Breaking News

ಜಿಲ್ಲೆ

ಕಗ್ಗಂಟಾಗಿದ್ದ ದಾವಣಗೆರೆ, ಬಾಗಲಕೋಟೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್! ಇವರಿಗೆ ಟಿಕೆಟ್ ಕೊಡೋದು ಕನ್ಫರ್ಮ್

ಪಚುನಾವಣೆ ದಿನಾಂಕ  ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ  ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜಕೀಯವಾಗಿ ಬಹಳ ಆಸಕ್ತಿಕರವಾಗಿ ಮುಂದುವರೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್​​ನಲ್ಲಿ ಮಾತ್ರ ಟಿಕೆಟ್​ಗಾಗಿ ಭಾರೀ ಪೈಪೋಟಿ ನಡೆಯುತ್ತಿತ್ತು. ಇದೀಗ ಕೊನೆಗೂ ಟಿಕೆಟ್​​ ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯ ಬಿಜೆಪಿ ಟಿಕೆಟ್​ ಅಧಿಕೃತವಾಗಿ ಘೋಷಣೆಯಾಗಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ …

Read More »

ರಂಜಾನ್ ಹಬ್ಬದ ಶುಭಕೋರಿದ ಸಿಎಂ: ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಸಿದ್ದರಾಮಯ್ಯ

 ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ(Happy Ramzan) ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು. ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ ಎಂದರು. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. …

Read More »

ಕಾಂಗ್ರೆಸ್‌ಗೆ ಯಾರೂ ಬ್ಲ್ಯಾಕ್‌ಮೇಲ್‌ ಮಾಡಲು ಆಗುವುದಿಲ್ಲ: ಎಂ.ಬಿ.ಪಾಟೀಲ್‌

ಬೆಂಗಳೂರು: ಕಾಂಗ್ರೆಸ್‌ಗೆ ಯಾರೂ ಒತ್ತಡ ಹೇರಲು ಆಗುವುದಿಲ್ಲ. ಬ್ಲ್ಯಾಕ್‌ಮೇಲ್‌ ಮಾಡಲಿಕ್ಕೂ ಆಗುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶಾಮನೂರು ಕುಟುಂಬವೂ ಕೇಳುತ್ತಿದೆ. ಹಾಗೆಯೇ ಅಲ್ಪಸಂಖ್ಯಾತ ಸಮುದಾಯವೂ ಬೇಡಿಕೆ ಇಟ್ಟಿದೆ. ಯಾರು ಬೇಕಾದರೂ ಟಿಕೆಟ್‌ ಕೇಳಬಹುದು. ಅದು ತಪ್ಪೇನಲ್ಲ. ಆದರೆ, ಯಾರೂ ಒತ್ತಡ ಹಾಕಲು ಬರುವುದಿಲ್ಲ. ಬ್ಲ್ಯಾಕ್‌ಮೇಲ್‌ ಮಾಡಲಿಕ್ಕೂ ಆಗದು ಎಂದು ಹೇಳಿದರು. ಈಗಾಗಲೇ ನಾಮಪತ್ರ ಕೂಡ ಸಲ್ಲಿಸಿದ್ದಾರಲ್ಲ ಎಂದು ಕೇಳಿದಾಗ, …

Read More »

ರಂಜಾನ್​ ವೇಳೆ 1 ತಿಂಗಳ ಕಠಿಣ ಉಪವಾಸ ಮಾಡಿದ 10ವರ್ಷದ ಬಾಲಕ,6 ವರ್ಷದ ಬಾಲಕಿ!

ಘಟಪ್ರಭಾ: ಪವಿತ್ರ ರಂಜಾನ್ ಹಬ್ಬದ ಸಂದರ್ಭದಲ್ಲಿ ಒಂದು ಹನಿ ನೀರು ಕುಡಿಯದೆ ಮುಸ್ಲಿಂ ಬಾಂಧವರು ಕಟ್ಟುನಿಟ್ಟಾದ ಉಪವಾಸ ಪಾಲನೆ ಮಾಡುತ್ತಾರೆ.ಇಂತಹ ಕಠಿಣ ಉಪವಾಸ ಒಂದು ತಿಂಗಳವರೆಗೆ ಮಾಡೋದು ಕೆಲವೊಂದು ಸಲ ದೊಡ್ಡವರಿಗೂ ಕಷ್ಟವಾಗುತ್ತದೆ.ಆದರೆ,ಇಂತಹ ಕಠಿಣ ಉಪವಾಸವನ್ನು ಒಂದು ತಿಂಗಳವರೆಗೆ ಕಟ್ಟು ನಿಟ್ಟಾಗಿ ಆಚರಿಸುವ ಮೂಲಕ ಘಟಪ್ರಭಾ ಪಟ್ಟಣದಲ್ಲಿ ಇಬ್ಬರು ಸಹೋದರ,ಸಹೋದರಿ ಗಮನ ಸೆಳೆದಿದ್ದಾರೆ. ಘಟಪ್ರಭಾ ಪಟ್ಟಣದ ಬಸವ ನಗರದದಲ್ಲಿರುವ ಫಾರೂಖ್ ಅತ್ತಾರ ಎಂಬುವರ ಮಕ್ಕಳಾದ 10ವರ್ಷದ ಪುತ್ರ ಫಹೀಮ್ ಹಾಗೂ …

Read More »

ಪಕ್ಷಾತೀತವಾಗಿ ಕಾರ್ಯನಿರ್ವಹಿಸಿ: ಬಾಗಲಕೋಟೆ ಜಿಲ್ಲಾಧಿಕಾರಿ ಪಾರುಲ್‌

ಬಾಗಲಕೋಟೆ: ನೀತಿ ಸಂಹಿತೆ ಪಾಲನೆ ಜೊತೆಗೆ ಅಧಿಕಾರಿಗಳು ಪಕ್ಷಾತೀತವಾಗಿ ಚುನಾವಣೆ ಕಾರ್ಯವನ್ನು ಪ್ರಾಮಾಣಿಕರಾಗಿ ನಿರ್ವಹಿಸಬೇಕು ಎಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಸಾಮಾನ್ಯ ವೀಕ್ಷಕರಾದ ಪಾರುಲ್ ಪಟವಾರಿ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣಾ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಅಬಕಾರಿ ಡಿಸ್ಟಲರಿ ಉತ್ಪನ್ನಗಳ ಹಾಗೂ ಹೊರ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಬೇಕು ಎಂದು ಹೇಳಿದರು. ವಿವಿಧ ನೋಡಲ್ …

Read More »

ಸಾಂಬ್ರಾ ವಿಮಾನ ನಿಲ್ದಾಣ| ಸೌಲಭ್ಯ ಒದಗಿಸಿದರೆ ಮೇಲ್ದರ್ಜೆಗೆ: ಶೆಟ್ಟರ್‌ಗೆ ಪತ್ರ

ಬೆಳಗಾವಿ: ‘ಅಗತ್ಯ ಸೌಲಭ್ಯ ಒದಗಿಸಿದರೆ, ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೆ ಏರಿಸಲು ಸಾಧ್ಯ’ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ ನಾಯ್ಡು ತಿಳಿಸಿದ್ದಾರೆ. ಈ ಸಂಬಂಧ ಸಂಸದ ಜಗದೀಶ ಶೆಟ್ಟರ್‌ ಅವರಿಗೆ ಪತ್ರ ಬರೆದಿದ್ದಾರೆ. ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಲು ರನ್‌ವೇ ಉದ್ದಳತೆ, ಇನ್‌ಸ್ಟ್ರುಮೆಂಟ್‌ ಲ್ಯಾಂಡಿಂಗ್‌ ಸಿಸ್ಟಮ್‌, ಲೈಟಿಂಗ್‌ ವ್ಯವಸ್ಥೆ ಮತ್ತಿತರ ವಿಷಯ ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ’ ಎಂದು ತಿಳಿಸಿದ್ದಾರೆ. ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಬರೆದ …

Read More »

ಗದಗ: ರಥೋತ್ಸವದ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ದಾರಿ ಬಿಡುವಂತೆ ಹೇಳಿದ್ದಕ್ಕೆ ಹಲ್ಲೆ? ಸಲೀಂ ಗ್ಯಾಂಗ್ ಅರೆಸ್ಟ್!

ಗದಗ ರಥೋತ್ಸವ ವೇಳೆ ಕಾರು ಅಡ್ಡ ನಿಲ್ಲಿಸಿ ಕಿರಿಕ್, ತೆಗೆಯೋಕೆ ಹೇಳಿದ್ದಕ್ಕೆ ಹಲ್ಲೆ ಭಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿಗಳು ಅರೆಸ್ಟ್ ಮಾಡಲಾಗಿದೆ. ಘಟನೆ ನಡೆದಿದ್ದು ಹೇಗೆ? ಗದಗ ಜಿಲ್ಲೆಯ ಮಲ್ಲಸಮುದ್ರ ಗ್ರಾಮದಲ್ಲಿ ಬಸವೇಶ್ವರ ಜಾತ್ರೆಯ ರಥೋತ್ಸವದ ಸಂಭ್ರಮದ ನಡುವೆಯೇ ಕಿರಿಕ್ ನಡೆದಿದ್ದು, ಕಾರು ತೆರವುಗೊಳಿಸುವ ವಿಚಾರವಾಗಿ ಆರಂಭವಾದ ಜಗಳ ಹಲ್ಲೆಯಲ್ಲಿ ಅಂತ್ಯವಾಗಿದೆ. ಇದನ್ನು ಕಂಡ ಜಾತ್ರಾ ಕಮಿಟಿಯ ಯುವಕರು, ರಥ ಬರಲು ದಾರಿ ಮಾಡಿಕೊಡುವಂತೆ ಮತ್ತು ಕಾರನ್ನು ಪಕ್ಕಕ್ಕೆ …

Read More »

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂ ಕೋರ್ಟ್ ನೋಟಿಸ್

ದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಗೆ ಸುಪ್ರೀಂಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ರದ್ದುಪಡಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 4 ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ. ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ನ್ಯಾಯಪೀಠ …

Read More »

ಹೂಡಿಕೆದಾರರೇ ಎಚ್ಚರ: ಬೆಳಗಾವಿಯ ಈ ವಂಚನೆಯ ಜಾಲದ ಕಥೆ ಕೇಳಿದರೆ ನೀವು ಬೆಚ್ಚಿಬೀಳುತ್ತೀರಿ!

ರಾತ್ರೋರಾತ್ರಿ ಕುಬೇರರಾಗುವ ಹಪಹಪಿ ಮನುಷ್ಯನ ತರ್ಕಬದ್ಧ ಆಲೋಚನೆಯನ್ನೇ ಮಂದಗೊಳಿಸುತ್ತದೆ. ಇದೇ ಮಾನವ ಸಹಜ ದೌರ್ಬಲ್ಯವನ್ನು ಬಂಡವಾಳವಾಗಿಸಿಕೊಂಡು ಹೊಂಚು ಹಾಕುವ ಅಂತರರಾಜ್ಯ ವಂಚಕ ಜಾಲದ ಕಿಂಗ್‌ಪಿನ್‌ಗಳು, ಸಾಮಾನ್ಯ ಜನರನ್ನು ಹೇಗೆ ಮರೀಚಿಕೆಯ ಬೆನ್ನತ್ತಿ ಹೋಗುವಂತೆ ಮಾಡುತ್ತಾರೆಂಬುದಕ್ಕೆ ಬೆಳಗಾವಿಯ ಈ ಇತ್ತೀಚಿನ ಘಟನೆಯೇ ಸಾಕ್ಷಿ. ಹಣವನ್ನು ನಾಲ್ಕು ಪಟ್ಟು ಮಾಡಿಕೊಡುವ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ವ್ಯವಸ್ಥಿತ ಸಂಚನ್ನು ಬೆಳಗಾವಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಪ್ರಕರಣ ಕೇವಲ ಒಂದು ಕ್ರೈಂ ವರದಿಯಲ್ಲ, ಬದಲಿಗೆ ಆಸೆಯ …

Read More »

ಪ್ಯಾಟ್ಸನ್ ಟೋಯೋಟಾದಲ್ಲಿ ಯುಗಾದಿ ಹಬ್ಬದ ಸಡಗರ

ಯುಗಾದಿ ಹಬ್ಬಕ್ಕೆ ‘ಪ್ಯಾಟ್ಸನ್’ ಸಂಭ್ರಮ: ಬೆಳಗಾವಿಯಲ್ಲಿ ಒಂದೇ ದಿನ 28 ಟೋಯೋಟಾ ಕಾರುಗಳ ಭರ್ಜರಿ ಮಾರಾಟ ಗ್ರಾಹಕರ ಪಾಲಿನ ‘ಭರವಸೆಯ ಬೆಳಕು’ ಪ್ಯಾಟ್ಸನ್: ಟೋಯೋಟಾ ಶೋರೂಂನ ಅತುಲನೀಯ ಸೇವೆಗೆ ಬೆಳಗಾವಿ ಜನ ಫಿದಾ! ಬೆಳಗಾವಿಯ ವಾಹನ ಕ್ಷೇತ್ರಗಳಲ್ಲಿ ಪ್ಯಾಟ್ಸನ್ ಕಂಪನಿ ಅತ್ಯಂತ ಮಹತ್ತರ ಪಾತ್ರವನ್ನು ವಹಿಸಿದೆ. ಯುಗಾದಿಯ ಶುಭ ಸಂಭ್ರಮದಲ್ಲಿ ಪ್ಯಾಟ್ಸನ್ ಟೋಯೋಟಾ ಶೋಂ, ತನ್ನ ಸೇವೆಯನ್ನು ಅಧಿಕಗೊಳಿಸಿದ್ದು, ಹೊಸ ಹೊಸ ವಾಹನಗಳನ್ನು ತನ್ನ ಗ್ರಾಹಕರಿಗೆ ಪರಿಚಯಿಸಿದೆ. ಈ ಹಿನ್ನೆಲೆ …

Read More »