Breaking News

ಜಿಲ್ಲೆ

ಇಂದಿನಿಂದ ಪಬ್-ಕ್ಲಬ್‍, ಚಿತ್ರಮಂದಿರ ಫುಲ್ ಓಪನ್..!

ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್‍ಲಾಕ್‍ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ ನೀಡಿತ್ತು. ಹೀಗಾಗಿ ಇಂದಿನಿಂದ ದೇವಸ್ಥಾನ, ಚಿತ್ರಮಂದಿರ, ಪಬ್-ಕ್ಲಬ್‍ಗಳು ಸೇರಿದಂತೆ ಎಲ್ಲದಕ್ಕೂ ಸಂಪೂರ್ಣ ಅನುಮತಿ ದೊರೆಯಲಿದೆ. ಶಾಲಾ-ಕಾಲೇಜುಗಳು ಶೇ.100ರಷ್ಟು ಹಾಜರಾತಿಗೆ ಅನುಮತಿ ಸಿಕ್ಕಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಗಳು ಸಂಪೂರ್ಣವಾಗಿ ನಡೆಯಲಿವೆ. ಈ ನಿಟ್ಟಿನಲ್ಲಿ ಇಂದಿನಿಂದ ಎಲ್ಲವೂ ಅನ್‍ಲಾಕ್ …

Read More »

ಸಿಎಂ ಭೇಟಿ ಮಾಡಿದ ಜಯಮೃತ್ಯುಂಜಯ ಸ್ವಾಮೀಜಿ; ಪಂಚಮಸಾಲಿಗೆ 2 ಮೀಸಲಾತಿ ಚರ್ಚೆ

ಬೆಂಗಳೂರು: ಬಸವ ಜಯಮೃತ್ಯುಂಜಯ ಸ್ವಾಮೀಜಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ್ದಾರೆ. ಈ ಭೇಟಿ ವೇಳೆ ಸ್ವಾಮೀಜಿ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಸ್ವಾಮೀಜಿ, ‘ಮೀಸಲಾತಿಗಾಗಿ ಆಗ್ರಹಿಸಿ ನಡೆಸುವ ಹೋರಾಟ ಕೈಬಿಡುವಂತೆ ಸಿಎಂ ಮನವಿ ಮಾಡಿದ್ದಾರೆ. ಅಲ್ಲದೇ ಮೀಸಲಾತಿ ವಿಚಾರವಾಗಿ ಕೆಲ ಅಂಶಗಳನ್ನು ಸಿಎಂ ಪ್ರಸ್ತಾಪಿಸಿದ್ದಾರೆ’ ಎಂದು ಹೇಳಿದ್ದಾರೆ. ಇನ್ನು ನಮ್ಮ ಮುಂದಿನ …

Read More »

ವರ್ಷಕ್ಕೆ ₹2.5ಕೋಟಿ ನಿರ್ವಹಣೆಗೆ ಬಿಡುಗಡೆ; ಆದರೂ ಕಪ್ಪು ಬಣ್ಣಕ್ಕೆ ತಿರುಗಿದ ಹೆಮ್ಮೆಯ ಸುವರ್ಣಸೌಧ..!

ಬೆಳಗಾವಿ: ಅಂದಾಜು 500 ಕೋಟಿ ರೂಪಾಯಿ ವೆಚ್ಚದಲ್ಲಿ ಕುಂದಾನಗರಿಯಲ್ಲಿ ನಿರ್ಮಾಣವಾಗಿರುವ ಸುವರ್ಣಸೌಧ ಸೂಕ್ತ ನಿರ್ವಹಣೆಯ ಕೊರತೆ ಎದುರಿಸುತ್ತಿದ್ದು, ಬಿಳಿ ಆನೆಯಂತಿದ್ದ ಸೌಧ ಸೂಕ್ತ ನಿರ್ವಹಣೆಯಿಲ್ಲದೆ ಪಾಚಿಗಟ್ಟಿ ಕಪ್ಪುಬಣ್ಣಕ್ಕೆ ತಿರುಗಿದೆ. ಹೌದು.. ಈ ಬಾರಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಸೌಂದರ್ಯ ಕಳೆದುಕೊಂಡ ಸುವರ್ಣಸೌಧ, ಸರಿಯಾಗಿ ನಿರ್ವಹಣೆ ಇಲ್ಲದೇ ಪಾಚಿಗಟ್ಟಿ ಹಸಿರು, ಕಪ್ಪು ಬಣ್ಣಕ್ಕೆ ತಿರುಗಿದೆ. ಪರಿಣಾಮ ಹಳೆ ಕಟ್ಟಡವಾಗಿ ಮಾರ್ಪಾಡಾಗಿದೆ. ಪ್ರತಿ ವರ್ಷ ಲೋಕೋಪಯೋಗಿ ಇಲಾಖೆಯಿಂದ ನಿರ್ವಹಣೆಗಾಗಿಯೇ 2.5ಕೋಟಿ ರೂಪಾಯಿಗಳನ್ನು ಖರ್ಚು …

Read More »

ರೌಡಿ ರಫೀ ವಿರುದ್ಧ ಗೂಂಡಾ ಕಾಯ್ದೆ: ಸಿಸಿಬಿ ಪೊಲೀಸರಿಂದ ಬಂಧನ

ಬೆಂಗಳೂರಿನಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿರುವ ರೌಡಿಗಳ ವಿರುದ್ಧ ನಿರಂತರವಾಗಿ ಸಿಸಿಬಿ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದು,ಇದೀಗ ರೌಡಿ ರಫೀ ಎಂಬಾತನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಇನ್ನು ಬಸವೇಶ್ವರನಗರ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿರುವ ರಫೀ, 2013ರಿಂದ ತಾವರೆಕೆರೆ, ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರಂತರವಾಗಿ ರೌಡಿ ಚಟುವಟಿಕೆಗಳಲ್ಲಿ ತೊಡಗಿಕೊಂಡು ಒಟ್ಟು 8 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಅದಲ್ಲದೆ ರೌಡಿ ರಫೀ ಕಳೆದ ಒಂದೂವರೆ ತಿಂಗಳ ಹಿಂದೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ …

Read More »

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಬೆಳಗಾವಿ: ‘ಸಕ್ಕರೆ ಕಾರ್ಖಾನೆಗಳು ₹ 42.17 ಕೋಟಿ ಕಬ್ಬಿನ ಬಿಲ್ ಪಾವತಿಸುವುದು ಬಾಕಿ ಇದೆ’ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ವಿವಿಧ ಸಭೆಗಳನ್ನು ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ‘ರಾಜ್ಯದಲ್ಲಿ ಒಟ್ಟು 87 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿವೆ. ಅವುಗಳಲ್ಲಿ 64 ಕಾರ್ಖಾನೆಗಳು ಕಾರ್ಯನಿರತವಾಗಿವೆ. 2020-21ನೇ ಕಬ್ಬು ಅರೆಯುವ ಹಂಗಾಮಿನಲ್ಲಿ 440.84 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರೆದು 42.94 …

Read More »

ರಾತ್ರಿ ರಾಜಕೀಯದಿಂದ ಶಾಸಕಿಯಾದ ಲಕ್ಷ್ಮಿ ಹೆಬ್ಬಾಳಕರ: ಸಂಜಯ ಪಾಟೀಲ

ಬೆಳಗಾವಿ: ‘ರಾತ್ರಿ ರಾಜಕೀಯದ ಸಂಸ್ಕೃತಿ ಗೊತ್ತಿದ್ದರಿಂದಲೇ ಕಾಂಗ್ರೆಸ್‌ನ ಲಕ್ಷ್ಮಿ ಹೆಬ್ಬಾಳಕರ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇಲ್ಲದಿದ್ದರೆ ಅವರು ಶಾಸಕಿ ಆಗುವುದಕ್ಕೆ ಸಾಧ್ಯವಿರಲಿಲ್ಲ’ ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಟೀಕಿಸಿದರು. ಇಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಚುನಾವಣೆಗೆ ಮುನ್ನ, ನಾನು ನಿಮ್ಮ ಮನೆ ಮಗಳು ಎಂದೆಲ್ಲಾ ಹೇಳಿ ದೊಡ್ಡ ದೊಡ್ಡ ಕನಸುಗಳನ್ನು ತೋರಿಸಿದ್ದರು. ಆ ಕನಸುಗಳನ್ನು ನನಸು ಮಾಡಲಾಗಿಲ್ಲ. ಹೀಗಾಗಿ, ಗ್ರಾಮೀಣ ಕ್ಷೇತ್ರದ ಜನರು ಪ್ರತಿಕ್ರಿಯೆ ಕೊಡಲು …

Read More »

ಸಿಎಂ ರಾಜಕೀಯ ಕಾರ್ಯದರ್ಶಿಗಳಾಗಿ ರೇಣುಕಾಚಾರ್ಯ, ಜೀವರಾಜ್ ನೇಮಕ: ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾಗಿ ಎಂ.ಪಿ.ರೇಣುಕಾಚಾರ್ಯ ಮತ್ತು ಡಿ.ಎನ್.ಜೀವರಾಜ್ ಅವರನ್ನು ನೇಮಿಸಿ ಸರ್ಕಾರದ ಆದೇಶ ಮಾಡಿದೆ. ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ.ಎನ್.ಜೀವರಾಜ್ ಅವರಿಬ್ಬರೂ ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲೂ ರಾಜಕೀಯ ಕಾರ್ಯದರ್ಶಿಯಾಗಿದ್ದರು. ಇದೀಗ ಅವರನ್ನು ಮತ್ತೆ ನೇಮಕ ಮಾಡಲಾಗಿದೆ.   ತಕ್ಷಣದಿಂದ ಜಾರಿಯಾಗುವಂತೆ ಮತ್ತು ಮುಂದಿನ ಆದೇಶದವರೆಗೆ ಇಬ್ಬರನ್ನೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿ, ಸಂಪುಟ ದರ್ಜೆ ಸಚಿವ ಸ್ಥಾನಮಾನ ನೀಡಲು ಸರ್ಕಾರ ಆದೇಶಿಸಿದೆ.  

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ಹಾಲು ಉತ್ಪಾದಕರಿಗಾಗಿ ಬ್ಯಾಂಕ್‌: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ

ಬೆಂಗಳೂರು: ಹಾಲು ಉತ್ಪಾದಕರ ಅಭಿವೃದ್ಧಿ – ಆರ್ಥಿಕ ಸುಧಾರಣೆಗಾಗಿ ಹಾಲು ಉತ್ಪಾದಕರ ಬ್ಯಾಂಕ್‌ ತೆರೆಯಬೇಕು. ಇದಕ್ಕೆ ಸರಕಾರ 100 ಕೋಟಿ ರೂ. ಮೂಲ ಬಂಡವಾಳ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನೂತನ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿ, ಯೋಜನೆ ಉದ್ಘಾಟಿಸಿ ಅವರು ಮಾತನಾಡಿದರು. ಹಾಲು ಉತ್ಪಾದಕರನ್ನು ಆರ್ಥಿಕವಾಗಿ ಸಶಕ್ತ ಗೊಳಿಸಲು ಮತ್ತು ಮಹಾಮಂಡಳಿ ಹಾಗೂ ಒಕ್ಕೂಟಗಳನ್ನು …

Read More »

ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.   ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …

Read More »