Breaking News

ಜಿಲ್ಲೆ

ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ :ರಮೇಶ ಜಾರಕಿಹೊಳಿ

  ಬೆಳಗಾವಿ ಜಿಲ್ಲೆಯ ಶಿರೂರು ಗ್ರಾಮದ ಬಳಿ ಇರುವ ಮಾರ್ಕಂಡೇಯ ಜಲಾಶಯ ಕ್ಕೆ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿಯವರು ಇಂದು ಭೇಟಿ ನೀಡಿದರು. ಜಲಾಶಯದ ನೀರಿನ ಮಟ್ಟವನ್ನು ಪರಿಶೀಲನೆ ಮಾಡಿದರು. ಈ ಭಾಗದ ಕುಡಿಯುವ ನೀರಿನ ಸರಬರಾಜು ಕುರಿತಂತೆ ನೀರಾವರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ‌ಸಭೆ ನಡೆಸಿ‌ ಚರ್ಚಿಸಿದರು

Read More »

ರಾಯಬಾಗ ,ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆಅಬಕಾರಿ ಇಲಾಖೆ ದಾಳಿ….

ಚಿಕ್ಕೋಡಿ : ರಾಯಬಾಗ ಹಾಗೂ ಚಿಕ್ಕೋಡಿ ವಲಯಗಳ ವ್ಯಾಪ್ತಿಯಲ್ಲಿ ಕಳ್ಳಭಟ್ಟಿ ಮಾರಾಟ ಸ್ಥಳಗಳ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ದ್ವಿಚಕ್ರದ ವಾಹನ, ಟಾಟಾ ಇಂಡಿಗೋ ಕಾರ್,ಕಳ್ಳಭಟ್ಟಿ ಸರಾಯಿ ಸೇರಿ ಸುಮಾರು 4 ಲಕ್ಷ ಮೌಲ್ಯದ ಸಾಮಗ್ರಿಗಳನ್ನು ಗುರುವಾರ ವಶ ಪಡಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕ ವಿಜಯಕುಮಾರ್ ಹಿರೇಮಠರವರ ನೇತೃತ್ವದಲ್ಲಿ ಅಬಕಾರಿ ಉಪ ಆಯುಕ್ತ ಬಸವರಾಜ್ ಸಂದಿಗವಾಡ್, ಅಬಕಾರಿ ಇನ್ಸ್ಪೆಕ್ಟರ್ ಬಸವರಾಜ್ ಕರಾಮಣ್ಣವರ್ ಇವರು …

Read More »

ಮದ್ಯ ಸಾಗಾಟ ಮಾಡುತ್ತಿದ್ದಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಗಳಖೋಡ: ಲಾಕಡೌನ ಹಿನ್ನೆಲೆಯಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕುಡಚಿ ಶಾಸಕ ಪಿ. ರಾಜೀವ್‌ನ ವಾಹನ ಚಾಲಕ ಸೇರಿ ಐವರನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಪ್ರತ್ಯೇಕ ದಾಳಿಯಲ್ಲಿ ಬಂಧಿಸಿದ್ದಾರೆ. ಶಾಸಕ ಕಾರ್ ಚಾಲಕ ಪಾಲಬಾಂವಿ ಗ್ರಾಮದ ಬಾಳೇಶ ಭರಮಪ್ಪ ತಳವಾರ (30) ಸೇರಿದಂತೆ ಇತರೆ ಐವರು ಆರೋಪಿಗಳಿಂದ ಒಟ್ಟು ರೂ 15.635 ಮೌಲ್ಯದ ಮಧ್ಯ ಹಾಗೂ ಎರಡು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಕಿಣೆಯ ಗ್ರಾಮದ ಬಳಿ ಬೋಲೆರೋ …

Read More »

ಕೊರೋನಾ ವೈರಸ ತಡೆಗಟ್ಟುವಲ್ಲಿ ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತಿರುವ ಕೊರೋನಾ ಸ್ವಯಂ ಸೇವಕರು

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯಿತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ದೇಶಾದ್ಯಂತ ಹರಡುತ್ತಿರುವ ಮಹಾಮಾರಿ ಕರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕಳೆದೊಂದು ತಿಂಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಹಲವಾರು ಕಾರ್ಯಕ್ರಮ ಹಮ್ಮಿಕೊಂಡು ಬೆಟಗೇರಿ ಗ್ರಾಮದ ಸ್ಥಳೀಯರಲ್ಲಿ ಜಾಗೃತಿ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ. ಬೆಟಗೇರಿ ಗ್ರಾಮದ ಗ್ರಾಮ ಪಂಚಾಯಿತಿ ಪಿಡಿಒ ಎಚ್.ಎನ್.ಬಾವಿಕಟ್ಟಿ, ಗ್ರಾಪಂ ಅಧ್ಯಕ್ಷ ಈಶ್ವರ ಬಳಿಗಾರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ …

Read More »

ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ.:ಸುರೇಶ ಅಂಗಡಿ

ಬೆಳಗಾವಿ: ಕೊರೊನಾ ಸೋಂಕಿತರು ವೈದ್ಯರ ಸಲಹೆಯಂತೆ ನಡೆದ್ರೆ ಉಳಿತಾರೇ, ಇಲ್ಲದಿದ್ರೆ ಸತ್ತರೆ ಅವರು ಸಾಯ್ತಾರೆ. ನಾವೇಕೆ ತೆಲೆ ಕೆಡಿಸಿಕೊಳ್ಳಬೇಕಿಗ ? ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಆಸ್ಪತ್ರೆಯಲ್ಲಿ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ಮಾಧ್ಯಮದವರ ಪ್ರಶ್ನೇಗೆ ಸಚಿವರು ಉತ್ತರಿಸಿದ್ದಾರೆ. ಅಂತರ ಕಾಯ್ದುಕೊಳ್ಳದಿದ್ರೆ ಹೇಗೆ ಆರೋಗ್ಯದಲ್ಲಿ ಅಭಿವೃದ್ಧಿಯಾಗಲಿದೆ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಜತೆಗೆ ಯಾವ ನಂಬರ ಸೋಂಕಿತರು ಅಂತರ ಕಾಯ್ದುಕೊಳ್ಳುತ್ತಿಲ್ಲವೆಂದು ತಿಳಿಸಿ, ಅವರನ್ನು ಇಲ್ಲಿಯೇ …

Read More »

ಮಡಿವಾಳರ‌ ಸಂಘದಿಂದ‌ ನಿರಾಶ್ರಿತರಿಗೆ ಊಟೋಪಚಾರ

  ಮಂಡ್ಯ ಜಿಲ್ಲೆ ಪಾಂಡವಪುರ: ಲಾಕ್‌ ಡೌನ್ ನಿಂದ‌ ಕೂಲಿ ಕೆಲಸವಿಲ್ಲದೆ ತಾಲ್ಲೂಕಿನ ರೈಲ್ವೆ ನಿಲ್ದಾಣದ ಲ್ಲಿ ಬೀಡು ಬಿಟ್ಟಿರುವ ನೂರಕ್ಕೂ ಹೆಚ್ಚು ನಿರಾಶ್ರಿತರಿಗೆ‌ ತಾಲ್ಲೂಕು ಮಡಿವಾಳರ ಸಂಘದಿಂದ ಊಟೋಪಚಾರ ಮಾಡಲಾಯಿತು. ಕೆನ್ನಾಳು ಗ್ರಾಮ ಪಂಚಾಯತಿ ಆವರಣದಲ್ಲಿ ಕಳೆದ ಹಲವಾರು ದಿನಗಳಿಂದ ನಿರಾಶ್ರಿತರಿಗೆ ‌ನಿತ್ಯವೂ ೨ ಹೊತ್ತು ಊಟ ನೀಡಲಾಗುತ್ತಿದ್ದು, ಶುಕ್ರವಾರ ಇದರ ಜವಾಬ್ದಾರಿ ಯನ್ನು ಮಡಿವಾಳ ಸಂಘದವರು ವಹಿಸಿದ್ದರು. ಗ್ರಾ.ಪಂ. ಸದಸ್ಯ ಶಿವಕುಮಾರ್ ಇನ್ನಿತರರು ಇದ್ದರು.

Read More »

ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ

ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ. ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. …

Read More »

ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ: ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಸೋಂಕು ನಿಯಂತ್ರಣಕ್ಕೆ ಗ್ರಾಮಗಳು ತೆಗೆದುಕೊಂಡ ಕ್ರಮಗಳು ಅನೇಕರಿಗೆ ಮಾದರಿಯಾಗಿವೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಸರಪಂಚರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್​ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವೈರಸ್​ ನಿಯಂತ್ರಣಕ್ಕೆ ಸಾಕಷ್ಟು ಗ್ರಾಮಗಳು ಸ್ವಯಂ ನಿರ್ಬಂಧ ಹೇರಿಕೊಂಡಿವೆ. ಹಳ್ಳಿಗರಿಂದ ಸಾಕಷ್ಟು ಜನರು ಸ್ಫೂರ್ತಿ ಪಡೆದುಕೊಂಡಿದ್ದಾರೆ ಎಂದರು. ಮೊದಲು ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ಇಂಟರ್​ನೆಟ್​ ಸೌಲಭ್ಯ ಇರುತ್ತಿರಲಿಲ್ಲ. ಆದರೆ, ಇಂದು ಲಕ್ಷಾಂತರ ಪಂಚಾಯತಿಗಳಲ್ಲಿ ವೇಗದ ಇಂಟರ್​ನೆಟ್​ ಇದೆ. ದೇಶದ ಅನೇಕ …

Read More »

ಬರಿದಾದ ರಾಜ್ಯ ಸರ್ಕಾರದ ಬೊಕ್ಕಸ ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು .! B.S.Y.

ಬೆಂಗಳೂರು, ಏ.24- ಕೊರೊನಾ ಲಾಕ್‍ಡೌನ್‍ನಿಂದ ವ್ಯಾಪಾರ-ವಹಿವಾಟು ಸ್ಥಗಿತವಾಗಿ ಬೊಕ್ಕಸ ಖಾಲಿಯಾಗಿದ್ದು, ಖಜಾನೆ ತುಂಬಿಸಲು ರಾಜ್ಯ ಸರ್ಕಾರ ನಾನಾ ಕಸರತ್ತು ಆರಂಭಿಸಿದೆ. ಆರ್ಥಿಕ ವರ್ಷದಲ್ಲಿ ಸರ್ಕಾರ ಭಾರೀ ಆದಾಯ ಖೋತಾ ಕಂಡಿದ್ದು, ಇತ್ತ ಜಿಎಸ್‍ಟಿ ತೆರಿಗೆ ನಷ್ಟವೂ ದುಪ್ಪಟ್ಟು ಆಗಿದೆ. ಈ ಮಧ್ಯೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅಲ್ಪಸ್ವಲ್ಪ ಆರ್ಥಿಕ ನೆರವು ಬಂದಿದ್ದು, ಇನ್ನಷ್ಟು ನೆರವಿನ ನಿರೀಕ್ಷೆಯಲ್ಲಿದೆ. ಆರ್ಥಿಕ ಸಂಕಷ್ಟವನ್ನು ಸ್ವಲ್ಪ ಮಟ್ಟಿಗೆ ಸರಿದೂಗಿಸಲು ಲಾಕ್ ಡೌನ್ ಸಡಿಲಿಕೆ ಮಾಡುವ ಕೆಲವು …

Read More »

ಇಬ್ಬರಲ್ಲಿ ಕೊರೊನಾ ಪತ್ತೆ, ಪಾದರಾಯನಪುರ ಪುಂಡರು ಬೆಂಗಳೂರಿಗೆ ಶಿಫ್ಟ್ :,,,,,,

ರಾಮನಗರ, ಏ.24- ಪಾದರಾಯನಪುರದಲ್ಲಿ ದಾಂಧಲೆ ಮಾಡಿದ್ದ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ದು, ಮತ್ತೆ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ. ರಾಮನಗರ ಜೈಲಿನಲ್ಲಿದ್ದ 121 ಆರೋಪಿಗಳ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಸೋಂಕು ಕಾಣಿಸಿಕೊಂಡ ಇಬ್ಬರನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆತರಲಾಗಿದ್ದು, ಉಳಿದ 119 ಮಂದಿ ಆರೋಪಿಗಳನ್ನು 14 ಬಸ್‍ಗಳ ಮೂಲಕ ಬೆಂಗಳೂರಿಗೆ ಕರೆತರಲಾಯಿತು. ಬಸ್‍ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುನ್ನೆಚ್ಚರಿಕೆ ವಹಿಸಲಾಗಿತ್ತು.ಪಾದರಾಯನಪುರ ಗಲಭೆಯಲ್ಲಿ …

Read More »