ಬೆಳಗಾವಿ : ಗೋಕಾಕ ನಗರ ಹಾಗೂ ಲೋಳಸೂರ ಗ್ರಾಮವನ್ನು ಪ್ರವಾಹದಿಂದ ತಡೆಗಟ್ಟುವ ಸಲುವಾಗಿ ಘಟಪ್ರಭ ನದಿಗೆ ತಡೆಗೋಡೆ ನಿರ್ಮಿಸುವ ಯೋಜನೆ ಹಾಗೂ ಘಟ್ಟಿ ಬಸವಣ್ಣ ಡ್ಯಾಂ ನಿರ್ಮಿಸುವುದು, ಕುಡಿಯುವ ನೀರು ಸರಬರಾಜು ಯೋಜನೆ ಸೇರಿದಂತೆ ಗೋಕಾಕ, ಅಥಣಿ, ಅರಭಾವಿ ಕ್ಷೇತ್ರದ ವಿವಿಧ ಕಾಮಗಾರಿಗಳ ಶಿಲಾನ್ಯಾಸಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾವರಣಗೊಳಿಸಿದರು. ಗೋಕಾಕ ನಗರದ ಚಿಕ್ಕೊಳ್ಳಿ ಸೇತುವೆ ಬಳಿ ಮಂಗಳವಾರ (ಮಾ.28) ವಿವಿಧ ಕಾಮಗಾರಿಗಳ ಪೂಮಿ ಪೂಜೆ ಹಾಗೂ ಶಿಲಾನ್ಯಾಸಗಳನ್ನು ಅವರು …
Read More »ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 27 ಲಕ್ಷಕ್ಕೂ ಅಧಿಕಹಣ ಪೊಲೀಸರ ವಶಕ್ಕೆ
ಕೌಜಲಗಿ: ‘ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹ. ಅವರ ಕೆಸಲಗಳಿಗೆ ಜನ ಸಹಕಾರ ನೀಡಬೇಕು’ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸಮೀಪದ ಕುಲಗೋಡ ಗ್ರಾಮದಲ್ಲಿ ₹1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು. …
Read More »ಸಂವಿಧಾನದ ಆಶಯಕ್ಕೆ ಬದ್ಧರಾಗಿ’
ಅಥಣಿ: ‘ಡಾ.ಅಂಬೇಡ್ಕರ್ ನೇತೃತ್ವದ ತಂಡ ನೀಡಿರುವ ಸಂವಿಧಾನ ಸದೃಢ ಭಾರತ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಈ ಸಂವಿಧಾನದ ಮೂಲಕ ಸಮಾನತೆ, ಸರ್ವರಿಗೂ ಶಿಕ್ಷಣ ದೊರೆತಿದ್ದು, ಮೂಲಭೂತ ಹಕ್ಕುಗಳ ಜೊತೆ ಮೂಲಭೂತ ಕರ್ತವ್ಯಗಳ ಬಗ್ಗೆ ನಾವು ಗಮನ ಹರಿಸಬೇಕು’ ಅಥರ್ವ ಸಾಂಗ್ಲಿಕರ ಟ್ರಸ್ಟ್ ಅಧ್ಯಕ್ಷ ಚಂದ್ರಕಾಂತ ಸಾಂಗ್ಲಿಕರ ಹೇಳಿದರು. ಪಟ್ಟಣದ ಆದರ್ಶ ನಗರದ ಅನಿಲ ಕಾಂಬಳೆ ಇವರ ಸಂಸ್ಕೃತ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಅಥಣಿ ತಾಲ್ಲೂಕು ಘಟಕದಿಂದ …
Read More »ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮ: ₹ 1 ಕೋಟಿ ಹಾನಿ
ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಸಮೀಪದ ಇಂಚಲ ಗ್ರಾಮದಲ್ಲಿ ಸೋಮವಾರ ಬೆಂಕಿ ತಗುಲಿ 20 ಕಣಕಿ ಬಣವಿಗಳು ಭಸ್ಮವಾಗಿವೆ. ಒಂದು ಟ್ರ್ಯಾಕ್ಟರ್ ಹಾಗೂ ಕೃಷಿ ಯಂತ್ರೋಪಕರಣಗಳು ಸುಟ್ಟಿವೆ. ಇದರಿಂದ ₹ 1 ಕೋಟಿಗೂ ಹೆಚ್ಚು ಹಾನಿಯಾಗಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬಿಳಿಜೋಳ, ಗೋವಿನ ಜೋಳ ಮತ್ತಿತರ ಬೆಳೆಗಳ ರಾಶಿ ಮುಗಿಸಿದ ರೈತರು ಗ್ರಾಮದ ಹೊರವಲಯದಲ್ಲಿ ಒಂದೇ ಕಡೆ ಬಣವಿ ಒಟ್ಟಿದ್ದರು. ಸೋಮವಾರ ಮಧ್ಯಾಹ್ನ ಒಂದು ಬಣವಿಗೆ ಬೆಂಕಿ ಹೊತ್ತಿಕೊಂಡಿತು. ಜನ ಅದನ್ನು …
Read More »ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ ಹಾಗೂ ರಮೇಶ್ ಕತ್ತಿ ನಡುವೆ ಟಿಕೆಟ್ ಕಸರತ್ತು..
ಹುಕ್ಕೇರಿ: ಉತ್ತರ ಕರ್ನಾಟಕದ ಅತ್ಯಂತ ಗಟ್ಟಿ ಧ್ವನಿ ಎಂದೇ ಹೆಸರಾಗಿದ್ದ ಉಮೇಶ ಕತ್ತಿ ಅವರ ಅಕಾಲಿಕ ಅಗಲಿಕೆಯಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಖಾಲಿ ಎನಿಸುತ್ತಿದೆ. ಕತ್ತಿ ಕುಟುಂಬಕ್ಕೆ ನಿಷ್ಠರಾದ ಮತದಾರರನ್ನು ಸೆಳೆದು ಹೊಸ ಮುಖ ಗೆಲ್ಲುವುದೋ ಅಥವಾ ವಂಶವಾಹಿ ಪರಂಪರೆ ಮುಂದುವರಿಯುವುದೋ ಎಂಬುದೇ ಈಗಿರುವ ಕುತೂಹಲ. ‘ಉಮೇಶ ಕತ್ತಿ ಅಗಲಿಕೆಯಿಂದ ಅನುಕಂಪದ ಮತಗಳನ್ನು ಪಡೆದು ಗೆಲ್ಲುವ ಅವಶ್ಯಕತೆ ಇಲ್ಲ. ಕತ್ತಿ ಕುಟುಂಬಕ್ಕೇ ಸಾಂಪ್ರದಾಯಿಕ ಮತಗಳಿವೆ. ಕುಟುಂಬದಲ್ಲಿ ಯಾರು ನಿಂತರೂ ಜನ …
Read More »ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ಬೆಳಗಾವಿ : ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ. ಅಬ್ಬಿಗೇರಿ ಅವರಿಗೆ ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚಿಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆಗಾಗಿ ರಾಜ್ಯ ಮಟ್ಟದ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಿಖರ, ನಿರಂತರ ಮ
Read More »ಬೆಳಗಾವಿ: ತಪ್ಪಿದ ಕಾಂಗ್ರೆಸ್ ಟಿಕೆಟ್: ಆಕ್ರೋಶ
ಬೆಳಗಾವಿ: ಜಿಲ್ಲೆಯ ರಾಮದುರ್ಗ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅರ್ಜುನ ಗುಡ್ಡದ ಹಾಗೂ ಖಾನಾಪುರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಇರ್ಫಾನ್ ತಾಳಿಕೋಟಿ ಅವರು ಟಿಕೆಟ್ ಸಿಗದ ಕಾರಣ ಪಕ್ಷದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅರ್ಜುನ ಗುಡ್ಡದ, ‘ಮಾಜಿ ಶಾಸಕ ಅಶೋಕ ಪಟ್ಟಣ ಅವರಿಗೆ ರಾಮದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದ್ದು ಸರಿಯಲ್ಲ. ನನ್ನ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ, ಸಿದ್ದರಾಮಯ್ಯ ಅವರ ಮೇಲೆ ಒತ್ತಡ …
Read More »ಬೆಳಗಾವಿ: ಮಹಿಳಾ ಮತದಾರರ ಸಂಖ್ಯೆ ಹೆಚ್ಚಳ
ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್(ವ್ಯವಸ್ಥಿತ ಮತದಾರರ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಸಮಿತಿ ಕೈಗೊಳ್ಳುತ್ತಿರುವ ಚಟುವಟಿಕೆಗಳ ಪರಿಣಾಮ, ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 4 ವರ್ಷಗಳಿಗೆ ಹೋಲಿಸಿ ದರೆ, ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. 2019ರ ಲೋಕಸಭೆ ಚುನಾವಣೆ ವೇಳೆ, ಒಂದು ಸಾವಿರ ಪುರುಷ ಮತದಾರರಿಗೆ 975 ಮಹಿಳಾ ಮತದಾರರಿದ್ದರು. ಈಗ ಮಹಿಳಾ ಮತದಾರರ ಪ್ರಮಾಣ 979ಕ್ಕೆ ಏರಿಕೆಯಾಗಿದೆ. 18 ಕ್ಷೇತ್ರಗಳ …
Read More »ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಬಂಧಿಸಿದ ಅಬಕಾರಿ ತಂಡ
ಅಥಣಿ: ಇಲ್ಲಿನ ಅಬಕಾರಿ ವಲಯ ವ್ಯಾಪ್ತಿಯ ಮೋಳೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿರುವ ಅಬಕಾರಿ ತಂಡ ಆರೋಪಿಯನ್ನು ಸೋಮವಾರ ಬಂಧಿಸಿದೆ. ಸುರೇಶ ಅಪ್ಪಾಸಾಬ ಚೋರಮುಲೆ ಬಂಧಿತ. ಈತನಿಂದ 40,612 ರೂ. ಅಂದಾಜು ಮೌಲ್ಯದ 64.44 ಲೀ ಮದ್ಯ ಹಾಗೂ 46.8 ಲೀ ಬಿಯರ್ ವಶಪಡಿಸಿಕೊಳ್ಳಲಾಗಿದೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಬೆಳಗಾವಿ ಅಬಕಾರಿ ಅಪರ ಆಯುಕ್ತರು, ಬೆಳಗಾವಿ ಉತ್ತರ ಜಿಲ್ಲೆ ಜಂಟಿ …
Read More »10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ*
ಗೋಕಾಕ: ಸತೀಶ್ ಶುಗರ್ಸ್ ಲಿಮಿಟೆಡ್ ಕಾರ್ಖಾನೆಯ ಪ್ರಸ್ತುತ ಸಕ್ಕರೆ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 10000 ಟಿ.ಸಿ.ಡಿ ಯಿಂದ 20000 ಟಿ.ಸಿ.ಡಿ ಗೆ, ಸಹ-ವಿದ್ಯುತ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 31 ಮೆ.ವ್ಯಾಟ್ ನಿಂದ 61 ಮೆ.ವ್ಯಾಟ್ಗೆ, ಎಥೆನಾಲ್ ಘಟಕದ ಉತ್ಪಾದನಾ ಸಾಮರ್ಥ್ಯವನ್ನು 300 ಕೆ.ಎಲ್. ನಿಂದ 600 ಕೆ.ಎಲ್.ಗೆ ವಿಸ್ತರಣೆ ಮತ್ತು ನೂತನ 12 ಟನ್ ಪ್ರತಿವಿನ ಸಾಮರ್ಥ್ಯದ ಮಲ್ಟಿ ಫೀಡ್ ಬಯೋ ಸಿ.ಬಿ.ಜಿ. ಉತ್ಪಾದನಾ ಘಟಕಗಳನ್ನೊಳಗೊಂಡು ಅಂದಾಜು 500 ಕೋಟಿ ರೂ.ಗಳ …
Read More »
Laxmi News 24×7