Breaking News

ಜಿಲ್ಲೆ

ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಗಿಡ ಬೆಳೆಸಿ:ಸವದಿ

ಅಥಣಿ: ‘ಗಿಡಗಳನ್ನು ಹಚ್ಚುವುದು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಬಾರದು. ಗಿಡಗಳನ್ನು ನೆಟ್ಟು ಪೋಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಗಿಡ ಬೆಳೆಸುವುದರಿಂದ ಹೆಚ್ಚುತ್ತಿರುವ ತಾಪಮಾನ ತಗ್ಗಿಸಲು ಸಹಕಾರಿಯಾಗುತ್ತದೆ’ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು. ಇಲ್ಲಿನ ಆರ್.ಎಚ್.ಕುಲಕರ್ಣಿ ಸಭಾಂಗಣದಲ್ಲಿ ಅಥಣಿ ಮತ್ತು ಕಾಗವಾಡ ತಾಲ್ಲೂಕು ಸಹಕಾರಿ ಸಂಘಗಳ ಹಾಗೂ ವಿವಿಧ ಉದ್ದೇಶಗಳ ಗ್ರಾಮೀಣ ಪ್ರಾಥಮಿಕ ಕೃಷಿ ಸಹಕಾರ ಸಂಘಗಳ ಬ್ಯಾಂಕ್‌ಗಳ ಒಕ್ಕೂಟದ ಆಶ್ರಯದಲ್ಲಿ ಗ್ರಾಮ ಗ್ರಾಮಗಳಲ್ಲಿ ಸಹಕಾರ ಸಂಘಗಳ ಮುಖಾಂತರ 5,000 ಸಸಿಗಳ ವಿತರಣೆ …

Read More »

ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು

ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಕೆಸರಗೊಪ್ಪ ಗ್ರಾಮದ ಯುವ ರೈತ ಬಸವರಾಜ ಶ್ರೀಶೈಲ ಸತ್ತಿಗೇರಿ ಸಾಧಿಸಿ ತೋರಿಸಿದ್ದಾರೆ.   ಅಂತರ ಬೆಳೆಯಾಗಿ ಕೊತ್ತಂಬರಿ ಸೊಪ್ಪು : ಒಟ್ಟು 3.18 ಎಕರೆ ಜಮೀನು ಹೊಂದಿರುವ ಸಣ್ಣ ರೈತರಾದ ಬಸವರಾಜ ಸತ್ತಿಗೇರಿ ಅವರು ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ 25 ಗುಂಟೆ ಜಮೀನಿನಲ್ಲಿ ಕಳೆದ ಮೇ18 ರಂದು ಅರಿಶಿನ …

Read More »

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಬೆಳಗಾವಿ: ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಕನ್ನಡ ಮಾಧ್ಯಮ ಶಾಲೆಗಳಿಗೆ ಗಡಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತ್ತ ತಾಲ್ಲೂಕಿನ ಬೋರಗಿ, ಕರಜಗಿ, ಭೇವರ್ಗಿ, ಬಾಲಗಾಂವ, ಅಂಕಲಗಿ, ಸಂಖ, ರಾವಳಗುಂಡವಾಡಿ, ಮೇಂಡಿಗೇರಿ ಗ್ರಾಮಗಳಲ್ಲಿನ ವಿವಿಧ ಕನ್ನಡ ಮಾಧ್ಯಮ ಶಾಲೆಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದರು. ಈ ಪ್ರದೇಶಗಳಲ್ಲಿನ ಕೆಲವು ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಮರಾಠಿ ಶಿಕ್ಷಕರನ್ನು ಕನ್ನಡ …

Read More »

ಆಡಳಿತದಲ್ಲಿ ಪಾರದರ್ಶಕತೆ ಕೊರತೆ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಬೇಸರ

ಬೆಳಗಾವಿ: ‘ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದೆ. ಇದನ್ನು ನಿವಾರಿಸಬೇಕಿದೆ’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು. ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು …

Read More »

ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ

ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್​​ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ …

Read More »

ಬೆಂಗಳೂರು ಅಪರಾಧ ಸುದ್ದಿ; ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತ, ಕೇಸ್‌ ಬೀಳುತ್ತಿದ್ದಂತೆ ಪರಾರಿ,

ಬೆಂಗಳೂರು: ಕಾಮಾತುರಣಂ ನ ಭಯ ನ ಲಜ್ಜಾ ಎಂಬ ನಾಣ್ಣುಡಿ ಪದೇ ಪದೇ ನಿಜವಾಗುವೌಂತಹ ಘಟನೆಗಳು ಸಂಭವಿಸುತ್ತಿದ್ದು, ಕಸಿವಿಸಿಯನ್ನುಂಟು ಮಾಡುತ್ತಿವೆ. ಬೆಂಗಲೂರಿನ ಹುಳಿಮಾವು ಪ್ರದೇಶದಲ್ಲಿ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಡೆದಿದೆ. ಹೆತ್ತ ತಾಯಿ ಕೆಲಸಕ್ಕೆ ಹೋಗಿದ್ದಗ ತಾತ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಅಜ್ಜ ಈ ಕೃತ್ಯ ಗೊತ್ತಾಗುತ್ತಿದ್ದಂತೆ ಅಜ್ಜ ಮೊಮ್ಮಗಳ ಪೋಷಕರಿಗೆ ಮನೆಯನ್ನು ನಿಮ್ಮ ಹೆಸರಿಗೆ ಮನೆ …

Read More »

ಏಳು ತಿಂಗಳ ಬಾಕಿ ಸಂಬಳ ಕೊಡಿ’

ರಾಯಚೂರು: ‘ಜಿಲ್ಲೆಯಲ್ಲಿ ವಿವಿಧ ವೃಂದ ಹೊರ ಗುತ್ತಿಗೆ ನೌಕರರಿಗೆ ಬಾಕಿ ಉಳಿದಿರುವ ಏಳು ತಿಂಗಳ ವೇತನವನ್ನು ತಕ್ಷಣ ವೇತನ ಪಾವತಿ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ವಿವಿಧ ವೃಂದದ ಹೊರ ಗುತ್ತಿಗೆ ನೌಕರರ ಸಂಘ ಒತ್ತಾಯಿಸಿದೆ. ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಕ್ಷಯಗೌಡ, ‘ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಗುತ್ತಿಗೆ ಏಜೆನ್ಸಿಗಳು ತಮ್ಮ ಹೊಣೆಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. …

Read More »

ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಕರ್ನಾಟಕದ ಕುದುರೆಗಳಿಗೆ ‘ಮಹಾ’ ಮರ್ಯಾದೆ

ಚಿಕ್ಕೋಡಿ: ಹೀರಾ ಮತ್ತು ಮೋತಿ ಅವರಿಗೆ ಮಹಾರಾಷ್ಟ್ರದ ಪಂಢರಪುರದ ವಿಠ್ಠಲನ ಸನ್ನಿಧಿಯಲ್ಲಿ ಆಷಾಢ ಏಕಾದಶಿಯಲ್ಲಿ ರಾಜ ಮರ್ಯಾದೆ ಸಿಗುತ್ತದೆ. ಪ್ರತಿ ವರ್ಷ ಪಂಢರಪುರಕ್ಕೆ ಹೊರಡುವ ದಿಂಡಿಯಲ್ಲಿ 315 ಕಿ.ಮೀ ದಾರಿಯುದ್ದಕ್ಕೂ ಇವರೂ ಹೆಜ್ಜೆ ಹಾಕುತ್ತಾರೆ..! ಇದರಲ್ಲೇನು ವಿಶೇಷ ಎಂದುಕೊಳ್ಳಬೇಡಿ. ಹೀರಾ, ಮೋತಿ ಎಂಬುದು ಎರಡು ಕುದುರೆಗಳ ಹೆಸರು. ತಾಲ್ಲೂಕಿನ ಅಂಕಲಿ ಗ್ರಾಮದ ಶಿಥೋಳೆ ಮನೆತನದವರು ಸಾಕಿರುವ ಈ ಕುದುರೆ ಜೋಡಿಗೆ ಪಂಢರಪುರದ ದೇವಸ್ಥಾನದಲ್ಲಿ ವಿಶೇಷ ಆತಿಥ್ಯ ಸಿಗುತ್ತದೆ. ಪ್ರತಿವರ್ಷ ಜ್ಯೇಷ್ಠ …

Read More »