Breaking News

ಜಿಲ್ಲೆ

ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು,

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್‌ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು.   ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು.   ಜೆಡಿಎಸ್ ಜಿಲ್ಲಾ …

Read More »

ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.

ಬೆಳಗಾವಿ : ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಸತತ ಮಳೆಗೆ ಬೆಳಗಾವಿ ಜನರ ಸ್ಥಿತಿ ಅಯೋ ಮಯವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಹಲವು ರಸ್ತೆಗಳು ಜಲಾವೃತವಾಗಿದೆ. ಉಜ್ವಲ ನಗರ, ಓಂಕಾರ ನಗರ, ಮಹಾಂತೇಶ ನಗರ ಬ್ರಿಡ್ಜ್ , ಬೆಳಗಾವಿ ನಗರ ಸೇರಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ. ಜಲಾವೃತಗೊಂಡ ರಸ್ತೆಯಲ್ಲಿ ಭಯದಲ್ಲೇ ಬೈಕ್ ಸವಾರರ ಸಂಚಾರ ಮಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆ ಕಲ್ಪಿಸದ ಬೆಳಗಾವಿ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

Read More »

ಬೆಳಗಾವಿನಗರದ ಜೀವನಾಡಿ ರಕ್ಕಸಕೊಪ್ಪ ಡ್ಯಾಂ ಭರ್ತಿ

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ (Maharashtra Western hills) ಧಾರಾಕಾರ ಮಳೆ (Rainfall) ಮುಂದುವರಿದಿದ್ದು, ಬೆಳಗಾವಿ ಜಿಲ್ಲೆಯ ನದಿಗಳು (Belagavi Rivers) ಮೈದುಂಬಿ ಹರಿಯುತ್ತಿವೆ. ಬೆಳಗಾವಿ ಜಿಲ್ಲೆಯ ಮಲಪ್ರಭಾ (Malaprabha), ಘಟಪ್ರಭಾ (Ghataprabha), ಮಾರ್ಕಂಡೇಯ (Markandeya) ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ‌.‌ ಇದೇ ರೀತಿ ಇನ್ನೂ ಹದಿನೈದು ದಿನಗಳ ಕಾಲ ಮಳೆ ಮುಂದುವರಿದರೆ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಲಿದೆ. ಸದ್ಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು …

Read More »

ಸಿ.ಎಂ. ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ ನಾನು ಆ ರೇಸ್‍ನಲ್ಲಿ ಇಲ್ಲ

ಮುಖ್ಯಮಂತ್ರಿ ಆಯ್ಕೆ ಚುನಾವಣೆ ಮುಗಿದ ಮೇಲೆ ನೋಡೋಣ, ಸದ್ಯಕ್ಕೆ ನಾನು ಸಿಎಂ ರೇಸ್‍ನಲ್ಲಿ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಹಾರೂಗೇರಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸೈಕಲ್ ಜಾಥಾ ಸಮಾರೋಪ ಸಮಾವೇಶದಲ್ಲಿ ಭಾಗಿಯಾಗಲು ಆಗಮಿಸಿದ್ದ ವೇಳೆ ಸಿದ್ದರಾಮಯ್ಯ ಸಿಎಂ ಆಗುವ ಇಂಗಿತ ವಿಚಾರಕ್ಕೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಚುನಾವಣೆ ಆದ ಮೇಲೆ ಮುಖ್ಯಮಂತ್ರಿಗಳ ಆಯ್ಕೆ ಆಗುತ್ತದೆ. ಸಧ್ಯಕ್ಕೆ ನಾನು ಸಿಎಂ ರೇಸ್‍ನಲ್ಲಿ ಇಲ್ಲ …

Read More »

ಕಮತನೂರ ಗೇಟ ಬಳಿ ದಾಳಿ ಮಾಡಿ 18.30 ಲಕ್ಷ ರೂಪಾಯಿ ಮೌಲ್ಯದ 280 ಬಾಕ್ಸ ಮದ್ಯವನ್ನು ವಶಕ್ಕೆ ಪಡೆದುಕೊಂಡ ಅಬಕಾರಿ ಅಧಿಕಾರಿಗಳು

ಗೋವಾ ರಾಜ್ಯದಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ವಿವಿಧ ಕಂಪನಿಯ 18.30 ಲಕ್ಷ ರೂಪಾಯಿ ಮೌಲ್ಯದ ಸಾರಾಯಿಯನ್ನು ಚಿಕ್ಕೋಡಿ ವಲಯದ ಅಬಕಾರಿ ಅಧಿಕಾರಿಗಳು ಲಾರಿ ಸಮೇತ ವಶಪಡಿಸಿಕೊಂಡಿದ್ದಾರೆ. ಹೌದು ಗೋವಾ ರಾಜ್ಯದಿಂದ ಅಂಬೋಲಿ ಮಾರ್ಗವಾಗಿ ಐಚರ್ ಲಾರಿಯೊಂದರಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ಹುಕ್ಕೇರಿ ತಾಲೂಕಿನ ಕಮತನೂರ ಗೇಟ ಬಳಿ ದಾಳಿ ಮಾಡಿದ ಅಬಕಾರಿ ಅಧಿಕಾರಿಗಳು 18.30 ಲಕ್ಷ ರೂಪಾಯಿ ಮೌಲ್ಯದ 280 ಬಾಕ್ಸ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಕ್ರಮ ಸಾರಾಯಿ …

Read More »

ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಎಲ್ಲರಿಗೂ ಮುಖ್ಯಮಂತ್ರಿ ಆಗುವ ಆಸೆ ಇರುತ್ತದೆ : ಮಾಧುಸ್ವಾಮಿ

ಅಥಣಿ (ಬೆಳಗಾವಿ): ಎಲ್ಲರಿಗೂ ಸಿಎಂ ಆಗೋಕೆ ಆಸೆ ಇರುತ್ತದೆ. ಸಿದ್ದರಾಮಯ್ಯ ಅವರಿಗೂ ಆಸೆಯಿದೆ. ಜನರು ಆಶೀರ್ವಾದ ಮಾಡಿದಾಗ ಮಾತ್ರ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ, ಇನ್ನೊಮ್ಮೆ ಸಿಎಂ ಆಗ್ಬೇಕು ಅಂತ ಆಸೆ ವ್ಯಕ್ತಪಡಿಸುತ್ತಿದ್ದಾರೆ. ಇದಕ್ಕೆ ಜನರು ತೀರ್ಮಾನ ಮಾಡಬೇಕೆಂದು ಎಂದು ಚಿಕ್ಕ ನೀರಾವರಿ ಹಾಗೂ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು.   ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ …

Read More »

ಹಿಡಕಲ್‌ ಡ್ಯಾಮ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿಯೊಬ್ಬನನ್ನು ಅಕ್ಕ-ಪಕ್ಕದ ಮನೆಯವರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ: ಹುಕ್ಕೇರಿ ತಾಲೂಕಿನ ಹಿಡಕಲ್‌ ಡ್ಯಾಮ್‌ನಲ್ಲಿ ಇಂದು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಡ್ಯಾಮ್‌ನಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿದ್ದ ಪರಶುರಾಮ ಹಲಕರ್ಣಿ (32) ಕೊಲೆಯಾದವರು. ಗ್ರಾಮದ ಆಂಜನೇಯ ಮಂದಿರದ ಹತ್ತಿರ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಮೂವರು ದುಷ್ಕರ್ಮಿಗಳು, ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ನಡೆದ ಕೆಲವು ಗಂಟೆಗಳ ನಂತರ ಆರೋಪಿ ಬಸವರಾಜ ಗಲಾಟೆ (30) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಇದಾದ ಕೆಲ ಹೊತ್ತಿನಲ್ಲೇ ಇನ್ನಿಬ್ಬರು ಆರೋಪಿಗಳಾದ ಮಂಜು ಪುಟಜಾನೆ (24) …

Read More »

ಮತ ಸಮರಕ್ಕೆ ಸಜ್ಜು: ಈಗ ಮೂರೂ ಪಕ್ಷಗಳ ಚಿತ್ತ ವಿಧಾನಸಭೆ ಚುನಾವಣೆಯತ್ತ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಒಂಭತ್ತು ತಿಂಗಳು ಮುನ್ನವೇ ಮೂರೂ ಪಕ್ಷಗಳು ಸಜ್ಜಾಗುತ್ತಿದ್ದು, ಸಮುದಾಯದ ಮತಗಳ ಕ್ರೋಡೀ ಕರಣ ಮತ್ತು ಯಾತ್ರೆಗಳ ಮೂಲಕ ಮತದಾರರ ಮನಗೆಲ್ಲಲು ಈಗಿನಿಂದಲೇ ಕಸರತ್ತು ಆರಂಭಿಸಿವೆ. ಸರಕಾರದ ಸಾಧನೆ ತಿಳಿಸಲು ಬಿಜೆಪಿ ಪ್ರವಾಸ, “ಘರ್‌ ಘರ್‌ ಪೆ ತಿರಂಗಾ’ ಯಾತ್ರೆ ಹಮ್ಮಿಕೊಂಡಿದೆ. ಕಾಂಗ್ರೆಸ್‌ “ಸ್ವಾತಂತ್ರ್ಯದ ಅಮೃತಮಹೋತ್ಸವ ನಡಿಗೆ’, ಆ ಬಳಿಕ “ಭಾರತ್‌ ಜೋಡೋ’ ಯಾತ್ರೆಗೆ ಸಿದ್ಧತೆ ನಡೆಸಿದೆ. ಈ ನಡುವೆ ಜೆಡಿಎಸ್‌ “ಜನತಾ ಜಲಧಾರೆ’, “ಜನತಾಮಿತ್ರ’ ಮುಗಿಸಿ ಆಗಸ್ಟ್‌ನಲ್ಲಿ …

Read More »

ರೈಲು ಢಿಕ್ಕಿ ಹೊಡೆದು 96 ಕುರಿಗಳ ದಾರುಣ ಸಾವು : ರೈಲು ಹಳಿ ದಾಟುವ ವೇಳೆ ಘಟನೆ

ಕೊಲ್ಹಾರ (ವಿಜಯಪುರ) : ಜಿಲ್ಲೆಯ ಕೊಲ್ಹಾರ ತಾಲೂಕಿಕ ಮಸೂತಿ-ಕೂಡಗಿ ಮಧ್ಯೆ ಗದಗ-ವಿಜಯಪೂರ ರೈಲ್ವೆ ಮಾರ್ಗದಲ್ಲಿ ರೈಲು ಡಿಕ್ಕಿಯಾಗಿ ಸುಮಾರು 96 ಕುರಿಗಳು ಸಾವನ್ನಪ್ಪಿರುವ ಘಟಣೆ ಜರುಗಿದೆ. ಶನಿವಾರ ಸಂಜೆ ಸುರಿಯುತ್ತಿದ್ದ ಮಳೆ ಸಂದರ್ಭದಲ್ಲಿ ಸೇತುವೆ ಕೆಳಗಡೆ ಮಳೆಯಿಂದ ರಕ್ಷಣೆಗೆ ನಿಂತಿದ್ದ ಕುರಿಗಾರರು ಒಂದು ರೈಲು ಸಂಚರಿಸಿದ ಬಳಿಕ ಕುರಿಗಳನ್ನು ರೈಲ್ವೇ ಹಳಿ ದಾಟಿಸುವ ಸಂದರ್ಭದಲ್ಲಿ ಮತ್ತೊಂದು (ಗದಗ-ಮುಂಬೈ) ರೈಲು ಹಾಯ್ದು ಈ ದುರ್ಘಟನೆ ಸಂಭವಿಸಿದೆ.   ವೇಗವಾಗಿ ಚಲಿಸುತ್ತಿರುವ ರೈಲಿನ ರಬಸಕ್ಕೆ …

Read More »

ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ’ : ವಿದ್ಯುತ್ ಕಂಬಕ್ಕೆ ಅಂಟಿಸಿದ ಪೋಸ್ಟ್ ವೈರಲ್!

ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಕ್ಷೇತ್ರವಾದ ಮಲ್ಲೇಶ್ವರಂನಲ್ಲಿ ಬೇವರ್ಸಿ ಅಧಿಕಾರಿಗಳಾ ಬೇಗ ರಸ್ತೆ ಸರಿ ಮಾಡ್ರೋ ಎಂಬ ಪೋಸ್ಟರ್ ಅನ್ನು ವಿದ್ಯುತ್ ಕಂಬಕ್ಕೆ ಅಂಟಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.   ಹಲವು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ರಸ್ತೆಗಳ ಸಂಪರ್ಕಕ್ಕೆ ಸಾಧ್ಯವಾಗದೆ ವಾಹನ ಸವಾರರು ಬೇಸತ್ತಿದ್ದಾರೆ. ಈ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿದಿನ ನೂರಾರು ಸಂಖ್ಯೆಯಲ್ಲಿ ಜನ ಇಲ್ಲಿಗೆ ಶಾಪಿಂಗ್ …

Read More »