ವಿಜಯಪುರ: ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳ ಭೇಟಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದರು. ಶ್ರೀಗಳಿರುವ ಕೊಠಡಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಇವರು ಶ್ರೀಗಳ ಆರೋಗ್ಯ ಕ್ಷೇಮ ವಿಚಾರ ತಿಳಿಯಲು ವೈದ್ಯರ ಭೇಟಿ ಮಾಡಿದರು. ಬಳಿಕ ಮಾತನಾಡಿ ಶ್ರೀಗಳ ಆರೋಗ್ಯ ಸ್ಥಿರವಾಗಿದೆ, ನಾನು ವೈದ್ಯರ ಜೊತೆಗೆ ಮಾತನಾಡಿದ್ದೇನೆ, ಆರೋಗ್ಯ ಸ್ಥಿರವಾಗಿದೆ ಎಂದಿದ್ದಾರೆ, ಅವರು ಮಹಾಸಂತರು ಧಾರ್ಮಿಕವಾಗಿ ಜಾಗೃತಿಗೊಳಿಸುವ ಕೆಲಸ ಮಾಡಿದ್ದಾರೆ ಎಂದರು. ಪ್ರವಚನದ ಮೂಲಕ ಧಾರ್ಮಿಕ ಭಾವನೆ ಮೂಡಿಸಿದ್ದಾರೆ, …
Read More »ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ
ಕಿತ್ತೂರು ತಾಲೂಕಿನ ಶಿವನೂರು ಗ್ರಾಮದಲ್ಲಿ ಬಸ್ ವ್ಯವಸ್ಥೆ ಇಲ್ಲದ್ದಕ್ಕೆ ನಡೆದುಕೊಂಡು ಹೋಗುವಾಗ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಮೃತ ವಿದ್ಯಾರ್ಥಿನಿ ಅಕ್ಷತಾ ಹೂಲಿಕಟ್ಟಿ ಮೃತದೇಹ ಶಿವನೂರು ತಲುಪುತ್ತಿದ್ದಂತೆ ಕುಟುಂಬಸ್ಥರು ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸರ್ಕಾರಕ್ಕೆ ಹಿಡಿಶಾಪ ಹಾಕಿ ನೂರಾರು ಮಹಿಳೆಯರು ಕಣ್ಣೀರುಡುತ್ತಿರುವ ದೃಶ್ಯ ಎಲ್ಲರು ಕರುಳು ಚುರ್ ಎನ್ನುವಂತಿತ್ತು. ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಹಾಗೂ ಶಿವನೂರು ಗ್ರಾಮಕ್ಕೆ …
Read More »ನಾನು ಗುರುಗೋವಿಂದ ಭಟ್ಟರ ಮರಿಮೊಮ್ಮಗ ಅಲ್ಲ ಎಂಬುದನ್ನು ನಿರೂಪಿಸಲಿ : ಮಹೇಶ ಜೋಶಿ
ಹಾವೇರಿ: ‘ನಾನು ಗುರುಗೋವಿಂದ ಭಟ್ಟರ ಮರಿ ಮೊಮ್ಮಗ ಎಂದು ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಹೇಳುತ್ತಿಲ್ಲ. ಅನೇಕ ವರ್ಷಗಳಿಂದ ಹೇಳಿಕೊಂಡು ಬಂದಿದ್ದೇನೆ. ನಾನು ಮರಿ ಮೊಮ್ಮಗ ಅಲ್ಲ ಎಂದು ಆರೋಪಿಸುತ್ತಿರುವವರು ಈಗ ಏಕೆ ಪ್ರಶ್ನೆ ಮಾಡುತ್ತಿದ್ದಾರೆ. ದಾಖಲೆಗಳಿದ್ದರೆ ನ್ಯಾಯಾಲಯದಲ್ಲಿ ಪ್ರಶ್ನಿಸಲಿ’ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣದಲ್ಲಿ ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಮಾಧ್ಯಮದವರು ಸೋಮವಾರ ಪ್ರಶ್ನಿಸಿದಾಗ, ‘ಪ್ರತಿ ವರ್ಷ ಗುರುಗೋವಿಂದ ಭಟ್ಟರ ಆರಾಧನೆಯನ್ನು ಕಳಸದಲ್ಲಿ ಮಾಡುತ್ತಿದ್ದೇವೆ. ನಾನು …
Read More »‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ
ಬೆಳಗಾವಿ: ‘ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಒಂದೇ ವರ್ಷದಲ್ಲಿ ಪೂರ್ಣಗೊಳಿಸದಿದ್ದರೆ ನನ್ನ ಹೆಸರು ಗೋವಿಂದ ಕಾರಜೋಳ ಅಲ್ಲ’ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ‘ಒಂದು ತಿಂಗಳಲ್ಲಿ ಕಾಮಗಾರಿಗೆ ಚಾಲನೆ ನೀಡುತ್ತೇನೆ. ಏನೇ ಅಡ್ಡಿಗಳಿದ್ದರೂ ವರ್ಷ ಉರುಳುವುದರಲ್ಲಿ ಎಲ್ಲವನ್ನೂ ಮುಗಿಸುತ್ತೇನೆ’ ಎಂದು ಅವರು ನಗರದಲ್ಲಿ ಸೋಮವಾರ ಮಾಧ್ಯಮದವರಿಗೆ ಮಾಹಿತಿ ನೀಡಿದರು. ‘ಇದರ ‘ಸಮಗ್ರ ಯೋಜನಾ ವರದಿ’ಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ …
Read More »ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ ದೇವರು ಎಂದಿಗೂ ಮೆಚ್ಚುವುದಿಲ್ಲ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಹುಣಶ್ಯಾಳ ಪಿಜಿ …
Read More »ಕಾರಿನಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ: ಮರಣ ಪತ್ರ- ಲಿಂಬಾವಳಿ ಸೇರಿ 6 ಹೆಸರು
ರಾಮನಗರ: ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಸಮೀಪದ ನೆಟ್ಟಗೆರೆ ಬಳಿ ಕಾರಿನಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ (47) ಎಂಬುವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರದೀಪ್ ಬರೆದಿದ್ದಾರೆ ಎನ್ನಲಾದ 8 ಪುಟಗಳ ಮರಣ ಪತ್ರ ಕಾರಿನಲ್ಲಿ ಸಿಕ್ಕಿದೆ. ಶಾಸಕ ಅರವಿಂದ ಲಿಂಬಾವಳಿ, ಉದ್ಯಮಿಗಳಾದ ಕೆ. ಗೋಪಿ, ಸೋಮಯ್ಯ, ರಮೇಶ್ ರೆಡ್ಡಿ, ಜಯ ರಾಮ್ ರೆಡ್ಡಿ ಹಾಗೂ ರಾಘವ ಭಟ್ ಎಂಬುವರ ಹೆಸರುಗಳನ್ನು ಮೊಬೈಲ್ ಸಂಖ್ಯೆ ಸಹಿತವಾಗಿ ಉಲ್ಲೇಖಿಸಲಾಗಿದೆ. ‘ಆರು ಜನರಿಂದ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೊದಲನೆಯ ಬಾರಿ ಪೂಜೆ ಕಾರ್ಯಕ್ರಮ ನಡೆಸಿದ ಅಯ್ಯಪ್ಪನ ಭಕ್ತ ವೃಂದ ಹಾಗೂ ಕಾರ್ಖಾನೆಯ ಸಿಬ್ಬಂದಿಗಳು..
ಹಿರೆ ನಂದಿ :ಕಾರ್ತಿಕ ಮಾಸ ಆಯ್ಯಪನ ಭಕ್ತರ ಪಾಲಿಗೆ ಇದೊಂದು ಹಬ್ಬ, ನಾಡಿನಾದ್ಯಂತ ಅಯ್ಯಪ್ಪನ ಭಕ್ತರು ಈ ಒಂದು ಕಾರ್ತಿಕ ಮಾಸದಲ್ಲಿ ಮಾಲಾ ಧಾರಣೆ ಮಾಡಿ ಅಯ್ಯಪ್ಪನ ದರ್ಶನಕ್ಕೆ ಹೋಗುತ್ತಾರೆ. ತುಂಬಾ ಕಠಿಣ ವಾದ ವಿದಿ ವಿಧಾನ ಗಳೊಂದಿಗೆ ಈ ಒಂದು ವ್ರತವನ್ನು ಮಾಡಿ ಅಯ್ಯಪ್ಪನ ಭಕ್ತರು ಶಬರಿ ಗಿರಿಗೆ ತೆರಳುತ್ತಾರೆ ನಾಡಿನಾದ್ಯಂತ ಈ ಒಂದು ಪರಂಪರೆ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದಿದೆ. ಇಂಥ ವಿಶಿಷ್ಟ ಪೂಜೆ ಯನ್ನ …
Read More »ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*
*ಮೂಡಲಗಿ*- ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು …
Read More »102 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಜ್ಜಾದ ರೆಡ್ಡಿ; ಜ.16ಕ್ಕೆ 25 ಅಭ್ಯರ್ಥಿಗಳ ಘೋಷಣೆ
ಬಳ್ಳಾರಿ: ಬಿಜೆಪಿ ಮೇಲೆ ಮುನಿಸಿಕೊಂಡು ಪ್ರತ್ಯೇಕ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 102 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಗಣಿನಾಡು ಬಳ್ಳಾರಿ, ದಕ್ಷಿಣ ಭಾರತದಲ್ಲೇ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅ ಧಿಕಾರಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜನಾರ್ದನ ರೆಡ್ಡಿ ಈಗ ಬಿಜೆಪಿ ಮೇಲೆಯೇ ಮುನಿಸಿಕೊಂಡು “ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ …
Read More »ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಆಶ್ರಮದತ್ತ ಭಕ್ತರು ಬರದಂತೆ ಮನವಿ
ವಿಜಯಪುರ: ಸಿದ್ದೇಶ್ವರ ಶ್ರೀಗಳ ಅನಾರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಮತ್ತೊಂದೆಡೆ ಭಕ್ತರ ದಂಡು ಆಶ್ರಮದತ್ತ ಆಗಮಿಸುತ್ತಿದ್ದು, ಶ್ರೀಗಳ ಆರೋಗ್ಯದ ದೃಷ್ಟಿಯಿಂದ ಆಶ್ರಮಕ್ಕೆ ಆಗಮಿಸದೇ ಭಕ್ತರು ಸಹಕರಿಸಬೇಕು ಎಂದು ಆಶ್ರಮದ ಸಾಧಕರು ಮನವಿ ಮಾಡುತ್ತಿದ್ದಾರೆ. ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆಗಾಗಿ ಬಿಎಲ್ ಡಿಇ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ತಂಡ ಟೊಂಕ ಕಟ್ಟಿದೆ. ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯರಾದ ನ್ಯೈರೋಲಾಜಿಸ್ಟ್ ಡಾ.ಎಸ್.ಬಿ.ಪಾಟೀಲ, …
Read More »
Laxmi News 24×7