Breaking News

ಜಿಲ್ಲೆ

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಧಾರವಾಡ : ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು. ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020 ರವರೆಗೆ ಮುಂದುವರೆಸಿದ್ದರು. ಆ ಯೋಜನೆ ದಿ:31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ …

Read More »

ಡಿ.ಕೆ.ಶಿ ಸಂಜೆ ಡಬಲ್ ಆಗ್ತಾರೆ; ಕಾಂಗ್ರೆಸ್ ಮುಳುಗುತ್ತಿರುವ ಹಡಗು ಆ ಪಕ್ಷಕ್ಕೆ ಯಾರು ಹೋಗ್ತಾರೆ; ಶಾಸಕ ವಿರೂಪಾಕ್ಷಪ್ಪ ತಿರುಗೇಟು

ಹಾವೇರಿ: ಹಾವೇರಿ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ , ಡಿಕೆಶಿ ಸಂಜೆ ಡಬಲ್ ಆಗ್ತಾರೆ. ಸಾಯಂಕಾಲದ ವೇಳೆ ಅವರು ಮಾತನಾಡಿರಬಹುದು ಎಂದು ಲೇವಡಿ ಮಾಡಿದ್ದಾರೆ.   ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಆ ಪಕ್ಷಕ್ಕೆ ಯಾರು ಹೋಗ್ತಾರೆ? ಈ ಹಿಂದೆ ಕಾಂಗ್ರೆಸ್ ನಾಯಕರು ಟಿಕೆಟ್ ಕೊಡುತ್ತೇವೆ ಎಂದು ಮನೆ ಬಾಗಿಲಿಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ನಾನು ಕಾಂಗ್ರೆಸ್ ಗೆ …

Read More »

ಮುಂದಿನ ತಿಂಗಳಿನಿಂದ ಪಡಿತರ ಪುನಃ 10 ಕೆಜಿಗೆ ಹೆಚ್ಚಳ : ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಬರುವ ತಿಂಗಳಿನಿಂದ ಪಡಿತರೆ ವಿತರಣೆ ಪ್ರಮಾಣವನ್ನು ಪುನಃ 10 ಕೆಜಿಗೆ ಹೆಚ್ಚಿಸಲಾಗುವುದುಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಜಿಲ್ಲಾಡಳಿತ,ಜಿಲ್ಲಾಪಂಚಾಯತ್ ಸಹಯೋಗದಲ್ಲಿ ಇಂದು ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ರಾಗಿಯ ರಾಶಿಪೂಜೆ ಸಲ್ಲಿಸಿ,ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು, ಬಡ ನಿವೇಶನ ರಹಿತರ ಹಕ್ಕುಗಳನ್ನು ಕಾಯಲು …

Read More »

ಜೆಡಿಎಸ್ ಗೆ ಮತ್ತೊಂದು ಆಘಾತ

ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಯೋಧ ಶಿವಾನಂದ ಸೋಮನಾಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿವಾನಂದ ಸೋಮನಾಳ (55) ಪಂಚರತ್ನ ರಥಯಾತ್ರೆ ಬಳಿಕ ತಮ್ಮ ಕ್ಷೇತ್ರ ಸಿಂದಗಿಗೆ ತೆರಳಿದ್ದರು. ಪರಿಚಯಸ್ಥರ ಮನೆಯಲ್ಲಿ ಕುಳಿತಿದ್ದ ಶಿವಾನಂದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. 15 …

Read More »

ಕೆಳಗಿನ ಮನೆ ಆಂಟಿ ಜೊತೆಗೆ ಮೇಲಿನ ಮನೆ ಅಂಕಲ್‌ ಜೂಟ್‌!

ಬೆಂಗಳೂರು: ಒಂದೇ ಕಟ್ಟಡದ ಕೆಳ ಮನೆಯಲ್ಲಿದ್ದ ಆಂಟಿ ಹಾಗೂ ಮೇಲಿನ ಮನೆಯಲ್ಲಿದ್ದ ಎರಡು ಮಕ್ಕಳ ತಂದೆ ಜತೆಯಾಗಿ ಪರಾರಿಯಾಗಿರುವ ವಿಚಿತ್ರ ಲವ್‌ ಸ್ಟೋರಿ ಜ್ಞಾನಭಾರತೀ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಾರುತಿ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.   ಕೆಳ ಮಹಡಿಯಲ್ಲಿ ವಾಸವಿದ್ದ ಮುಬಾರಕ್‌ (28) ಅವರು ತಮ್ಮ ಪತ್ನಿ ಶಾಜಿಯಾ (22) ನಾಪತ್ತೆಯಾಗಿರುವುದಾಗಿ ಹಾಗೂ ಮೇಲ್ಮನೆಯಲ್ಲಿರುವ ಝೀನತ್‌ (29) ಅವರು ತಮ್ಮ ಪತಿ ಮೊಹಮ್ಮದ್‌ ನವೀದ್‌ (37) ಕಾಣೆಯಾಗಿರುವುದಾಗಿ ಪೊಲೀಸ್‌ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ

*ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಮೂಡಲಗಿ: ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ …

Read More »

ಹೆಚ್ ಡಿಕೆ ಸಿಎಂ ಆಗದಿದ್ದರೆ ನಾನು. : ಸಿಎಂ ಇಬ್ರಾಹಿಂ ಶಪಥ !

ವಿಜಯಪುರ : ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ಎಂದು ಆಗ್ರಹಿಸಿದರು.   ಶುಕ್ರವಾರ ನಗರದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರುವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾರು ವಲಸೆ ಬರಲಿದ್ದಾರೆ ಎಂದು ಹೇಳುತ್ತೇನೆ ಎಂದರು. ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ …

Read More »

ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ₹1.10 ಕೋಟಿ ಮೌಲ್ಯದ ಕಾಣಿಕೆ ಸಂಗ್ರಹ

 (ಬೆಳಗಾವಿ ಜಿಲ್ಲೆ): ಇಲ್ಲಿನ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಮತ್ತು ಗುರುವಾರ ಯಲ್ಲಮ್ಮ ದೇವಸ್ಥಾನದ ಹುಂಡಿ ಎಣಿಕೆ ಮಾಡಲಾಗಿದ್ದು, ಒಟ್ಟು ₹1.10 ಕೋಟಿಗೂ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2022ರ ಡಿಸೆಂಬರ್‌ನಲ್ಲಿ ಭಕ್ತರು ಹುಂಡಿಗೆ ಹಾಕಿದ್ದ ₹95 ಲಕ್ಷ ನಗದು, ₹6.66 ಲಕ್ಷ ಮೌಲ್ಯದ 119 ಗ್ರಾಂ ಚಿನ್ನಾಭರಣ ಹಾಗೂ ₹8.73 ಲಕ್ಷ ಮೌಲ್ಯದ 2.962 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. ಇಲ್ಲಿಯವರೆಗೆ ಅರ್ಧದಷ್ಟು ಹುಂಡಿಯನ್ನು ಮಾತ್ರ ಎಣಿಸಲಾಗಿದೆ. ಬಾಕಿ ಉಳಿದ ಎಣಿಕೆ ಮುಂದಿನ …

Read More »

K.P.T.C.L. ಪರೀಕ್ಷಾ ಅಕ್ರಮ: ಮತ್ತೊಬ್ಬ ಆರೋಪಿ ಬಂಧನ

ಬೆಳಗಾವಿ: ಕೆಪಿಟಿಸಿಎಲ್‌ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ, ಪೊಲೀಸರು ಗುರುವಾರ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರ ಸಂಖ್ಯೆ 51ಕ್ಕೆ ಏರಿದೆ. ಗೋಕಾಕ ತಾಲ್ಲೂಕಿನ ಉಪ್ಪಾರಟ್ಟಿಯ ಹನುಮಂತ ಮಲ್ಲಪ್ಪ ಗುದಿಗೊಪ್ಪ (22) ಬಂಧಿತ. ಈಗಾಗಲೇ ಬಂಧಿತರಾದ ಸಂಜೀವ ಭಂಡಾರಿ, ಬಾಳೇಶ ಕಟ್ಟಿಕಾರ, ಸಿದ್ದಪ್ಪ ಮದಿಹಳ್ಳಿ, ಭೀಮಪ್ಪ ಗುದಿಗೋಪ್ಪ ಅವರೊಂದಿಗೆ ಹನುಮಂತ ಕೂಡ ಸೇರಿದ್ದ. ಇವರೆಲ್ಲರೂ ಕೂಡಿಕೊಂಡು ಏಳು ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಎಲೆಕ್ಟ್ರಾನಿಕ್ ಡಿವೈಸ್ ಮತ್ತು ಮೈಕ್ರೋಚಿಪ್‌ ತಲುಪಿಸಿದ್ದರು …

Read More »

ಬೆಳಗಾವಿಯಲ್ಲಿ ಉದ್ಯೋಗ ಮೇಳ | 38 ಕಂಪನಿ, 3,500 ಯುವಜನರು ಭಾಗಿ

ಬೆಳಗಾವಿ: ‘ಜಗತ್ತಿನಾದ್ಯಂತ ವಿಜ್ಞಾನ, ತಂತ್ರಜ್ಞಾನ, ವೈದ್ಯಕೀಯ, ಶಿಕ್ಷಣ, ಸೇವೆ ಮತ್ತು ಉತ್ಪಾದನಾ ವಲಯದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ. ಆಕಾಂಕ್ಷಿಗಳು ಕಾಲಕ್ಕೆ ತಕ್ಕಂತೆ ಕೌಶಲ ಬೆಳೆಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.   ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಆಶ್ರಯದಲ್ಲಿ ನಗರದಲ್ಲಿ ಗುರುವಾರ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿ ಜೀವನದ ಬಳಿಕ ನಮ್ಮ ಹೆಸರಿನ ಜತೆ …

Read More »