Breaking News

ಜಿಲ್ಲೆ

ಅಂತ್ಯಕ್ರಿಯೆ ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದ್ದು, ಅಂತಿಮ ವಿಧಿವಿಧಾನಗಳನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಹಿರಿಯ ಪುತ್ರ ವಿನಯ್ ರಾಜ್ ಕುಮಾರ್, ಪುನೀತ್ ಅಂತಿಮ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣುಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರನಿಂದ …

Read More »

4.50 ಕೋಟಿ ರೂ. ವೆಚ್ಚದ ಹಾಲು ಉತ್ಪಾದಕರ ಮಕ್ಕಳಿಗೆ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

  ಬೆಳಗಾವಿ : ಬೆಳಗಾವಿಯಲ್ಲಿ ನಂದಿನಿ ಮಿಲ್ಕ್ ಪ್ರೋಡಕ್ಟ್ (ಎನ್‍ಎಂಪಿ) ಘಟಕ ಸ್ಥಾಪಿಸಲು ಪ್ರಯತ್ನಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶುಕ್ರವಾರದಂದು ಬೆಳಗಾವಿ ಹಾಲು ಒಕ್ಕೂಟದ ಆವರಣದಲ್ಲಿ ನಡೆದ ಹಾಲು ಉತ್ಪಾದಕರ ರೈತರ ಮಕ್ಕಳಿಗೆ 4.50 ಕೋಟಿ ರೂ. ವೆಚ್ಚದ ವಸತಿ ನಿಲಯ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.     ಎನ್‍ಎಂಪಿ ಘಟಕ ಸ್ಥಾಪನೆಗೆ ಬೆಳಗಾವಿ ಮಹಾ ನಗರದಲ್ಲಿ …

Read More »

ಕೋವಿಡ್ ಕಿಟ್ಗಳ ಹಸ್ತಾಂತರ….

ಮೂಡಲಗಿ: ತಾಲೂಕು ಪಂಚಾಯಿತಿ ಮತ್ತು ಆರೋಗ್ಯ ಇಲಾಖೆಗಳ ಸಹಯೋಗದಲ್ಲಿ ಯುಎಸ್ ಎಐಡಿ ಅನುದಾನದೊಂದಿಗೆ ಕೆಎಚ್ ಪಿಟಿ ಸಂಸ್ಥೆಯಿಂದ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರವನ್ನು ತಾಲೂಕು ಪಾಚಾಯಿತಿ ಸಭಾ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿತ್ತು. ತಾಲೂಕಿನ 2 ಗ್ರಾಮ ಪಂಚಾಯಿತಿ ಪಂಚಾಯಿತಿ ಅಧ್ಯಕ್ಷ ಹಾಗೂ ಕಾರ್ಯಕರ್ತೆಯರಿಗೆ ಕೋಡ್ ನಿರ್ವಹಣೆಯ ತದಬೇತಿ ಕಿಟ್‌ಗಳನ್ನು ಹಸ್ತಾಂತರಿಸಲಾಯಿತು. ತಾಲೂಕಾ ಸಹಾಯಕ ನಿರ್ದೇಶಕ ಸಂಗಮೇಶ ದೊಡ್ಡವರ ಮತ್ತು ಚಿಕ್ಕ ಮಕ್ಕಳ ತಜ್ಞರಾದ ಡಾ. ಜಗದೀಶ ಜಿಂಗಿ ಅವರು ಕೊಪಿಡ್ …

Read More »

ಪ್ರೀತಿಯಲ್ಲಿ ಮೋಸ ಆಗಿದ್ದಕ್ಕೆ ಸಹೋದರ ಆತ್ಮಹತ್ಯೆ; DC ಮುಂದೆ ಗಳಗಳನೇ ಕಣ್ಣೀರಿಟ್ಟ ಯೋಧ..!

ಬೆಳಗಾವಿ: ಪ್ರೀತಿಸಿದ ಹುಡುಗಿಯ ಮನೆಯವರ ವಿರೋಧಕ್ಕೆ ಹೆದರಿ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆಗೆ ಸಂಬಂಧಿಸಿದಂತೆ ಮೃತನ ಸಹೋದರ ಹಾಗೂ ಯೋಧ ನನ್ನ ಕುಟುಂಬಕ್ಕೆ ರಕ್ಷಣೆ ಸಿಗುತ್ತಿಲ್ಲ ಎಂದು ಕಣ್ಣಿರಿಟ್ಟಿದ್ದಾನೆ. ಪ್ರೀತಿಸಿದ ಹುಡುಗಿ ಮನೆಯವರು ಮದುವೆಗೆ ವಿರೋಧಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ತಾಲೂಕಿನ‌ ಬೆನಕನಹಳ್ಳಿಯ 31 ವರ್ಷದ ಭರಮಾ ಪಾಟೀಲ್ ಎಂಬಾತ ಅಕ್ಟೋಬರ್ 23ರಂದು ಆತ್ಮಹತ್ಯೆ ಮಾಡಿಕೊಂಡಿದ್ದ.     ಸಹೋದರನ ಸಾವು ನೆನೆದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ …

Read More »

ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ

ಬೆಂಗಳೂರು,ಅ.29- ಇಂದು ನಿಧನರಾದ ನಟ ಪುನೀತ್ ರಾಜ್‍ಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ತಂದೆ ವರನಟ ಡಾ.ರಾಜ್‍ಕುಮಾರ್ ಅವರು ನಿಧನರಾದಾಗ ಅವರ ನೇತ್ರಗಳನ್ನು ಕೂಡ ದಾನ ಮಾಡಲಾಗಿತ್ತು. ಆ ಸಂದರ್ಭದಲ್ಲೇ ತಮ್ಮ ನೇತ್ರಗಳನ್ನು ದಾನ ಮಾಡುವ ಸಹಮತಕ್ಕೆ ಸಹಿ ಹಾಕಿದ್ದರು. ಅದರಂತೆ ಇಂದು ಅಪ್ಪು ಅವರ ನೇತ್ರಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ. ಡಾ.ರಾಜ್ ಅವರು ಮೃತಪಟ್ಟ ನಂತರ ಇಬ್ಬರು ಅಂಧರ ಬಾಳಿಗೆ ಬೆಳಕಾಗಿದ್ದರು. ಈಗ …

Read More »

ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು

ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಸುಖಾಸುಮ್ಮನೆ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆ, ಜಾಥಾಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಕರ್ನಾಟಕ ಪೊಲೀಸ್ ಌಕ್ಟ್ ಅಡಿ ನಿಬಂಧನೆ ವಿಧಿಸಲು ಸಿದ್ಧತೆ ನಡೆಸಿದೆ. ಸರ್ಕಾರದಿಂದ ಅನುಮೋದನೆ ಪಡೆಯಲು ನಗರ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದ್ದು, ಯಾವುದೇ ಪ್ರತಿಭಟನೆಗೆ ಕೇವಲ …

Read More »

ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು

ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ‌ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ …

Read More »

BREAKING ಮತ್ತೆ ಏರಿದ ಪೆಟ್ರೋಲ್​ ಬೆಲೆ; ರಾಜ್ಯದಲ್ಲಿ ಎಷ್ಟಾಗಿದೆ ಇಂಧನ ದರ?

ಬೆಂಗಳೂರು: ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಇಂದು ಕೂಡ ಪೆಟ್ರೋಲ್​ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಕಂಡಿದೆ. ನೆನ್ನೆ ಪೆಟ್ರೋಲ್-ಡೀಸೆಲ್​ ದರಗಳಲ್ಲಿ ಏರಿಕೆ ಕಂಡುಬಂದಿದ್ದು, ಪೆಟ್ರೋಲ್ ದರದಲ್ಲಿ 36 ಪೈಸೆ ಮತ್ತು ಡೀಸೆಲ್ ದರದಲ್ಲಿ 37 ಪೈಸೆ ಏರಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 35 ಪೈಸೆ ಮತ್ತು ಲೀಟರ್ ಡೀಸೆಲ್​ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಇದರಂತೆ ದೆಹಲಿಯಲ್ಲಿ ಲೀಟರ್​ ಪೆಟ್ರೋಲ್​ ದರ …

Read More »

ಶಿವಣ್ಣ ಅಭಿಮಾನಿಗಳಿಗೆ ರಸದೌತಣ – ವಿಶ್ವದಾದ್ಯಂತ ಸಾವಿರಕ್ಕೂ ಹೆಚ್ಚು ಸ್ಕ್ರೀನ್ ಮೇಲೆ ಭಜರಂಗಿ -2

ಬೆಂಗಳೂರು: ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ಭಜರಂಗಿ 2 ಇಂದು 375 ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. ವಿಶ್ವದಾದ್ಯಂತ 1000ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಭಜರಂಗಿ ಹವಾ ಕ್ರಿಯೆಟ್ ಮಾಡಲಿದೆ. ಜೆ.ಪಿ.ನಗರದ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಬೆಳಗ್ಗೆ 5 ಗಂಟೆಗೆ ಅಭಿಮಾನಿಗಳಿಗಾಗಿ ವಿಶೇಷ ಶೋ ಆಯೋಜನೆ ಮಾಡಲಾಗಿತ್ತು. ಮೊದಲ ಶೋ ಗಾಗಿ ತುದಿಗಾಲಲ್ಲಿ ಅಭಿಮಾನಿಗಳು ನಿಂತಿದ್ದರು. ತೆರೆ ಮೇಲೆ ಶಿವಣ್ಣನನ್ನ ನೋಡುತಿದ್ದಂತೆ ಹುಚ್ಚೆದ್ದು ಕುಣಿದ ಅಭಿಮಾನಿಗಳು, ಸ್ಕ್ರೀನ್ ಮುಂದೆ ಹೂ ಎರಚಿ …

Read More »

ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ: ಸತೀಶ ಜಾರಕಿಹೊಳಿ 

ಸಿಂಧಗಿ ಚುನಾವಣೆ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸತೀಶ್ ಜಾರಕಿಹೊಳಿ. @Laxminews Gokak ಗೋಕಾಕ: ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಹೀಗಾಗಿ, ಬಿಜೆಪಿಗೆ ಈಗಲೇ ಭಯ ಶುರುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಗೃಹಕಚೇರಿಯಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಲಿನ ಭೀತಿಯಿಂದ ಮುಖ್ಯಮಂತ್ರಿಗಳು ಹಾನಗಲ್ ನಲ್ಲಿ ಬೀಡುಬಿಟ್ಟು ಪ್ರಚಾರ ನಡೆಸಿದ್ದಾರೆ ಎಂದರು. ಉಪಚುನಾವಣೆ ಎಂದರೆ ಹಾಗೆ. …

Read More »