ಬೆಳಗಾವಿ: ಗೋಕಾಕ್ ತಾಲೂಕು ಸೇರಿದಂತೆ ವಿವಿಧಡೆ ಭಾರಿ ಮಳೆ ಸುರಿಯುತ್ತಿದೆ. ರಣಮಳೆಯಿಂದ ಹಲವೆಡೆ ಪ್ರವಾಹ ಉಂಟಾಗಿದ್ದು ಹಲವರು ಸಿಲುಕಿಕೊಂಡಿದ್ದಾರೆ. ಇಂದು ಪ್ರವಾಹದಲ್ಲಿ ಸಿಲುಕಿದ್ದ 12 ದಿನದ ಹಸುಗೂಸು ಮತ್ತು ಬಾಣಂತಿಯನ್ನು ರಕ್ಷಣೆ ಮಾಡಿದ ಪ್ರಸಂಗವೂ ಕೂಡ ಮಳೆಯ ಪ್ರಮಾಣಕ್ಕೆ ಸಾಕ್ಷಿಯಾಯಿತು. ಸ್ಥಳೀಯ ಯುವಕರೆಲ್ಲ ಸೇರಿ ಹರಸಾಹಪಟ್ಟು ಹಸುಗೂಸು ಮತ್ತು ತಾಯಿಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಮನಮಿಡಿಯೂವ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿದೆ. ಗೋಕಾಕ್ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ …
Read More »ಕಳ್ಳತನ ಯತ್ನ ವಿಫಲ.. ಸಿಟ್ಟಿಗೆದ್ದ ಖದೀಮ ಅಂಗಡಿಯಲ್ಲಿ ಮಾಡಿದ್ದೇನು ಗೊತ್ತಾ?
ಬೆಂಗಳೂರು: ದಿನವಿಡೀ ಕಾದು ಯತ್ನಿಸಿದರೂ ಕನ್ನ ಹಾಕುವ ಪ್ಲಾನ್ ವಿಫಲವಾಗಿದ್ದಕ್ಕೆ ಸಿಟ್ಟಿಗೆದ್ದ ಕಳ್ಳನೊಬ್ಬ ಸಿಕ್ಕ ಸಿಕ್ಕ ವಸ್ತುಗಳನ್ನು ಕಿತ್ತೆಸೆದು ಪರಾರಿಯಾಗಿದ್ದಾನೆ. ಸೂಪರ್ ಮಾರ್ಕೆಟ್ನಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಖದೀಮನು ತನ್ನ ಪ್ರಯತ್ನ ಕೈಗೂಡದೆ ಪರಾರಿಯಾಗಿರುವ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಆಗಸ್ಟ್ 27ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂಜೆಯಿಂದಲೇ ಹೊಂಚು ಹಾಕಿ ರಾತ್ರಿ ಸೂಪರ್ ಮಾರ್ಕೆಟ್ ಒಂದಕ್ಕೆ ನುಗ್ಗಿದ್ದ ಖದೀಮ ಆ್ಯಕ್ಸೆಲ್ ಬ್ಲೇಡ್ ಬಳಸಿ ಕ್ಯಾಶ್ ಬಾಕ್ಸ್ …
Read More »ಬೆಂಗಳೂರಿನಲ್ಲಿ ಮಳೆಯ ಅವಾಂತರಕ್ಕೆ ಹಲವಾರು ರಸ್ತೆಗಳು ಜಲಾವೃತ
ಬೆಂಗಳೂರು: ಟ್ರಾಫಿಕ್ ಜಾಮ್ ಉಂಟಾದಾಗ ಸಂಚಾರಿ ಪೊಲೀಸರು ವಾಹನ ದಟ್ಟಣೆಯಾಗಿರುವ ಮಾರ್ಗದಲ್ಲಿ ಸಂಚಾರಿಸಬೇಡಿ ಎಂದು ಹೇಳುವುದು ಸರ್ವೇಸಾಮಾನ್ಯ. ಇಲ್ಲಿಯೂ ಸಹ ಟ್ರಾಫಿಕ್ ಪೊಲೀಸರು ಈ ಮಾರ್ಗಗಳಲ್ಲಿ ವಾಹನ ಚಲಾಯಿಸಬೇಡಿ ಬದಲಾಗಿ ಪರ್ಯಾಯ ಮಾರ್ಗದಲ್ಲಿ ಸಂಚಾರ ನಡೆಸಿ ಎಂದು ಮನವಿ ಮಾಡುತ್ತಿದ್ದಾರೆ. ಈ ಬಾರಿ ಮನವಿ ಮಾಡುತ್ತಿರುವುದು ಟ್ರಾಫಿಕ್ ಜಾಮ್ ಕಾರಣಕ್ಕೆ ಅಲ್ಲ, ರಸ್ತೆಗಳು ಜಲಾವೃತ ಆಗಿದ್ದಕ್ಕಾಗಿ ಎನ್ನುತ್ತಿದ್ದಾರೆ. ಕಳೆದ ಒಂದು ವಾರದಿಂದ ಐಟಿ ಸಿಟಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ರಾಜಧಾನಿ ಥಂಡಾ …
Read More »ಬೆಂಗಳೂರಿನ ಈ ದುಸ್ಥಿತಿಗೆ ಕಾಂಗ್ರೆಸ್ ದುರಾಡಳಿತವೇ ಕಾರಣ: ಸಿಎಂ ಬೊಮ್ಮಾಯಿ
ಬೆಂಗಳೂರು: ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಮಳೆಯಾರ್ಭಟ ಜೋರಾಗಿದೆ. ದಾಖಲೆಯ ಮಳೆಗೆ ಮಹಾನಗರಿ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಈ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬೆಂಗಳೂರಿನಲ್ಲಿ ಈ ಸ್ಥಿತಿ ನಿರ್ಮಾಣಗೊಳ್ಳಲು ಹಿಂದಿನ ಕಾಂಗ್ರೆಸ್ ನೇರ ಕಾರಣ, ಅವರ ಆಡಳಿತ ಅವಧಿಯಲ್ಲಿ ನಗರದ ಕೆರೆ ಒಳಭಾಗ, ಕರೆ ಸುತ್ತಲಿನ ನಿರ್ಬಂಧಿತ ಪ್ರದೇಶ ಹಾಗೂ ರಾಜಕಾಲುವೆಗಳ ಮೇಲೆ …
Read More »ಪಿಎಸ್ಐ ಹಗರಣ: 8 ದಿನ ಸಿಐಡಿ ಕಸ್ಟಡಿಗೆ ಅಮೃತ್ ಪಾಲ್
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ಆರೋಪಿಯಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಅವರನ್ನು ಎಂಟು ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ನೀಡಿ ನಗರದ ಎಸಿಎಂಎಂ ನ್ಯಾಯಾಲಯ ಸೋಮವಾರ ಆದೇಶಿಸಿದೆ. ಸಿಐಡಿ ಮನವಿ ಪುರಸ್ಕರಿಸಿದ ಬೆಂಗಳೂರಿನ ಒಂದನೇ ಹೆಚ್ಚುವರಿ ಎಸಿಎಂಎಂ ನ್ಯಾಯಾಲಯವು ಸೆ.12ರ ವರೆಗೆ ಅಮೃತ್ ಪೌಲ್ ಅವರನ್ನು ಸಿಐಡಿ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ಪ್ರಕರಣದಲ್ಲಿ ಏಳನೇ ಆರೋಪಿಯಾಗಿರುವ …
Read More »ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ
ಬೆಳಗಾವಿ: ಹೈ ವೋಲ್ಟೇಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮನೆಯ ಮೇಲೆ ಸ್ಟೀಲ್ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ …
Read More »ಸತತ ಮಳೆ: ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿತ
ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.
Read More »ಮಠದ ಆವರಣದಲ್ಲೇ ನೇಣಿಗೆ ಶರಣಾದ ಮಡಿವಾಳೇಶ್ವರ ಮಠದ ಬಸವಸಿದ್ದಲಿಂಗ ಮಹಾಸ್ವಾಮೀಜಿ
ಬೈಲಹೊಂಗಲ : ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರಮಠದ ಪೀಠಾಧಿಪತಿ ಬಸವಸಿದ್ದಲಿಂಗ ಮಹಾಸ್ವಾಮೀಜಿ ಮಠದ ಆವರಣದಲ್ಲೇ ಸ್ವಾಮೀಜಿಗಳು ನೇಣಿಗೆ ಶರಣಾಗಿದ್ದಾರೆ. ಮುರಘಾಮಠದ ಶರಣರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಆಡಿಯೋದಲ್ಲಿ ಈ ಸ್ವಾಮೀಜಿಗಳ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನ್ನು ಕೇಳಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಸ್ಥಳಕ್ಕೆ ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಯು.ಎಚ್.ಸಾತೇನಹಳ್ಳಿ ಭೇಟಿ ನೀಡಿ ಪರಿಶಿಲಿಸುತ್ತಿದ್ದಾರೆ.
Read More »ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ
ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ …
Read More »ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!
ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …
Read More »
Laxmi News 24×7