Breaking News

ಜಿಲ್ಲೆ

ಬೆಳಗಾವಿ ಮೇಯರ್, ಓರ್ವ ನಗರಸೇವಕನ ಸದಸ್ಯತ್ವ ರದ್ದು

ಬೆಳಗಾವಿ: ಇಲ್ಲಿನ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮಹಾನಗರ ಪಾಲಿಕೆಯ ಹಾಲಿ ಮೇಯರ್ ಮಂಗೇಶ ಪವಾರ ಮತ್ತು ನಗರಸೇವಕ ಜಯಂತ ಜಾಧವ ಅವರ ಸದಸ್ಯತ್ವ ರದ್ದುಗೊಳಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಮಂಗೇಶ ಪವಾರ ಮತ್ತು ಜಯಂತ ಜಾಧವ ತಮ್ಮ ಪತ್ನಿಯರ ಹೆಸರಿನಲ್ಲಿ ತಿನಿಸು ಕಟ್ಟೆಯಲ್ಲಿ ಮಳಿಗೆ ಪಡೆದಿದ್ದು, ಪಾಲಿಕೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಆ ಮಳಿಗೆಗಳನ್ನು ಇಬ್ಬರು ಬಿಟ್ಟು ಕೊಡಬೇಕಾಗಿತ್ತು. ಹಾಗಾಗಿ, ಕೆಎಂಸಿ ಕಾಯ್ದೆ-1976, ಸೆಕ್ಷನ್ …

Read More »

ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಹೆಚ್ಚಿನ​ ನೀರು ಬಿಡುಗಡೆ:

ರಾಯಚೂರು: ಕೃಷ್ಣಾ ನದಿ ಮೇಲ್ಭಾಗದಲ್ಲಿ ಮಳೆಯ ಸುರಿಯುತ್ತಿರುವುದರಿಂದ ನಾರಾಯಣಪುರ (ಬಸವಸಾಗರ) ಜಲಾಶಯಕ್ಕೆ ನೀರಿನ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಸಾವಿರಾರು ಕ್ಯೂಸೆಕ್​ ನೀರು ನದಿಗೆ ಹರಿಬಿಡಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಅಣೆಕಟ್ಟಿನ ಪ್ರಸ್ತುತ ನೀರಿನ ಸಂಗ್ರಹವು 80.27% ಇದೆ. ಹೀಗಾಗಿ, ಕೃಷ್ಣಾ ನದಿಗೆ 84,445 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ. ಅಣೆಕಟ್ಟಿನ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಪರಿಗಣಿಸಿದರೆ ನಾರಾಯಣಪುರ ಅಣೆಕಟ್ಟೆಗೆ ಸುಮಾರು 1,10,000 …

Read More »

5 ಹುಲಿಗಳ ಸಾವು ಪ್ರಕರಣ: ಹಸು ಮಾಲೀಕ ಸೇರಿ ವಿಷ ಹಾಕಿದ್ದ ಮೂವರ ಬಂಧನ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿತರನ್ನು ಅರಣ್ಯ ಇಲಾಖೆ ಶನಿವಾರ ಬಂಧಿಸಿ, ಹೆಚ್ಚಿನ ವಿಚಾರಣೆ ಕೈಗೊಂಡಿದೆ. ಹನೂರು ತಾಲೂಕಿನ ಕೊಪ್ಪ ಗ್ರಾಮದ ಹಸುವಿನ ಮಾಲೀಕ ಕೋನಪ್ಪ ಹಾಗೂ ಹಸುವಿನ ಮೃತದೇಹಕ್ಕೆ ವಿಷಪ್ರಾಶನ ಮಾಡಿದ ಆರೋಪದ ಮೇಲೆ ಮಾದುರಾಜ್ ಹಾಗೂ ನಾಗರಾಜು ಪೂಜಾರಿಗೌಡ ಎಂಬ ದನಗಾಹಿಗಳನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ. ಮೀಣ್ಯಂ ಸಮೀಪವೇ ಕೊಪ್ಪ ಗ್ರಾಮವಿದ್ದು ಜಾನುವಾರುಗಳಿಗೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಶಿವಾಪುರ (ಕೊ)ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ

ಅರುಣ ಯಳ್ಳೂರಕರ ಗೆ ಕರ್ನಾಟಕ ಛಾಯಾರತ್ನ’ ಪ್ರಶಸ್ತಿ ಬೆಳಗಾವಿ: ಇಲ್ಲಿನ ಹಿರಿಯ ಪತ್ರಿಕಾ ಛಾಯಾಗ್ರಾಹಕ ಅರುಣ ಯಳ್ಳೂರಕರ ಅವರು, ‘ಕರ್ನಾಟಕ ಛಾಯಾರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಪತ್ರಿಕಾ ಛಾಯಾಗ್ರಹಕರಾಗಿ ಪತ್ರಿಕೆ ಮಾದ್ಯಮ ಕ್ಷೇತ್ರದಲ್ಲಿ ಹಲವು ದಶಕಗಳ ಲ್ಲಿ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ, ಕರ್ನಾಟಕ ವಿಡಿಯೊ ಮತ್ತು ಫೊಟೊ ಅಸೋಸಿಯೇಷನ್ ಬ(ರಿ) ಮತ್ತು ಬೈಸೇಲ್ ಇಂಟ್ರಾಕ್ಷನ್ ಪ್ರವೇಟ್ ಲಿಮಿಟೆಡ್ ಸಹಯೊಗದೊಂದಿಗೆ ದಿನಾಂಕ 27-06-2025 ರಂದು ಬೆಂಗಳೂರಿನ ಅರಮನೆ ಮೈದಾನದ …

Read More »

ಅನ್ಯ ರಾಜ್ಯಗಳ ಪೊಲೀಸ್ ಸಿಬ್ಬಂದಿಯ ಕ್ಯಾಪ್‌ ಪರಿಶೀಲಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್​​

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಬ್ರಿಟಿಷರ ಕಾಲದ ಕ್ಯಾಪ್‌ಗಳ ಬದಲಾವಣೆಯ ಚರ್ಚೆಗಳು ಚಾಲ್ತಿಯಲ್ಲಿರುವಾಗ, ಅನ್ಯ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಧರಿಸುತ್ತಿರುವ ಟೋಪಿಗಳ ಮಾದರಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವೀಕ್ಷಿಸಿದ್ದಾರೆ. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಇಂದು ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಭೆ ನಡೆಸಿದ ಅವರು, ಮಹಾರಾಷ್ಟ್ರ, ದೆಹಲಿ, ಆಂಧ್ರ ಪ್ರದೇಶ, ತೆಲಂಗಾಣ, ಕೇರಳ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಬಳಸುತ್ತಿರುವ ಕ್ಯಾಪ್‌ಗಳನ್ನು ಪರಿಶೀಲಿಸಿದರು. …

Read More »

ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ

ಯುದ್ಧೋಪಾದಿಯಲ್ಲಿ ಕೋಟೆ ಕೆರೆ ನಾಲೆಯ ಸ್ವಚ್ಛತೆ ಶಾಸಕ ಆಸೀಫ್ ಸೇಠ್ ಮತ್ತು ನಗರಸೇವಕರಿಂದ ಪರಿಶೀಲನೆ ಮಾನ್ಸೂನ್ ಸಮಯದಲ್ಲಿ ನಿರ್ಮಾಣವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಇಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿ ಕೋಟೆ ಕೆರೆಗೆ ಭೇಟಿ ನೀಡಿ ಬ್ಲಾಕೇಜ್ ಸ್ವಚ್ಛತೆಗಾಗಿ ನಡೆಯುತ್ತಿರುವ ಕಾರ್ಯಾಚರಣೆಯನ್ನು ಪರಿಶೀಲನೆ ನಡೆಸಿದರು. ಇಂದು ಬೆಳಗಾವಿಯ ಉತ್ತರ ಶಾಸಕ ಆಸೀಫ್ ಸೇಠ್ ಅವರು ಬೆಳಗಾವಿಯ ಕೋಟೆ ಕೆರೆಗೆ ಭೇಟಿ ನೀಡಿ ಬೃಹತ್ ನಾಲೆ ಶುದ್ಧಿಕರಣಕ್ಕಾಗಿ …

Read More »

ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ.

ಗೋಕಾಕ: ಮೂಡಲಗಿ ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿ ಸಿದ್ದರಾಮ ಸ್ವಾಮೀಜಿಯವರ ನಡೆಯ ಕುರಿತು ಭಕ್ತರಲ್ಲಿ ಉಂಟಾಗಿದ್ದ ಗೊಂದಲವು ಸುಖಾಂತ್ಯ ಕಂಡಿದೆ. ನಗರದ ಶೂನ್ಯ ಸಂಪಾದನ ಮಠದಲ್ಲಿ ಗುರುವಾರ ಸಂಜೆ ನಾನಾ ಶ್ರೀಗಳೊಂದಿಗೆ ಕ್ಷೇತ್ರದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಶಿವಾಪೂರ (ಹ) ದ ಅಡವಿ ಸಿದ್ದೇಶ್ವರ ಶ್ರೀಗಳ ತಪ್ಪು ಕಾಣದಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಠದಲ್ಲಿಯೇ ಮುಂದುವರಿಯಲು ಅಡವಿಸಿದ್ದರಾಮ ಸ್ವಾಮೀಜಿಗೆ ಅವಕಾಶ …

Read More »

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

ವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ ಕೇಳಿ ಬಂದಿದೆ. ಸಾಲ ಪಡೆದ ಹಣ ನೀಡದೇ ಇದ್ದ ಕಾರಣಕ್ಕೆ ಕಳೆದ 27 ದಿನಗಳಿಂದ ದೇವರಹಿಪ್ಪರಗಿ ತಾಲೂಕಿನ ಪಡಗಾನೂರು ಗ್ರಾಮದ ಉದಯಕುಮಾರ ಬಾವಿಮನಿ ಎಂಬುವವರನ್ನು ಬಸವನಬಾಗೇವಾಡಿ ಪಟ್ಟಣದ ನಿವಾಸಿ ಪ್ರಭಾಕರ ಢವಳಗಿ ಎಂಬುವವರು ಕೂಡಿಟ್ಟುಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ. ಇತ್ತ ಉದಯಕುಮಾರನನ್ನು ಬಿಡಿಸಲು ಕುಟುಂಬಸ್ಥರು ಪರದಾಡುತ್ತಿದ್ದಾರೆ.ಉದಯಕುಮಾರ ಬೆಂಗಳೂರಿನಲ್ಲಿ ಖಾಸಗಿ ಶಾಲಾ …

Read More »

ಬಳ್ಳಾರಿ‌‌ ನಾಲಾ ಅವಾಂತರ, ಗೆಣಸು ಕೊಯ್ಲಿಗೆ ರೈತರ ಹರಸಾಹಸ

ಬೆಳಗಾವಿ: ಇಲ್ಲಿನ ಬಳ್ಳಾರಿ ನಾಲೆ ಉಕ್ಕಿ ಹರಿಯುತ್ತಿದ್ದು, ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳನ್ನು ಆಹುತಿ ಪಡೆದುಕೊಳ್ಳುತ್ತಿದೆ. ಹಾಗಾಗಿ, ಗೆಣಸು ಕಟಾವು ಮಾಡಲು ರೈತರು ಹರಸಾಹಸಪಡುತ್ತಿದ್ದಾರೆ. ಇದನ್ನು ಹಾಗೇ ಬಿಟ್ಟರೆ ಹಾಕಿದ ಬಂಡವಾಳ ಕೂಡ ಕೈ ಸೇರುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದ ಹೊರ ವಲಯದಲ್ಲಿ ಹರಿಯುವ ಬಳ್ಳಾರಿ ನಾಲೆ ಇಲ್ಲಿನ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಆರಂಭದಲ್ಲಿ ಈ ಭಾಗದ ರೈತರಿಗೆ ವರದಾನವಾಗಿತ್ತು. ಕಳೆದ ಹತ್ತು ವರ್ಷಗಳಿಂದ ಹೂಳು ತುಂಬಿಕೊಂಡು ಪ್ರತೀ …

Read More »