Breaking News

ಜಿಲ್ಲೆ

ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ

ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ.   ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …

Read More »

ಬೆಳಗಾವಿ | ವೈಯಕ್ತಿಕ ಕಾರಣಕ್ಕೆ ಅಣ್ಣನ ಕೊಲೆ ಮಾಡಿದ ತಮ್ಮ

ನಾಗರಮುನ್ನೋಳಿ: ಸಮೀಪದ ಉಮರಾಣಿ ಗ್ರಾಮದ ಹೊರವಲಯದಲ್ಲಿ ನಿಪ್ಪಾಣಿ- ಮುಧೋಳ ರಸ್ತೆಯಲ್ಲಿ ತಮ್ಮನೇ ಅಣ್ಣನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚಿಕ್ಕೋಡಿ ಪಟ್ಟಣದ ಡಂಬಳ ಕಾಲೊನಿ ನಿವಾಸಿ ಅಕ್ಬರ್‌ ಅಬ್ದುಲ್‌ ಶೇಖ್‌ (40) ಕೊಲೆಯಾದವರು. ಅಮ್ಜಾದ್ ಅಬ್ದುಲ್‌ ಶೇಖ್ (32) ಆರೋಪಿ. ಅಕ್ಬರ್ ಅಬ್ದುಲ್‌ ಶೇಖ್ ಅವರು ಕಬ್ಬೂರು ಗ್ರಾಮದಿಂದ ಚಿಕ್ಕೋಡಿಗೆ ದ್ವಿಚಕ್ರ ವಾಹನದ ಮೇಲೆ ಬರುತ್ತಿರುವ ವೇಳೆ ಕಾರಿನಿಂದ ಹಿಂಬಾಲಿಸಿಕೊಂಡು ಬಂದ ಸಹೋದರ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ವೈಯಕ್ತಿ ಕಾರಣವಳಿಂದ …

Read More »

ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್‌, ಕನ್ನಡಕ ವಿತರಣೆ

ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ.   ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …

Read More »

ಸಿಸಿಬಿ ಖಡಕ್‌ ವಾರ್ನಿಂಗ್‌ಗೆ ಬೆಂಗಳೂರು ಬಿಡ್ತಿದ್ದಾರೆ ರೌಡಿಗಳು

ಬೆಂಗಳೂರು : ರಾಜಕೀಯ ನಾಯಕರ ಜೊತೆ ರೌಡಿ ಶೀಟರ್‌ಗಳು ವೇದಿಕೆ ಹಂಚಿಕೊಳ್ಳುವುದಕ್ಕೆ ಶುರು ಮಾಡಿದ್ರೋ ಆಗಿನಿಂದ ಇದು ಪೊಲೀಸ್‌ ಇಲಾಖೆಗೆ ದೊಡ್ಡ ತಲೆನೋವಾಗಿದೆ. ಸದ್ಯ ರಾಜಕೀಯದಿಂದ ಮುಜಗರಕ್ಕೆ ಇಡಾಗಿದ್ದ ಸಿಸಿಬಿ ಬೆಂಗಳೂರು ರೌಡಿಗಳ ವಿಷಯದಲ್ಲಿ ಖಡಕ್ ತೀರ್ಮಾನ ತೆಗೆದುಕೊಂಡಿದೆ. ರೌಡಿಗಳಿಗೆ ಊರು ಬಿಡುವಂತೆ ಖಡಕ್‌ ವಾರ್ನಿಂಗ್ ಕೊಟ್ಟಿದ್ದಾರೆ. ಸಿಸಿಬಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳೋದಕ್ಕಾಗಿ ರೌಡಿಗಳನ್ನ ಊರು ಬಿಡಿಸಿದ್ದಾರೆ   .ಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಸಿಸಿಬಿಗೆ ದೊಡ್ಡ ಮುಜುಗರ ಊಂಟು …

Read More »

ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಎಲ್.ಕೆ.ಅತೀಕ್

ಬೆಳಗಾವಿ: ‘ಜಲಜೀವನ ಮಿಷನ್‌ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು.   ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು …

Read More »

ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ

ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ  ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ   ಮತ್ತು ಮುಂಬರುವ ದಿನಗಳಲ್ಲಿ …

Read More »

ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್‌

ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು …

Read More »

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ.

ಬ್ರೇಕ್ ಫೇಲ್ ಆಗಿ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿರುವ ಘಟನೆ ಬೆಳಗಾವಿಯ ನೆಹರು ನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ.ಬೆಳಗಾವಿ: ಬೆಳಗಾವಿಯಲ್ಲಿ ಕೂದಲೇಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಕೆಎಲ್‌ಇ ಆಸ್ಪತ್ರೆಯ ಕಡೆಯಿಂದ ಕೃಷ್ಣದೇವರಾಯ ಸರ್ಕಲ್ ಕಡೆಗೆ ಬರುತ್ತಿದ್ದ ಕ್ರೇನ್ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಏಕಾಏಕಿ ಬ್ರೇಕ್ ವಿಫಲವಾಯಿತು. ಇದರಿಂದ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ. ಅಪಘಾತ ಸಮಯದಲ್ಲಿ ಅದೇ ರಸ್ತೆಯಲ್ಲಿ ಶಾಲಾ ವಾಹನ ಕೂದಲೆಳೆ ಅಂತರದಲ್ಲಿ …

Read More »

ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಸಿಸಿಟಿವಿ ಅಳವಡಿಸಲು ಮುಂದಾದ ಹಿಂಡಲಗಾ ಪಂಚಾಯತಿ

ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಎಲ್ಲೆಂದರಲ್ಲಿ ಸಾರ್ವಜನಿಕರು ಕಸ ಚೆಲ್ಲುತ್ತಿದ್ದಾರೆ. ಹೀಗೆ ಕಸ ಚೆಲ್ಲುವವರನ್ನು ಪತ್ತೆ ಹಚ್ಚಲು ಗ್ರಾಮ ಪಂಚಾಯತಿ ವಿನೂತನ ಕ್ರಮಕ್ಕೆ ಮುಂದಾಗಿದೆ. ಹೌದು ಸಿಸಿ ಕ್ಯಾಮರಾ ಅಳವಡಿಸುವ ಕಾಮಗಾರಿಗೆ ಮಂಗಳವಾರ ಗ್ರಾ.ಪಂ.ಅಧ್ಯಕ್ಷ ನಾಗೇಶ ಮನ್ನೋಳ್ಕರ್ ಚಾಲನೆ ನೀಡಿದರು. ಅದೇ ರೀತಿ ಕಸ ಚೆಲ್ಲುವವರಿಗೆ 5 ಸಾವಿರ ರೂಪಾಯಿ ದಂಡ ವಿಧಿಸುವ ಬಗ್ಗೆ ಎಚ್ಚರಿಕೆಯನ್ನು ಗ್ರಾಮ ಪಂಚಾಯತಿ ನೀಡಿದೆ. ಈ ವೇಳೆ ಗ್ರಾ.ಪಂ.ಉಪಾಧ್ಯಕ್ಷೆ ಭಾಗ್ಯಶ್ರೀ ಕೋಕಿತ್ಕರ್, …

Read More »

ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ತೆರವು ಮಾಡಿದ ಬುಡಾ ಅಧಿಕಾರಿಗಳು

ಬೆಳಗಾವಿ ರಾಮತೀರ್ಥ ನಗರದಲ್ಲಿ ಸಾರ್ವಜನಿಕ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಬುಡಾ ಅಧಿಕಾರಿಗಳು ತೆರವು ಮಾಡಿದ್ದಾರೆ. ಹೌದು ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಸಹಾಯದಿಂದ ರಾಮತೀರ್ಥ ನಗರದಲ್ಲಿ ಯೋಜನೆ ಸಂಖ್ಯೆ 35, 40, 41ರಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧ ಮಾತನಾಡಿದ ಬುಡಾ ಎಇಇ ಮಹಾಂತೇಶ ಹಿರೇಮಠ ಅವರು ಯಾವುದೇ ಅನಧಿಕೃತ ಮನೆಗಳನ್ನು ಯಾರೂ ಕೂಡ ಕಟ್ಟಬಾರದು. ಪ್ರಾಧಿಕಾರಕ್ಕಾಗಿ ನಾವು ವಶಪಡಿಸಿಕೊಂಡಿರುವ ಅಥವಾ …

Read More »