Breaking News

ಜಿಲ್ಲೆ

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ: ಆಣ್ಣಾಸಾಹೇಬ್ ಜೊಲ್ಲೆ

ಬೆಳಗಾವಿಯಲ್ಲಿ ಶೈಕ್ಷಣಿಕ ಕಾರ್ಯಾಗಾರ ಭಾರತದಲ್ಲಿ ಜೀವ ವಿಮೆಯ ಬಗ್ಗೆ ಜಾಗೃತಿ ಮೂಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಮತ್ತು ಮುಂಬೈನ ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಬ್ರೋಕರ್ಸ್ ಪ್ರೈವೆಟ್ ಲಿಮಿಟೆಡ್’ನ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಧಾರವಾಡ, ಕಾರವಾರ, ಗದಗ ಹಾಗೂ ಹಾವೇರಿ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ …

Read More »

ಬೆಳಗಾವಿ ಮಹಾಪಾಲಿಕೆಯಿಂದ ‘ಆಪರೇಷನ್ ಲೈಸೆನ್ಸ್’: ನಿಯಮ ಉಲ್ಲಂಘಿಸಿದ ಖ್ಯಾತ ಮಳಿಗೆಗಳಿಗೆ ಭಾರಿ ದಂಡ!

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಬೆನ್ನಲ್ಲೇ ಈಗ ನಗರದಾದ್ಯಂತ ಹೆಲ್ತ್ ಇನ್ಸ್‌ಪೆಕ್ಟರ್‌ಗಳ ತಂಡ ಅಖಾಡಕ್ಕಿಳಿದಿದೆ. ವ್ಯಾಪಾರ ಪರವಾನಗಿ ಪಡೆಯದೆ ವಹಿವಾಟು ನಡೆಸುತ್ತಿರುವ ದೊಡ್ಡ ದೊಡ್ಡ ಮಳಿಗೆಗಳಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ನಗರದ ಉತ್ತರ ಮತ್ತು ದಕ್ಷಿಣ ವಲಯದ ಆರೋಗ್ಯ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಸಮಾದೇವಿ ಗಲ್ಲಿಯಲ್ಲಿರುವ ಪ್ರಸಿದ್ಧ ‘ಕಲ್ಯಾಣಿ ಸ್ವೀಟ್ ಮಾರ್ಟ್’ ಮೇಲೆ ದಾಳಿ …

Read More »

ಸಾಲದ ಭಾರ ಹೊರೆಸುವ ಬಜೆಟ್

ಲಕ್ಷಾಂತರ ಕೋಟಿ ಸಾಲದ ಭಾರ ಹಾಗೂ ಸಾವಿರಾರು ಸುಳ್ಳಿನ ಭರವಸೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ದಿಕ್ಕು-ದಿಶೆ ಇಲ್ಲದೆ, ಜನಸಾಮಾನ್ಯರ ಆಶಾ-ಆಕಾಂಕ್ಷೆಗಳಿಗೆ ಭಂಗ ತರುವಂತಹ ಬಜೆಟ್ ಇದಾಗಿದೆ.

Read More »

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು, 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, 7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು. ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.

Read More »

ಸವುಳು- ಜವಳಿಗೆ: ಪ್ಯಾಕೇಜ್‌ ನೀಡಿ

ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …

Read More »

ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ

ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್‌ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್‌ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …

Read More »

ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು. ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ …

Read More »

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

ಕೋಲಾರ: ‌ಕುಡಿಯುವ ನೀರಿನ ವಿಚಾರವಾಗಿ ಸರಿಯಾಗಿ ಮಾಹಿತಿ ನೀಡದ ಹಾಗೂ ಸಮಸ್ಯೆ ನೀಗಿಸಲು ಕ್ರಮ ವಹಿಸದ ಅಧಿಕಾರಿಗಳನ್ನು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಬೆವರಿಳಿಸಿದ ಪ್ರಸಂಗ ನಡೆಯಿತು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಬೇಸಿಗೆ ಶುರುವಾಗಿದ್ದು, ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಸೃಷ್ಟಿಯಾದರೆ, ಜನರಿಂದ ದೂರುಗಳು ಬಂದರೆ ಸುಮ್ಮನಿರಲ್ಲ. ನೆಪ ಹೇಳದೆ ಕೆಲಸ ಮಾಡಿ …

Read More »

ಸಚಿವ ದಿನೇಶ್ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಎಐಸಿಸಿ ನೀಡಿದೆ. ಈ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಆದೇಶವನ್ನು ಹೊರಡಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿಯನ್ನು ನೀಡಿದೆ. ಸಚಿವ ದಿನೇಶ್ ಗುಂಡೂರಾವ್ ಅವರನ್ನು ಪುದುಚೇರಿ ವಿಧಾನಸಭೆ ಚುನಾವಣೆ 2026ಕ್ಕೆ ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ. ಮಾರ್ಚ್ 10ರ …

Read More »

ಮಕ್ಕಳ ಹಕ್ಕುಗಳ ರಕ್ಷಣೆ ಪೊಲೀಸರ ಆದ್ಯ ಕರ್ತವ್ಯ; ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಲು ಪೊಲೀಸರಿಗೆ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಕರೆ

ಬೆಂಗಳೂರು : ಮಕ್ಕಳ ಹಕ್ಕುಗಳ ರಕ್ಷಣೆಯ ಉಲ್ಲಂಘನೆ ಪ್ರಕರಣಗಳಿಗೆ ತುರ್ತಾಗಿ ಸ್ಪಂದಿಸಿ, ವರದಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಸಕಾಲದಲ್ಲಿ ನ್ಯಾಯ ಒದಗಿಸುವುದು ಪೊಲೀಸರ ಆದ್ಯ ಕರ್ತವ್ಯವಾಗಿದೆ, ಇದನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಗೃಹ ಇಲಾಖೆ, ಬೆಂಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು, ಇವರ ಸಹಯೋಗದಲ್ಲಿ ವಿಕಾಸ ಸೌಧದ ಸಭಾಂಗಣದಲ್ಲಿ …

Read More »