ಬೆಳಗಾವಿ: ಪ್ರತಿಯೊಂದು ದೇಶದ ಭವಿಷ್ಯ ಅಲ್ಲಿಯ ಮಕ್ಕಳ ಸಮಗ್ರ ಅಭಿವೃದ್ಧಿಯ ಮೇಲೆ ನಿಂತಿದೆ. ಮಕ್ಕಳ ಅಭಿವೃದ್ಧಿಯು ಅವರ ಶಿಕ್ಷಣದ ಮೇಲಿದೆ. ಹೀಗಾಗಿ ಎಲ್ಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚಿನ ಗಮನ ಕೊಡಬೇಕಿದೆ ಎಂದು ಶಿಕ್ಷಕ ಮಲಿಕಜಾನ ಗದಗಿನ ಹೇಳಿದರು. ಕಣಬರಗಿಯ ಶ್ರೀ ರವಿಶಂಕರ ವಿದ್ಯಾವರ್ಧಕ ಸಂಸ್ಥೆಯ ಸಮತಾ ಶಾಲೆಯಲ್ಲಿ ಜರುಗಿದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಪಂಚ ವಾರ್ಷಿಕ ಯೋಜನೆಗಳ ಮೂಲಕ ಕೃಷಿ, ಕೈಗಾರಿಕೆ …
Read More »ಚಿತ್ರದುರ್ಗ ಮಠದ ಮಾಜಿ ಆಡಳಿತಾಧಿಕಾರಿಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಪೋಕ್ಸೊ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಕುಮ್ಮಕ್ಕು ನೀಡಿದ ಆರೋಪದಡಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಅವರಿಗೆ ಜಿಲ್ಲಾ ನ್ಯಾಯಾಲಯ ನ.28ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪೊಲೀಸ್ ಕಸ್ಟಡಿ ಅವಧಿ ಮುಗಿದ ಪರಿಣಾಮ ತನಿಖಾ ತಂಡ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ಹಾಜರುಪಡಿಸಿತು. ಪೊಲೀಸ್ ವಿಚಾರಣೆ ಪೂರ್ಣಗೊಂಡಿದ್ದರಿಂದ ಇಬ್ಬರು …
Read More »ಬಸವಲಿಂಗ ಶ್ರೀ ಆತ್ಮಹತ್ಯೆ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ರಾಮನಗರ: ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮೂವರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 29ರವರೆಗೆ ವಿಸ್ತರಿಸಿ ನ್ಯಾಯಾಲಯವು ಮಂಗಳವಾರ ಆದೇಶಿಸಿತು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ ಮಾಗಡಿ ಜೆಎಂಎಫ್ ಸಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಅವರ ಎದುರು ಹಾಜರುಪಡಿಸಿದರು. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಅವರನ್ನು ಪೊಲೀಸರು ಮಂಗಳವಾರ …
Read More »ಕ್ರಿಕೆಟ್ ತಾರೆ ರಾಜೇಶ್ವರಿ ಗಾಯಕವಾಡಗೆ ಗೌರವ ಡಾಕ್ಟರೇಟ್ ಪ್ರದಾನ
ವಿಜಯಪುರ: ಮಹಿಳಾ ಕ್ರಿಕೆಟ್ನಲ್ಲಿ ಮಿಂಚುತ್ತಿರುವ ವಿಜಯಪುರದ ಹೆಮ್ಮೆಯ ಕ್ರೀಡಾಪಟು ರಾಜೇಶ್ವರಿ ಗಾಯಕವಾಡ ಅವರಿಗೆ ರಾಜಸ್ಥಾನ ರಾಜ್ಯದ ಉದಯಪುರದ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಉದಯಪುರ ಎಸ್.ಪಿ.ಎಸ್.ಯು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ರಾಜೇಶ್ವರಿ ಗಾಯಕವಾಡ ಅವರಿಗೆ ಎಸ್.ಪಿ.ಎಸ್.ಯು ಅಧ್ಯಕ್ಷರಾದ ಡಾ.ಪದ್ಮಕಲಿ ಬ್ಯಾನರ್ಜಿ ಹಾಗೂ ಡಾ.ನಿಧಿಪತಿ ಸಿಂಗಾನಿಯಾ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಇದೇ ಮೊದಲ ಬಾರಿಗೆ ಭಾರತದ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರಿಗೆ ಈ ಗೌರವ ಡಾಕ್ಟರೇಟ್ ದೊರೆತಿದೆ.
Read More »ಮಕ್ಕಳ ದಿನಾಚರಣೆ ವಿಶೇಷ: 12 ಶಸ್ತ್ರಚಿಕಿತ್ಸೆಯಾದರೂ ‘ಛಲ’ ಬಿಡದ 13ರ ಬಾಲಕ
ಬೆಳಗಾವಿ: ಈ ಬಾಲಕನ ವಯಸ್ಸು ಹದಿಮೂರು. ಈಗಾಗಲೇ ಆತನಿಗೆ ಹನ್ನೆರಡು ಶಸ್ತ್ರಚಿಕಿತ್ಸೆಗಳಾಗಿವೆ. ಆದರೆ, ಈ ಬಾಲಕನ ಸಾಧನೆಗೆ ಯಾವುದೂ ಅಡ್ಡಿಬಂದಿಲ್ಲ. ಅಂಗ ವೈಕಲ್ಯದ ಮಧ್ಯೆಯೂ ರಾಷ್ಟ್ರಮಟ್ಟದ ಈಜು ಟೂರ್ನಿಗಳಲ್ಲಿ ಮಿಂಚುತ್ತಿದ್ದಾರೆ. ನಗರದ ಅನಗೋಳ ಬಡಾವಣೆಯ ಈಜುಪಟು ಅನಿಕೇತ್ ಚಿದಂಬರ ಪಿಲನಕರ್ ಯಶೋಗಾಥೆ ಇದು. ಹುಟ್ಟಿನಿಂದಲೂ ಆರೋಗ್ಯ ಸಮಸ್ಯೆ ಎದುರಿಸುತ್ತಲೇ ಬೆಳೆದ ಬಾಲಕ, ಇದೀಗ ಈಜಿನಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ರಾಷ್ಟ್ರೀಯ ಟೂರ್ನಿಗಳಲ್ಲಿ 6, ರಾಜ್ಯಮಟ್ಟದ ಟೂರ್ನಿ ಗಳಲ್ಲಿ 3 ಚಿನ್ನದ …
Read More »ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹತ್ಯೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಓರ್ವ ಅಜ್ಜಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಅಕ್ಟೋಬರ್ 7ರಂದು ಬೆಲ್ಲದಬಾಗೇವಾಡಿಯ ಮನೆಯೊಂದರಲ್ಲಿ 75 ವರ್ಷದ ಮಲ್ಲವ್ವ ಜೀವಪ್ಪ ಕಮತೆ ಎಂಬ ವೃದ್ಧ ಮಹಿಳೆ ಸಾವನ್ನಪ್ಪಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ಹುಕ್ಕೇರಿ ಪೊಲೀಸರು ಆರಂಭದಲ್ಲಿ ಅನೈಸರ್ಗಿಕ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಈ ಅಜ್ಜಿಯನ್ನು ಕತ್ತು …
Read More »ಈ ಬಾರಿ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ: ಶಿಕ್ಷಣ ಇಲಾಖೆ
ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸವನ್ನು ಪ್ರಸಕ್ತ ವರ್ಷದಿಂದ ಪುನರಾರಂಭಿಸಲು ಶಿಕ್ಷಣ ಇಲಾಖೆ ಅನುಮತಿ ಕೊಟ್ಟಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಕಡ್ಡಾಯವಾಗಿ ಶಾಲಾ ಮಾನ್ಯತೆ ನವೀಕರಿಸಿಕೊಂಡಿರುವ ಖಾಸಗಿ ಶಾಲೆಗಳು ಮಾತ್ರ ಪ್ರವಾಸ ಕೈಗೊಳ್ಳಬಹುದಾಗಿದೆ. ಮಾನ್ಯತೆ ನವೀಕರಿಸಿಕೊಳ್ಳದ ಶಾಲೆಗಳಿಗೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲು ಅವಕಾಶ ನೀಡಲಿಲ್ಲ. ಪ್ರವಾಸದ ಸಮಯದಲ್ಲಿ ಅವಘಡ ಸಂಭವಿಸಿದರೆ ಶಾಲೆಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಇಲಾಖೆಯು ಜವಾಬ್ದಾರಿಯಾಗಿರುವುದಿಲ್ಲ ಎಂದು …
Read More »ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್ಗೆ ಸಿಕ್ಕಿ ದೇಹ ಛಿದ್ರ..
ಬಾಗಲಕೋಟೆ: ಕೃಷಿ ಸಂಬಂಧಿತ ಚಟುವಟಿಕೆಗಳ ಸಂದರ್ಭ ಸಣ್ಣ ಎಡವಟ್ಟಿನಿಂದಾಗಿ ಅಂಥ ಕೆಲಸಗಾರರು ಪ್ರಾಣ ಕಳೆದುಕೊಂಡ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಇಂದು ಅಂಥದ್ದೇ ಇನ್ನೊಂದು ಪ್ರಕರಣ ಸಂಭವಿಸಿದ್ದು, ಕೃಷಿ ಚಟುವಟಿಕೆ ವೇಳೆ ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ. ಬಾಗಲಕೋಟೆ ತಾಲೂಕಿನ ಶಿರೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಈ ದುರಂತದಲ್ಲಿ ರೇಣುಕಾ ಮಾದರ (45) ಎಂಬಾಕೆ ಸಾವಿಗೀಡಾಗಿದ್ದಾರೆ. ಈಕೆ ಕೂಲಿ ಕೆಲಸಕ್ಕಾಗಿ ಬೇರೆ ಕಡೆಯಿಂದ ಬಂದಿದ್ದರು. ಕೆಲಸದ ವೇಳೆ ಇವರು ಗೋವಿನಜೋಳ ರಾಶಿ …
Read More »ಕುರಿಗಾಹಿಗಳಿಗೆ ಸಿಹಿ ಸುದ್ದಿ: ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿ
ಬೆಂಗಳೂರು: ಮುಂದಿನ ಚುನಾವಣೆಯಲ್ಲಿ 150 ಸ್ಥಾನದ ಗುರಿಯೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೇರುವ ನಿಟ್ಟಿನಲ್ಲಿ ರಣತಂತ್ರ ರೂಪಿಸಿರುವ ಬಿಜೆಪಿ ಸರ್ಕಾರ ಕುರಿಗಾಹಿಗಳನ್ನು ವಿಶ್ವಾಸಕ್ಕೆ ಪಡೆಯಲು ಮುಂದಾಗಿದೆ. ಕುರಿಗಾಹಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟು ಆರ್ಥಿಕವಾಗಿ ಬಲವರ್ಧನೆ ಮಾಡುವ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಜಾರಿಗೊಳಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುರಿದೊಡ್ಡಿಗೆ ಶೆಡ್ ನಿರ್ಮಿಸಿಕೊಳ್ಳಲು ಆರ್ಥಿಕ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಕುರಿ ಮಾಂಸಕ್ಕೆ ಬೇಡಿಕೆ ಹೆಚ್ಚಾಗಿದೆ. ಮಾರುಕಟ್ಟೆ ಮೇಲಿನ ಮಾಫಿಯಾದ ಹಿಡಿತ ತಪ್ಪಿಸಲು ಕುರಿ …
Read More »ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ
ಗೋಕಾಕ್ನಲ್ಲಿ ನಡೆಯುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಹೌದು 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್ ನಗರದ ನ್ಯೂ ಇಂಗ್ಲಿμï ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಪಂಚಮಸಾಲಿ ಸಮಾವೇಶ ಆಯೋಜಿಸಲಾಗಿದೆ. ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ …
Read More »
Laxmi News 24×7