ಬೆಳಗಾವಿ : ಬೆಳ್ಳಂ ಬೆಳಿಗ್ಗೆ 3ರಿಂದ 4 ಗಂಟೆಯ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಗಿಲಿನ ಬೀಗ ಮುರಿದು ಕಳ್ಳತನ ಮಾಡಿ 700 ಗ್ರಾಂ ಚಿನ್ನ ದೋಚಿ ಪರಾರಿಯಾದ ಘಟನೆ ಗೋಕಾಕ ಪಟ್ಟಣದಲ್ಲಿ ನಡೆದಿದೆ. ಗೋಕಾಕ ಪಟ್ಟಣದ ವಿದ್ಯಾನಗರದಲ್ಲಿನ ವ್ಯಾಪಾರಸ್ಥ ಶ್ರೀರಾಮ ಚೌದರಿಯವರ ಮನೆಯಲ್ಲಿಟ್ಟಿದ್ದ 700 ಗ್ರಾಂ ಚಿನ್ನ ಕಳ್ಳತನ ಆಗಿದ್ದು ಸುದ್ದಿ ತಿಳಿದ ನಗರ ಠಾಣೆಯ CPI ಸುರೇಶಬಾಬು ಬಂಡಿವಡ್ಡರ ಮತ್ತು ನಗರ ಪಿ,ಎಸ್,ಐ, ಕೆ.ವಾಲಿಕಾರ ಇವರು ಸ್ಥಳಕ್ಕೆ …
Read More »ಕರ್ನಾಟಕ ಬಂದ್ಗೆ ಆಟೋ ಚಾಲಕರ ಸಂಘ ಬೆಂಬಲ
ಮಾರ್ಚ್ 22ರಂದು ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ಗೆ ಇದೀಗ ಬೆಂಗಳೂರಿನಲ್ಲಿ ಆಟೋ ಚಾಲಕರ ಸಂಘಟನೆ ಕೂಡ ಬೆಂಬಲ ನೀಡಿದೆ. ಈ ಕುರಿತು ಆಟೋ ಚಾಲಕರ ಸಂಘಟನೆ ಅಧ್ಯಕ್ಷ ಶ್ರೀನಿವಾಸ್ ಪ್ರತಿಕ್ರಿಯಿಸಿ, ಎಲ್ಲಾ ಆಟೋ ರಿಕ್ಷಾದವರು ಮಾರ್ಚ್ 22 ರಂದು ಅಖಂಡ ಕರ್ನಾಟಕ ಬಂದ್ಗೆ ಬೆಂಬಲ ಕೊಡುತ್ತೇವೆ. ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ನಡೆಯುವ ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದು ತಿಳಿಸಿದರು.
Read More »ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ(
ಬೆಂಗಳೂರು, ಮಾರ್ಚ್ 19: ಬೆಂಗಳೂರು ಸೇರಿ ಕರ್ನಾಟಕದ 12 ಜಿಲ್ಲೆಗಳಲ್ಲಿ ಮಾರ್ಚ್ 23ರಿಂದ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರದ ಹಿಂದಷ್ಟೇ ಬೆಂಗಳೂರಿನ ಕೆಲವೆಡೆ ಮಳೆಯಾಗಿತ್ತು, ಅದಾದ ಬಳಿಕ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಕ್ಷಿಣ ಕನ್ನಡದಲ್ಲಿ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, …
Read More »ಬೆಳಗಾವಿ ಮಾರುಕಟ್ಟೆಗೆ ವಿವಿಧ ತಳಿಗಳ ಮಾವಿನ ಹಣ್ಣುಗಳು
ಬೆಳಗಾವಿ: ಮಾವಿನ ಹಣ್ಣಿನ ಸೀಸನ್ ಶುರುವಾಗಿದ್ದು, ಜನರು ಮಾವಿನ ರುಚಿ ಸವಿಯಲು ಕಾತುರರಾಗಿದ್ದಾರೆ. ಆದರೆ, ಈಗಷ್ಟೇ ಮಾರುಕಟ್ಟೆ ಪ್ರವೇಶಿಸಿರುವ ಕಾರಣ ದರ ಕೇಳಿ ಗ್ರಾಹಕರು ಹೌಹಾರುತ್ತಿದ್ದಾರೆ. ತರಹೇವಾರಿ ಮಾವು ಮಾರುಕಟ್ಟೆಗೆ ಬಂದಿವೆ. ಪ್ರಮುಖವಾಗಿ ರತ್ನಗಿರಿ, ದೇವಗಡ, ಆಪೂಸ್ (ಆಲ್ಫೊನ್ಸೋ), ರಸಪುರಿ, ಫೈರಿ ಸೇರಿದಂತೆ ವಿವಿಧ ತಳಿಯವು ಮಾರುಕಟ್ಟೆಯಲ್ಲಿವೆ. ಸದ್ಯಕ್ಕೆ ಆಪೂಸ್ ಹಣ್ಣಿಗೆ ಹೆಚ್ಚಿನ ಬೇಡಿಕೆ ಇದೆ. ಆದರೆ, ದುಬಾರಿಯಾಗಿದೆ. ಒಂದು ಡಜನ್ ಮಾವಿನ ಹಣ್ಣಿನ ಬೆಲೆ 1,000 ದಿಂದ 3700 ರೂ.ವರೆಗೂ …
Read More »ರಾಜ್ಯ ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿ ರಾಹುಲ್ ಜಾರಕಿಹೊಳಿ ಅಧಿಕಾರ ಸ್ವೀಕಾರ
ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಕಾರ್ಯದರ್ಶಿಯಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಪದಗ್ರಹಣ ಮಾಡಿದರು. ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವ ಕಾಂಗ್ರೆಸ್ ನ ನೂತನ ಪದಾಧಿಕಾರಿಗಳು ಇದೇ ವೇಳೆ ಪದಗ್ರಹಣ ಮಾಡಿದರು. ಇದೇ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರೂ ಪಕ್ಷಕ್ಕಾಗಿ ದುಡಿಯಬೇಕು, ಈ ನಿಟ್ಟಿನಲ್ಲಿ 74 ಮಹಿಳೆಯರಿಗೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುತ್ತೇವೆ …
Read More »ಇಲಕಲ್ ಹೆಸ್ಕಾಂ ಕಚೇರಿಯಲ್ಲಿರುವುದಿಲ್ಲ ಯಾವೊಬ್ಬ ಸಿಬ್ಬಂದಿ : ವಿಡಿಯೋ ವೈರಲ್.
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಇರುವುದೇಇಲ್ಲವಂತೆ ಈ ಕುರಿತು ವಿಡಿಯೋ ವೈರಲ್ ಆಗಿದೆ ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ರೈತರು ಸೇರಿದಂತೆ ನೂರಾರು ಜನರು ಕಚೇರಿಗೆ ಬರುತ್ತಾರೆ ಆದರೆ ಇಲಕಲ್ ಹೇಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳು ಸಿಗುವುದು ದುರ್ಲಭವಂತೆ. ಅಧಿಕಾರಿಗಳು ಕಚೇರಿಗೆ ಚಕ್ಕರ್ ಹೊಡೆದಿದ್ದಾರಂತೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯರು ಭೇಟಿ ನೀಡಿದಾಗ ಇಡೀ ಕಚೇರಿ ಖಾಲಿ ಖಾಲಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ …
Read More »ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.
ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು, ಕಿತ್ತೂರು ರಾಜಗುರು …
Read More »ಬೆಳಗಾವಿಯಲ್ಲಿ ಲವ್ ಜಿಹಾದ್ ಆರೋಪ…ನೈತಿಕ ಪೊಲೀಸಗಿರಿ.. ನಾಲ್ವರನ್ನು ವಶಕ್ಕೆ ಪಡೆದ ಗ್ರಾಮೀಣ ಪೊಲೀಸರು/
ಬೆಳಗಾವಿ: ಲವ್ ಜಿಹಾದ್ ಆರೋಪದ ಹಿನ್ನೆಲೆ ಯುವಕನಿಗೆ ಗೂಸಾ ನೀಡಿ ನೈತಿಕ ಪೊಲೀಸಗಿರಿ ತೋರಿಸಿದ ಹಿನ್ನೆಲೆ ನಾಲ್ವರನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂವಗಾಂವ ಗ್ರಾಮದ ಜಮೀನೊಂದರಲ್ಲಿ ತನ್ನ ಸ್ನೇಹಿತೆ ಜೊತೆಗೆ ಜಮೀನಿನಲ್ಲಿ ಮಾತನಾಡುತ್ತ ಕುಳಿತಿದ್ದ ಯುವಕ ಮತ್ತು ಯುವತಿಯರನ್ನು ವಿಚಾರಿಸಿದಾಗ, ಯುವಕ ಡಿ ಫಾರ್ಮಸಿ ವಿದ್ಯಾರ್ಥಿ ಅಲ್ಲಾವುದ್ದೀನ್ ಪೀರಜಾದೆ ಮತ್ತು ಯುವತಿ ಹಿಂದೂ ಎಂದು ಗೊತ್ತಾದ ಹಿನ್ನೆಲೆ ಸಾಂವಗಾವ್ ಗ್ರಾಮದ ಸುದೇಶ ಪಾಟೀಲ, ಸಂತೋಷ ಜಾಧವ್, …
Read More »ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ಸ್ಪರ್ಧೆ… ವಿಜೇತರಾಗಿ ಹೊರಹೊಮ್ಮಿದ ಮಿಹೀರ್ ಪೋತದಾರ.
ಬೆಳಗಾವಿ: ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ವಿಜೇತರಾಗಿ ಮಿಹೀರ್ ಪೋತದಾರ ಹೊರಹೊಮ್ಮಿದ್ದಾರೆ. ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಲಾಗಿದ್ದ, ಇನ್ಫೆಂಟ್ರಿ ಗೋಲ್ಫ್ ಕಪ್’ನ್ನು ಆಯೋಜಿಸಲಾಗಿತ್ತು. ಬೆಳಗಾವಿ ಸೇರಿದಂತೆ ಬೆಂಗಳೂರು, ಹುಬ್ಬಳ್ಳಿ, ಮಹಾರಾಷ್ಟ್ರದ ಕೊಲ್ಹಾಪುರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸುಮಾರು 149 ಸ್ಪರ್ಧಾಳುಗಳು ಇದರಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯೂ 5 ವಿಭಾಗಗಳಲ್ಲಿ ನಡೆಯಿತು. ಇದರಲ್ಲಿ ಭಾರತೀಯ …
Read More »ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಚಾಲನೆ.
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಿದ್ದ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಲಾಗಿರುವ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಉದ್ಘಾಟಿಸಿ, ಪ್ರಥಮ …
Read More »
Laxmi News 24×7