Breaking News

ಜಿಲ್ಲೆ

BJP 40 ಕ್ಷೇತ್ರಕ್ಕೆ ಕುಸಿದರೂ ಅಚ್ಚರಿಯಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಾಯುಕ್ತ ಸಂಸ್ಥೆಗೆ ನಾವು ಶಕ್ತಿ ತುಂಬಿದ್ದೇವೆ ಎಂದು ಹೇಳಿಕೊಳ್ಳುತ್ತಿರುವ ಬಿಜೆಪಿ ನಾಯಕರು, ಅಧಿಕಾರಕ್ಕೆ ಬಂದ ತಕ್ಷಣ ಎಸಿಬಿ ಕಿತ್ತುಹಾಕಿ ಲೋಕಾಯುಕ್ತರ ನೇಮಕ ಮಾಡಲಿಲ್ಲ ಯಾಕೆ? ಈ ವಿಚಾರವಾಗಿ ಹೈಕೋರ್ಟ್ ನಿರ್ದೇಶನ ನೀಡಿದ ನಂತರ ಎಸಿಬಿ ಸಂಸ್ಥೆ ರದ್ದುಗೊಳಿಸಿ ಲೋಕಾಯುಕ್ತರ ನೇಮಕ ಮಾಡಿದ್ದಾರೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಕ್ರಮ ಕೈಗೊಂಡು ಈಗ ತಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಜನರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಕೆಪಿಸಿಸಿ …

Read More »

ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು.

ಬೆಳಗಾವಿ: ‘ಪೊಲೀಸರು ತರಬೇತಿಯಲ್ಲಿ ಕಲಿತ ಪ್ರತಿಯೊಂದು ಕೌಶಲ ಮತ್ತು ಸಾಮರ್ಥ್ಯವನ್ನು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಾಪಾಡಿಕೊಂಡು ಹೋಗಬೇಕು. ಅಂದಾಗ ಮಾತ್ರ ವೃತ್ತಿಯಲ್ಲಿ ಯಶಸ್ಸು ಗಳಿಸುವುದು ಸಾಧ್ಯ’ ಎಂದು ಕರ್ನಾಟಕ ರಾಜ್ಯ ಮೀಸಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್‌ ಕುಮಾರ್ ಸಿಂಗ್ ಸಲಹೆ ನೀಡಿದರು.   ಇಲ್ಲಿನ ಕಂಗ್ರಾಳಿಯ ಕೆಎಸ್‌ಆರ್‌ಪಿ ತರಬೇತಿ ಶಾಲೆಯ 9ನೇ ತಂಡದ ವಿಶೇಷ ಮೀಸಲು ಪೊಲೀಸ್ ಕಾನ್‌ಸ್ಟೆಬಲ್, ಬ್ಯಾಂಡ್ಸ್‌ಮನ್, ಪ್ರಥಮ ತಂಡದ ಅಗ್ನಿಶಾಮಕ ಪ್ರಶಿಕ್ಷಣಾರ್ಥಿಗಳ ಹಾಗೂ …

Read More »

ಬೆಳಗಾವಿ ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು.

ಬೆಳಗಾವಿ: ‘ಜನಪದರು ವಿದ್ವಾಂಸರಿಗಿಂತ ಜ್ಞಾನವಂತರು. ಅವರು ರೂಪಕ, ಪ್ರತಿಮೆಗಳನ್ನು ಬಹು ಸೊಗಸಾಗಿ ದೈನಂದಿನ ಬದುಕಿನಲ್ಲಿ ಬಳಸುತ್ತಲೇ ಬಂದಿರುವರು. ಅವುಗಳನ್ನೇ ನಾವು ನಾಟಕ, ಸಾಹಿತ್ಯ, ಕಲೆಗಳಲ್ಲಿ ಪುನಃ ರಚಿಸಿ ಹಣ, ಪ್ರಶಸ್ತಿಗಳನ್ನು ಪಡೆಯುತ್ತೇವೆ. ಆದರೆ ನಿಜವಾದ ಕಲಾವಿದರಾದ ಅವರು ಮಾತ್ರ ಸರ್ಕಾರದ ಸಹಾಯ ಧನಕ್ಕೆ ಕೈಚಾಚಿ ನಿಲ್ಲುವಂಥ ಪರಿಸ್ಥಿತಿ ಇರುವುದು ದುರಂತ’ ಎಂದು ನಾಟಕಕಾರ ಡಿ.ಎಸ್.ಚೌಗಲೆ ಬೇಸರ ವ್ಯಕ್ತಪಡಿಸಿದರು. ಇಲ್ಲಿಯ ಮಹಿಳಾ ಅಭಿವೃದ್ಧಿ ಮತ್ತು ಸೇವಾ ಸಂಸ್ಥೆ, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ …

Read More »

ಹಾಜರಾತಿ ಕೊರತೆ : 4,492 ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ!

ಬೆಂಗಳೂರು : ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಹಾಜರಾತಿ ಕೊರತೆಯಿಂದಾಗಿ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳಿಂದ 4,492 ವಿದ್ಯಾರ್ಥಿಗಳು ಹೊರಗುಳಿಯಲಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಈ ವರ್ಷದಿಂದ ಶೇಕಡಾ 75 ರಷ್ಟು ಕಡ್ಡಾಯ ಹಾಜರಾತಿ ನಿಯಮವನ್ನು ಮರಳಿ ತಂದಿದೆ. ಶೇ.75ರಷ್ಟು ಹಾಜರಾತಿ ಕಾಯ್ದುಕೊಳ್ಳದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವುದಿಲ್ಲ. ಪಿಯು ಶಿಕ್ಷಣ ಇಲಾಖೆಯು ಈ ಬಗ್ಗೆ ವಿದ್ಯಾರ್ಥಿಗಳಿಗೆ ನೋಟಿಸ್ ನೀಡಿತ್ತು ಮತ್ತು ಹಾಜರಾತಿ ಕೊರತೆಯ …

Read More »

ಬೆಳಗಾವಿ: ‘ಸಾಂಪ್ರದಾಯಿಕ ತಂತ್ರಜ್ಞಾನದಿಂದ ಸ್ವಾವಲಂಬನೆ’

ಬೆಳಗಾವಿ: ‘ಸಾಂಪ್ರಾದಾಯಿಕ ತಂತ್ರಜ್ಞಾನವು ಆಧುನಿಕ ಯುಗದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬಲ್ಲದು. ಮಹಿಳಾ ಸ್ವಾವಲಂಬನೆಗೆ ಇದು ಅತ್ಯಂತ ಸುಲಭ ಮಾರ್ಗ’ ಎಂದು ಪುಣೆಯ ದಿ ಎಕೊಸೋಸಿಯೊ ಟ್ರೈಬ್‌ನ ಸಂಸ್ಥಾಪಕಿ ಅಮಿತಾ ದೇಶಪಾಂಡೆ ಸಲಹೆ ನೀಡಿದರು.   ಕೆಎಲ್‌ಇ ಸ್ವಶಕ್ತಿ ಮಹಿಳಾ ಸಬಲೀಕರಣ ಘಟಕದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸೋಮವಾರ ಏರ್ಪಡಿಸಿದ್ದ ಮಾಹಿಳಾ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್‌ನಿಂದ ಆದಿವಾಸಿ ಮಹಿಳೆಯರ ಜೀವನಮಟ್ಟ ಸುಧಾರಿಸಲು ಸಾಧ್ಯ. …

Read More »

ಇನ್ಮುಂದೆ ನಾವೆಲ್ಲರು ಜೆಡಿಎಸ್​ ಪರ ಕೆಲಸ ಮಾಡ್ಬೇಕು: ಕಾರ್ಯಕರ್ತರಿಂದ ಪ್ರತಿಜ್ಞೆ ಮಾಡಿಸಿದ ಎ. ಮಂಜು

ಹಾಸನ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಮಾಜಿ ಸಚಿವ ಎ. ಮಂಜು ದಿಢೀರ್ ಕಾರ್ಯಕರ್ತರ ಸಭೆ ಕರೆದಿದ್ದು, ಇನ್ನು ಮುಂದೆ ಎಲ್ಲರು ಜೆಡಿಎಸ್​ ಪರ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.   ಅರಕಲಗೂಡು ತಾಲೂಕಿನ ಹಣ್ಯಾಳು ಗ್ರಾಮದಲ್ಲಿ ಸಭೆ ಕರೆದು ಪ್ರತಿಜ್ಞೆ ಮಾಡಿಸಿದ್ದಾರೆ. ಇನ್ನು ಮುಂದೆ ನಾವೆಲ್ಲರು ಜೆಡಿಎಸ್​ನವರು, ಜೆಡಿಎಸ್ ಪಕ್ಷದಿಂದ ಎ.ಮಂಜು ಅವರನ್ನು ಗೆಲ್ಲಿಸಬೇಕು ಎಂದು ಪ್ರತಿಜ್ಞೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸಾವಿರಕ್ಕೂ ಹೆಚ್ಚು …

Read More »

ಚಿಕ್ಕೋಡಿ: ಪತ್ನಿಯನ್ನು ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ

ಚಿಕ್ಕೋಡಿ: ಪತ್ನಿ ಕೊಲೆ ಮಾಡಿದ್ದ ಇಲ್ಲಿನ ಸಂಜಯ ಗಾಂಧಿ‌ ನಗರದ ನಿವಾಸಿ ಅಜೀತ್‌ ಉರೂಫ್‌ ಸಾವಳಾ ಮಹಾದೇವ ಮಾಳಿ ಎಂಬಾತನಿಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಿವಾವಧಿ ಶಿಕ್ಷೆ ಹಾಗೂ ₹ 2,000 ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.   ಈ ವ್ಯಕ್ತಿ ನಿರುದ್ಯೋಗಿ ಆಗಿದ್ದು ಪ್ರತಿನಿತ್ಯ ತನ್ನ ಪತ್ನಿ ಪಾರ್ವತಿ ಬಳಿ ಖರ್ಚಿಗೆ ಹಣ ಕೇಳುತ್ತಿದ್ದ. ಕೊಡದೇ ಇದ್ದಾಗ ‍ಪೀಡಿಸುತ್ತಿದ್ದ. 2016ರ ನವೆಂಬರ್‌ 4ರಂದು ಹಣ …

Read More »

28 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ತಮ್ಮ ಊರಿಗೆ ಆಗಮಿಸಿದ ತಾಲೂಕಿನ ಸುತಗಟ್ಟಿ ಗ್ರಾಮದ ಯೋಧ ಈರಪ್ಪ ಬಾಳಿಗಟ್ಟಿ ಅವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ

ಬೈಲಹೊಂಗಲ: ಭಾರತೀಯ ಸೇನೆಯಲ್ಲಿ 28 ವರ್ಷಗಳ ಸುದೀರ್ಘ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿ ತಮ್ಮ ಊರಿಗೆ ಆಗಮಿಸಿದ ತಾಲೂಕಿನ ಸುತಗಟ್ಟಿ ಗ್ರಾಮದ ಯೋಧ ಈರಪ್ಪ ಬಾಳಿಗಟ್ಟಿ ಅವರಿಗೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳಗಾವಿ ಜಿಲ್ಲಾ ಘಟಕ ಹಾಗೂ ಊರಿನ ಎಲ್ಲ ಮಾಜಿ ಸೈನಿಕರು ಹಮ್ಮಿಕೊಂಡಿದ್ದರು ಊರಿನ ದ್ವಾರದಿಂದ ಶ್ರೀ ಜೋಡು ಬಸವಣ್ಣನ ಗುಡಿಯವರಿಗೆ ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಬಸವಂತಪ್ಪ ಕರಾಂವಿ ಇವರ ನೇತೃತ್ವದಲ್ಲಿ …

Read More »

ಚುನಾವಣೆ ಸಮೀಪಿಸಿದ ಸಂದರ್ಭದಲ್ಲೂ C.M. ಬೊಮ್ಮಾಯಿ ಅವರು ಅಲ್ಪಾವಧಿ ಟೆಂಡರ್‌ ಮತ್ತು ಕಾರ್ಯಾದೇಶ ನೀಡುತ್ತಿದ್ದಾರೆ.

ಬೆಳಗಾವಿ: ‘ಚುನಾವಣೆ ಸಮೀಪಿಸಿದ ಸಂದರ್ಭದಲ್ಲೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಲ್ಪಾವಧಿ ಟೆಂಡರ್‌ ಮತ್ತು ಕಾರ್ಯಾದೇಶ ನೀಡುತ್ತಿದ್ದಾರೆ. ಇದು ಲೂಟಿ ಮಾಡುವ ತಂತ್ರ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆರೋಪಿಸಿದರು.   ‘ಚುನಾವಣೆ ನೀತಿ ಸಂಹಿತೆ ಬರುವುದಕ್ಕೂ ಮುನ್ನ ಹಣ ಸಂಗ್ರಹಿಸಿಡಲು ಬಿಜೆಪಿ ಸರ್ಕಾರ ಈ ಉಪಾಯ ಮಾಡಿದೆ. ಮುಂದೆ ಕಾಂಗ್ರೆಸ್‌ ಸರ್ಕಾರ ಬರುವುದು ನಿಶ್ಚಿತ. 15 ದಿನಗಳಲ್ಲಿ ಈ ಎಲ್ಲ ಟೆಂಡರ್‌, ಕಾರ್ಯಾದೇಶಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುತ್ತೇವೆ. ಅಧಿಕಾರಿ, …

Read More »

ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿದ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು.   ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಮೊದಲು ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಕಡಿಮೆ ಇದೆ ಎಂಬ ಭಾವನೆ ಇತ್ತು. ಆದರೆ, ಈಗ ಇಲ್ಲಿಯೂ ಪಕ್ಷದ …

Read More »