Breaking News

ಜಿಲ್ಲೆ

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಎಡಿಜಿಪಿಗಳು ಸೇರಿದಂತೆ 21 ಪೊಲೀಸರಿಗೆ 2022ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. ಗಣರಾಜ್ಯೋತ್ಸವ ದಿನಾದಂದು ಪದಕ ಪ್ರದಾನ ಕಾರ್ಯಕ್ರಮ ಜರುಗಲಿದೆ. ಪದಕ ಪಡೆದವರ ವಿವರ ಇಲ್ಲಿದೆ. 2022ನೇ ಸಾಲಿನ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ: ಬಿ.ದಯಾನಂದ, ಎಡಿಜಿಪಿ, ರಾಜ್ಯ ಗುಪ್ತದಳ ಆರ್. ಹಿತೇಂದ್ರ, ಎಡಿಜಿಪಿ, ಅಪರಾಧ ಮತ್ತು …

Read More »

ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲು

ಬೆಳಗಾವಿ: ಕೋವಿಡ್ 3ನೇ ಅಲೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳಿಗಾಗಿ 882 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಔಷಧಿಗಳೂ ಲಭ್ಯ ಇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ಜ.1ರಿಂದ ಆರಂಭವಾದ ಅಲೆ ವೇಗವಾಗಿ ಹರಡುತ್ತಿದೆ. ನಿಯಂತ್ರಣಕ್ಕೆ ತಜ್ಞರ ಸಲಹೆ ಪಡೆದು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ 1,05,233 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಸಿಡಿದ ಕೊರೊನಾ ಬಾಂಬ್: ಇಂದು 977 ಪಾಸಿಟಿವ್, 4 ಸಾವು

ಬೆಳಗಾವಿ ಜಿಲ್ಲೆಯಲ್ಲಿ ಇಂದು ಮಹಾಮಾರಿ ಕೊರೊನಾ ಮತ್ತೆ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 977 ಹೊಸ ಕೊರೊನಾ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ನಾಲ್ವರು ಸಾವನ್ನಪ್ಪಿದ್ದಾರೆ.ಮಂಗಳವಾರ ಬೆಳಗಾವಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಜಿಲ್ಲೆಯಲ್ಲಿ 977 ಹೊಸ ಕೇಸ್‍ಗಳು ಕಾಣಿಸಿಕೊಂಡಿವೆ. ಅದೇ ರೀತಿ ಇಂದು ನಾಲ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಬೆಳಗಾವಿಯ 36 ವರ್ಷ ವ್ಯಕ್ತಿ, 64 ವರ್ಷದ ವೃದ್ಧ, 73 …

Read More »

ನಾನು ಯಾವ ಕಡೆ ಇಲ್ಲ: ಬಿಜೆಪಿ ಪಕ್ಷದ ಪರವಾಗಿ ಇದ್ದೇನೆ: ದುರ್ಯೋಧನ ಐಹೊಳೆ

ನಾನಂತು ಸಚಿವಗಿರಿಗಾಗಿ ಗುಂಪುಗಾರಿಕೆ, ಜಗಳ ಮಾಡಲ್ಲ. ಸಚಿವ ಸ್ಥಾನ ಕರೆದು ಕೊಟ್ಟರೇ ನಿಭಾಯಿಸುತ್ತೇವೆ. ಸಚಿವ ಸ್ಥಾನ ಬೇಕು ಎಂದು ಹಠ ಮಾಡಲ್ಲ. ನಮ್ಮ ನಾಯಕರಾದ ಗೋವಿಂದ ಕಾರಜೋಳ ಅವರು ಇರೋ ತನ ನಾವು ಮಂತ್ರಿ ಸ್ಥಾನ ಕೇಳುವುದಿಲ್ಲ ಎಂದು ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ದುರ್ಯೋಧನ ಐಹೊಳೆ ಬಿಜೆಪಿ ಪಕ್ಷದ ಚಿಹ್ನೆ ಮೇಲೆ ಮೂರು ಬಾರಿ …

Read More »

ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.   ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …

Read More »

ವಿದ್ಯಾರ್ಥಿಗಳ ಎದುರಲ್ಲಿ ವೈದ್ಯೆಯ ಮೇಲೆಯೇ ಪ್ರೊಫೆಸರ್ ಲೈಂಗಿಕ ಕಿರುಕುಳ

ಹಾಸನ; ಡ್ಯೂಟಿ ಡಾಕ್ಟರ್ ಮೇಲೆಯೇ ಮೆಡಿಕಲ್ ಕಾಲೇಜು ಪ್ರೊಫೆಸರ್ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕೇಳಿಬಂದಿದ್ದು, ಹಾಸನ ಮೆಡಿಕಲ್ ಕಾಲೇಜು ಪ್ರೊಫೆಸರ್ ಡಾ.ಲೋಕೇಶ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.   ಹಾಸನ ಮೆಡಿಕಲ್ ಕಾಲೇಜಿನಲ್ಲಿಯೇ ಈ ಘಟನೆ ನಡೆದಿದ್ದು, ತರಬೇತಿ ವೈದ್ಯೆಯಾಗಿ ಸೇರಿಕೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ. ಜನವರಿ 12ರಂದು ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯೆ ರೋಗಿಯೊಬ್ಬಗರಿಗೆ ಚಿಕಿತ್ಸೆ ನೀಡುತ್ತಿದ್ದರು ಈ ವೇಳೆ ವಿದ್ಯಾರ್ಥಿಗಳ ಎದುರಲ್ಲಿಯೇ …

Read More »

ಯಾವುದೇ ಚುನಾವಣೆಗೂ ಕಾಂಗ್ರೆಸ್ ಸಿದ್ಧವಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ವಿಧಾನಸಭೆ ಚುನಾವಣೆಗೂ ನಾವು ರೆಡಿ ಇದ್ದೇವೆ, ಜಿಲ್ಲಾ ಪಂಚಾಯತಿ-ತಾಲೂಕಾ ಪಂಚಾಯತಿ ಚುನಾವಣೆಗೂ ನಾವು ರೆಡಿ ಇದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಬಾದಾಮಿ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಇದೇ ವೇಳೆ ಬಾದಾಮಿ ತಾಲೂಕಿನ ಮುತ್ತಲಗೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ ಯಾವಾಗಲೂ ಚುನಾವಣೆ ಎದುರಿಸಲು ಸಿದ್ಧ. ಜಿಲ್ಲಾ, ತಾಲೂಕು ಪಂಚಾಯಿತಿ, ವಿಧಾನಸಭೆ ಚುನಾವಣೆಗೂ ರೆಡಿ ಇದ್ದೀವಿ. …

Read More »

ಬೆಳಗಾವಿ ಪಾಲಿಕೆಗೆ ಇನ್ನೂ ಇಲ್ಲ ಮೇಯರ್ ಭಾಗ್ಯ! ಮೇಯರ್ ಆಯ್ಕೆ ವಿಳಂಬದ ಹಿಂದಿದ್ಯಾ ಕಮಲ ಶಾಸಕರ ಕೈವಾಡ?

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದು ನಾಲ್ಕು ತಿಂಗಳು ಕಳೆದಿವೆ.. ಆದ್ರೂ, ಇನ್ನೂ ನೂತನ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸುವ ಭಾಗ್ಯ ಸಿಕ್ಕಿಲ್ಲ.. ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ.. ಈವರೆಗೂ ಒಂದೇ ಒಂದು ಸಭೆಯೂ ನಡೆದಿಲ್ಲ.. ಇದ್ರಿಂದ ಬೆಳಗಾವಿ ಅಭಿವೃದ್ಧಿಗೆ ಗೃಹಣ ಹಿಡಿದಿದೆ. ಬೆಳಗಾವಿ ಪಾಲಿಕೆ 4 ತಿಂಗಳಾದ್ರೂ ಅತಂತ್ರವಾಗಿಯೇ ಇದೆ! ಮೇಯರ್-ಉಪಮೇಯರ್ ಆಯ್ಕೆಯಾಗದೆ ನಗರದ ಅಭಿವೃದ್ಧಿ ಕುಂಠಿತಗೊಂಡಿದೆ. ಬೆಳಗಾವಿ ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ಬಹುಮತ ಪಡೆದಿದೆ. 58 …

Read More »

ನಾನು ಪ್ರೀತಿ ಇರುವ ಸಭೆಗೆ ಹೋಗುತ್ತೇನೆ -ರಮೇಶ್​​​ ಜಾರಕಿಹೊಳಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಎಂಬ ಮಾತು ಬಿಜೆಪಿ ಪಾಳಯದಲ್ಲಿ ರಿಂಗಣಿಸಿದ್ದೇ ಬಂತು, ಕೇಸರಿ ಪಾಳಯದ ಶಾಸಕರು ಮತ್ತೆ ಸಿಡಿದೆದ್ದಿದ್ದಾರೆ. ಆಗಿದ್ದಾಗ್ಲಿ ಈ ಬಾರಿ ಸಚಿವ ಸ್ಥಾನ ಪಡೆದೇ ತೀರುತ್ತೇವೆ ಅಂತಾ ಜಿದ್ದಿಗೆ ಬಿದ್ದವರಂತೆ ಅಖಾಡಕ್ಕೆ ಇಳಿದು ಅಬ್ಬರಿಸ್ತಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರು, ಪಕ್ಷ ವರಿಷ್ಠರು ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. …

Read More »

ಶೈಕ್ಷಣಿಕ ಪ್ರಗತಿಗಾಗಿ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಬೆಳಗಾವಿ: ಜಿಲ್ಲೆಯ 915 ಪ್ರೌಢ ಶಾಲೆಗಳ 56,856 ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗುವ ದೃಷ್ಟಿಯಿಂದ 13 ಲಕ್ಷ ರೂ. ಮೊತ್ತದಲ್ಲಿ 15,000 ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು.   ನಗರದ ಸಂಕಮ್‌ ಹೊಟೇಲ್‌ನಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಹಮ್ಮಿಕೊಂಡಿದ್ದ ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಸಿದ್ದತೆಗಾಗಿ “ಗೆಲುವಿನ ನತ್ತ ನಮ್ಮ ಪಯಣ” …

Read More »