ಗೋಕಾಕ : ಗೋಕಾಕ ತಾಲೂಕಿನಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು ದಿನಾಂಕ:-15-09-2022 ರಂದು ಪಶು ಆಸ್ಪತ್ರೆ ಗೋಕಾಕನಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ ರವರು ಕಾರ್ಯಕ್ರಮದ ಕುರಿತು ಮಾತನಾಡಿ ರೇಬೀಸ್ ರೋಗ ಪ್ರಾಣಿಜನ್ಯ ರೋಗವಾಗಿದ್ದು ಜಾನುವಾರುಗಳಿಂದ ಜಾನುವಾರುಗಳಿಗೆ, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದ್ದು, …
Read More »ಇದೇ ಅಧಿವೇಶನದಲ್ಲೇ ದಾಖಲೆ ಬಹಿರಂಗ : ‘ಒತ್ತುವರಿ ಬಾಂಬ್’ ಸಿಡಿಸಿದ ಸಚಿವ ಅಶೋಕ್
ಬೆಂಗಳೂರು,ಸೆ.15-ರಾಜಧಾನಿ ಬೆಂಗಳೂರಿನಲ್ಲಿ ಕಾನೂನು ಬಾಹಿರವಾಗಿ ಯಾರ್ಯಾರು ಕೆರೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಇದೇ ಅಧಿವೇಶನದಲ್ಲೇ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್.ಅಶೋಕ್ ಬಾಂಬ್ ಸಿಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಪ್ಪು ಮಾಡಿದ್ದಾರೆಯೇ , ಇಲ್ಲ ನಾನು ತಪ್ಪು ಮಾಡಿದ್ದೇನೆಯೇ ಅಥವಾ ನಮ್ಮ ಸಂಪುಟ ಸಹೋದ್ಯೋಗಿಗಳು ಮಾಡಿದ್ದಾರೆಯೇ ಎಂಬುದರ ಕುರಿತು ಯಾರ್ಯಾರು ಕೆರೆಗಳನ್ನು ನುಂಗಿ ನೀರು ಕುಡಿದಿದ್ದಾರೋ ಅವರೆಲ್ಲರ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು. ಸುದ್ದಿಗಾರರೊಂದಿಗೆ …
Read More »ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ, ಉದ್ಘಾಟನೆಗೆ ರಾಷ್ಟ್ರಪತಿ, ಮೆರವಣಿಗೆಗೆ ಮೋದಿ
ಮೈಸೂರು: ಈ ಬಾರಿಯ ನಾಡಹಬ್ಬ ದಸರಾ (Mysuru Dasara) ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ದಸರಾ ಇತಿಹಾಸದಲ್ಲೇ ಈ ಬಾರಿಯ ದಸರಾ ಅತ್ಯಂತ ಮಹತ್ವದ್ದಾಗಲಿದೆ. ದಸರಾ ಇತಿಹಾಸ ಪುಟಗಳಲ್ಲಿ ಈ ಬಾರಿಯ ದಸರಾ ಪ್ರಮುಖ ಸ್ಥಾನ ಪಡೆಯಲಿದೆ. ಹೌದು, ನಾಡಹಬ್ಬ ದಸರಾ ಸೆಪ್ಟೆಂಬರ್ 26 ರಿಂದ ಆರಂಭವಾಗಲಿದೆ. ದಸರಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳು (Draupadi Murmu) ದಸರಾ ಉದ್ಘಾಟಿಸಲಿದ್ದಾರೆ. ಇಷ್ಟು ವರ್ಷ ನಾಡಿನ ಹಿರಿಯ ಸಾಹಿತಿಗಳು, ಸ್ವಾಮೀಜಿಗಳು, ವಿಚಾರವಾದಿಗಳು, ನಾಡು …
Read More »B.I.M.S. ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಣೆ
ಇಂದು ಸೆಪ್ಟೆಂಬರ್ 15 ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಹಿನ್ನೆಲೆ ಬೆಳಗಾವಿಯಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವನ್ನು ಆಚರಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕ್ರಿಯಾತ್ಮಕ ಕೆಲಸಗಳ ಮೂಲಕ ಭರವಸೆಯನ್ನು ಮೂಡಿಸೋಣ ಎಂಬ ಘೋಷ್ಯವಾಕ್ಯದಡಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯನ್ನು ಬಿಮ್ಸ ಆಸ್ಪತ್ರೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ …
Read More »ಮದ್ಯದ ಅಮಲಿನಲ್ಲಿ ಹಾವು ಹಿಡಿದ ವ್ಯಕ್ತಿ..
ಬೆಳಗಾವಿ: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಎಂಟು ಅಡಿ ಉದ್ದದ ಹಾವನ್ನು ಹಿಡಿದಿರುವ ಘಟನೆ ಜಿಲ್ಲೆಯ ಫಾಲಬಾವಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಹಾವು ನಾಲ್ಕು ಬಾರಿ ಕಚ್ಚಿದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಪಾಲಭಾವಿ ಸೊನ್ನದ್ ತೋಟದ ಅಂಗನವಾಡಿಯಲ್ಲಿ ಕಾಣಿಸಿಕೊಂಡ ಹಾವನ್ನು ಮದ್ಯದ ಅಮಲಿನಲ್ಲಿದ್ದ ರಮೇಶ್ ಬಾಗಡೆ ಎಂಬುವರು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಯಾವುದೇ ಮುಂಜಾಗ್ರತ ಕ್ರಮ ಅನುಸರಿಸದೇ ಇರುವುದರಿಂದ ರಮೇಶ್ ಅವರಗೆ ಮುಖ, ಕೆನ್ನೆ. …
Read More »ಬಸ್- ಲಾರಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿತು ಚಾಲಕನ ಸಮಯ ಪ್ರಜ್ಞೆ
ರಾಯಚೂರು: ಸಾರಿಗೆ ಬಸ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದ್ದು, ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಸ್ವಲ್ಪದಲ್ಲಿಯೇ ಭಾರಿ ಅನಾಹುತವೊಂದು ತಪ್ಪಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಪಲ್ಟಿಯಾಗಿ ಲಾರಿ ಕಂದಕಕ್ಕೆ ಉರುಳಿದೆ. ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಸ್ತೆಗೆ ಅಡ್ಡಲಾಗಿ ಸಾರಿಗೆ ಬಸ್ ನಿಂತ ಹಿನ್ನೆಲೆಯಲ್ಲಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ …
Read More »ವಿಮಾ ಕಂಪನಿಗಳನ್ನೂ ಹೈರಾಣಗೊಳಿಸಿದೆ. ಮಳೆ
ಬೆಂಗಳೂರು, ಸೆ. 15: ನಗರದಲ್ಲಿ ಕೆಲ ದಿನಗಳ ಹಿಂದೆ ಸುರಿದ ಮಹಾಮಳೆ ಮತ್ತು ಪ್ರವಾಹ ಕೆಲ ಪ್ರದೇಶಗಳಲ್ಲಿ ಜನಜೀವನವನ್ನು ಅಲುಗಾಡಿಸಿದೆ. ದೊಡ್ಡ ದೊಡ್ಡ ಲೇಔಟ್ಗಳಲ್ಲಿ ಐಷಾರಾಮಿ ಬಂಗಲೆಯಲ್ಲಿ ವಾಸಿಸುತ್ತಿದ್ದ ಶ್ರೀಮಂತರೂ ನಲುಗಿ ಹೋಗಿದ್ದರು. ಎತ್ತರದ ಕಟ್ಟಡದಿಂದ ನಿಂತು ನೋಡಿದರೆ ಇಡೀ ಪ್ರದೇಶವೇ ಕೆರೆ ಎಂಬಂತೆ ಭಾಸವಾಗುತ್ತಿತ್ತು ಆವತ್ತಿನ ದಿನಗಳ ದೃಶ್ಯ. ವಿಲ್ಲಾಗಳ ಒಳಗೆ ನೀರು ನುಗ್ಗಿದ್ದು, ಐಷಾರಾಮಿ ಕಾರುಗಳು ನೀರಿನಲ್ಲಿ ಮುಳುಗಿಹೋಗಿದ್ದು, ಇವೆಲ್ಲವೂ ರಾಷ್ಟ್ರಾದ್ಯಂತ ಗಮನ ಸೆಳೆಯಿತು. ಐಟಿ …
Read More »ಬಿಎಸ್ವೈ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ
ಬೆಂಗಳೂರು: ‘ಬಿಡಿಎ ವಸತಿ ಯೋಜನೆ ಅನುಷ್ಠಾನದಲ್ಲಿ ಲಂಚ ಪಡೆದಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿರುವ ಖಾಸಗಿ ದೂರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಬುಧವಾರ ವಿಚಾರಣೆ ನಡೆಸಿ, ‘ಆರೋಪಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಬೇಕು’ ಎಂದು ಆದೇಶಿಸಿ ವಿಚಾರಣೆ ಮುಂದೂಡಿದರು. ಪ್ರಕರಣವೇನು?: ಬಿಡಿಎ ಗುತ್ತಿಗೆದಾರ ಸೇರಿದಂತೆ …
Read More »ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ; ಚೆನ್ನೈ ಆಸ್ಪತ್ರೆಗೆ ದಾಖಲು
ಬೆಳಗಾವಿ: ವಿಧಾನಸಭೆ ಉಪಸಭಾಪತಿ, ಸವದತ್ತಿ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಕೆಲ ದಿನಗಳಿಂಸ ಏರುಪೇರು ಆಗಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸುಮಾರು 15-20 ದಿನಗಳಿಂದ ಆನಂದ ಮಾಮನಿ ಅವರ ಆರೋಗ್ಯ ಸರಿ ಇಲ್ಲ. ಹೀಗಾಗಿ ಇತ್ತೀಚೆಗೆ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಮಾಮನಿ ಕಂಡು ಬಂದಿಲ್ಲ. ಅನಾರೋಗ್ಯದಿಂದ ಬಳಲುತ್ತಿರುವ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 5ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೂಡಲೇ ಅಲ್ಲಿಂದ ವಾಪಸ್ …
Read More »ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರ ಧರ್ಮದೇಟು
ಕಳ್ಳತನಕ್ಕೆ ಬಂದಿದ್ದ ಕಳ್ಳನಿಗೆ ಸಾರ್ವಜನಿಕರು ಧರ್ಮದೇಟು ಪೊಲೀಸರಿಗೆ ಒಪ್ಪಿಸಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಶಾಲೆಯಲ್ಲಿ ನಡೆಯುತ್ತಿದ್ದ ಪ್ರತಿಭಾ ಕಾರಂಜಿಯಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ್ದ ಆಗ ಅನುಮಾನಗೊಂಡ ಶಾಲಾ ಶಿಕ್ಷಕರು ವಿಚಾರಿಸಿದಾಗ ಅಸಂಬದ್ಧ ಹೇಳಿಕೆ ನೀಡಿದ್ದಾನೆ. ಆಗ ಸಾರ್ವಜನಿಕರು ಕಳ್ಳನಿಗೆ ಧರ್ಮದೇಟು ನೀಡಿದ ಬಳಿಕಕಳ್ಳತನ ಮಾಡಲು ಬಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಹೈದರಾಬಾದ್ ಮೂಲದ ಸೋಮನಾಥ ಎಂಬ ಕಳ್ಳನು ವಿಜಯಪುರ ನಗರದ ಗ್ಯಾಂಗ್ ಬೌಡಿಯಲ್ಲಿ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಪ್ರತಿಭಾ ಕಾರಂಜಿ ನಡೆಯುತ್ತಿತ್ತು.
Read More »
Laxmi News 24×7