Breaking News

ಜಿಲ್ಲೆ

ಬೆಳಗಾವಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪ್ರಸ್ತುತ ಸಾಮಾಜಿಕ ಪರಿಸ್ಥಿತಿಯಲ್ಲಿರುವ ಮಠಗಳ ಪೀಠಾಧಿಪತಿಗಳು ಐತಿಹಾಸಿಕ ಶ್ರೇಷ್ಠ ಗುರುವರ್ಯ ಬ್ರಹ್ಮಶ್ರೀ ನಾರಾಯಣ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕರಾದ ಗಜಾನನ ನಾಯ್ಕ ಅಭಿಪ್ರಾಯಪಟ್ಟರು. ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಇಂದು ಶನಿವಾರ ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜಯಂತ್ಯೋತ್ಸವ-2022 …

Read More »

ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ!

ಬೆಳಗಾವಿ :ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ! ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ ‘ಸ್ವಾವಲಂಬಿ’ ವೆಬ್​ಸೈಟ್ ವರದಾನವಾಗಿದೆ. ಈ ವೆಬ್​ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು. …

Read More »

ಜನರ ಕಷ್ಟಕ್ಕೆ ಸ್ಪಂದಿಸುವುದು ಜನಸ್ಪಂದನ, ಕಾರ್ಯಕ್ರಮ ಮಾಡುವುದಲ್ಲ: ಸಿದ್ದರಾಮಯ್ಯ ಟೀಕೆ

ಬಾಗಲಕೋಟೆ, ಸೆಪ್ಟೆಂಬರ್ 10: ಜನಸ್ಪಂದನ ಅಂದರೆ ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು, ರಾಜ್ಯ ಸರಕಾರ ಜನರ ಕಷ್ಟ ಸುಖಗಳಿಗೆ ನೆರವಾಗುತ್ತಿದ್ದಾರಾ? ಮಳೆ ಬಂದು ಹಲವು ಕಡೆ ಪ್ರವಾಹ ಉಂಟಾಗಿದೆ. ಬೆಂಗಳೂರು ಸೇರಿ ಹಲವು ಜಿಲ್ಲೆಗಳು ಹಾಳಾಗಿವೆ, ಮನೆಗಳು ಕುಸಿದಿವೆ, ರೈತರ ಜಮೀನು ಹಾಳಾಗಿವೆ ಅವರಿಗೆ ಪರಿಹಾರ ಕೊಡದೇ ಯಾವ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡರು.   ಜಿಲ್ಲೆಯಲ್ಲಿ ಪ್ರವಾಹದ ಸಮೀಕ್ಷೆಗೆ ಆಗಮಿಸಿದ್ದ ಮಾಜಿ ಸಿಎಂ ಮಾಧ್ಯಮದವರೊಂದಿಗೆ …

Read More »

ಹಾನಿ ಪರಿಶೀಲನೆ: ಕೇಂದ್ರ ತಂಡಕ್ಕೆ ಹಾನಿ ಮನವರಿಕೆ: ಡಿಸಿ ನಿತೇಶ್ ಪಾಟೀಲ್

ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಕೇಂದ್ರ ನೆರೆ ಅಧ್ಯಯನ ತಂಡವು ಶನಿವಾರ(ಸೆ.10) ಪರಿಶೀಲನೆ ನಡೆಸಿತು. ಕೇಂದ್ರ ಜಲ ಆಯೋಗದ ಜಲಶಕ್ತಿ ಸಚಿವಾಲಯದ ನಿರ್ದೇಶಕರಾದ ಅಶೋಕ ಕುಮಾರ್ ವಿ. ಅವರ ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ಧಾರಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ವಿ.ವಿ.ಶಾಸ್ತ್ರಿ ಹಾಗೂ ಕರ್ನಾಟಕ ‌ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹಿರಿಯ ಸಲಹೆಗಾರರಾದ ಡಾ.ಜಿ.ಎಸ್.ಶ್ರೀನಿವಾಸ್ ರೆಡ್ಡಿ ಅವರು ಜತೆಗಿದ್ದರು. ಬೆಳಗಾವಿಯಿಂದ ಪ್ರವಾಸ …

Read More »

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವಕ್ಕೆ ತೆರೆ,

ಕುಂದಾನಗರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಗಣೇಶೋತ್ಸವಕ್ಕೆ ತೆರೆ ಬಿದ್ದಿದ್ದು. ನಿರಂತರವಾಗಿ 25 ಗಂಟೆಗೂ ಹೆಚ್ಚು ಕಾಲ ಭವ್ಯ ಮೆರವಣಿಗೆ ಮೂಲಕ ಸಾರ್ವಜನಿಕ ಗಣೇಶ ಮಂಡಳಿಗಳ ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನೆರವೇರಿಸಲಾಯಿತು. ಈ ವೇಳೆ ಲಕ್ಷಾಂತರ ಜನರು ಈ ಅದ್ಭುತ ಕ್ಷಣಕ್ಕೆ ಸಾಕ್ಷಿಯಾದರು. ಹೌದು ಬೆಳಗಾವಿಯ ಗಣೇಶೋತ್ಸವಕ್ಕೆ ತನ್ನದೇಯಾದ ಐತಿಹಾಸಿಕ ಹಿನ್ನೆಲೆಯಿದೆ. ಪ್ರತಿ ವರ್ಷವೂ ಅತ್ಯಂತ ವಿಜೃಂಭಣೆಯಿಂದ ಇಲ್ಲಿ ಗಣೇಶೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಕೊರೊನಾ ಎರಡು ವರ್ಷದ ಬಳಿಕ ಈ ವರ್ಷ ಹೆಚ್ಚಿನ …

Read More »

ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು? ಇಲ್ಲಿದೆ ಭಾಷಣದ ಹೈಲೈಟ್ಸ್

ಬೆಂಗಳೂರು ಗ್ರಾಮಾಂತರ: ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಇಂದು ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನ ಸಮಾವೇಶವನ್ನು ಮಾಡುತ್ತಿದೆ. ಈ ನಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತ ಹಿಂದಿನ ಕಾಂಗ್ರೆಸ್‌ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ನಾವೇ ಮತ್ತೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಧಮ್‌ ಇದ್ರೆ ತಡೆಯಿರಿ ಅಂತ ಕಾಂಗ್ರೆಸ್‌ಗೆ ಸವಾಲ್‌ ಹಾಕಿದರು. …

Read More »

KSRTC ಸಿಬ್ಬಂದಿ’ಗಳಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ‘ಪ್ರತಿ ತಿಂಗಳು 1ನೇ ತಾರೀಕು ವೇತನ ಪಾವತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ( Karnataka State Road Transport Corporation -KSRTC) ಸಮಸ್ತ ಸಿಬ್ಬಂದಿಗಳಿಗೆ ಅಕ್ಟೋಬರ್ 2022ರಿಂದ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿ ಮಾಡುವ ಉಪ ಕ್ರಮವನ್ನು ಜಾರಿಗೆ ತರಲಾಗುತ್ತಿದೆ. ಹೀಗಾಗಿ ನಿಗಮದ ಸಮಸ್ತ ಸಿಬ್ಬಂದಿಗಳಿಗೆ ಇನ್ಮುಂದೆ ಪ್ರತಿ ತಿಂಗಳ 1ನೇ ತಾರೀಕಿನಂದೇ ವೇತನ ಪಾವತಿಯಾಗಲಿದೆ.   ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ …

Read More »

ಅಪಘಾತವಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ತೋರಿದ ವಿಜಯ್ ಮೋರೆ

ಬೆಳಗಾವಿಯ ಮಚ್ಛೆಯ ಕೆಎಸ್‍ಆರ್‍ಪಿ ಗ್ರೌಂಡ್ ಬಳಿ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಸಮಾಜ ಸೇವಕ ಹಾಗೂ ಮಾಜಿ ಮಹಾಪೌರರಾದ ವಿಜಯ್ ಮೋರೆ ಹಾಗೂ ಮಾರಿಯಾ ಮೋರೆ ಮಾನವೀಯತೆ ಮೆರೆದಿದ್ದಾರೆ. ಹೌದು ಇಂದು ಬೆಳಗಿನ ಜಾವ ಬೆಳಗಾವಿಯ ಮಚ್ಛೆಯ ಕೆಎಸ್‍ಆರ್‍ಪಿ ಗ್ರೌಂಡ್ ಬಳಿ ಯುವಕನೋರ್ವ ಅಪಘಾತಕ್ಕೀಡಾಗಿ ನರಳಾಡುತ್ತಿದ್ದ. ಈ ವೇಳೆ ಆತನ ಪರೀಸ್ಥಿತಿ ಗಂಭೀರವಾಗಿತ್ತು. ಈ ವೇಳೆ ಯಾರೂ ಆತನ ಸಹಾಯಕ್ಕಾಗಿ ಬರಲಿಲ್ಲ. ಈ ವೇಳೆ ಮಾಜಿ ಮಹಾಪೌರ ಹಾಗೂ …

Read More »

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.

ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.   ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …

Read More »

ಬಟ್ಟೆಯಲ್ಲೇ ಶೌಚ ಮಾಡಿದ್ದಕ್ಕೆ ಬಾಲಕನ ಮೇಲೆ ಬಿಸಿ ನೀರು ಎರಚಿದ ಶಿಕ್ಷಕ, ಮಗುವಿನ ಸ್ಥಿತಿ ಗಂಭೀರ!

ರಾಯಚೂರು(ಸೆ.09): ಬಾಲಕನೊಬ್ಬ ಶಾಲಾ ಸಮವಸ್ತ್ರದಲ್ಲಿ (School Uniform) ಮಲವಿಸರ್ಜನೆ ಮಾಡಿರುವ ವಿಚಾರವಾಗಿ ಕೋಪಗೊಂಡ ಶಿಕ್ಷಕನೊಬ್ಬ ಮಗುವಿನ ಮೇಲೆ ಬಿಸಿನೀರು ಸುರಿದಿದ್ದಾನೆ. ಹೌದು ರಾಯಚೂರು (Raichuru) ಜಿಲ್ಲೆ ಮಸ್ಕಿ ತಾಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಘನಮಠೇಶ್ವರ ಗ್ರಾಮೀಣ ಸಂಸ್ಥೆಯ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಿಗೆಪ್ಪ ಎಂಬಾತನೇ ಈ ರಾಕ್ಷಸ ಕೃತ್ಯ ಮೆರೆದ ವ್ಯಕ್ತಿ. ಸದ್ಯ ಬಿಸಿ ನೀರಿನ ದಾಳಿಗೊಳಗಾದ 2ನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಅಖಿತ್ ಸ್ಥಿತಿ ಗಂಭೀರವಾಗಿದೆ. …

Read More »