ಇಡೀ ರಾಜ್ಯದಲ್ಲಿ ಮಳೆ ನಿರ್ವಹಣೆಗೆ 300 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ 90 ವರ್ಷ ಆಗದಿರುವ ಮಳೆಯಾಗಿದೆ. ಇಡೀ ಬೆಂಗಳೂರು ಮುಳುಗಿಲ್ಲ. ಆ ರೀತಿ ಬಿಂಬಿಸುವ ಅವಶ್ಯಕತೆ ಇಲ್ಲ. ಬೆಂಗಳೂರಿನಲ್ಲಿ 8 ವಲಯಗಳಿವೆ. ಅವುಗಳಲ್ಲಿ 2 ವಲಯಗಳಲ್ಲಿ ತೊಂದರೆಯಾಗಿದೆ. ಅದರಲ್ಲಿ ಬೊಮ್ಮನಹಳ್ಳಿ ವಲಯ ಸಂಪೂರ್ಣ ನಿಯಂತ್ರಣದಲ್ಲಿದೆ. ಮತ್ತೊಂದು ವಲಯದಲ್ಲಿ 69 ಕೆರೆಗಳಿದ್ದು, …
Read More »ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ.: ಸಿಎಂ ಘೋಷಣೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುವೆ. ಅಕ್ಟೋಬರ್ನಲ್ಲಿ ನೂತನ ವೇತನ ಆಯೋಗ ರಚಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ಮಂಗಳವಾರ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನ ಉದ್ಘಾಟಿಸಿದ ಬಳಿಕ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ, ವೇತನ ಪರಿಷ್ಕರಣೆಗೆ ಸಂಬಂಧಿಸಿದ ಶಿಫಾರಸು ಹಾಗೂ ವರದಿ ಸಲ್ಲಿಸಲು ಈ ಆಯೋಗ ರಚಿಸಲಿದ್ದು, ನೌಕರರ ಇನ್ನುಳಿದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದರು. …
Read More »ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯಲ್ಲಿ 229 ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ 229 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್ ಬಿ ವೃಂದದಲ್ಲಿನ ಉಳಿಕೆ ಮೂಲ ವೃಂದದ ಸಹಾಯಕ ಅಭಿಯಂತರರು 129 ಹುದ್ದೆಗಳು ಮತ್ತು ಹೈದರಾಬಾದ್ ಕರ್ನಾಟಕ 59 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವ ಸಂಬಂಧ …
Read More »ಗೋಕಾಕ್ನಲ್ಲಿ ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು, ಬಾಣಂತಿಯ ರಕ್ಷಣೆಯೇ ರೋಚಕ!
ಬೆಳಗಾವಿ: ಗೋಕಾಕ್ ತಾಲೂಕು ಸೇರಿದಂತೆ ವಿವಿಧಡೆ ಭಾರಿ ಮಳೆ ಸುರಿಯುತ್ತಿದೆ. ರಣಮಳೆಯಿಂದ ಹಲವೆಡೆ ಪ್ರವಾಹ ಉಂಟಾಗಿದ್ದು ಹಲವರು ಸಿಲುಕಿಕೊಂಡಿದ್ದಾರೆ. ಇಂದು ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ ಪ್ರಸಂಗವೂ ಕೂಡ ಮಳೆಯ ಪ್ರಮಾಣಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಯುವಕರೆಲ್ಲ ಸೇರಿ ಹರಸಾಹಪಟ್ಟು ಹಸುಗೂಸು ಮತ್ತು ತಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಮನಮಿಡಿಯೂವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಗೋಕಾಕ್ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ …
Read More »ಕಳ್ಳತನ ಯತ್ನ ವಿಫಲ.. ಸಿಟ್ಟಿಗೆದ್ದ ಖದೀಮ ಅಂಗಡಿಯಲ್ಲಿ ಮಾಡಿದ್ದೇನು ಗೊತ್ತಾ?
ಬೆಂಗಳೂರು: ದಿನವಿಡೀ ಕಾದು ಯತ್ನಿಸಿದರೂ ಕನ್ನ ಹಾಕುವ ಪ್ಲಾನ್ ವಿಫಲವಾಗಿದ್ದಕ್ಕೆ ಸಿಟ್ಟಿಗೆದ್ದ ಕಳ್ಳನೊಬ್ಬ ಸಿಕ್ಕ ಸಿಕ್ಕ ವಸ್ತುಗಳನ್ನು ಕಿತ್ತೆಸೆದು ಪರಾರಿಯಾಗಿದ್ದಾನೆ. ಸೂಪರ್ ಮಾರ್ಕೆಟ್ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಖದೀಮನು ತನ್ನ ಪ್ರಯತ್ನ ಕೈಗೂಡದೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 27ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಜೆಯಿಂದಲೇ ಹೊಂಚು ಹಾಕಿ ರಾತ್ರಿ ಸೂಪರ್ ಮಾರ್ಕೆಟ್ ಒಂದಕ್ಕೆ ನುಗ್ಗಿದ್ದ ಖದೀಮ ಆ್ಯಕ್ಸೆಲ್ ಬ್ಲೇಡ್ ಬಳಸಿ ಕ್ಯಾಶ್ ಬಾಕ್ಸ್ …
Read More »ಬೆಂಗಳೂರಿನಲ್ಲಿ ಮಳೆಯ ಅವಾಂತರಕ್ಕೆ ಹಲವಾರು ರಸ್ತೆಗಳು ಜಲಾವೃತ
ಬೆಂಗಳೂರು: ಟ್ರಾಫಿಕ್ ಜಾಮ್ ಉಂಟಾದಾಗ ಸಂಚಾರಿ ಪೊಲೀಸರು ವಾಹನ ದಟ್ಟಣೆಯಾಗಿರುವ ಮಾರ್ಗದಲ್ಲಿ ಸಂಚಾರಿಸಬೇಡಿ ಎಂದು ಹೇಳುವುದು ಸರ್ವೇಸಾಮಾನ್ಯ. ಇಲ್ಲಿಯೂ ಸಹ ಟ್ರಾಫಿಕ್ ಪೊಲೀಸರು ಈ ಮಾರ್ಗಗಳಲ್ಲಿ ವಾಹನ ಚಲಾಯಿಸಬೇಡಿ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಬಾರಿ ಮನವಿ ಮಾಡುತ್ತಿರುವುದು ಟ್ರಾಫಿಕ್ ಜಾಮ್ ಕಾರಣಕ್ಕೆ ಅಲ್ಲ, ರಸ್ತೆಗಳು ಜಲಾವೃತ ಆಗಿದ್ದಕ್ಕಾಗಿ ಎನ್ನುತ್ತಿದ್ದಾರೆ. ಕಳೆದ ಒಂದು ವಾರದಿಂದ ಐಟಿ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಾಜಧಾನಿ ಥಂಡಾ …
Read More »ಬೆಂಗಳೂರಿನ ಈ ದುಸ್ಥಿತಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಾರ್ಭಟ ಜೋರಾಗಿದೆ. ದಾಖಲೆಯ ಮಳೆಗೆ ಮಹಾನಗರಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ, ಅವರ ಆಡಳಿತ ಅವಧಿಯಲ್ಲಿ ನಗರದ ಕೆರೆ ಒಳಭಾಗ, ಕರೆ ಸುತ್ತಲಿನ ನಿರ್ಬಂಧಿತ ಪ್ರದೇಶ ಹಾಗೂ ರಾಜಕಾಲುವೆಗಳ ಮೇಲೆ …
Read More »ಪಿಎಸ್ಐ ಹಗರಣ: 8 ದಿನ ಸಿಐಡಿ ಕಸ್ಟಡಿಗೆ ಅಮೃತ್ ಪಾಲ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ನಗರದ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಸಿಐಡಿ ಮನವಿ ಪುರಸ್ಕರಿಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಸೆ.12ರ ವರೆಗೆ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ …
Read More »ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …
Read More »ಸತತ ಮಳೆ: ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿತ
ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.
Read More »
Laxmi News 24×7