Breaking News

ಜಿಲ್ಲೆ

ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೇ. 1 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮೇ 1 ರವರರೆಗೂ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ಬೆಳಗಾವಿ,ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ವಿಜಯಪುರ, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಚಿತ್ರದುರ್ಗ ಮತ್ತು ಉಡುಪಿ, ಕೊಡಗಿನಲ್ಲಿ ಮಳೆಯಾಗಲಿದೆ.

Read More »

ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಘಟನೆ; 10 ಶ್ವಾನಗಳಿಗೆ ವಿಷವುಣಿಸಿ ಕೊಂದ ದುರುಳರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಮಾಯಕ ಘಟನೆ ನಡೆದಿದ್ದು, 10 ಶ್ವಾನಗಳಿಗೆ ವಿಷ ಕೊಟ್ಟು ಸಾಯಿಸಿದ ಘಟನೆ ಪರಪ್ಪನ ಅಗ್ರಹಾರ ಬಳಿಯ ರಾಯಸಂದ್ರದಲ್ಲಿ ನಡೆದಿದೆ. ರಾತ್ರಿ ವೇಳೆ ನಾಯಿಗಳು ಬೊಗಳುತ್ತಿವೆ ಎಂಬ ಕಾರಣಕ್ಕೆ ಅಪಾರ್ಟ್ ಮೆಂಟ್ ಬಳಿ ಬೀಡು ಬಿಟ್ಟಿದ್ದ 10 ಶ್ವಾನಗಳಿಗೆ ದುರುಳರು ವಿಷ ನೀಡಿ ಕೊಂದಿದ್ದಾರೆ. ಇನ್ನು ಕೆಲ ಶ್ವಾನಗಳು ಅಸ್ವಸ್ಥಗೊಂಡಿದ್ದು, ಶ್ವಾನಗಳನ್ನು ಅನಿಮಲ್ ಅಸೋಸಿಯೇಷನ್ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ವಾನಗಳನ್ನು ಕೊಂದ ಕಟುಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು …

Read More »

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ

ಏ.24ರಿಂದ ಮೇ 21ರವರೆಗೆ ರಾಜ್ಯ ಹೈಕೋರ್ಟ್ ಗೆ ಬೇಸಿಗೆ ರಜೆ ಇರಲಿದೆ. ಹೈಕೋರ್ಟ್‌ನ ಬೆಂಗಳೂರು ಪ್ರಧಾನ ಪೀಠ, ಧಾರವಾಡ ಹಾಗೂ ಕಲಬುರ್ಗಿ ಪೀಠಗಳಿಗೆ ಈ ಬೇಸಿಗೆ ರಜೆ ಅನ್ವಯವಾಗಲಿದೆ. ಈ ಅವಧಿಯಲ್ಲಿ ತುರ್ತು ಪ್ರಕರಣಗಳ ವಿಚಾರಣೆಗೆ ವಿವಿಧ ದಿನಾಂಕಗಳಂದು ಏಳು ದಿನ ರಜಾ ಕಾಲದ ನ್ಯಾಯಪೀಠಗಳು ಕಾರ್ಯನಿರ್ವಹಣೆ ಮಾಡಲಿದೆ.   ಬೇಸಿಗೆ ರಜೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್‌ ಕೆ.ಎಸ್‌. ಭರತ್‌ ಕುಮಾರ್‌ ಅಧಿಸೂಚನೆ ಹೊರಡಿಸಿದ್ದಾರೆ. ರಜಾ …

Read More »

ಗೋಕಾಕ ಸಿಪಿಐ, ಪಿಎಸ್ಐ ಕಿರುಕುಳಕ್ಕೆ ಬೇಸತ್ತ ಬಬಲಿ ಕುಟುಂಬ…!

  ಬೆಳಗಾವಿ :ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಮತ್ತು ಪಿಎಸ್ ಐ ಪೊಲೀಸ್ ಅಧಿಕಾರಿಗಳಿಂದ ಆಗಿರುವ ಅನ್ಯಾಯಕ್ಕೆ ನಮಗೆ ನ್ಯಾಯ ದೊರಕಿಸಿಕೊಡುವಂತೆ ಬಬಲಿ ಕುಟುಂಬಸ್ಥರು ಶನಿವಾರ ಜಿಲ್ಲಾಧಿಕಾರಿ ಆವರಣದಲ್ಲಿ ಮಾಧ್ಯಮದವರ ಮುಂದೆ ಅಳಲು‌ ತೋಡಿಕೊಂಡರು. ಕಳೆದ ಜೂನ್ 2021 ರಂದು ಗೋಕಾಕ ತಾಲೂಕಿನ ಮಹಾಂತೇಶ ನಗರ ಬಡಾವಣೆಯ ಮಾಲದಿನ್ನಿ ಕ್ರಾಸ್ ಬಳಿ ಸಂಜೆ 7ಕ್ಕೆ ಮಂಜು ಶಂಕರ ಮುರುಕಿಬಾವಿ ಎಂಬ ವ್ಯಕ್ತಿಯ ಅನುಮಾನಸ್ಪಾದವಾಗಿ ಕೊಲೆಯಾಗಿದ್ದಾನೆ. ಈತನಿಗೂ ನಮ್ಮ ಮಕ್ಕಳಿಗೆ ಯಾವುದೇ …

Read More »

ಸವದತ್ತಿ ತಾಲೂಕಿನ ಗೊರಗುದ್ದಿ ಲಕ್ಷ್ಮಿ ದೇವಿ ಜಾತ್ರೆಗೆ ಚಾಲನೆ ನೀಡಿದ ಶ್ರೀ ಸಂತೋಷ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಗೊರಗುದ್ದಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವಕ್ಕೆ ಶ್ರೀ ಸಂತೋಷ್ ಜಾರಕಿಹೊಳಿ ಅವರನ್ನ ಉದ್ಘಾಟನೆ ಸಮಾರಂಭಕ್ಕೆ ಚಾಲನೆ ನೀಡಲು ಆಹ್ವಾನದ ಮೇರೆಗೆ ಆಗಮಿಸಿದ್ದರು. ಹೌದು ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿಗೆ ಸುಮಾರು ಸಭೆ ಸಮಾರಂಭ ,ಕ್ರಿಕೆಟ್ ಪಂದ್ಯಾವಳಿಗೆ,ಚಾಲನೆ, ಮಠ ಮಂದಿರ, ಹಾಗೂ ಕಷ್ಟ ಅಂತ ಬಂದವರಿಗೆ ಸಹಾಯ ಹಸ್ತ ಚಾಚುವುದ ರಲ್ಲಿ ಇಟ್ಟಿಚ್ಚಿಗೆ ಎಲ್ಲದಕ್ಕೂ ಸೈ ಎಂದು ಬಂದ ಜನರಿಗೆ ಆಸರೆ …

Read More »

ಗೋಕಾಕ ನಗರದ ಇಫ್ತಾರ್ ಕೂಟದಲ್ಲಿ ಸತೀಶ್ ಜಾರಕಿಹೊಳಿ ಅವರು ಭಾಗಿ!

ಗೋಕಾಕ: ನಗರದ ಗುರುವಾರ ಪೇಟೆಯ ಮೋಮಿನ ಗಲ್ಲಿಯಲ್ಲಿ ಆಯೋಜಿಸಲಾಗಿದ್ದ ಇಫ್ತಾರ್ ಕೂಟದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಭಾಗಿಯಾಗಿದ್ದರು. ಇಸ್ಲಾಂ ಬಾಂಧವರು ಗುರುವಾರ ಪೇಟೆಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ್ದರು.ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು. ಮುಸ್ಲಿಂ ಬಾಂಧವರು ಸತೀಶ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು. ಈ ಸಂದರ್ಭದಲ್ಲಿ ಮಲ್ಲಿಕ್ ಪೈಲ್ವಾನ್, ಇಲಾಹಿ ಖರಿದಿ, ವಿವೇಕ್ ಜತ್ತಿ, …

Read More »

ಗರಿಗೆದರಿದ ಎಂಎಲ್‌ಸಿ ಚುನಾವಣೆ; ಮೂರು ಜಿಲ್ಲೆಗಳಲ್ಲಿ ರಂಗೇರಿದ ರಾಜಕೀಯ ಕಣ

ಬೆಳಗಾವಿ: ವಾಯವ್ಯ ಪದವೀಧರ ವಿಧಾನ ಪರಿಷತ್ ಕ್ಷೇತ್ರ ಹಾಗೂ ವಾಯವ್ಯ ಶಿಕ್ಷಕ ಮತಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೂರು ಜಿಲ್ಲೆಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.   2 ಸ್ಥಾನಗಳಿಗೆ ನಡೆಯಲಿರುವ ಈ ಪರಿಷತ್ ಚುನಾವಣೆ ಟಿಕೆಟ್‌ ಅನ್ನು ಭಾರತೀಯ ಜನತಾ ಪಕ್ಷ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಅಭ್ಯರ್ಥಿಗಳಿಗೆ ನೀಡಿದರೇ, ಕಾಂಗ್ರೆಸ್ ಪಕ್ಷವೂ ಬೆಳಗಾವಿ ಜಿಲ್ಲೆಯ ಎರಡು ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದೆ. ಅಥಣಿಯ ನ್ಯಾಯವಾದಿ ಸುನೀಲ ಅಣ್ಣಪ್ಪ ಸಂಕ ಅವರಿಗೆ …

Read More »

ಹೊಂಬಾಳೆ ಫಿಲಂಸ್​ನಿಂದ ಬಿಗ್​ ಅನೌನ್ಸ್​ಮೆಂಟ್.. ಮುಂದಿನ ಚಿತ್ರದ ಬಗ್ಗೆ ರಿವೀಲ್..!

ರಾಕಿ ಭಾಯ್​​ ಅಭಿನಯದ ಕೆಜಿಎಫ್​ ಚಾಪ್ಟರ್ 2 ಪ್ಯಾನ್​ ಇಂಡಿಯಾ ಸಿನಿಮಾವನ್ನ ಇಡೀ ವಿಶ್ವ ಸಿನಿಮಾರಂಗ ಮೆಚ್ಚಿಕೊಂಡಿದೆ. ತಮಿಳು, ತೆಲುಗು, ಹಿಂದಿ, ಮಲಯಾಳಂ ಇಂಡಸ್ಟ್ರೀಯ ಘಟಾನುಘಟಿ ಸಿನಿಮಾ ಮೇಕರ್ಸ್, ನಟ-ನಟಿಯರು ಕೆಜಿಎಫ್​ ಸಿನಿಮಾಗೆ ಫುಲ್ ಮಾರ್ಕ್ಸ್​ ಕೊಟ್ಟಿದ್ದಾರೆ.  ‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ. ಇದರ ನಡುವೆ  ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ. ಈ ಸಂಸ್ಥೆಯ ನಿರ್ಮಾಣದ “ಕೆಜಿಎಫ್ 2” ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ …

Read More »

ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‌ಬಿಸಿ, ಜಿಎಲ್‌ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‌ಎಫ್ ಅಧ್ಯಕ್ಷ ಬಾಲಚ ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, …

Read More »

ಫುಲ್‍ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ

ಕುಡುಕರಿಗೆ ಗಂಟಲಲ್ಲಿ ಎಣ್ಣೆ ಬಿದ್ದರೆ ಅವರು ಏನು ಮಾಡುತ್ತಾರೆ ಅಂತಾ ಅವರಿಗೆ ಗೊತ್ತೇ ಆಗೋದಿಲ್ಲ. ಇಲ್ಲೊಬ್ಬ ಕುಡುಕ ಮಹಾಶಯ ಫುಲ್ ಟೈಟ್ ಆಗಿ ನಡು ರಸ್ತೆಯಲ್ಲಿ ಡಿಪ್ಸ್ ಹೊಡೆದು ರಂಪಾಟ ಮಾಡಿದ್ದಾನೆ. ಹೌದು ನೀವು ನೋಡುತ್ತಿರುವ ಈ ದೃಶ್ಯ ಕಂಡು ಬಂದಿದ್ದು ಬೆಳಗಾವಿಯ ಕಾಂಗ್ರೆಸ್ ರಸ್ತೆಯಲ್ಲಿ. ನಡು ರಸ್ತೆಯಲ್ಲಿ ಕುಡುಕ ರಂಪಾಟ ಮಾಡಿದ್ದಾನೆ. ಫುಲ್‍ಟೈಟ್ ಆಗಿ ರಸ್ತೆ ಮಧ್ಯೆ ನಿಂತುಕೊಂಡ ಕುಡುಕ ವಾಹನಗಳನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದಿದ್ದಾನೆ. ಫುಲ್‍ಟೈಟ್ ಆಗಿ …

Read More »