ಸವದತ್ತಿ: ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ತಿರಸ್ಕೃತವಾಗುತ್ತಾ? ಅಂತಹ ಚರ್ಚೆ ಕ್ಷೇತ್ರದಲ್ಲಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಮತ್ತು ಆಪ್ ಅಭ್ಯರ್ಥಿ ಬಾಪುಗೌಡ ಎನ್ನುವವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಇಂತಹ ಆತಂಕ ಮತ್ತು ಚರ್ಚೆ ನಡೆಯುತ್ತಿದೆ. ರತ್ನಾ ಮಾಮನಿ ನಾಮಪತ್ರ ಸಲ್ಲಿಸುವಾಗ 2018ರ ಅಫಿಡವಿಟ್ ನ್ನು ಸಲ್ಲಿಸಿದ್ದಾರೆ. ಹಾಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ದೂರುದಾರರು ಕೋರಿದ್ದರು. ಈ ಕುರಿತು ವಿಚಾರಣೆಯನ್ನು ಶನಿವಾರ ಬೆಳಗ್ಗೆ 10 …
Read More »ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಡಕಲ್ ಜಲಾಶಯದಿಂದ ಜಿಆರ್ಬಿಸಿ, ಜಿಎಲ್ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ …
Read More »ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.
ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ, ಕೆಎಲ್ಎಸ್ ಜಿಐಟಿಯ 17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …
Read More »ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ
ಬೆಂಗಳೂರು, ಏಪ್ರಿಲ್ 20: ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ. ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …
Read More »ಲಕ್ಷ್ಮೀ ಹೆಬ್ಬಾಳಕರ ಆದಾಯ ₹7.15 ಕೋಟಿಗೆ ಏರಿಕೆ
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರ ಆದಾಯದಲ್ಲಿ ಗಣನೀಯ ಏರಿಕೆ ಕಂಡಿದೆ. 2018ರಲ್ಲಿ ₹36.58 ಲಕ್ಷ ಆದಾಯ ಹೊಂದಿದ್ದ ಅವರು, 2022ರ ಹೊತ್ತಿಗೆ ₹7.15 ಕೋಟಿ ಏರಿಸಿಕೊಂಡಿದ್ದಾರೆ. ಅಂದರೆ ಐದು ವರ್ಷಗಳಲ್ಲಿ ₹6.70 ಕೋಟಿ ಆದಾಯ ಏರಿಕೆ ಕಂಡಿದೆ. 2019ರಲ್ಲಿ ₹41.67 ಲಕ್ಷ, 2020ರಲ್ಲಿ ₹ 43.71 ಲಕ್ಷ, 2021ರಲ್ಲಿ ₹42.14 ಲಕ್ಷ ಆದಾಯ ಹೊಂದಿದ್ದಾಗಿ ಅವರು ಸಲ್ಲಿಸಿದ ಅಫಿಡವಿಟ್ನಲ್ಲಿದೆ. ಆದರೆ, 2022ರಲ್ಲಿ ಏಕಾಏಕಿ …
Read More »ಬೆಳ್ಳಂ ಬೆಳಗ್ಗೆ ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶ
ಬೆಳಗಾವಿ: ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಂಟ್ಟೂ 1.54 ಕೋಟಿ ರೂ. ಪತ್ತೆಯಾಗಿದ್ದು, ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.
Read More »ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …
Read More »ಬೆಳಗಾವಿ ಜಿಲ್ಲೆಯಲ್ಲಿ 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
ಬೆಳಗಾವಿ: ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿ ನಡೆದಿದ್ದು, ಈವರೆಗೆ ಒಟ್ಟು 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ ಜೊಲ್ಲೆ, ಜೆಡಿಎಸ್ ದಿಂದ ರಾಜಾರಾಮ ಪವಾರ, ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಮೋಹನ ಮೋಟನ್ನವರ, ರಿಪಬ್ಲಿಕ್ ಮೂಮೆಂಟ್ ಪಾರ್ಟಿಯಿಂದ ಅಪ್ಪಾಸಾಹೇಬ ಕುರಣೆ, ಕಾಂಗ್ರೆಸ್ ನಿಂದ ಗಣೇಶ ಹುಕ್ಕೇರಿ, ಅಥಣಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ನಾಮಪತ್ರ …
Read More »ರಾಜಕೀಯ ವ್ಯವಸಾಯ ಇದ್ದಂತೆ, ಉತ್ತಮ ಬೆಳೆಗೆ ಕಾಯಬೇಕು ಅಷ್ಟೇ: ಡಿ.ಕೆ.ಶಿವಕುಮಾರ್
ಕನಕಪುರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಕನಕಪುರ ವಿಧಾನಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಕೇರಮ್ಮ ದೇವಸ್ಥಾನದಲ್ಲಿ ಕುಟುಂಬಸ್ಥರು ಹಾಗೂ ಮುಖಂಡರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ನಂತರ ಬೃಹತ್ ಬೈಕ್ ರ್ಯಾಲಿ ಹಾಗೂ ರೋಡ್ಶೋ ನಡೆಸಿದರು. ಈ ವೇಳೆ ಅಪಾರ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಸಿದ್ದು ವಿಶೇಷವಾಗಿತ್ತು. ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಡಿಕೆಶಿ ರಾಜಕಾರಣ ಅನ್ನೋದು ವ್ಯವಸಾಯ ಇದ್ದಂತೆ ವ್ಯವಸಾಯದಲ್ಲಿ ಹೇಗೆ ಬಿತ್ತನೆ ಹಾಕಿ, …
Read More »ಪಕ್ಷ ಬದಲಾವಣೆ ಚರ್ಚೆ: ಎಸ್.ಆರ್. ಪಾಟೀಲಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್
ಬಾಗಲಕೋಟೆ: ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್ ಪಾಟೀಲ ಅವರನ್ನು ಬೆಂಗಳೂರಿಗೆ ಬರುವಂತೆ ಹೈಕಮಾಂಡ್ ಸೂಚಿಸಿದೆ. ಕಾಂಗ್ರೆಸ್ ಮುಖಂಡ ವೇಣುಗೋಪಾಲ್ ಅವರು ಭೇಟಿಯಾಗುವಂತೆ ಕರೆ ಮಾಡಿ ಆಹ್ವಾನಿಸಿದ್ದಾರೆ. ದೇವರ ಹಿಪ್ಪರಗಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದರು. ಪಕ್ಷ ಬದಲಾವಣೆ ಮಾಡಬಹುದು ಎಂಬ ಚರ್ಚೆಯ ಹಿನ್ನಲೆಯಲ್ಲಿ ಮಾತುಕತೆಗೆ ಕರೆಯಲಾಗಿದೆ.
Read More »
Laxmi News 24×7