ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ೧೨ ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ ೧೦ ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ೨ ಲಕ್ಷ ರೂ. ಗಳ ನೆರವು ನೀಡುವ ಭರವಸೆಯನ್ನು ನೀಡಿದರು. ವೆಂಕಟಾಪೂರ ಗ್ರಾಮದ ಹಣಮಂತ ದೇವರ …
Read More »ಯೂ ಟ್ಯೂಬ್ ಚಾನೆಲ್ವೊಂದರಿಂದ ಭಗೀರಥ ಸಮಾಜಕ್ಕೆ ನಿಂದನೆ : ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ – ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ನಾಳೆ ಗುರುವಾರದಂದು ನಡೆಯಲಿರುವ ಭಗೀರಥ ಸಮಾಜದ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯಕ್ಕೆ ಅವಹೇಳನಕಾರಿಯಾಗಿ ಕಮೆಂಟ್ ಮಾಡಿರುವ ಯೂ ಟ್ಯೂಬ್ ಸಂಪಾದಕನೋರ್ವನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆ ಘಟನೆಗೂ ನನಗೂ ಯಾವುದೇ ಸಂಬಂಧವಿಲ್ಲವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಘಟಪ್ರಭಾದ ಯೂ ಟ್ಯೂಬ್ ಚಾನೇಲ್ನ ಸಂಪಾದಕರು ಸುದ್ಧಿ ವಿಮರ್ಶೆ ಮಾಡುವಾಗ …
Read More »ಕಾವೇರಿದ ಕಣ; ಮೂರು ಪಕ್ಷಗಳಲ್ಲೂ ಬಿರುಸಿನ ರಾಜಕಾರಣ ಆರಂಭ
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಅಧಿವೇಶನದ ಮಧ್ಯೆಯೂ ರಾಜಕೀಯ ವಿದ್ಯಮಾನಗಳು ಬಿರುಸಾಗುತ್ತಿವೆ. ಕಳೆದ ವಾರ ಕರಾವಳಿ ಜಿಲ್ಲೆಯ ನಾಯಕರಿಗೆ ಟಾಸ್ಕ್ ನಿಗದಿ ಮಾಡಿ ತೆರಳಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ. 23ರಂದು ಬೆಂಗಳೂರಿಗೆ ಆಗಮಿಸಲಿದ್ದು, ರಾಜಧಾನಿಯ ನಾಯಕರಿಗೆ ರಾಜಕೀಯ ಪಾಠ ಮಾಡಲಿದ್ದಾರೆ. ಎರಡು ದಿನಗಳಿಂದ ರಾಜ್ಯದಲ್ಲಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಪ್ರವಾಸ ಮುಗಿಸಿ ದಿಲ್ಲಿಗೆ ತೆರಳಿದ್ದಾರೆ. ಇದರ ಬೆನ್ನಲ್ಲೇ ಅಮಿತ್ ಶಾ …
Read More »ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ
ಸವದತ್ತಿ: ಕಾಲೇಜಿನ ಪ್ರತಿಷ್ಠೆಗಾಗಿ ಪ್ರಾಚಾರ್ಯ ಹಾಗೂ ಸಿಬ್ಬಂದಿಗಳು ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ನಡೆಸಿದ್ದಾರೆ. ಪಿಯುಸಿ ಪ್ರಥಮ ವರ್ಷದ ಮಕ್ಕಳ ಹಾಜರಾತಿ ನೆಪವೊಡ್ಡಿ 72 ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿಷೇಧಿಸಲಾಗಿದೆ. ಪ್ರತಿವರ್ಷ ಇದನ್ನು ಮುಂದುವರೆಸಿದೆ ಎಂದು ಕರ್ನಾಟಕ ಸಮತಾ ಸೈನಿಕ ದಳದ ಬೆಳಗಾವಿ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಬಸವರಾಜ ತಳವಾರ ಆಕ್ರೋಶಿದರು. ಇಲ್ಲಿನ ಜಿ.ಜಿ. ಚೋಪ್ರಾ ಕಾಲೇಜಿನಲ್ಲಿ ಹಾಜರಾತಿ ನೆಪವೊಡ್ಡಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ನಿರಾಕರಿಸಿದ್ದನ್ನು ಖಂಡಿಸಿ ದಲಿತ ಮುಖಂಡರು ಹಾಗೂ ವಿದ್ಯಾರ್ಥಿಗಳಿಂದ …
Read More »ಸರ್ಕಾರಿ ನೌಕರರು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವುದಕ್ಕೆ ಕರೆ ಕೊಟ್ಟ ರಾಜ್ಯ ಸರ್ಕಾರಿ ನೌಕರರ ಸಂಘ
ಬೆಂಗಳೂರು: ಏಳನೇ ವೇತನ ಆಯೋಗ ಜಾರಿ ಸೇರಿದಂತೆ ಹಲವು ಸೌಲಭ್ಯಗಳನ್ನು ಜಾರಿಗೆ ತರುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಹಿನ್ನಲೆಯಲ್ಲಿ, ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ರಾಜ್ಯ ಸರ್ಕಾರಿ ನೌಕರರ ಸಂಘವು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರಾಗುವ ಹೋರಾಟ ನಡೆಸಲು ಕರೆ ನೀಡಿದೆ. ಇಂದು ನಡೆದ ಸರ್ಕಾರಿ ನೌಕರರ ಸಂಘದ ಸುಮಾರು 8 ಸಾವಿರ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಸರ್ಕಾರಿ …
Read More »ಬೆಳಗಾವಿಗೆ ಪ್ರಧಾನಿ ಭೇಟಿ: ಸಕಲ ಸಿದ್ಧತೆಗೆ ಸೂಚನೆ
ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ನಗರದ ನವೀಕೃತ ರೈಲು ನಿಲ್ದಾಣ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ರೈಲ್ವೆ, ಕೃಷಿ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಫಲಾನುಭವಿಗಳು …
Read More »ಏ.1ರಿಂದಲೇ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್: ಸಿಎಂ ಬೊಮ್ಮಾಯಿ
ಬೆಂಗಳೂರು: ಏಪ್ರಿಲ್ 1ರಿಂದ ದುಡಿಯುವ ಹೆಣ್ಣು ಮಕ್ಕಳಿಗೆ ಹಾಗೂ ಶಾಲಾ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಲು ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೋಲ್ವೋ ಮಲ್ಟಿ ಆಕ್ಸೆಲ್ ಬಿಎಸ್ 4 -9600 ಸ್ಲೀಪರ್ ಬಸ್ಸುಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮಹಿಳೆಯರಿಗೆ ಗೌರವದ ಜೊತೆಗೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಈ ಯೋಜನೆ ರೂಪಿಸಲಾಗಿದೆ. ಮಿನಿ ಸ್ಕೂಲ್ …
Read More »ಹಾರೂಗೇರಿ ಪೊಲೀಸರ ಕಾರ್ಯಾಚರಣೆ ಯಿಂದ ಅಪಹರಣ ಪ್ರಕರಣ ಭೇದಿಸಲು ಯಶಸ್ವಿ ಯಾದ ತಂಡ
ರಾಯಬಾಗ :ತಾಲೂಕಿನ ಖನದಾಳ ಗ್ರಾಮದ ಅಪಹರಣ ಪ್ರಕರಣ ಭೇದಿಸಲಾಗಿದ್ದು ಈ ಸಂಬಂಧ ಆರೋಪಿಗಳನ್ನು ಬಂಧಿಸಿ ಆರೋಪಿಗಳಿಂದ ನಾಲ್ಕು ಲಕ್ಷ ಹತ್ತು ಸಾವಿರ ನಗದು ಕೃತಕ್ಕೆ ಬಳಸಿದ್ದ ಎರಡು ಕಾರು ಒಂದು ತಲವಾರ ಚಾಕು ಅಪಹರಣ ಮಾಡಿದವನಿಗೆ ಹಾಕುವ ಕರಿ ಬಣ್ಣದ ಕನ್ನಡಕಾ ಆರೋಪಿತದ ಎಳು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳುವಲ್ಲಿ ಹಾರೂಗೇರಿ ಪೋಲಿಸ ತಂಡ ಯಶಸ್ವಿ ಆಗಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಬೆಳಗಾವಿ ಪೋಲಿಸ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ …
Read More »ಸಚಿನ್ ಸಬ್ನಿಸ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್*
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿಯ 22ನೇ ವಾರ್ಷಿಕ ಘಟಿಕೋತ್ಸವವನ್ನು ಶುಕ್ರವಾರ, ದಿನಾಂಕ 24ನೇ ಫೆಬ್ರವರಿ, 2023 ರಂದು ಪೂರ್ವಾಹ್ನ 11:30ಕ್ಕೆ ವಿ. ತಾ. ವಿ. ಜ್ಞಾನ ಸಂಗಮ ಆವರಣದ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ಸಭಾಂಗಣದಲ್ಲಿ ಆಯೋಜಿಸಲಿದೆ. ಶ್ರೀ. ಥಾವರಚಂದ್ ಗೆಹ್ಲೋಟ್, ಗೌರವಾನ್ವಿತ ರಾಜ್ಯಪಾಲರು, ಕರ್ನಾಟಕ ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಅಧ್ಯಕ್ಷತೆ ವಹಿಸುವರು ಡಾ. ಸಿ. ಎನ್. ಅಶ್ವಥ್ ನಾರಾಯಣ್, ಮಾನ್ಯ ಸಚಿವರು, ಉನ್ನತ …
Read More »ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ,
ಗೋಕಾಕ: ಗೋಕಾಕದ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತು ಇಬ್ಬರುನ್ನು ಬಂಧಿಸಲಾಗಿದೆ, ಬಂಧಿತರ ಸಂಖ್ಯೆ 5ಕ್ಕೇರಿದೆ. ಗೋಕಾಕ ಮೋಮಿನ್ ಗಲ್ಲಿಯ ವೆಲ್ಡಿಂಗ್ ವರ್ಕ ಮಾಡುವ 24 ವರ್ಷದ ಮೋಯಿನ್ ಪಟೇಲ್ ಮತ್ತು ಲಕ್ಕಡ ಗಲ್ಲಿಯ ಟೈಲ್ಸ್ ಕೆಲಸ ಮಾಡುವ 21 ವರ್ಷದ ಅಬುತಾಲ್ ಮೊಹ್ಮದ್ ಹನೀಫ್ ಮುಲ್ಲಾ ಬಂಧಿತರು. ಇವರಿಬ್ಬರೂ ಈಗಾಗಲೆ ಬಂಧಿತರಾಗಿರುವ ಶಫತ್ ಟ್ರಾಸ್ಗರ್ ನ ಗೆಳೆಯರು. ಇವರೆಲ್ಲರೂ ಸೇರಿ ಯೋಗಿ ಕೊಳ್ಳದಲ್ಲಿ ಕೊಲೆ ಮಾಡಿದ್ದಾರೆ. …
Read More »
Laxmi News 24×7