ಬೆಳಗಾವಿ: ‘ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ. ಈಗ ಸಿ.ಎಂ ಸ್ಥಾನಕ್ಕೆ ರೇಸ್ನಲ್ಲಿ ಯಾರೂ ಇಲ್ಲವೇ ಇಲ್ಲ’ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು. ‘ದೀಪಾವಳಿ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ’ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇಲ್ಲಿ ಬುಧವಾರ ಸುದ್ದಿಗಾರರಿಗೆ ಹೀಗೆ ಪ್ರತಿಕ್ರಿಯಿಸಿದ ಅವರು, ‘ಸ್ಥಿರವಾಗಿರುವ ನಮ್ಮ ಸರ್ಕಾರವನ್ನು ಸಹಿಸಿಕೊಳ್ಳಲು ಬಿಜೆಪಿಯವರಿಗೆ ಆಗುತ್ತಿಲ್ಲ. ಹಾಗಾಗಿ ಸರ್ಕಾರ ಬೀಳಿಸಲು, ಒಡೆಯಲು ಮತ್ತು ಆಪರೇಷನ್ ಮಾಡಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯವರು ಅಭಿವೃದ್ಧಿ …
Read More »ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಸ್ವಾಗತ: ಬಿಜೆಪಿ ಶಾಸಕ ವಿಠ್ಠಲ ಹಲಗೇಕರ
ಬೆಳಗಾವಿ: ‘ಸಚಿವ ಸತೀಶ ಜಾರಕಿಹೊಳಿ ಮುಖ್ಯಮಂತ್ರಿ ಸ್ಥಾನದ ರೇಸ್ನಲ್ಲಿ ಇದ್ದಾರೆ. ಅವರೇ ಸಿ.ಎಂ ಆದರೆ ಸ್ವಾಗತ’ ಎಂದು ಖಾನಾಪುರ ಕ್ಷೇತ್ರದ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಹೇಳಿದರು. ಇಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲಿದೆ. ಅವರು ಪಕ್ಷಾತೀತವಾಗಿ ಕೆಲಸ ಮಾಡಲಿದ್ದಾರೆ. ನಾನು ಪ್ರತಿನಿಧಿಸುವ ಖಾನಾಪುರ ಕ್ಷೇತ್ರವನ್ನು ಸಮೀಪದಿಂದ ನೋಡಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿಯೂ ಇಡೀ ಜಿಲ್ಲೆ ಓಡಾಡಿದ್ದಾರೆ. ಅವರು …
Read More »ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ
ಶಿವಾಪೂರ(ಹ) ಅಡವಿ ಸಿದ್ಧೇಶ್ವರ ಮಠದ ಅಭಿವೃದ್ಧಿಗೆ ಅವಿರತ ಶ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಅಡವಿ ಸಿದ್ಧೇಶ್ವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಅಂಕಲಗಿ ಶ್ರೀ ಮಠದ ಕಾರ್ಯಗಳನ್ನು ಪ್ರಶಂಶಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ಇತಿಹಾಸ ಪ್ರಸಿದ್ಧ ಅಂಕಲಗಿ ಅಡವಿ ಸಿದ್ಧೇಶ್ವರ ಮಹಾಸ್ವಾಮಿಗಳು ಇಲ್ಲಿ ಬಂದು ನೆಲೆಸಿರುವ ಇತಿಹಾಸಗಳಿದ್ದು, ಈ ಮಠಕ್ಕೆ ಭವ್ಯವಾದ ಪರಂಪರೆ ಇದೆ. ನಮ್ಮ ಕ್ಷೇತ್ರದ ಭಕ್ತಾಧಿಗಳು ಸೇರಿಕೊಂಡು ಶ್ರೀ ಮಠದ ಅಭಿವೃದ್ಧಿಗೆ ಪಣ ತೊಡೋಣ. ಮಠದ ವಿಷಯದಲ್ಲಿ …
Read More »ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಬಸ್
ಬೆಳಗಾವಿ: ರಸ್ತೆಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆಯೇ ಸರ್ಕಾರಿ ಬಸ್ ಹರಿದಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಗಲಗಲಿಯಲ್ಲಿ ನಡೆದಿದೆ. 10 ವರ್ಷದ ಸುನೀಲ್ ಮೃತ ಬಾಲಕ. ಶಾಲೆಗೆ ರಜೆಯಿದ್ದರೂ ವಿದ್ಯಾರ್ಥಿಗಳು ಟ್ಯೂಷನ್ ಕ್ಲಾಸ್ ಗೆ ಬಂದಿದ್ದರು. ಟ್ಯೂಷನ್ ಮುಗಿಸಿಕೊಂಡು ವಿದ್ಯಾರ್ಥಿಗಳು ರಸ್ತೆ ದಾಟಿ ರಸ್ತೆ ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ಜವರಾಯನಂತೆ ಬಂದ ಬಸ್ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಹರಿದಿದೆ. ಓರ್ವ ಬಾಲಕ ಸ್ಥಳದಲ್ಲೇ …
Read More »ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸೀನಿಯರ್ ಇದ್ದೀನಿ; ಎಂಬಿ ಪಾಟೀಲ್
ವಿಜಯಪುರ: ರಾಜ್ಯದಲ್ಲಿ ಸಿದ್ದರಾಮಯ್ಯ (Siddaramaiah) ಸಿಎಂ ಆಗಿದ್ದಾರೆ, ಸಿಎಂ ಆಗಿಯೇ ಮುಂದುವರೆಯುತ್ತಾರೆ ಎಂದು ಸಚಿವ ಎಂಬಿ ಪಾಟೀಲ್ (MB Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರದ ಕುರಿತು ಯಾವುದೇ ಹುರಳಿಲ್ಲ, ಪಾತ್ರವಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರಿಗೆ ಹಾಗಾಗುತ್ತೆ ಹೀಗಾಗುತ್ತೆ ಎಂದು ಯಾರಾದ್ರೂ ತಿಳಿದುಕೊಂಡಿದ್ದರೆ ಅದು ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್ನ …
Read More »ಶತಮಾನದ ಶಾಲೆಗಳಿಗೆ ‘ಕನ್ನಡದ ಬಣ್ಣ’
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲ್ಲೂಕಿನ ಹಿರೇಬುದನೂರ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಾರುಗೊಪ್ಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡಕ್ಕೆ ಬೆಂಗಳೂರಿನ ‘ಕನ್ನಡ ಮನಸುಗಳು ಕರ್ನಾಟಕ’ ತಂಡದ ಸದಸ್ಯರು ಬಣ್ಣ ಬಳಿದು, ಹೊಸ ರೂಪ ನೀಡಿದ್ದಾರೆ. ಬಣ್ಣ ಹಚ್ಚಿದರೆ ಸಾಲದು, ಆವರಣ ವಿಶಿಷ್ಟವಾಗಿಸಲು ಶಾಲಾ ತರಗತಿ ಕೊಠಡಿಯ ಗೋಡೆಗಳ ಮೇಲೆ ಮಹಾನ್ ನಾಯಕರು, ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ರಚಿಸಿದ್ದಾರೆ. ನಲಿ-ಕಲಿ ತರಗತಿಗೆ ಪೂರಕ ಚಿತ್ರಗಳನ್ನು ಬಿಡಿಸಿದ್ದಾರೆ. …
Read More »ದ್ವಿಚಕ್ರ ವಾಹನಗಳ ಮುಖಾಮುಖಿ; ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಸಾವು!
ಬಾಗಲಕೋಟೆ: ಗಣೇಶ ಉತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಪ್ಟ್ ವೇರ್ ಇಂಜಿನಿಯರ್ ಸೇರಿ ಮೂವರು ಮೃತಪಟ್ಟ ಘಟನೆ ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ಸಂಭವಿಸಿದೆ. ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ನಕಲಿ ವಿದ್ಯಾರ್ಥಿಗಳ ಹೆಸರಲ್ಲಿ ಹಣ ದುರುಪಯೋಗ: ತನಿಖೆಗೆ ಜಿ.ಪಂ ಸಿಇಒ ಆದೇಶ
ವಿಜಯಪುರ: 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಕೊಡುವ ₹20 ಸಾವಿರ ನಗದು ಯೋಜನೆಯ ಹಣವನ್ನು ಇಲಾಖೆ ಸಿಬ್ಬಂದಿ ನುಂಗಿ ಹಾಕಿರುವ ಪ್ರಕರಣದ ತನಿಖೆಗೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ್ ಆದೇಶಿಸಿದ್ದಾರೆ. ‘ಪ್ರಜಾವಾಣಿ’ಯಲ್ಲಿ ಗುರುವಾರ ಪ್ರಕಟವಾದ ‘ನಕಲಿ ವಿದ್ಯಾರ್ಥಿಗಳ ಹೆಸರಿನಲ್ಲಿ ಹಣ ಗುಳುಂ!’ ವಿಶೇಷ ವರದಿಗೆ ಪ್ರತಿಕ್ರಿಯಿಸಿರುವ ಜಿಲ್ಲಾ …
Read More »171 ಶಾಲಾ ಕೊಠಡಿ ನಿರ್ಮಾಣ: ಹುಕ್ಕೇರಿ
ಚಿಕ್ಕೋಡಿ: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು. ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, …
Read More »ಈಜು ರಿಲೆ: ದಾಖಲೆ ಬರೆದ ತಾಯಿ-ಮಗ
ಬೆಳಗಾವಿ: ಇಲ್ಲಿನ ಸ್ವಿಮ್ಮರ್ಸ್ ಕ್ಲಬ್ ಮತ್ತು ಅಕ್ವೇರಿಯಸ್ ಸ್ವಿಮ್ ಕ್ಲಬ್ನ ಈಜುಪಟುಗಳಾದ ಜ್ಯೋತಿ ಕೋರಿ (ಹೊಸಟ್ಟಿ) ಹಾಗೂ ಅವರ ಪುತ್ರ ವಿಹಾನ್ ಜತೆಯಾಗಿ, ಕೆಎಲ್ಇ ಸಂಸ್ಥೆಯ ಸುವರ್ಣ ಜೆಎನ್ಎಂಸಿ ಈಜುಕೊಳದಲ್ಲಿ ಗುರುವಾರ ನಡೆದ ‘ನಾನ್ಸ್ಟಾಪ್ ಸ್ವಿಮ್ಮಿಂಗ್ ರಿಲೆ’ಯಲ್ಲಿ 12 ಗಂಟೆ, 22 ನಿಮಿಷ ಈಜಿ ಇಂಡಿಯಾ ಅಂಡ್ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದರು. 44 ವರ್ಷ ವಯಸ್ಸಿನ ಜ್ಯೋತಿ ಮತ್ತು …
Read More »
Laxmi News 24×7