Breaking News

ಜಿಲ್ಲೆ

ಆರೋಪಿಗಳನ್ನು ಕರೆತರುವಾಗ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಸಾವು

ಬೆಂಗಳೂರು: ಪ್ರಕರಣವೊಂದರ ಆರೋಪಿಗಳನ್ನು ಬಂಧಿಸಿ ಕರೆತರುವಾಗ‌ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಎಸ್ಐ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಘಟ್ಟಪುರ ಠಾಣೆಯ ಸಬ್ ಇನ್​ಸ್ಪೆಕ್ಟರ್ ಮೆಹಬೂಬ್ ಗುಡ್ಡಹಳ್ಳಿ (40) ಸಾವನ್ನಪ್ಪಿದ ಅಧಿಕಾರಿ. ಜೂನ್ 24ರಂದು ನಸುಕಿನ 2:30ರ ಸುಮಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂರ್ಯನಗರ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಮೆಹಬೂಬ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ಮಾದಕ ಪದಾರ್ಥಗಳ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಾಗ ಮೆಹಬೂಬ್ ಅವರ ಕಾರಿಗೆ ಟ್ರಕ್ ಡಿಕ್ಕಿಯಾಗಿತ್ತು. ಅಪಘಾತದ ಬಳಿಕ ಟ್ರಕ್ …

Read More »

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿ

ಗೋವುಗಳನ್ನು ಸ್ಥಳಾಂತರಿಸುತ್ತಿರುವುದನ್ನು ಪ್ರಶ್ನೆ ಮಾಡಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ದೊಣ್ಣೆಯಿಂದ ಹೊಡೆದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ದುಷ್ಕರ್ಮಿಗಳು ಶ್ರೀರಾಮಸೇನೆಯ ಐವರು ಕಾರ್ಯಕರ್ತರನ್ನು ತೆಂಗಿನ ಮರಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಎರಡು ದಿನಗಳ ಹಿಂದೆ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಗೋವುಗಳನ್ನು ರಕ್ಷಿಸಿದ್ದರು. ಹೀಗೆ ರಕ್ಷಿಸಿದ್ದ ಗೋವುಗಳನ್ನು ಇಂಗಳಿ ಬಳಿಯ ಗೋಶಾಲೆಗೆ ತಂದು …

Read More »

ಅಂಬೋಲಿ ಫಾಲ್ಸ್ ನಲ್ಲಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಪ್ರವಾಸಿಗ ದುರ್ಮರಣ

ಅಂಬೋಲಿ ಫಾಲ್ಸ್ ನೋಡಲು ಬಂದಿದ್ದ ವ್ಯಕ್ತಿಯೋರ್ವ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಮಹಾರಾಷ್ಟ್ರ-ಬೆಳಗಾವಿ ಗಡಿಯಲ್ಲಿರುವ ಅಂಬೋಲಿ ಫಾಲ್ಸ್ ನ ಕವಲೇಸಾದ್ ಪಾಯಿಂಟ್ ನಲ್ಲಿ ಈ ಘಟನೆ ನಡೆದಿದೆ. ಕೊಲ್ಹಾಪುರ ಮೂಲದ ಬಾಲಸೋ ಸಂಗರ್ (45) ಮೃತ ದುರ್ದೈವಿ. ಸ್ನೇಹಿತರೊಂದಿಗೆ ಅಂಬೋಲಿ ಫಾಲ್ಸ್ ಗೆ ಬಂದಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ 300 ಅಡಿ ಆಳಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಸ್ಥಳಕ್ಕಾಗಿಸಿದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿದ್ದು, …

Read More »

ಹಳೆ ವೈಷಮ್ಯಕ್ಕೆ ವ್ಯಕ್ತಿಯ ಕೊಲೆ ಪ್ರಕರಣ: ಅಪ್ರಾಪ್ತ ಸೇರಿ ಮೂವರ ಬಂಧನ

ಬೆಂಗಳೂರು: ಹಳೆಯ ವೈಷಮ್ಯದ ಕಾರಣದಿಂದ ವ್ಯಕ್ತಿಯೋರ್ವನನ್ನು ದೊಣ್ಣೆಯಿಂದ ಹೊಡೆದು ಹತ್ಯೆಗೈದಿದ್ದ ಮೂವರು ಆರೋಪಿಗಳನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಜಿನಪ್ಪ (35) ಎಂಬವರನ್ನು ಕೊಂದಿದ್ದ ಆರೋಪದಡಿ ಪ್ರೇಮ್, ದರ್ಶನ್ ಹಾಗೂ ಮತ್ತೋರ್ವ ಅಪ್ರಾಪ್ತನನ್ನು ಬಂಧಿಸಲಾಗಿದೆ. ಥಣಿಸಂದ್ರದ ಆಕಾಶವಾಣಿ ಲೇಔಟ್‌ನ ನಿರ್ಜನ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ ಆಂಜಿನಪ್ಪ ಅವರ ಮೃತದೇಹ ಪತ್ತೆಯಾಗಿತ್ತು. ಕುರಿ ಮೇಯಿಸುವ ವಿಚಾರಕ್ಕೆ ಗಲಾಟೆ, ಹತ್ಯೆಯಲ್ಲಿ ಅಂತ್ಯ: ಪತ್ನಿಯಿಂದ ದೂರವಾಗಿದ್ದ ಆಂಜಿನಪ್ಪ ಉಚಿತವಾಗಿ ಊಟ ತಿಂಡಿ ಸಿಗುವ ಕಡೆಗಳಲ್ಲಿ ಹೊಟ್ಟೆ ತುಂಬಿಸಿಕೊಂಡು …

Read More »

ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು!

ಗೋಕಾಕ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲು! ಗೋಕಾಕ : ಗ್ರಾಮ ದೇವಿ ಜಾತ್ರಾ ನಿಮಿತ್ಯ ಹಾಗೂ ಶಾಶ್ವತವಾಗಿ ನಗರಕ್ಕೆ 80 ಸಿಸಿ ಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದ್ದು ಯುವ ನಾಯಕ ಅಮರನಾಥ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಬಸ್ಮೆ , ಡಿವಾಎಸ್ಪಿ ರವಿ ನಾಯಕ, ಸಿಪಿಐ ಸುರೇಶ್ ಬಾಬು, ಪಿಎಸ್ಐ ಕೆ ವಾಲಿಕಾರ, ಹಾಗೂ ಪದ್ಮರಾಜ ದರ್ಗಶೆಟ್ಟಿ , ಸಾಗರ ಪಿರದಿ …

Read More »

ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ

ಬೆಳಗಾವಿ ಮಾರ್ಕಂಡೇಯ ನಗರದಲ್ಲಿ ಚರಂಡಿಗಳ ಸ್ವಚ್ಛತೆ ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಮಾಜಿ ಉಪಮಹಾಪೌರ ಹಾಗೂ ಹಾಲಿ ನಗರಸೇವಕಿ ರೇಷ್ಮಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಇಂದು ಬೆಳಗಾವಿಯ ಮಾರ್ಕಂಡೇಯ ನಗರದಲ್ಲಿ ಮಹಾನಗರ ಪಾಲಿಕೆಯ ವತಿಯಿಂದ ಚರಂಡಿಗಳ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು. ಚರಂಡಿಗಳಿಗೆ ಕಸ ಎಸೆದರೆ ನದಿ, ಕಾಲುವೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡಬಹುದು ಎಂಬುದನ್ನು ಮನವರಿಕೆ ಮಾಡುತ್ತ ಜನರಲ್ಲಿ ಜಾಗೃತಿ …

Read More »

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು

ಸದಲಗಾ ಪಟ್ಟಣದ ನವನಾಥ ಜ್ಯುವೆಲ್ಲರ್ಸ್‌ನಲ್ಲಿ ಕಳ್ಳತನ,ಚಿನ್ನಾಭರಣ, ನಗದು ದೋಚಿ ಪರಾರಿಯಾದ ಕಳ್ಳರು ಚಿಕ್ಕೋಡಿ: ಸದಲಗಾ ಪಟ್ಟಣದ ಚನ್ನಮ್ಮ ವೃತ್ತದಲ್ಲಿರುವ ನವನಾಥ ಜ್ಯುವೆಲ್ಲರ್ಸ್ ನಲ್ಲಿ ಕಳ್ಳರು ಚಿನ್ನ ಮತ್ತು ಬೆಳ್ಳಿ ಆಭರಣ ಅಂಗಡಿಯ ಶೆಟರ್ ಮುರಿದು ಒಳಗೆ ನುಗ್ಗಿ ಆಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಅಂಗಡಿಯ ಮಾಲೀಕ ವಿನಾಯಕ ವಿಜಯಕುಮಾರ ಮಾಳಿ ಸದಲಗಾ ಪೊಲೀಸರಿಗೆ ದೂರು ನೀಡಿದ್ದಾರೆ. ಡಿಎಸ್ಪಿ ಗೋಪಾಲಕೃಷ್ಣ ಗೌಡರ, ಸಿಪಿಐ ವಿಶ್ವನಾಥ್ ಚೌಗಲಾ, ಸದಲಗಾ ಪಿಎಸ್ಐ ಶಿವಕುಮಾರ್ …

Read More »

ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ

ವಿಜಯಪುರ…ಸಂವಿಧಾನ ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ನಡೆದಿದೆ; ಸಚಿವ ಎಂ.ಬಿ.ಪಾಟೀಲ ಆ್ಯಂಕರ್: ಸಂವಿಧಾನನದಲ್ಲಿ ಸಮಾಜವಾದ ಹಾಗೂ ಜಾತ್ಯಾತೀತ ಶಬ್ದಗಳ ಕುರಿತು ಇದೀಗ ಚರ್ಚೆ‌ ಮುನ್ನಲೆಗೆ ಬಂದ ಹಿನ್ನೆಲೆಯಲ್ಲಿ ಚರ್ಚೆಗಳು ಜೋರಾಗಿ ನಡೆದಿವೆ. ಈ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಕೂಡಾ ಪ್ರತಿಕ್ರಿಯಿಸಿದ್ದಾರೆ. ಜಾತ್ಯತೀತ ಹಾಗೂ ಸಮಾಜವಾದಿ ಪರಿಕಲ್ಪನೆಯಡಿ ರಚನೆಯಾದ ಡಾ.ಬಾಬಾಸಾಹೇಬ ಅಂಬೇಡ್ಕ‌ರ್ ಅವರ ಸಂವಿಧಾನವನ್ನು ಬದಲಿಸಲಿ ಮತ್ತೆ ಮನುಸ್ಮೃತಿ ಜಾರಿಗೆ ತರುವ ಹುನ್ನಾರ ಬಿಜೆಪಿ …

Read More »

ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ

ಖಾನಾಪೂರದ ಅಸೋಗಾ ರಸ್ತೆಯ ರೇಲ್ವೆ ನಿಲ್ದಾಣದ ಬಳಿಯ ರಸ್ತೆಯ ತಡೆಗೋಡೆ ಕುಸಿತ ಖಾನಾಪೂರದ ರೇಲ್ವೆ ನಿಲ್ದಾಣದ ಬಳಿ ಇರುವ ಅಸೋಗಾ ರಸ್ತೆಯ ಮೇಲೆ ರೇಲ್ವೆ ಇಲಾಖೆ ವತಿಯಿಂದ ಸಬ್ ವೇ ಕಾಮಗಾರಿ ಆರಂಭವಾಗಿದ್ದು ಇದರ ಪೂಜೆಯನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನೇರವೇರಿಸಿದರು ಖಾನಾಪೂರ ತಾಲೂಕಿನಲ್ಲಿ ಮಳೆಯ ಆರ್ಭಟ ಹೇಗೆ ಇರುತ್ತದೆ ಎಂಬುದರ ಅರಿವು ಎಲ್ಲರಿಗೂ ಗೊತ್ತು ಆದರೆ ಮಳೆಯ ಆರ್ಭಟದ ಮೊದಲೇ ಈ ಕಾಮಗಾರಿಯನ್ನು ತ್ವರಿತವಾಗಿ ಮಾಡಿ …

Read More »

ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ

ಹೇಗಿತ್ತು ನೋಡಿ…ನರೇಗಾ ಕಾರ್ಮಿಕರ ಮದುವೆಯ 60ನೇ ವಾರ್ಷಿಕೋತ್ಸವ ಇಲ್ಲಿ ಯಾವುದೇ ಮಂಟಪವಿರಲಿಲ್ಲ, ವಾದ್ಯ ಮೇಳ ಗಟ್ಟಿ ಮೇಳದ ಸದ್ದಿರಲಿಲ್ಲ, ಬಂಧುಗಳು ಬಳಗದವರು ಬಣ್ಣ ಬಣ್ಣದ ಬಟ್ಟೆ ತೊಟ್ಟಿರಲಿಲ್ಲ, ವಧು-ವರರೂ ಅಷ್ಟೇ ತುಂಬ ಸಿಂಪಲ್ ಆದರೂ ಅಲ್ಲೊಂದು ಮದುವೆ ಆಯ್ತು. ಹೇಂಗಂತೀರಾ ಈ ಸ್ಟೋರಿ ನೋಡಿ. ಆಕಾಶವೇ ಮಂಟಪವಾದ ಜಿಟಿ ಜಿಟಿ ಮಳೆಯೇ ವಧುವರರನ್ನು ಆಶೀರ್ವದಿಸಿದ ಅಪರೂಪದ ಮದುವೆಯೊಂದು ನಡೆದಿದ್ದು ಇದೇ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ …

Read More »