಿದೆ. ಇವತ್ತು 10 ಸೋಂಕಿತರ ಪೈಕಿ, 8 ಮಂದಿ ಪಾದರಾಯನಪುರದವರು. ಇಲ್ಲಿ ಪತ್ತೆಯಾದ ಪ್ರಕರಣಗಳ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ತಬ್ಲಿಘಿಯ ಸಂಪರ್ಕ ಹೊಂದಿದ್ದ ಲೆದರ್ ಫ್ಯಾಕ್ಟರಿಯ ಮಾಲೀಕ(ರೋಗಿ ನಂ.199)ನಿಂದ ಏಳು ಮಂದಿಗೆ ಸೋಂಕು ತಗುಲಿದೆ. ಕಾರ್ಮಿಕನೊಬ್ಬನ ಇಡೀ ಕುಟುಂಬವನ್ನು ಕ್ವಾರಂಟೈನ್ ಮಾಡಿದ ಬಳಿಕ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಹರಡಿರುವುದು ಗೊತ್ತಾಗಿದೆ. …
Read More »ಮಾಸ್ಕ್ ಧರಿಸದಿದ್ದರೆ, ಸರಿಯಾಗಿ ವಿಲೇವಾರಿ ಮಾಡದಿದ್ದರೆ 1 ಸಾವಿರ ರೂ. ದಂಡ ಹಾಗೂ ಕೇಸ್
ಬೆಂಗಳೂರು: ಕೊರೊನಾ ಅವಾಂತರದ ಹಿನ್ನೆಲೆ ಮಾಸ್ಕ್ ಧರಿಸುವ ಕುರಿತು, ಎಲ್ಲೆಂದರಲ್ಲಿ ಉಗುಳುವ ಕುರಿತು ಈಗಾಗಲೇ ಹಲವು ರಾಜ್ಯಗಳಲ್ಲಿ ದಂಡ ಹಾಕಲಾಗುತ್ತಿದ್ದು, ಅದೇ ರೀತಿ ತಾಜ್ಯದಲ್ಲೂ ದಂಡ ಹಾಕಲು ಬಿಬಿಎಂಪಿ ನಿರ್ಧರಿಸಿದೆ. ಬಿಬಿಎಂಪಿ ಕಮೀಷನರ್ ಅನಿಲ್ ಕುಮಾರ್ ಮಾಹಿತಿ ನೀಡಿದ್ದು, ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ಶುಕ್ರವಾರದಿಂದಲೇ ದಂಡ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕವಾಗಿ ಮಾಸ್ಕ್ ಹಾಕದಿದ್ದರೆ, ಸಾರ್ವಜನಿಕ ಪ್ರದೇಶದಲ್ಲಿ ಉಗುಳಿದರೆ, ಎಲ್ಲೆಂದರಲ್ಲಿ …
Read More »ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದೆ.
ಮಡಿಕೇರಿ: ಕೊರೊನಾ ಮಹಾಮಾರಿ ಬಡವರು, ಕೂಲಿಕಾರ್ಮಿಕರನ್ನು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದು, ಲಾಕ್ಡೌನ್ ಆಗಿರುವುದರಿಂದ ಕೂಲಿ ಕೆಲಸ ಇಲ್ಲದೆ ಗಂಜಿ ಕುಡಿದು ಬದುಕು ದೂಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಹಂಚಿತ್ತಿಟ್ಟು ಗ್ರಾಮದಲ್ಲಿ ಇಂತಹ ಮನಕಲಕುವ ಸ್ಥಿತಿ ಇದ್ದು, ಮಹಿಳೆ ಶಾಂತಮ್ಮ, ಬೆನ್ನು ಮೂಳೆ ಮುರಿದುಕೊಂಡು 13 ವರ್ಷದಿಂದ ಹಾಸಿಗೆ ಹಿಡಿದಿರುವ ಮಗನನ್ನು ಸಾಕುತ್ತಿದ್ದಾರೆ. ಕೂಲಿ ಮಾಡುತ್ತಿದ್ದ ಶಾಂತಮ್ಮ ಅದೇ ಹಣದಿಂದ ತನ್ನ ಮಗ ವಿಠಲನಿಗೆ ಮಂಗಳೂರಿನ ವೆನ್ಲಾಕ್ …
Read More »ಕೊರೊನಾದಿಂದ ಮುಕ್ತಗೊಂಡ ಉತ್ತರ ಕನ್ನಡ- ಕೊನೆಯ ಸೋಂಕಿತ ಡಿಸ್ಚಾರ್ಜ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ ಕೊನೆಯ ಸೋಂಕಿತ ವ್ಯಕ್ತಿ ಕಾರವಾರದ ಪತಂಜಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 36 ವರ್ಷದ ಭಟ್ಕಳ ಮೂಲದ ಸೋಂಕಿತ ಸಂಖ್ಯೆ 260 ಪತಂಜಲಿ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಸದ್ಯ ಆತನ ಕೋವಿಡ್ನಿಂದ ಗುಣಮುಖರಾಗಿದ್ದು, ಇಂದು ರಾತ್ರಿ ಆತನ ಡಿಸ್ಚಾರ್ಜ್ ನೊಂದಿಗೆ ಜಿಲ್ಲೆ ಈಗ ಕೊರೊನಾ ಪ್ರಕರಣದಿಂದ ಮುಕ್ತವಾಗಿದೆ. ಮಾರ್ಚ್ 17ರಂದು ದುಬೈನಿಂದ ವಾಪಸ್ಸಾಗಿದ್ದ 36 ವರ್ಷದ ವ್ಯಕ್ತಿಯಲ್ಲಿ …
Read More »
Laxmi News 24×7