ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಮಾಡಲಾಗಿದ್ದು, ದಿನದ 24 ಗಂಟೆಯೂ ಅಲ್ಲಿ ಪೊಲೀಸರು ಮತ್ತು ಚುನಾವಣಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂ. ಪತ್ತೆಯಾಗಿದ್ದು, ವಶಪಡಿಸಿಕೊಂಡು ತನಿಖೆ ನಡೆಸಲಾಗಿದೆ.
Read More »ಯಳ್ಳೂರ ಗ್ರಾಮದಲ್ಲಿ ಕುಸ್ತಿಪಂದ್ಯಾವಳಿ
ಬೆಳಗಾವಿ: ಶ್ರೀ ಕಲ್ಮೇಶ್ವರ ದೇವರು, ಶ್ರೀಚಾಂಗಳೇಶ್ವರಿ ದೇವಿ ಹಾಗೂ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ಕುಸ್ತಿ ಮೈದಾನದಲ್ಲಿ ಏ.13ರಂದು ಮಧ್ಯಾಹ್ನ 2 ಗಂಟೆಗೆ ಜಂಗಿ ನಿಕಾಲಿ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಕುಸ್ತಿಪಟುಗಳಿಗೆ ‘ಲೋಕಮಾನ್ಯ ಕೇಸರಿ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಕುಸ್ತಿಯ ಪಂದ್ಯಾವಳಿಯ ವಿಶೇಷತೆ ಎಂದರೇ, ಅಂತಾರಾಷ್ಟ್ರೀಯ ಕುಸ್ತಿಪಟು ಪೈಲವಾನ್ ಹುಸೇನ್ ಇರಾನ್ ಜತೆ ಭಾರತ ಕೇಸರಿ ಪೈಲವಾನ ಸುಮೀತ್ ಮಲೀಕ್ …
Read More »ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ
ಕನಿಷ್ಠ ನಾಗರಿಕ ಸೌಲಭ್ಯಗಳನ್ನು ಒದಗಿಸದಿರುವುದನ್ನು ವಿರೋಧಿಸಿ ಕಣಬರ್ಗಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿಯ ಕಣಬರ್ಗಿಯಲ್ಲಿರುವ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿ ನಿವಾಸಿಗಳು ನೈರ್ಮಲ್ಯ, ಬೀದಿದೀಪ, ಸಮರ್ಪಕ ನೀರು ಪೂರೈಕೆ ಹಾಗೂ ಉತ್ತಮ ರಸ್ತೆಗಾಗಿ ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದಾರೆ. ಆದರೆ ಮಹಾನಗರಸಭೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಕೊನೆಯ ಅಸ್ತ್ರವಾಗಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕರಿಸುವ …
Read More »ಅಕ್ರಮವಾಗಿ ಗಾಂಜಾ ಮಾರಾಟರೂ.35,500/- ಮೌಲ್ಯದ 474 ಗ್ರಾಂ ಗಾಂಜಾ ವಶ.
ಗಣೇಶಪುರ ಜ್ಯೋತಿ ನಗರ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಂತೆ . ನಚಿಕೇತ ಎಸ್ ಜನಗೌಡ, ಪಿಐ ಕ್ಯಾಂಪ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂದಿಯವರ ತಂಡ ಆರೋಪಿತರಾದ 1) ನದೀಮ್ ಅಲ್ಲಾವುದ್ದಿನ್ ನದಾಫ್ (23) ಸಾ: ಜಯನಗರ ಮಚ್ಚೆ ಬೆಳಗಾವಿ, 2) ಮನೀಶ ಮಾರುತಿ ಹುಂದ್ರೆ (23) ಸಾ: ಕಶ್ವರ ನಗರ ಹಿಂಡಲಗಾ ಬೆಳಗಾವಿ. ಇವರನ್ನು ವಶಕ್ಕೆ ಪಡೆದು, ವಿಚಾರಣಿ ಕೈಕೊಂಡು, …
Read More »ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ?
ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ ಎಂದು ಜನ ಎದುರು ನೋಡುತ್ತಿದ್ದಾರೆ, ಉತ್ತರ ಕರ್ನಾಟಕದ ಬಲಿಷ್ಟ ನಾಯಕ ಉಮೇಶ್ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆ ಈ ಬಾರಿ ಕುತುಹಲ ಕೇರಳಿಸಿದೆ. ಹುಕ್ಕೇರಿ ಮತಕ್ಷೇತ್ರದಲ್ಲಿ ಯಾವದೇ ಪಕ್ಷದ ಮೇಲಿನ ಚುನಾವಣೆ ಜರುಗಿದ ಉದಾಹರಣೆಗಳಿಲ್ಲಾ, ಉಮೇಶ್ ಕತ್ತಿ ಯಾವಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಅದೆ ಗೆಲವು ಪಡೆಯುತ್ತಿತ್ತು ಆದರೆ ಉಮೇಶ್ ಕತ್ತಿ ನಿಧನದಿಂದ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚಟುವಟುಕೆಗಳು ಗದಿಗೇರಿವೆ ಈಗಾಗಲೇ …
Read More »ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 2.10 ಕೋಟಿ ರೂಪಾಯಿ ಹಣ ಜಪ್ತಿ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ …
Read More »ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ:ಶರೀಫಾ ನದಾಫ್
ಹುಕ್ಕೇರಿ ಮತಕ್ಷೇತ್ರದಲ್ಲಿ ಈ ಬಾರಿ ಜನತೆ ಜೆ ಡಿ ಎಸ್ ಪಕ್ಷ ಬೆಂಬಲಿಸಲಿದ್ದಾರೆ ಎಂದು ಜೆ ಡಿ ಎಸ್ ಮುಖಂಡೆ ಶರೀಫಾ ನದಾಫ್ ಹೇಳಿದರು. ಅವರು ಇಂದು ಮಾದ್ಯಮಗಳೊಂದಿಗೆ ಮಾತನಾಡುತ್ತಾ ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಮತ್ತು ಭಾರತೀಯ ಜನತಾ ಪಕ್ಷದ ಆಡಳಿತದಿಂದ ಕ್ಷೇತ್ರದ ದಲ್ಲಿ ಯಾವದೇ ಅಭಿವೃದ್ಧಿ ಕಾರ್ಯ ಜರುಗಿಲ್ಕಾ ವಿಷೇಶವಾಗಿ ಮಹಿಳೆಯರ ಸಮಸ್ಯೆ,ಯುವಕರಿಗೆ ಉದ್ಯೋಗ ಮತ್ತು ಅಭಿವೃದ್ಧಿ ಗಳು ವಂಚಿತರಾಗಿದ್ದಾರೆ ಕಾರಣ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು …
Read More »ಅಂತಿಮಗೊಳ್ಳದ Congress ತೃತೀಯ ಪಟ್ಟಿ
ಬೆಂಗಳೂರು: ಕಾಂಗ್ರೆಸ್ನ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಅಂತಿಮಗೊಳಿಸಲು ರವಿವಾರ ಹೊಸದಿಲ್ಲಿ ಯಲ್ಲಿ ಹಿರಿಯ ನಾಯಕರ ಸಭೆ ನಡೆದರೂ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಕೆಲವು ಪ್ರತಿಷ್ಠಿತ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಬಾಕಿ 58 ಕ್ಷೇತ್ರ ಗಳಿಗೆ ಈ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗುತ್ತದೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಳ್ಳುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಸಭೆ ಕಾಂಗ್ರೆಸ್ನ ಮೂರನೇ ಮತ್ತು ಅಂತಿಮ …
Read More »ಕರಡಿಗುದ್ದಿ, ಡಾ.ದೀಕ್ಷಿತ್ಗೆ ‘ಸಿರಿಗನ್ನಡ ಗೌರವ’
ಬೆಳಗಾವಿ: ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು 2022ನೇ ಸಾಲಿನ ‘ಸಿರಿಗನ್ನಡ ಗೌರವ’ ಮತ್ತು 2021ನೇ ಸಾಲಿನ ‘ಸಿರಿಗನ್ನಡ ಪುಸ್ತಕ ಪ್ರಶಸ್ತಿ’ ಪ್ರಕಟಿಸಿದೆ. ಸಿರಿಗನ್ನಡ ಗೌರವ ಪ್ರಶಸ್ತಿಗೆ ಪ್ರೊ.ರಾಜಶೇಖರ ಎಂ. ಕರಡಿಗುದ್ದಿ ಮತ್ತು ಡಾ.ಮಾಧವ ದೀಕ್ಷಿತ ಭಾಜನರಾಗಿದ್ದಾರೆ. ಸಿರಿಗನ್ನಡ ಪುಸ್ತಕ ಪ್ರಶಸ್ತಿಗೆ ಈರಯ್ಯ ಕಿಲ್ಲೇದಾರ ಅವರ ವೈಚಾರಿಕ ಲೇಖನ ಸಂಗ್ರಹ ‘ಉರಿಯ ಪೇಟೆಯಲ್ಲಿ’ ಕೃತಿ ಮತ್ತು ಚಂದ್ರಶೇಖರ ಪೂಜಾರ ಅವರ ಗಜಲ್ ಸಂಕಲನ ‘ಬೆಳಕ ನಿಚ್ಚಣಿಕೆ’ ಕೃತಿ ಆಯ್ಕೆಯಾಗಿವೆ. ಜೀವನಮಾನ ಸಾಧನೆ ಪ್ರಶಸ್ತಿಗಳು: …
Read More »ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇದೇ ವೇಳೆ ಏಪ್ರಿಲ್ 12ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸಾರ್ವಜನಿಕರಿಗೆ ಮುನ್ಸೂಚನೆ ನೀಡಿದೆ.
Read More »
Laxmi News 24×7