ಆಧ್ಯಾತ್ಮಿಕತೆಯ ಜೊತೆಗೆ ಆರೋಗ್ಯಕ್ಕೂ ಒತ್ತು ನೀಡುತ್ತಿರುವ ಬೆಳಗಾವಿಯ ಅನಗೋಳ ಬ್ರಹ್ಮಕುಮಾರಿ ಕೇಂದ್ರದಲ್ಲಿ ಇಂದು ಉಚಿತ ದಂತ ತಪಾಸಣಾ ಶಿಬಿರವು ಯಶಸ್ವಿಯಾಗಿ ಜರುಗಿತು. ಸ್ಥಳೀಯ ನಾಗರಿಕರು ಹಾಗೂ ಈಶ್ವರೀಯ ವಿಶ್ವವಿದ್ಯಾಲಯದ ಸದಸ್ಯರಿಗಾಗಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ ನೂರಾರು ಜನರು ಪಾಲ್ಗೊಂಡು ತಪಾಸಣೆ ಮಾಡಿಸಿಕೊಂಡರು.” ಬೆಳಗಾವಿ ನಗರದ ಅನಗೋಳದಲ್ಲಿರುವ ಬ್ರಹ್ಮಕುಮಾರಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ದಂತ ತಪಾಸಣಾ ಶಿಬಿರವು ಯಶಸ್ವಿಯಾಗಿ ನೆರವೇರಿತು. ಪ್ರಖ್ಯಾತ ದಂತವೈದ್ಯರಾದ ಡಾ. ಹೇಮಲತಾ ಅವರ ಮಾರ್ಗದರ್ಶನದಲ್ಲಿ ಈ ಶಿಬಿರ …
Read More »ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ
ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ವಿಜಯಪುರದಲ್ಲಿ ಭಾರತ್ ಗ್ಯಾಸ್ ಮತ್ತು ಇಂಡೇನ್ ಗ್ಯಾಸ್ ಏಜೆನ್ಸಿಗಳ ಬಳಿ ಭಾರೀ ಜನಸಂದಣಿ ಕಂಡುಬಂದಿದೆ. ನಗರದ ಸ್ಟೇಷನ್ ರಸ್ತೆಯ ಸಮೀಪ ಇರುವ ಗ್ಯಾಸ್ ಏಜೆನ್ಸಿಗಳ ಮುಂದೆ ಬೆಳಗ್ಗಿನಿಂದಲೇ ಜನರು ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ. ಬಹುತೇಕ ಭಾರತ್ ಗ್ಯಾಸ್ ಏಜೆನ್ಸಿಗಳಲ್ಲಿ “ಸ್ಟಾಕ್ ಇಲ್ಲ” ಎಂಬ …
Read More »ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಮ್ ಜಯಂತಿ; ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
ದೇಶದ ಮಾಜಿ ಉಪಪ್ರಧಾನಿ ಹಾಗೂ ಶೋಷಿತರ ಧ್ವನಿಯಾಗಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನವನ್ನು ಇಂದು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಮಹಾನ್ ಚೇತನಕ್ಕೆ ಗೌರವ ನಮನ ಸಲ್ಲಿಸಿದರು. ಏಪ್ರಿಲ್ 5ರಂದು ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿರುವ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಕ್ತಿಪೂರ್ವಕ ಗೌರವ ಸಮರ್ಪಿಸಿದರು. ಈ …
Read More »ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!
ಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ ಮಾರುತಿ ಜಯಂತಿ ಸಮಾರೋಪದ ಹಿನ್ನೆಲೆ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ ಮಾರುತಿ ಜಯಂತಿ ಸಮಾರೋಪದ ಹಿನ್ನೆಲೆ ಮಹಾಪ್ರಸಾದವನ್ನು ಆಯೋಜಿಸಲಾಗಿತ್ತು. ಹನುಮಾನ ಜಯಂತಿಯ ದಿನದಿಂದ ಶನಿವಾರದ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಶನಿವಾರ ಸಂಜೆ ಮಹಾಪ್ರಸಾದದೊಂದಿಗೆ …
Read More »ದಾವಣಗೆರೆ ದಕ್ಷಿಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಮರ್ಥ್ ಶಾಮನೂರು ಬೆಂಬಲಿಸಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಕ್ಯಾಂಪ್ ಆಫೀಸ್ನಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸುದ್ದಿಗೋಷ್ಠಿ ನಡೆಸಿದ ಸಚಿವರು ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರನ್ನು ಬೆಂಬಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದರು. ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜಿನಲ್ಲಿರುವ ಪಕ್ಷದ ಕ್ಯಾಂಪ್ ಆಫೀಸ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಅಲೆ ಬೀಸುತ್ತಿದ್ದು, ಗೆಲುವು …
Read More »ಕಾಂಗ್ರೆಸ್ಸಿನವರು ಡಿ.ಕೆ.ಶಿವಕುಮಾರ್ ಹೇಳಿದಂತೆ ಬಂದು ಗೂಂಡಾಗಿರಿ ಮಾಡಿದ್ದಾರೆ ಕಾಂಗ್ರೆಸ್ ಕೈಗೊಂಬೆಯಂತೆ ಸ್ಥಳೀಯಾಡಳಿತದ ವರ್ತನೆ: ಆರ್.ಅಶೋಕ್ ಆಕ್ಷೇಪ
ಬಾಗಲಕೋಟೆ: ಇಲ್ಲಿನ ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಾಂಗ್ರೆಸ್ ಸರಕಾರದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ನಿನ್ನೆ ಕಾಲೇಜು ಕ್ಯಾಂಪಸ್ಸಿಗೆ ಹೋಗಿ ನೀವು ಬಿಜೆಪಿಗೆ ಮತ ಕೊಟ್ಟರೆ ಜೈಲಿಗೆ ಹಾಕುತ್ತೇವೆ ಎಂಬ ಮಾಹಿತಿಯುಳ್ಳ ಒಂದು ಕರಪತ್ರವನ್ನು ಹಂಚಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಿದರು. ಮಾಜಿ ಡಿಸಿಎಂ ಮತ್ತು ಸಂಸದ ಗೋವಿಂದ ಕಾರಜೋಳ ಅವರು …
Read More »ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತರು- ಬಿ.ವೈ.ವಿಜಯೇಂದ್ರ ಟೀಕೆ
ದಾವಣಗೆರೆ: ಬಾಗಲಕೋಟೆಯಲ್ಲಿ ನಿನ್ನೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಸ್ಟೆಲ್ಗೆ ನುಗ್ಗಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಬೆದರಿಸಲು ಮುಂದಾಗಿದ್ದರು. ಇದು ಕಾಂಗ್ರೆಸ್ ಪಕ್ಷದ ಸೋಲಿನ ಆತಂಕಕ್ಕೆ ಸ್ಪಷ್ಟ ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರು ಸರಕಾರಿ ವಾಹನಗಳಲ್ಲಿ ಬಂದಿದ್ದುದಾಗಿ ತಿಳಿಸಿದರು. ದಾವಣಗೆರೆ- ಬಾಗಲಕೋಟೆಯಲ್ಲಿ ಬಿಜೆಪಿ ಪರವಾದ ವಾತಾವರಣ ಇದೆ. ನಮ್ಮ ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತದಾರರು …
Read More »ಕಾಂಗ್ರೆಸ್ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡುತ್ತಿದೆ: ಚರಂತಿಮಠ
ಬಾಗಲಕೋಟೆ: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಎನ್.ಎಸ್.ಯುಐ ಕಾರ್ಯಕರ್ತರನ್ನ, ಹಿಂದೂ ಅಲ್ಲದ ಯುವಕರನ್ನ ಕೇಸರಿ ಶಾಲು ಹಾಕಿಸಿ ಶಿಕ್ಷಣ ಸಂಸ್ಥೆಗೆ ಕಳುಹಿಸಿ ವಿದ್ಯಾರ್ಥಿಗಳಿಗೆ ಧಮಕಿ ಹಾಕಿಸುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಗಂಭೀರ ಆರೋಪ ಮಾಡಿದ್ದಾರೆ. ಉಪಚುನಾವಣೆ ರಣಕಣವಾಗಿ ಬದಲಾಗುತ್ತಿದ್ದು ಬಿಜೆಪಿಯು ವಿದ್ಯಾಗಿರಿ, ಜ್ಯೋತಿ ಕಾಲೋನಿ, ಬಿಟಿಡಿಎ ಭಾಗದಲ್ಲಿ ಮೆನೆ ಮನೆಗೆ ತೆರಳಿ, ಮನೆ ಸದಸ್ಯರಿಗೆ ಬಿಜೆಪಿಗೆ ಓಟ್ ಮಾಡುವಂತೆ ಮನವಿ ಮಾಡಿದರು.ಕೆಲ ಮನೆಗಳಲ್ಲಿ ಶಾಲು …
Read More »ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿದ ವ್ಯಕ್ತಿಯ ಬರ್ಬರ ಹತ್ಯೆ.. !
ಬೆಳಗಾವಿ-ಬೆಳಗಾವಿಯಲ್ಲಿ ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ಘಟನೆ. ಗ್ರಾಮದ ಸಂಗನಗೌಡ ಪಾಟೀಲ್ (50) ಕೊಲೆಯಾದ ವ್ಯಕ್ತಿ. ಕಳೆದ ಕೆಲ ವರ್ಷಗಳಿಂದ ಎರಡು ಕುಟುಂಬಗಳ ಮಧ್ಯೆ ವೈಷಮ್ಯ. ರಾಜಕೀಯ ವಿರೋಧಿಗಳ ಮನೆ ಮುಂದೆ ಕುಣಿಯುತ್ತಿದ್ದ ಸಂಗನಗೌಡ. ಕುಣಿಬೇಡಾ ಮುಂದೆ ಹೋಗು ಎಂದು ಹೇಳಿದ್ದ ಆರೋಪಿಗಳು. ಮೃತ ವ್ಯಕ್ತಿ ಮತ್ತು ಆರೋಪಿಗಳ ಮಧ್ಯೆ ವಾಗ್ವಾದ ಬಳಿಕ ನಡೆಯಿತು ಕೊಲೆ. ಕೊಲೆ ಮಾಡಲು ಸಜ್ಜು ಮಾಡಿಕ್ಕೊಂಡೆ …
Read More »ಶಾಸಕ ರಮೇಶ ಜಾರಕಿಹೊಳಿ ಅವರಿಂದ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ
ಗೋಕಾಕ: ನಗರದ ಜನತೆ ಮತ್ತು ಭಕ್ತರಿಗಾಗಿ ಶ್ರೀ ಚೌಡೇಶ್ವರಿ ದೈವಿ ವನ ನಿರ್ಮಾಣ ಮಾಡಲಾಗುತ್ತಿದೆ. ಗೋಕಾಕ ಮಾದರಿ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸುತ್ತಿರುವದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದರು. ಅವರು, ನಗರದ ಕಡಬಗಟ್ಟಿ ರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಸ್ಥಾನದ ಪಕ್ಕದಲ್ಲಿ ಸುಮಾರು ೧ಕೋಟಿ ರೂಗಳ ವೆಚ್ಚದಲ್ಲಿ ಅರಣ್ಯ ಇಲಾಖೆಯಿಂದ ಶುಕ್ರವಾರದಂದು ಚೌಡೇಶ್ವರಿ ದೈವಿ ವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಗೋಕಾಕ ನಗರ ಹಾಗೂ ತಾಲೂಕಿನ ಅಭಿವೃದ್ಧಿಗಾಗಿ ಅನೇಕ ಜನಪರ …
Read More »
Laxmi News 24×7