Breaking News

ಜಿಲ್ಲೆ

ಸಿಎಸ್​ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್​​ಸಿ ರವಿಕುಮಾರ್​​​ಗೆ ಜಾಮೀನು

ಬೆಂಗಳೂರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್​​ ಗೆ ಜಾಮೀನು ಸಿಕ್ಕಿದೆ. ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್​​ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ (BJP MLC N Ravikumar) ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. …

Read More »

ಶಾಪಿಂಗ್​ಗೆ ಹೋಗಿ ಬಂದ ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

ಬೆಂಗಳೂರು: ಪತ್ನಿ ಶಾಪಿಂಗ್​ಗೆ ಹೋಗಿ‌ ಬಂದಿದ್ದಕ್ಕೆ ತಗಾದೆ ತೆಗೆದು ಕತ್ತು ಹಿಸುಕಿ ಹತ್ಯೆಗೈದಿದ್ದ ಪತಿಯನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹರೀಶ್​ ಬಂಧಿತ ಆರೋಪಿ. ಪದ್ಮಜಾ (29) ಕೊಲೆಯಾದವರು. ಜುಲೈ 6ರಂದು ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಮರುದಿನ ಆಸ್ಪತ್ರೆಯಿಂದ ಬಂದ ಮಾಹಿತಿ ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಕೋಲಾರದ ಶ್ರೀನಿವಾಸಪುರ ಮೂಲದ ದಂಪತಿ ಇಬ್ಬರು ಮಕ್ಕಳೊಂದಿಗೆ ಬೊಮ್ಮನಹಳ್ಳಿಯಲ್ಲಿ ನೆಲೆಸಿದ್ದರು‌. ಪದ್ಮಜಾ ಅವರು ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ಸ್ ವಿಭಾಗದಲ್ಲಿ ಬಿಇ …

Read More »

ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್, ಹಣ ಸುಲಿಗೆ ಆರೋಪ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ಮಹಿಳೆ ಮೇಲೆ ಸಾಮೂಹಿಕ ಆತ್ಯಾಚಾರವೆಸಗಿ ಬಳಿಕ ಹಣ ಸುಲಿಗೆ ಮಾಡಿದ್ದಲ್ಲದೆ ಮನೆಯಲ್ಲಿದ್ದ ಪಿಠೋಪಕರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಿದ್ಧಾರೆ. 35 ವರ್ಷದ ಮಹಿಳೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಘು, ಕೆಂಚೇಗೌಡ ಹಾಗೂ ಮಾದೇಶ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಹೆಬ್ಬಗೋಡಿ ಸುತ್ತಮುತ್ತಲಿನ …

Read More »

ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಸೆಷನ್ಸ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿ: ಹೈಕೋರ್ಟ್

ಬೆಂಗಳೂರು: ಮನೆ ಕೆಲಸದಾಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸಿ ಆದೇಶಿಸಿತು. ಸುಪ್ರೀಂ ಕೋರ್ಟ್ ಆದೇಶಗಳ ಪ್ರಕಾರ ಮೊದಲಿಗೆ ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಬೇಕು. ಈ ಅರ್ಜಿಯನ್ನು ವಿಚಾರಣಾಧೀನ ನ್ಯಾಯಾಲಯ ಮುಂದಿನ 10 ದಿನಗಳಲ್ಲಿ ನಿರ್ಧರಿಸಬೇಕು ಎಂದು ಹೈಕೋರ್ಟ್‌ ನಿರ್ದೇಶನ ನೀಡಿದೆ. ಅತ್ಯಾಚಾರ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಎರಡನೇ ಬಾರಿಗೆ ಜಾಮೀನು …

Read More »

ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹಗೆ ಏಕೆ ಮೋದಿ ಟಿಕೆಟ್ ಕೊಡಲಿಲ್ಲ?: ಪ್ರಿಯಾಂಕ್​ ಖರ್ಗೆ

ಬೆಂಗಳೂರು: ಬಿಜೆಪಿಯ ಕಳಪೆ ಪ್ರಾಡಕ್ಟ್​ಗಳಿಗೆ ನಾನು ಬೇಕಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ನಾನು ಟ್ಯಾಲೆಂಟ್‌ ಅಂತಾರೆ. ಮತ್ತೇಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿಯವರು ಟಿಕೆಟ್ ಕೊಡಲಿಲ್ಲ? ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮ್ಮ ಆಡಿಯೋ ಕೇಳಿದ್ರಾ? ಅಥವಾ ಮೊಬೈಲ್ ಸೀಸ್ ಆಗಿದ್ದಾಗ ಏನಾದ್ರು ಸಿಕ್ತಾ? ಯಾಕೆ ನಿಮಗೆ ಟಿಕೆಟ್ ಕೊಡಲಿಲ್ಲ ಅನ್ನೋದನ್ನು …

Read More »

ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ

ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ; ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬೆಳಗಾವಿಯಲ್ಲಿ ಹೆಚ್ಚಾಗಿರುವ ಬಂಜಾರಾ ಸಮಾಜ ಶುಭ ಸಮಾರಂಭಗಳಿಗೆ ಸಮುದಾಯ ಭವನದ ಅವಶ್ಯಕತೆ ಬಂಜಾರಾ ಸಮುದಾಯ ಭವನಕ್ಕೆ ಭೂಮಿ ಒದಗಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಬಂಜಾರಾ ಸಮಾಜಕ್ಕೆ ಸಮುದಾಯ ಭವನ ನಿರ್ಮಿಸಲು 1 ಎಕರೆ ಸರ್ಕಾರಿ ಜಮೀನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಬೆಳಗಾವಿ ಜಿಲ್ಲಾ ಬಂಜಾರಾ ಜನ ಅಭಿವೃದ್ಧಿ …

Read More »

ಬೆಳಗಾವಿಯಲ್ಲಿ ಡೆತ್ ನೋಟ್ ಬರೆದು ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಚಿಂತಾಜನಕ

ಬೆಳಗಾವಿ: ಒಂದೇ ಕುಟುಂಬದ ಮೂವರು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಗ್ಗೆ ನಡೆದಿದೆ. ಖಾಸಬಾಗದ ಜೋಶಿ ಮಾಳದ‌ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9ಗಂಟೆ ಸುಮಾರಿಗೆ ವಿಷ ಸೇವಿಸಿರುವ ಮಾಹಿತಿ ಲಭ್ಯವಾಗಿದ್ದು, ಇದರಲ್ಲಿ ಮೂವರು ಮೃತಪಟ್ಟರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮಂಗಳಾ ಕುರಡೇಕರ್ (70) ಇವರ ಪುತ್ರ ಸಂತೋಷ ಕುರಡೇಕರ್ (44), ಪುತ್ರಿ ಸುವರ್ಣ ಕುರಡೇಕರ್(42) ಮೃತ ದುರ್ದೈವಿಗಳು. …

Read More »

ಬೆಳಗಾವಿ ಜಿಲ್ಲಾ ವಿದ್ಯಾರ್ಥಿಗಳಿಗೆ ಧಾರವಾಡ ಐಐಟಿ ಪ್ರವಾಸ

ಬೆಳಗಾವಿ: ಐಐಟಿಯ ಆಧುನಿಕ ತಂತ್ರಜ್ಞಾನ ಸಂಶೋಧನೆಗಳು, ಹೊಸ ಕಲಿಕೆಯ ಅವಕಾಶ, ಅನ್ವೇಷಣೆಗಳು, ಅಲ್ಲಿನ ಪರಿಸರದಿಂದ ವಿದ್ಯಾರ್ಥಿಗಳಲ್ಲಿ ಹೊಸ ದೃಷ್ಟಿ ಮೂಡಬೇಕು. ಐಐಟಿ ಸೇರಬೇಕೆಂಬ ಹಾಗು ಹೊಸ ನಾವೀನ್ಯತೆಗೆ ಮುಂದಾಗಲು ಪ್ರೇರೇಪಿಸುವ ಉದ್ದೇಶದಿಂದ ಜಿಲ್ಲೆಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳನ್ನು ಒಂದು ದಿನದ ಶೈಕ್ಷಣಿಕ ಪ್ರವಾಸಕ್ಕಾಗಿ ಧಾರವಾಡ ಐಐಟಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ ಕಳುಹಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಜಿಲ್ಲೆಯ …

Read More »

12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟ

ಬಾಗಲಕೋಟೆ ಯುವಕ ಪೃಥ್ವಿ ಅಂಬಿಗೇರ್ ಸಾಹಸ ಪ್ರವಾಸ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟಿದ್ದು, ಎಂ.ಲ್.ಸಿ ಪಿ.ಎಚ್. ಪುಜಾರ್ ಯುವಕನ ಸೈಕಲ್ ಯಾತ್ರೆಗೆ ಚಾಲನೆ ನೀಡಿ, ಶುಭ ಹಾರೈಸಿದ್ದಾರೆ. ಬಾಗಲಕೋಟೆ ನಗರದ ಯುವಕ ಪೃಥ್ವಿ ಅಂಬಿಗೇರ್ 12 ಜ್ಯೋತಿರ್ಲಿಂಗಗಳ ದರ್ಶನ ಪಡೆಯುವ ಮಹತ್ವಾಕಾಂಕ್ಷಿಯ ಸೈಕಲ್ ಯಾತ್ರೆಗೆ ಹೊರಡಿದ್ದಾರೆ. ಸಾವಿರಾರು ಕಿಲೋಮೀಟರ್ ದೂರವಿರುವ ಜ್ಯೋತಿರ್ಲಿಂಗ ಸ್ಥಳಗಳಿಗೆ ಸೈಕಲ್ ಮೂಲಕ ಪ್ರವಾಸ ಮಾಡುವ ಸಾಹಸಿಕ ನಿರ್ಧಾರ ಕೈಗೊಂಡಿದ್ದಾನೆ. ಪೃಥ್ವಿಗೆ …

Read More »

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ

ವಿಜಯಪುರ ಡಿಸಿಯಾಗಿ ಡಾ. ಆನಂದ.ಕೆ ವರ್ಗಾವಣೆ ವಿಜಯಪುರ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ಆನಂದ.ಕೆ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಆಗಮಿಸಿದ್ದಾರೆ. ಇನ್ನು ಟಿ. ಭೂಬಾಲನ್ ಕಳೆದ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಹಲವಾರು ಅಭಿವೃದ್ಧಿ ಕೆಲಸವನ್ನು ಮಾಡಿದ್ದಾರೆ. ಇದೀಗ್ ಭೂಬಾಲನ್ ಅವರನ್ನು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ.

Read More »