Breaking News

ಜಿಲ್ಲೆ

2000 ಕಿಮೀ ಜಾಗೃತಿ ಜಾಥಾ ನಡೆಸಲು ಮುಂದಾದ ಮಾದಿಗ ಸಮಾಜ

ಮಾದಿಗ ಸಮುದಾಯದ ಒಳಮೀಸಲಾತಿಗಾಗಿ ಹಾಗೂ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ೨೦ ದಿನಗಳ ಕಾಲ ೨೦೦೦ ಕಿಮೀ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯಮಿ ಡಾ. ಪ್ರಶಾಂತರಾವ ಐಹೊಳೆ ತಿಳಿಸಿದರು. ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಮಾದಿಗ ಸಮುದಾಯದ ಒಳಮೀಸಲಾತಿಗಾಗಿ ಹಾಗೂ ಸಮಾಜದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬ್ರಹತ್ ಜಾಥಾವನ್ನು ಹಮ್ಮಿಕೊಂಡು, ನಮ್ಮ ಬೇಡಿಕೆ ಸರ್ಕಾರದ ಮುಂದೆ ತರುತ್ತೇವೆ .ಸದಾಶಿವ …

Read More »

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಸತೀಶ ಜಾರಕಿಹೊಳಿ ಬಹಿರಂಗ ಸವಾಲು

ನನ್ನ ಹಿಂದೂ ಶಬ್ದದ ಹೇಳಿಕೆಯ ಸತ್ಯಾಸತ್ಯತೆ ಬಗ್ಗೆ ಸಿಎಂ ಬೊಮ್ಮಾಯಿ ಅವರು ಒಂದು ಕಮೀಟಿ ರಚನೆ ಮಾಡಲಿ. ಈ ಸಮೀತಿ ಒಂದು ತಿಂಗಳಲ್ಲಿ ವರದಿ ಕೊಟ್ಟು, ಸಾಬೀತು ಮಾಡಿದ್ರೆ ಕ್ಷಮೆ ಅಲ್ಲ, ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಬಹಿರಂಗ ಸವಾಲು ಹಾಕಿದ್ದಾರೆ. ಹೌದು ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಸಮಾವೇಶದಲ್ಲಿ ಹಿಂದೂ ಶಬ್ದದ ಬಗ್ಗೆ ಸತೀಶ ಜಾರಕಿಹೊಳಿ …

Read More »

K.R.S. ಬೃಂದಾವನದಲ್ಲಿ ಚಿರತೆ

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು.   ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು ಪ್ರವಾಸಿಗರು ಇದ್ದರು. ಮೀನುಗಾರಿಕಾ ಇಲಾಖೆಯ ಅಕ್ವೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂಂದಿಯ ಕಣ್ಣಿಗೆ ಬಿದ್ದಿದೆ. ತಕ್ಷಣ ಜಾಗೃತರಾದ ಭದ್ರತಾ …

Read More »

ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ವೃದ್ಧೆಯ ಮೇಲೆ ಜೇನು ದಾಳಿ

ಭತ್ತದ ಕಟಾವಿಗೆ ಗದ್ದೆಗೆ ಹೋಗಿದ್ದ ವೃದ್ಧ ರೈತ ಮಹಿಳೆ ಓರ್ವರಿಗೆ ಜೇನು ಹುಳು ಕಚ್ಚಿರುವ ಘಟನೆ ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದಲ್ಲಿ ನಡೆದಿದೆ. ಯಳ್ಳೂರ ಗ್ರಾಮದ 70 ವರ್ಷದ ಚಾಂಗುನಾ ಕೃಷ್ಣಾ ಕುಗಜಿ ಜೇನು ದಾಳಿಯಿಂದ ಗಾಯಗೊಂಡಿರುವ ವೃದ್ಧ ರೈತ ಮಹಿಳೆ. ತಮ್ಮ ಹೊಲದಲ್ಲಿ ಭತ್ತದ ಕಟಾವು ಮಾಡಲು ಬಂದಿದ್ದ ವೇಳೆ ಏಕಾಏಕಿ ಜೇನುಗಳು ದಾಳಿ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ವೃದ್ಧೆಯ ಮುಖ, ಬಾಯಿ ಮತ್ತು ತುಟಿಗಳಿಗೆ …

Read More »

ನ. 28 ರಂದು ಬೆಳಗಾವಿ ತಾಲೂಕಿನ ರೈತರು ಮತ್ತೇ ಬೀದಿಗಿಳಿದು ಪ್ರತಿಭಟಿಸುತ್ತಾರಂತೆ?

ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರೈತರನ್ನು ಭೂಸ್ವಾಧೀನಪಡಿಸಿ ನಿರ್ಮಿಸಲಾಗುತ್ತಿರುವ ರಿಂಗ್‌ರೋಡ್ ಯೋಜನೆಯನ್ನು ವಿರೋಧಿಸಿ ಬೆಳಗಾವಿ ತಾಲೂಕಿನ ರೈತರು ಪ್ರತಿಭಟನೆ ನಡೆಸಿದ್ದಾರೆ. ಇಂದು ಬೆಳಗಾವಿಯಲ್ಲಿ ನಡೆದ ಮಹಾರಾಷ್ಟ್ರ ಏಕೀಕರಣ ತಾಲೂಕಾ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಭೆಯಲ್ಲಿ ಈ ರಿಂಗ್ ರೋಡ್ ವಿರುದ್ಧದ ಹೋರಾಟ ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು. ಹೌದು, ಬೆಳಗಾವಿ ತಾಲೂಕಿನಲ್ಲಿ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಿಂಗ್ ರೋಡ್ ಮಾಡಲು ಸರ್ಕಾರ ಯೋಜಿಸಿದೆ. ಆದರೆ ಇದರಿಂದ ಫಲವತ್ತಾದ ಭೂಮಿ …

Read More »

ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಕರವೇ ಕಾರ್ಯಕರ್ತರು ಪ್ರತಿಭಟನೆ

ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು. ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ …

Read More »

ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ:ಜಗದೀಶ್ ಶೆಟ್ಟರ್

ನನ್ನ ಅನುಭವದ ಪ್ರಕಾರ ಮಾರ್ಚ್ ಇಲ್ಲವೇ ಎಪ್ರಿಲ್ ನಲ್ಲಿ ಚುನಾವಣೆ ನಡೆಯಬೇಕು. ಅದೇ ಸಂದರ್ಭದಲ್ಲಿ ಚುನಾವಣೆ ಆಗಲಿದೆ ಎಂಬ ಹೇಳಿಕೆ ನೀಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಪೂರ್ಣಾವಧಿ ಆಡಳಿತ ನಡೆಸಲಿದೆ ಎಂಬುದನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರ ಶಕ್ತಿ ಪ್ರದರ್ಶನ ಬಿಜೆಪಿಗೆ ಪರಿಣಾಮ ಬೀರುವುದಿಲ್ಲ. ರಾಹುಲ್ ಗಾಂಧಿ ಅವರು ಮಾಡಿದ ಭಾರತ ಜೋಡೋ ಪರಿಣಾಮವು ಇಲ್ಲ. ಇದೀಗ ಎಐಸಿಸಿ …

Read More »

ಯಾರ ಕಂಡ್ರೆ ಭಯ ಇರುತ್ತೋ ಅವರ ಮೇಲೆ ಕೇಸ್ ಹಾಕ್ತಾರೆ: ಡಿಕೆಶಿ

ರಾಜಕೀಯವಾಗಿ ಯಾರು ಯಾರು ಬೆಳೆಯುತ್ತಾರೆ, ಪ್ರಬಲವಾಗಿ ಇರುವವರನ್ನ ಕ್ರಿಮಿನಲ್ ಮಾಡಿದ್ದಾರೆ. ಯಾರು ಕಂಡ್ರೇ ಅವರಿಗೆ ಹೆದರಿಕೆ ಇರುತ್ತೋ ಅವರ ಮೇಲೆ ಕೇಸ್‍ಗಳನ್ನ ಹಾಕುವುದು ತೊಂದರೆ ಕೊಡುವುದು ಮಾಡ್ತಾರೆ. ಹೀಗಾಗಿ ವಿನಯ್ ಕುಲಕರ್ಣಿ ಮೇಲೆ ಪೆÇಲೀಸರು ಬಿ ರಿಪೆÇೀರ್ಟ್ ಸಲ್ಲಿಸಿದ್ದನ್ನ ಸಿಬಿಐಗೆ ಒಪ್ಪಿಸಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ಮಾಡಿದರು. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಪಕ್ಷದ ಸಂಘಟನೆ ದೃಷ್ಠಿಯಿಂದ ನಾಯಕರು, …

Read More »

ಅಮಿತ್ ಷಾ ಕೂಡ ಕೊಲೆ ಆರೋಪಿಯಾಗಿ ಗಡಿಪಾರು ಆಗಿದ್ದರು: ಸಿದ್ದರಾಮಯ್ಯ ಲೇವಡಿ

ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಬಂಧ ಹಳಸಿಕೊಂಡು ಬಿಟ್ಟಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಸೋಮವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ನಾನ್ನ ಮತ್ತು ಡಿ.ಕೆ.ಶಿವಕುಮಾರ ಸಂಬಂದ ಚೆನ್ನಾಗಿಯೇ ಇದೆ. ಆದರೆ ಬಿಜೆಪಿಯವರು ಸರಿ ಇಲ್ಲ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ …

Read More »

ಸಂಸತ್ತಿನಲ್ಲಿ ಕೆಂಪೇಗೌಡರ ಪುತ್ತಳಿ ಸ್ಥಾಪಿಸಲು ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಕಂಚಿನ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ ಸ್ಥಾಪಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಕೆಂಪೇಗೌಡರು 16ನೇ ಶತಮಾನದಲ್ಲಿ ‌ಬೆಂಗಳೂರನ್ನು ಸ್ಥಾಪಿಸಿದರು. ಅಂದು ಅವರು ಬಿತ್ತಿದ ಬೀಜ ಇಂದು ಜಾಗತಿಕ ಮನ್ನಣೆ ಪಡೆದಿರುವ ನಾವೆಲ್ಲರೂ ಹೆಮ್ಮೆ ಪಡುವಂತಹ ಕಾಸ್ಮೋಪಾಲಿಟಿನ್ ನಗರವಾಗಿದೆ. ಕೆಂಪೇಗೌಡರು ‌ರೂಪಿಸಿದ ಈ ಬೆಂಗಳೂರು ನೋಡಲು‌ ತುಂಬಾ ಸುಂದರವಾಗಿದೆ. ಈ ನಗರ ತಂತ್ರಜ್ಞಾನದ ಲಾಂಛನವಾಗಿದೆ. ಇಲ್ಲಿರುವಷ್ಟು ಸಾರ್ವಜನಿಕ ಮತ್ತು …

Read More »