ನೆಲಮಂಗಲ: ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಎರಡು ಮಾದರಿಯ ಚುಚ್ಚುಮದ್ದುಗಳನ್ನು ಸಮೀಕರಿಸಿಕೊಂಡು ಸ್ವತಃ ಇಂಜೆಕ್ಷನ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಕುಣಿಗಲ್ ವೃತ್ತದ ಬಳಿಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್ (19)ಮೃತ ಆಸ್ಪತ್ರೆ ಸಿಬ್ಬಂದಿ. ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾರ್ವತಿನಗರ ಮಂಜುನಾಥ್ ಎಂಬುವರ ಮಗನಾದ ಈತ ಕಳೆದ ಎರಡು ತಿಂಗಳಿನಿಂದ ಕುಣಿಗಲ್ ವೃತ್ತದ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸಮಾಡುತ್ತಿದ್ದ. ಎಂದಿನಂತೆ ಶನಿವಾರ …
Read More »ಸಮಾಜ ಸೇವೆಗೆ ಜೀವನ ಮೀಸಲು: ಯುವ ನಾಯಕ ರಾಹುಲ್ ಜಾರಕಿಹೊಳಿ
ಯಮಕನಮರಡಿ:ನನ್ನ ಜೀವನ ಸಮಾಜ ಸೇವೆಗೆ ಮೀಸಲು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲ್ಲೂಕಿನ ಕರಗುಪ್ಪಿ ಗ್ರಾಮದಲ್ಲಿ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ತಮ್ಮ 22ನೇ ಜನ್ಮದಿನ ಸಂಭ್ರಮಾಚರಣೆ ಸಮಾರಂಭದಲ್ಲಿ ಮಾತನಾಡಿದರು. ನಾನು ಇತ್ತೀಚೆಗೆ ಏರೊನಾಟಿಕಲ್ ಎಂಜಿನಿಯರಿಂಗ್ ಪದವಿ ಪೂರೈಸಿದ್ದೇನೆ. ಕಳೆದ ಎರಡು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲಿದ್ದೇನೆ’ ಎಂದು ಹೇಳಿದರು. ತಂದೆ ಸತೀಶ ಜಾರಕಿಹೊಳಿ ಅವರೊಂದಿಗೆ ಚಿಕ್ಕಂದಿನಿಂದಲೂ ಸರಿಯಾಗಿ …
Read More »ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾನ್ ಶಾಪ್ ಕಳ್ಳತನ ಪ್ರಕರಣ
ಗೋಕಾಕ ನಗರದ ಶ್ರೀ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿರುವ ಬಸವರಾಜ ಪೂಜೇರಿ ಮಾಲೀಕತ್ವದ ಪಾನ್ ಶಾಪ್ ಅಂಗಡಿ ಇಂದು ಬೆಳಿಗ್ಗೆ ಸುಮಾರು 4 ಘಂಟೆಗೆ ಕೀಲಿ ಲಾಕ್ ಮುರಿದು ಕಳ್ಳತನ ನಡೆದಿದ್ದು.ಬೆಳಿಗ್ಗೆ 5 ಘಂಟೆಗೆ ಅಂಗಡಿ ತೆಗೆಯಲು ಬಂದ್ ಮಾಲೀಕ ಬಸು ಪೂಜೇರಿ ಅಂಗಡಿ ಕಳ್ಳತನ ಆಗಿರುವುದುನ್ನು ಕಂಡು 112 ಸಹಾಯವಾಣಿಗೆ ಕರೆ ಮಾಡಿದ್ದು ಸ್ಥಳಕ್ಕೆ ದೌಡಾಯಿಸಿದ ಪಿಎಸ್ಐ ವಾಲೀಕರ ಹಾಗೂ ಪೊಲೀಸ 112 ಸಿಬ್ಬಂದಿಗಳು ತನಿಖೆ ನಡೆಸಿ ಸ್ಥಳೀಯರಿಂದ …
Read More »ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು : ಬಸವರಾಜ ಬೊಮ್ಮಾಯಿ
ಬೆಂಗಳೂರು: ಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ ಉದ್ದೇಶಕ್ಕೆ ಭೂಮಿ ಹಂಚಿಕೆಯಾಗಿದ್ದರೂ ಕಾರ್ಯಾರಂಭ ಮಾಡದೆ ಇದ್ದರೆ ಪುನರ್ ಪರಿಶೀಲನೆ ನಡೆಸಿ ಭೂಮಿ ಹಂಚಿಕೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಬಳ್ಳಾರಿ ಭಾಗದಲ್ಲಿ ಭೂಮಿ, ನೀರು ಹಂಚಿಕೆಯಾಗಿ ಹತ್ತು ಹನ್ನೆರಡು ವರ್ಷಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಇದರ ಬಗ್ಗೆ …
Read More »ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ
ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಸಂಜಯ್ ಪಾಟೀಲ್, ಕ್ಷಮೆಯಾಚಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದ ಪಂಚಮಸಾಲಿ ಮುಖಂಡರು
ಬೆಳಗಾವಿ; ಮಾಜಿ ಶಾಸಕ, ಬಿಜೆಪಿ ನಾಯಕ ಸಂಜಯ್ ಪಾಟೀಲ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ನೀಡಿರುವ ಅವಹೆಳನಕಾರಿ ಹೇಳಿಕೆಯನ್ನು ಇಡೀ ಪಂಚಮಸಾಲಿ ಸಮಾಜ ಖಂಡಿಸುತ್ತದೆ, ತಕ್ಷಣ ಸಂಜಯ್ ಪಾಟೀಲ್ ಕ್ಷಮೆಯಾಚಿಸಬೇಕು ಎಂದು ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ್ ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಅವಹೇಳಕಾರಿ, ಅಸಹನೀಯ ಶಬ್ದ ಬಳಸಿ ಅವಮಾನಿಸಿರುವುದನ್ನು ಇಡೀ ಸಮುದಾಯ ತೀವ್ರವಾಗಿ ಖಂಡಿಸುತ್ತದೆ. ಇಂತಹ ಹೇಳಿಕೆ ಪುನರಾವರ್ತನೆಯಾದರೆ …
Read More »ವಿದ್ಯುತ್ ಅವಘಡ: ಅಜ್ಜಿಯನ್ನು ರಕ್ಷಣೆ ಮಾಡಲು ಹೋದ ಮೊಮ್ಮಗ ಕೂಡ ಸಾವು
ಚಿಕ್ಕೋಡಿ: ವಿದ್ಯುತ್ ಶಾಕ್ಗೆ ಒಳಗಾಗಿದ್ದ ಅಜ್ಜಿಯನ್ನು ರಕ್ಷಣೆ ಮಾಡಲು ಹೋಗಿದ್ದ ಮೊಮ್ಮಗ ಕೂಡ ಶಾಕ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಡ್ಡಿ ಗಲ್ಲಿಯಲ್ಲಿ ನಡೆದಿದೆ. ಅಜ್ಜಿ ಶಾಂತವ್ವಾ ಬಸ್ತವಾಡೆ, ಮೊಮ್ಮಗ ಸಿದ್ದಾರ್ಥ ಬಸ್ತವಾಡೆ (24) ಸ್ಥಳದಲ್ಲೇ ಸಾವನ್ನಪ್ಪಿದ ಮೃತ ದುರ್ದೈವಿಗಳು. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ ಮತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ನಿನ್ನೆ ರಾತ್ರಿ ಮಳೆ ಸುರಿದ ಹಿನ್ನಲೆ ಹಿತ್ತಲಿನಲ್ಲಿ ಬಟ್ಟೆ ಹಾಕುವ ತಂತಿಗೆ …
Read More »ಬಿಜೆಪಿಯಿಂದ 40 ಜನ ಶಾಸಕರು ಕಾಂಗ್ರೆಸ್ಗೆ ಬರ್ತಾರೆ..- ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ
ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …
Read More »ಬಿಜೆಪಿ ಗೆಲ್ಲಿಸಲು ಜೆಡಿಎಸ್ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …
Read More »
Laxmi News 24×7