ಬೆಂಗಳೂರು, ಮೇ 11: ಕೊರೊನಾ ಸಾಂಕ್ರಾಮಿಕದಿಂದಾಗಿ ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ಪ್ರಕ್ರಿಯೆ ಇದೀಗ ಚುರುಕುಗೊಂಡಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಫ್ರೆಶರ್ಸ್ ಸೇರಿದಂತೆ ಉನ್ನತ ಹುದ್ದೆಗಳಿಗೂ ನೇಮಕಾತಿ ನಡೆಯಲಿದೆ. ಐಟಿ ದಿಗ್ಗಜ ಆಕ್ಸೆಂಚರ್ ಸಂಸ್ಥೆ ಕೂಡಾ ನೇಮಕಾತಿ ಹೆಚ್ಚಿಸಿದೆ. ದೇಶದೆಲ್ಲೆಡೆ ಹೊಸ ಪದವೀಧರರಿಗೆ ಈ ವರ್ಷ ಸುಮಾರು 30 ಸಾವಿರಕ್ಕೂ ಅಧಿಕ ನೇಮಕಾತಿಯನ್ನು ಘೋಷಿಸಿದೆ. ಆಗಸ್ಟ್ 31,2021ಕ್ಕೆ ವರದಿಯಾದಂತೆ ಐಟಿ ದಿಗ್ಗಜ ಸಂಸ್ಥೆಯಲ್ಲಿ ಸುಮಾರು 2,50,000 ಹೊಸ …
Read More »ಬೆತ್ತಲೆ ಸೇವೆ ತಪ್ಪಿಸಿದ ಪೊಲೀಸರು
ಗದಗ: ಬೆಟಗೇರಿ ಹೊರವಲಯದ ನಾಗಸಮುದ್ರ ಸಮೀಪದ ದಂಡಿನ ದುರ್ಗಮ್ಮದೇವಿ ಜಾತ್ರೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತು. ಈ ವೇಳೆ ದೇಹಕ್ಕೆ ಬೇವಿನಸೊಪ್ಪು ಸುತ್ತಿಕೊಂಡು ಬೆತ್ತಲೆ ಸೇವೆ ಸಲ್ಲಿಸಲು ಮುಂದಾದ ಭಕ್ತರನ್ನು ಪೊಲೀಸರು ತಡೆದರು. ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ರಾಜ್ಯದ ಸಾವಿರಾರು ಭಕ್ತರು ಸೋಮವಾರವೇ ನಗರಕ್ಕೆ ಬಂದಿದ್ದರು. ಮಕ್ಕಳು, ಕೆಲ ಭಕ್ತರು ದೀರ್ಘ ದಂಡ ನಮಸ್ಕಾರ ಹಾಕಿ, ಹರಕೆ ತೀರಿಸಿದರು. ‘ಹರಕೆ ಹೊತ್ತಿದ್ದ ಕೆಲವು ಭಕ್ತರು ಬೆತ್ತಲೆ ಸೇವೆ …
Read More »ಕನ್ನಡ ಫಲಕಕ್ಕಾಗಿ ಮಾತುಕತೆ ನಡೆಸಿ: ಅಶೋಕ ಚಂದರಗಿ
ಬೆಳಗಾವಿ: ‘ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಎಂಎಸ್ಆರ್ಟಿಸಿ) ಬಸ್ಗಳ ನಾಮಫಲಕದಲ್ಲಿ ಕನ್ನಡ ಬಳಸುವ ಸಂಬಂಧ ಮಹಾರಾಷ್ಟ್ರ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಬೇಕು’ ಎಂದು ಒತ್ತಾಯಿಸಿ ಕನ್ನಡ ಹೋರಾಟಗಾರರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯುಕೆಆರ್ಟಿಸಿ) ವ್ಯವಸ್ಥಾಪಕ ನಿರ್ದೇಶಕ, ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ‘ಹೊರ ರಾಜ್ಯಗಳಿಗೆ ತೆರಳುವ (ಕೆಎಸ್ಆರ್ಟಿಸಿ) ಬಸ್ಗಳ ನಾಮಫಲಕದಲ್ಲಿ ಕನ್ನಡ, ಇಂಗ್ಲಿಷ್ ಮತ್ತು ಆಯಾ ರಾಜ್ಯದ ಪ್ರಾದೇಶಿಕ ಭಾಷೆಯನ್ನೂ …
Read More »ಮಂಗಳವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ 2,323 ವಿದ್ಯಾರ್ಥಿಗಳು ಗೈರುಹಾಜರ
ಬೆಳಗಾವಿ: ಜಿಲ್ಲೆಯಲ್ಲಿ ಮಂಗಳವಾರ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ 2,323 ವಿದ್ಯಾರ್ಥಿಗಳು ಗೈರುಹಾಜರಾದರು. ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಭೌತವಿಜ್ಞಾನ ವಿಷಯ ಪರೀಕ್ಷೆಗೆ 5,764 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 5,612 ವಿದ್ಯಾರ್ಥಿಗಳು ಹಾಜರಾದರು. 152 ವಿದ್ಯಾರ್ಥಿಗಳು ಬರಲಿಲ್ಲ. ಇತಿಹಾಸ ವಿಷಯಕ್ಕೆ ನೋಂದಾಯಿಸಿದ್ದ 12,210 ವಿದ್ಯಾರ್ಥಿಗಳ ಪೈಕಿ 11,308 ವಿದ್ಯಾರ್ಥಿಗಳು ಹಾಜರಾದರು. 902 ವಿದ್ಯಾರ್ಥಿಗಳು ಗೈರುಹಾಜರಾದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಭೌತವಿಜ್ಞಾನ ಪರೀಕ್ಷೆಗೆ ನೋಂದಾಯಿಸಿದ್ದ 6,642 ವಿದ್ಯಾರ್ಥಿಗಳ ಪೈಕಿ 6,462 …
Read More »ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಒತ್ತಾಯ
ಬೆಳಗಾವಿ: ಇಲ್ಲಿನ ಖಾಸಬಾಗ್, ವಡಗಾವಿ ಭಾಗದಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನ ಅಥವಾ ಮನೆಗಳಿಗೆ ಹಿಂದಿನಂತೆ ಉತಾರ ನೀಡುವಂತೆ ಆಗ್ರಹಿಸಿ ನೇಕಾರ ಕಾರ್ಮಿಕರ ಬಳಗದವರು ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು. ‘ನಗರದ ಬಹುತೇಕ ಪ್ರದೇಶಗಳಲ್ಲಿ ಬಾಂಡ್ ಮೇಲೆ ಖರೀದಿಸಿದ ನಿವೇಶನಗಳಲ್ಲಿ ಮನೆ ನಿರ್ಮಿಸಲಾಗಿದೆ. ಅವುಗಳಿಗೆ 30-40 ವರ್ಷಗಳಿಂದಲೂ ಪಾಲಿಕೆಯಿಂದ ಕರ ಅಕರಿಸಲಾಗುತ್ತಿದೆ. ಅದಕ್ಕಾಗಿಯೇ ಹಿಂದೆ ಪಾಲಿಕೆಯಿಂದ ಉತಾರ ಕೊಡುವ ವ್ಯವಸ್ಥೆಯೂ ಇತ್ತು. ಈ …
Read More »ವಿಧಾನ ಪರಿಷತ್ನ ಏಳು ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಆಯ್ಕೆಯಾಗಿರುವ ಏಳು ಸದಸ್ಯರ ಅವಧಿ ಜೂನ್ 14ಕ್ಕೆ ಮುಕ್ತಾಯವಾಗಲಿದ್ದು, ಈ ಸ್ಥಾನಗಳ ಭರ್ತಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವೇಳಾಪಟ್ಟಿ ಪ್ರಕಟಿಸಿದೆ. ಬಿಜೆಪಿಯ ಲಕ್ಷ್ಮಣ ಸವದಿ, ಲಹರ್ ಸಿಂಗ್ ಸಿರೋಯಾ, ಕಾಂಗ್ರೆಸ್ನ ಆರ್.ಬಿ. ತಿಮ್ಮಾಪೂರ, ಅಲ್ಲಂ ವೀರಭದ್ರಪ್ಪ, ವೀಣಾ ಅಚ್ಚಯ್ಯ, ಜೆಡಿಎಸ್ನ ಕೆ.ವಿ. ನಾರಾಯಣ ಸ್ವಾಮಿ ಮತ್ತು ಎಚ್.ಎಂ. ರಮೇಶ್ ಗೌಡ …
Read More »ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರ ನಿಸರ್ಗದಿಂದಲೇ ಬಯಲಾಗಿದೆ: ಕಾಂಗ್ರೆಸ್
ಬೆಂಗಳೂರು: ಸರ್ಕಾರದ 40 ಪರ್ಸೆಂಟ್ ಕಮೀಷನ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ದೂಷಣೆಯಿಂದ ತಮ್ಮ ಹಗರಣ ಮುಚ್ಚಿಕೊಳ್ಳಬಹುದು ಎಂದುಕೊಂಡಿದ್ದಾರೆ. ಆದರೆ, ಬಿಜೆಪಿ ಸರ್ಕಾರದ ಶೇ 40 ಪರ್ಸೆಂಟ್ ಭ್ರಷ್ಟಾಚಾರವನ್ನು ನಿಸರ್ಗವೇ ಬಯಲು ಮಾಡುತ್ತಿದೆ. ವಾಜಪೇಯಿ ಕ್ರೀಡಾಂಗಣದ ಛಾವಣಿ ಕುಸಿದಿದೆ, ತೇಲು ಸೇತುವೆ ತೇಲಿಹೋಗಿದೆ. ಇದು ಶೇ 40 …
Read More »ಅಶ್ವತ್ಥ ನಾರಾಯಣ ಎಂ.ಬಿ ಪಾಟೀಲರನ್ನು ಭೇಟಿಯಾಗಿದ್ದಾರೆ: ಡಿ.ಕೆ ಶಿವಕುಮಾರ್
ಬೆಂಗಳೂರು : ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಅವರು ತಮ್ಮ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ವಿರುದ್ಧ ಧ್ವನಿ ಎತ್ತದಂತೆ ಮನವೊಲಿಸುವುದಕ್ಕಾಗಿ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲರನ್ನು ಭೇಟಿಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳವುದಕ್ಕಾಗಿ ಸಚಿವರು ಪಾಟೀಲರ ಮನೆಗೆ ಹೋಗಿ ಬಂದಿದ್ದಾರೆ. ಈಗ ಬೇರೆ ಸಬೂಬು ಹೇಳಬಹುದು. ಶಿಕ್ಷಣ ಸಂಸ್ಥೆಗಳನ್ನು ಹೊಂದಿರುವ ಎಂ.ಬಿ. ಪಾಟೀಲರ …
Read More »ಪಕ್ಷದ ಬ್ಯಾನರ್ ನಂತಿದೆ ಎಂದು ಸರ್ಕಾರ ಕೊಟ್ಟ ಸೀರೆಯನ್ನ ಸಾರಾಸಗಟಾಗಿ ತಿರಸ್ಕರಿಸಿದ ಅಂಗನವಾಡಿ ಕಾರ್ಯಕರ್ತೆಯರು,
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು(Anganwadi Workers) ರಾಜ್ಯ ಸರ್ಕಾರ ನೀಡುತ್ತಿರುವ ಸೀರೆಗಳನ್ನು ತಿರಸ್ಕರಿಸಿದ್ದಾರೆ. ಪ್ರಧಾನಮಂತ್ರಿಯವರ ಬಹುಮುಖ್ಯ ಕಾರ್ಯಕ್ರಮವಾದ ಪೋಷಣ್ ಅಭಿಯಾನದಡಿ (Poshan Campaign-National Nutrition Mission) ವಿತರಿಸಲು ಮುಂದಾಗಿರುವ ಸೀರೆಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರಾಕರಿಸಿದ್ದಾರೆ. ಈ ಸೀರೆಗಳು ಸರ್ಕಾರದ ಪ್ರಚಾರಕ್ಕೆ ಬಳಸುವ ಬ್ಯಾನರ್ನಂತಿವೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸೀರೆ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಹಿಂದೇಟು ಹಾಕಿದ್ದಾರೆ. ಸುಮಾರು 10 ಕೋಟಿ ಮೌಲ್ಯದ 2.5 ಲಕ್ಷಕ್ಕೂ ಹೆಚ್ಚು ಸೀರೆಗಳನ್ನು ರಾಜ್ಯದ …
Read More »ಸುಪ್ರಭಾತ ಅಭಿಯಾನ ಆರಂಭಿಸುತ್ತಿರುವವರು ಉಗ್ರರು : ಹರಿಪ್ರಸಾದ್
ಬೆಂಗಳೂರು: ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಸಲು ಕರೆ ಕೊಟ್ಟವರು ಭಯೋತ್ಪಾದಕರು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಸೌಧದಲ್ಲಿ ಮಾತನಾಡಿದ ಅವರು, ಯಾರು ಈ ಸುಪ್ರಭಾತ ಅಭಿಯಾನವನ್ನು ಪ್ರಾರಂಭ ಮಾಡುತ್ತಿದ್ದಾರೋ ಅವರು ಭಯೋತ್ಪಾದಕರು. ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ (ಯುಎಪಿಎ) ಕಾಯ್ದೆಯ ಅಡಿಯಲ್ಲಿ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಸಮಾಜ ವಿರೋಧಿ ಶಕ್ತಿಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇವರು ಸಂಘ ಪರಿವಾರದ ವಿವಿಧ …
Read More »
Laxmi News 24×7