ಬೆಳಗಾವಿ: ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಬಾಲಕಿ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ಉಡುಪಿ ಮೂಲದವರಾದ, ಕೆಲ ವರ್ಷಗಳಿಂದ ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ವಾಸವಾಗಿದ್ದ ವಿದ್ಯಾಶ್ರೀ ಹೆಗಡೆ (10) ಮೃತಪಟ್ಟ ಬಾಲಕಿ. ಗುರುವಾರ ಬೆಳಿಗ್ಗೆ ಮಹಡಿ ಮೇಲೆ ಹತ್ತಿ ಹೂವು ಕೀಳಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಳು. ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಇಲ್ಲಿನ ಮುಸ್ಲಿಂ ಸಮುದಾಯದ ಕೆಲವರು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಸೇರಿದ್ದರು. …
Read More »ಸಿದ್ದರಾಮೋತ್ಸವದಲ್ಲಿ ಮಿಸ್ಸಿಂಗ್ ಆಗಿದ್ದ ಜಮಖಂಡಿ ವ್ಯಕ್ತಿ ಹುಬ್ಬಳ್ಳಿಯಲ್ಲಿ ಕೊನೆಗೂ ಪತ್ತೆ! ನಿಜವಾಯ್ತು ಸಿದ್ದು ‘ಭವಿಷ್ಯ’
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಗಲಕೋಟೆಯ ಗಿರಿಮಲ್ಲ ಖಂಡೇಕರ್ ಎಂಬುವವರು ಕೊನೆಗೂ ಒಂದೂವರೆ ತಿಂಗಳ ಬಳಿಕ ಕೊನೆಗೂ ಪತ್ತೆಯಾಗಿದ್ದಾರೆ. ಜಮಖಂಡಿ ತಾಲೂಕಿನ ಅಡಿಹುಡಿ ಗ್ರಾಮದ ನಿವಾಸಿ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಅಗಸ್ಟ್ 2 ರಂದು ಗ್ರಾಮಸ್ಥರ ಜತೆಗೆ ಇವರು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿರಲಿಲ್ಲ. ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದ ಇವರು ವಾಪಸಾಗದೇ ಮನೆಯವರೆಲ್ಲರೂ ಚಿಂತೆಗೀಡಾಗಿದ್ದರು. ‘ದುಡ್ಡಿನ ಆಮಿಷ …
Read More »ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್
ಬೆಂಗಳೂರು ಗ್ರಾಮಾಂತರ: ಬಸ್ಗಾಗಿ ಕಾಯುತ್ತ ನಿಂತಿದ್ದ ಅಜ್ಜಿಯೊಬ್ಬರ ಕೊರಳಿಗೆ ಕೈಹಾಕಿ ಮಾಂಗಲ್ಯ ಸರ ಕಿತ್ತುಕೊಳ್ಳಲು ಹೋದ ಸರಗಳ್ಳಿಯೊಬ್ಬಳು ಗಟ್ಟಿಗಿತ್ತಿ ಅಜ್ಜಿಯ ಬಿಗಿಪಟ್ಟಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದಾಳೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಧುರೆ ಹೋಬಳಿ ಕನಸವಾಡಿಯಲ್ಲಿ ಗುರುವಾರ ಈ ಪ್ರಕರಣ ನಡೆದಿದ್ದು, ಸರಗಳ್ಳಿ ಈಗ ದೊಡ್ಡಬೆಳವಂಗಲ ಠಾಣೆ ಪೊಲೀಸರ ಅತಿಥಿಯಾಗಿದ್ದಾಳೆ. ಸರ ನಾಲ್ಕೈದು ತುಂಡಾದರೂ ಒಂದೂ ತುಂಡು ಕೂಡ ಕಳ್ಳಿಯ ಪಾಲಾಗದಂತೆ ನೋಡಿಕೊಂಡ ಅಜ್ಜಿ ಎದೆಗಾರಿಕೆಗೆ ಹಾಗೂ ಸಮಯಪ್ರಜ್ಞೆಗೆ ಪೊಲೀಸರು ಸೆಲ್ಯೂಟ್ ಹೊಡೆದಿದ್ದಾರೆ. ಏನಿದು …
Read More »ಶಿಕ್ಷಕರನ್ನು ನೇಮಿಸದಿದ್ದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಿ: BJP ಶಾಸಕ ರಾಜುಗೌಡ ಆಗ್ರಹ
ಬೆಂಗಳೂರು, ಸೆ. 15: ‘ಕಲ್ಯಾಣ ಕರ್ನಾಟಕ(ಹೈ.ಕ) ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಕೂಡಲೇ ನೇಮಕ ಮಾಡಬೇಕು. ಇಲ್ಲವಾದರೆ ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡುವ ವ್ಯವಸ್ಥೆಯನ್ನಾದರೂ ತರಬೇಕು’ ಎಂದು ಸರಕಾರದ ವಿರುದ್ಧ ಆಡಳಿತ ಪಕ್ಷದ ಸದಸ್ಯ ನರಸಿಂಹ ನಾಯಕ್(ರಾಜುಗೌಡ) ಆಗ್ರಹಿಸಿದ ಪ್ರಸಂಗ ನಡೆಯಿತು. ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಶಿಕ್ಷಕರ ಕೊರತೆ ವಿಷಯ ಪ್ರಸ್ತಾಪಿಸಿದ ಅವರು, ‘ರಾಜ್ಯದ ಇತರೆ ಕಡೆಗಳಲ್ಲಿ 16 ಮಕ್ಕಳಿಗೆ ಒಬ್ಬರು ಶಿಕ್ಷಕರಿದ್ದರೆ, ಹೈಕ …
Read More »ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …
Read More »ದೇಶದ ಆಂತರಿಕ ಭದ್ರತೆಗೆ ಧಕ್ಕೆ ತರುವ ಕೃತ್ಯ: ಐವರು ಆರೋಪಿಗಳ ಬಂಧನ
ಬೆಂಗಳೂರು: ಅಂತರರಾಷ್ಟ್ರೀಯ ಮೊಬೈಲ್ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ವಂಚಿಸುತ್ತಿದ್ದ ಕೇರಳದ ಐವರು ಆರೋಪಿಗಳನ್ನು ನಗರದ ಸಿಸಿಬಿ ಹಾಗೂ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಬುಧವಾರ ಬಂಧಿಸಿದ್ದಾರೆ. ಕೇರಳದ ದಿನೇಶ್ ಪಾವೂರ್, ಕೆ.ಪಿ.ವಿಪಿನ್, ಸುಭಾಷ್, ಬೆಜಿನ್ ಜೋಸೆಫ್, ಷಮದ್ ಷಹಜನ್ ಬಂಧಿತರು. ಕೇಂದ್ರ ಸರ್ಕಾರದ ದೂರ ಸಂಪರ್ಕ ಇಲಾಖೆಯ ಮಾಹಿತಿ ಆಧರಿಸಿ ನಗರದ ಕೋರಮಂಗಲ, ಮೈಕೋ ಲೇಔಟ್ ಹಾಗೂ ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ …
Read More »ಅಭಯ್ ಪಾಟೀಲ್ ಸುಳ್ಳು ಕೇಸ್ನಲ್ಲಿ ನನ್ನ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ: ಸುಜೀತ್ ಮುಳಗುಂದ ಆರೋಪ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಖೊಟ್ಟಿ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುವ ಪ್ರಯತ್ನ ನಡೆಸಿದ್ದಾರೆ. ಹೀಗಾಗಿ ನನಗೆ ಸೂಕ್ತ ರಕ್ಷಣೆ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಹೌದು 2012ರಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾನೂನು ಬಾಹಿರವಾಗಿ ಆಸ್ತಿ ಗಳಿಸಿದ ಕುರಿತು ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ದೂರು ನೀಡಿದ್ದಾರೆ. ಇದರಿಂದ ಶಾಸಕ ಅಭಯ್ ಪಾಟೀಲ್ ಸುಮಾರು ಬಾರಿ …
Read More »ಬೆಳಗಾವಿಯಲ್ಲಿ ಬಿತ್ತು ಮತ್ತೊಂದು ಮರ: ಹಲವು ವಾಹನಗಳು ಜಖಂ
ಬೆಳಗಾವಿಯ ಆರ್ಟಿಓ ಸರ್ಕಲ್ ಬಳಿ ಮರ ಬಿದ್ದು ಯುವಕನ ಬಲಿ ಪಡೆದ ಬೆನ್ನಲ್ಲಿಯೇ ಮತ್ತೊಂದು ಮರ ಬಿದ್ದಿರುವ ಘಟನೆ ನಡೆದಿದೆ. ಈ ವೇಳೆ ಹಲವು ವಾಹನಗಳು ಜಖಂಗೊಂಡಿವೆ. ಬೆಳಗಾವಿಯ ಮಾರ್ಕೆಟ್ ಪೆÇಲೀಸ್ ಠಾಣೆ ಹಾಗೂ ಅರಣ್ಯ ಇಲಾಖೆ ಕಚೇರಿ ಬಳಿಯೇ ಬೃಹದಾಕಾರದ ಮರ ಉರುಳಿ ಇನ್ನೊವಾ ವಾಹನ ಸೇರಿದಂತೆ ಇತರ ವಾಹನಗಳು ಜಖಂಗೊಂಡಿವೆ. ಎರಡು ರಿಕ್ಷಾ ಹಾಗೂ ಒಂದು ಇನ್ನೊವಾ ವಾಹನ ಮರದ ಬುಡದಲ್ಲಿ ಸಿಲುಕಿವೆ. ಈ ಘಟನೆಯಲ್ಲಿ ಯಾವುದೇ …
Read More »ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ
ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್ಐ(ಕಾ&ಸು) ಹಾರೂಗೇರಿ ಪೊಲೀಸ್ …
Read More »ಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಕೊಡಬೇಕು: ಯತ್ನಾಳ
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ʻಕೇಂದ್ರೀಯ ಸಂಸದೀಯ ಸದಸ್ಯ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡಬೇಕುʼ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ‘ಮಾಜಿ ಸಿಎಂ ಬಿಎಸ್ ವೈ ವಿರುದ್ಧ ಎಫ್ಐಆರ್ ಗೆ ಕೋರ್ಟ್ ಆದೇಶ ನೀಡಿದ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ ಕೆ ಆಡ್ವಾಣಿ, ವಾಜಪೇಯಿಗಿಂತ ಡೊಡ್ಡವ್ರಾ ಅವರು? ಎಲ್ ಕೆ …
Read More »
Laxmi News 24×7