ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಉಕ್ಕಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳನ್ನು ಆಹುತಿ ಪಡೆದುಕೊಳ್ಳುತ್ತಿದೆ. ಹಾಗಾಗಿ, ಗೆಣಸು ಕಟಾವು ಮಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇದನ್ನು ಹಾಗೇ ಬಿಟ್ಟರೆ ಹಾಕಿದ ಬಂಡವಾಳ ಕೂಡ ಕೈ ಸೇರುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಹೊರ ವಲಯದಲ್ಲಿ ಹರಿಯುವ ಬಳ್ಳಾರಿ ನಾಲೆ ಇಲ್ಲಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಆರಂಭದಲ್ಲಿ ಈ ಭಾಗದ ರೈತರಿಗೆ ವರದಾನವಾಗಿತ್ತು. ಕಳೆದ ಹತ್ತು ವರ್ಷಗಳಿಂದ ಹೂಳು ತುಂಬಿಕೊಂಡು ಪ್ರತೀ …
Read More »ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ ; ಜಾಗೃತಿ ನಿರ್ಮಾಣ ಅಂ.ರಾ. ಮಾದಕ ದ್ರವ್ಯ ಸೇವನೆ, ಸಾಗಾಣಿಕೆ ವಿರೋಧಿ ದಿನಾಚರಣೆ ಬೆಳಗಾವಿ ಹಿಂಡಲಗಾ ಕಾರಾಗೃಹದಲ್ಲಿ ಆಯೋಜನೆ ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗ ಕಾನೂನು ಸೇವಾ ಪ್ರಾಧಿಕಾರದ ಸಂದೀಪ ಪಾಟೀಲರಿಂದ ಉದ್ಘಾಟನೆ ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಇತರೆ ಸಂಘಟನೆಗಳ ಸಂಯುಕ್ತ ಸಂಯೋಜನೆಯಲ್ಲಿ ಅಂತರರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಅಕ್ರಮ ಸಾಗಾಣಿಕೆ …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ಹಾವೇರಿ, ಜೂನ್ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್ಗೆ …
Read More »ತುಂಬಿ ಹರಿಯುತ್ತಿರುವ ಹಾಲಾತ್ರಿ ಹಳ್ಳದಲ್ಲಿ ಥಾರ್ ದಾಟಿಸಿದ ಚಾಲಕ
ಬೆಳಗಾವಿ : ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಖಾನಾಪುರದ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಇದರ ನಡುವೆಯೂ ಒಬ್ಬ ಚಾಲಕ ಹರಿಯುವ ನೀರಿನಲ್ಲೇ ವಾಹನ ದಾಟಿಸಿ, ದುಸ್ಸಾಹಸ ಪ್ರದರ್ಶಿಸಿರುವ ವಿಡಿಯೋ ವೈರಲ್ ಆಗಿದೆ. ಬೆಳಗಾವಿ, ಖಾನಾಪುರ, ಹೆಮ್ಮಡಗಾ-ಅನಮೋಡ ಮಾರ್ಗವಾಗಿ ಗೋವಾ ಸಂಪರ್ಕಿಸುವ ರಸ್ತೆಯಲ್ಲಿರುವ ಹಾಲಾತ್ರಿ ಹಳ್ಳ ತುಂಬಿ ಹರಿಯುತ್ತಿದೆ. ಹಳ್ಳದ ಸೇತುವೆಯ ಮೇಲೆ ಅಪಾರ ಪ್ರಮಾಣದ ನೀರು ಹರಿಯುತ್ತಿದೆ. ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. …
Read More »ಸಿದ್ದರಾಮಯ್ಯನವರು ಆಡಳಿತದಲ್ಲಿ ನಿಯಂತ್ರಣ ಕಳೆದುಕೊಂಡಿಲ್ಲ: ಡಿಸಿಎಂ
ಬೆಂಗಳೂರು: ”ಸಿಎಂ ಸಿದ್ದರಾಮಯ್ಯನವರು ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ನಾನು ಅದರ ಬಗ್ಗೆ ಏನೂ ಕೇಳಿಲ್ಲ. ನಮಗೆ ಹೈಕಮಾಂಡ್ ಇದ್ದು, ಎಲ್ಲವನ್ನೂ ನೋಡಿಕೊಳ್ಳುತ್ತದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಆಡಳಿತದಲ್ಲಿ ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, “ನಾನು ಎಲ್ಲರ ಜೊತೆ ಮಾತನಾಡುತ್ತೇನೆ. ಏನೂ ಸಮಸ್ಯೆ ಇಲ್ಲ. ಆಡಳಿತದಲ್ಲಿ ಕಂಟ್ರೋಲ್ ಕಳೆದುಕೊಂಡಿಲ್ಲ. ಮಾಧ್ಯಮದವರೇ ಬ್ಲೋ ಅಪ್ ಮಾಡುತ್ತಿದ್ದಾರೆ” ಎಂದರು. …
Read More »ಸಮಾಧಾನ, ಅಸಮಾಧಾನ ಅಂತಾ ನಂದೇನೂ ಇಲ್ಲ:ಬಿ.ಆರ್.ಪಾಟೀಲ್
ಬೆಂಗಳೂರು : ಸಮಾಧಾನ, ಅಸಮಾಧಾನ ನಂದೇನೂ ಇಲ್ಲ. ನಡೆದಿದ್ದನ್ನು ಅವರಿಗೆ ಹೇಳಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಶಾಸಕ ಬಿ. ಆರ್. ಪಾಟೀಲ್ ತಿಳಿಸಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ. ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರಿಗೆ ಎಲ್ಲ ವಿವರವಾಗಿ ಹೇಳಿದ್ದೇನೆ ಎಂದಿದ್ದಾರೆ. ಅವರು ಸಮಾಧಾನದಿಂದ ನಮ್ಮ ವಿಚಾರಗಳನ್ನು ಕೇಳಿದ್ದಾರೆ. …
Read More »ವರ್ಷಾಂತ್ಯಕ್ಕೆ ಭಾರಿ ಬದಲಾವಣೆ ಆಗಲ್ಲ, ಕೆಲ ಸಚಿವರ ಬದಲಾವಣೆಯಾಗಲಿದೆ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ”ವರ್ಷಾಂತ್ಯಕ್ಕೆ ಭಾರೀ ಬದಲಾವಣೆ ಆಗುವುದಿಲ್ಲ, ಸಣ್ಣಪುಟ್ಟ ಬದಲಾವಣೆಗಳಾಗಲಿವೆ” ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ವರ್ಷಾಂತ್ಯಕ್ಕೆ ಕಾಂಗ್ರೆಸ್ನಲ್ಲಿ ಭಾರೀ ಬದಲಾವಣೆ ಆಗಲಿದೆ ಎಂಬ ಚರ್ಚೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಣ್ಣಪುಟ್ಟ ಬದಲಾವಣೆಗಳಾಗಲಿದೆ. ಹಾಗಂತ ಭಾರಿ ಬದಲಾವಣೆ ಯಾವುದೂ ಆಗುವುದಿಲ್ಲ. ಸರ್ಕಾರದ ಮಟ್ಟದಲ್ಲಿ ಯಾವುದೇ ದೊಡ್ಡ ಬದಲಾವಣೆ ಆಗಲ್ಲ. ಕೆಲ ಸಚಿವರ ಬದಲಾವಣೆ ಆಗಲಿದೆ” ಎಂದರು. ಜಲಸಂಪನ್ಮೂಲ ಇಲಾಖೆ ಮೇಲೆ ಶಾಸಕ ರಾಜು ಕಾಗೆ ಆರೋಪ ವಿಚಾರವಾಗಿ …
Read More »ಪಂಢರಪುರದತ್ತ ಹೊರಟಿರುವ ಪಾದಯಾತ್ರಿಗಳು
ಬೆಳಗಾವಿ: ವಾರಕರಿಗಳ ನೇತೃತ್ವದಲ್ಲಿ ತಾಳ ಹಾಕುತ್ತಾ, ತಂಬೂರಿ-ಭಜನೆ ಬಾರಿಸುತ್ತಾ, ವೀಣೆ ನುಡಿಸುತ್ತಾ, ಅಭಂಗಗಳ ಮೂಲಕ ವಿಠ್ಠಲನ ನಾಮ ಸ್ಮರಿಸುತ್ತಾ, ತಲೆಯ ಮೇಲೆ ತುಳಸಿ ಹೊತ್ತು, ಕೈಯಲ್ಲಿ ವಿಠಲನ ಧ್ವಜ ಹಿಡಿದು ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಪಂಢರಪುರದತ್ತ ಭಕ್ತರ ಪಾದಯಾತ್ರೆ ಹೊರಟಿದೆ. ಸುರಿಯುತ್ತಿರುವ ಮಳೆಯನ್ನು ಲೆಕ್ಕಿಸದೇ ಭಕ್ತವರ್ಗ ತಮ್ಮ ಭಕ್ತಿ ಪರಾಕಾಷ್ಠೆ ಮೆರೆದಿದ್ದಾರೆ. ಹೌದು, ಈ ಎಲ್ಲ ದೃಶ್ಯ ಕಂಡು ಬಂದಿದ್ದು, ಬೆಳಗಾವಿ ರಾಣಿ ಚನ್ನಮ್ಮ ವೃತ್ತದಲ್ಲಿ. ಬೆಳಗಾವಿ ತಾಲೂಕಿನ ಸುಳಗಾ (ಯಳ್ಳೂರ) …
Read More »ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿದ ಶಾಸಕ ಬಿ.ಆರ್.ಪಾಟೀಲ್
ಬೆಂಗಳೂರು: ತಮ್ಮ ಸರ್ಕಾರದ ವಿರುದ್ಧವೇ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್, ಕಾಗವಾಡ ಕ್ಷೇತ್ರದ ರಾಜು ಕಾಗೆ ಅವರ ಜೊತೆ ಸಿಎಂ ಸಿದ್ದರಾಮಯ್ಯ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ರಾಜು ಕಾಗೆ: ನವದೆಹಲಿಯಿಂದ ಇಂದು ಸಂಜೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು, ಶಾಸಕರನ್ನು ಕರೆಸಿ ಚರ್ಚೆ ನಡೆಸಿದ್ದಾರೆ. ಮೊದಲಿಗೆ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಶಾಸಕ ರಾಜು ಕಾಗೆ ಅವರು ಸಿದ್ದರಾಮಯ್ಯ …
Read More »
Laxmi News 24×7