Breaking News

ಜಿಲ್ಲೆ

ಅ.7ಕ್ಕೆ ಚಾಮರಾಜನಗರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮನ

ಚಾಮರಾಜನಗರ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯ ಪ್ರವಾಸವನ್ನು ಹಮ್ಮಿಕೊಂಡಿದ್ದಾರೆ. ಅಕ್ಟೋಬರ್ 7 ರಂದು ಚಾಮರಾಜನಗರಕ್ಕೆ ಆಗಮಿಸಲಿದ್ದಾರೆ. ಅ.6 ರಿಂದ 8 ರವರೆಗೆ ರಾಮನಾಥ್ ಕೋವಿಂದ್ ರಾಜ್ಯ ಪ್ರವಾಸದಲ್ಲಿರಲಿದ್ದಾರೆ. ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೇಗುಲಗಳಿಗೆ ಭೇಟಿ ನೀಡಲಿದ್ದಾರೆ. ಅ.6ರ ಸಂಜೆ 5.30ಕ್ಕೆ ರಾಜಭವನದಲ್ಲಿ ಹೈಕೋರ್ಟ್ ನ್ಯಾಯಾಧೀಶರು ಮತ್ತು ಅವರ ಕುಟುಂಬಸ್ಥರೊಂದಿಗೆ ಚಹಾ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಅ.07 ರ ಬೆಳಗ್ಗೆ 11.40ಕ್ಕೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೆ …

Read More »

ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಬರ್ತ್​​ ಡೇ ಪಾರ್ಟಿ, ಜಕ್ಕಲಮಡಗು ಹಿನ್ನೀರಿನಲ್ಲಿ ಶವವಾದ ಬೆಂಗಳೂರಿನ ಅಕ್ಸೆಂಚರ್ ಟೆಕ್ಕಿ

ಚಿಕ್ಕಬಳ್ಳಾಪುರ: ಬೆಂಗಳೂರು ನಗರದ ಸುಂಕದಕಟ್ಟೆಯ ಯುವಕ ಬರ್ತ್​​ ಡೇ ಪಾರ್ಟಿ ಆಗಮಿಸಿ ಜಕ್ಕಲಮಡಗು ನೀರಿನಲ್ಲಿ ಜಲಸಮಾಧಿಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಜಕ್ಕಲಮಡಗು ಜಲಾಶಯದ ಹಿನ್ನೀರಿನಲ್ಲಿ ಈ ದುರ್ಘಟನೆ ನಡೆದಿದ್ದು, ಅಕ್ಸೆಂಚರ್ ಕಂಪನಿಯ ಸಾಫ್ಟ್​​ವೇರ್ ಎಂಜಿನಿಯರ್​ ರೋಹಿತ್ (24) ಮೃತಪಟ್ಟ ಯುವಕ. ಕುಡಿದ ಅಮಲಿನಲ್ಲಿ ಮರದ ಮೇಲೆ ಸೆಲ್ಫಿ ವಿಡಿಯೋ ಹುಚ್ಚಾಟ: ಅಕ್ಸೆಂಚರ್ ಸಾಫ್ಟ್​​ವೇರ್​ ಎಂಜಿನಿಯರ್ ರೋಹಿತ್ 5 ಮಂದಿ ಸ್ನೇಹಿತರೊಂದಿಗೆ ಬರ್ತ್​​ ಡೇ ಪಾರ್ಟಿ ಆಚರಣೆಗೆ ಬಂದಿದ್ದರು. ಆತನ ಸ್ನೇಹಿತರು ಹಿನ್ನೀರಿನಲ್ಲಿರುವ …

Read More »

ರಾಷ್ಟ್ರೀಯ ಶಿಕ್ಷಣ ನೀತಿ; ಕಾಂಗ್ರೆಸ್ ವಿರುದ್ಧ ಡಾ.ಅಶ್ವತ್ಥನಾರಾಯಣ ಕಿಡಿ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಪಕ್ಷ ದ್ವಂದ್ವ ನೀತಿ ಅನುಸರಿಸುವ ಮೂಲಕ ರಾಜ್ಯದ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗಂಭೀರ ಆರೋಪ ಮಾಡಿದರು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ಬೆಂಗಳೂರಿನಲ್ಲಿಂದು ಬಿಜೆಪಿ ಕೇಂದ್ರ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಹಿಂದಿನ ಕಾಂಗ್ರೆಸ್ ಸರಕಾರ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ಪ್ರಹಾರ ನಡೆಸಿದರು. ರಾಷ್ಟ್ರೀಯ …

Read More »

ಅಕ್ರಮ ಬಡಾವಣೆ: ಸಚಿವರ ಭಿನ್ನ ನಿಲುವು

ಬೆಂಗಳೂರು: ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರೆ, ನಗರ ಸ್ಥಳೀಯ ಸಂಸ್ಥೆಗಳ ಅಕ್ರಮ ಬಡಾವಣೆಗಳಿಗೆ ಮೂಲಸೌಕರ್ಯ ಒದಗಿಸಲಾಗುತ್ತದೆ ಎಂದು ಎಂಟಿಬಿ ನಾಗರಾಜ್‌ ಹೇಳಿದರು. ಇಬ್ಬರು ಸಚಿವರ ಹೇಳಿಕೆಗಳು ಸದಸ್ಯರ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ‘ಈ ಎರಡು ಇಲಾಖೆಗಳು ಸರ್ಕಾರದ ಒಳಗೆ ಇವೆಯೋ ಇಲ್ಲವೇ. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ’ ಎಂದು ಸದಸ್ಯರು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ …

Read More »

ಕರ್ನಾಟಕದಲ್ಲಿ ಹೊಸದಾಗಿ 789 ಜನರಿಗೆ ಕೊರೊನಾ ದೃಢ; 23 ಮಂದಿ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಸೆಪ್ಟೆಂಬರ್ 24) ಹೊಸದಾಗಿ 789 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,71,833 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,20,792 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 23 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,706 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 13,306 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …

Read More »

ಲೋಕಸಭಾಧ್ಯಕ್ಷರಿಗೆ ಅಗೌರವ ಸಲ್ಲದು: ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ‘ಲೋಕಸಭಾಧ್ಯಕ್ಷರು ಮತ್ತು ಅವರು ಅಲಂಕರಿಸಿರುವ ಪೀಠಕ್ಕೆ ಅಗೌರವ ತೋರಬಾರದು ಎನ್ನುವ ಕಾರಣಕ್ಕೆ ಓಂ ಬಿರ್ಲಾ ಅವರ ಭಾಷಣದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದ ಸಂಸದೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ವಿಧಾನಸಭಾಧ್ಯಕ್ಷರು ಲೋಕಸಭೆಯ ಸಭಾಧ್ಯಕ್ಷರನ್ನು ಕರೆಸಿದ್ದಾರೆ. ಇಂತಹ ಅಪರೂಪದ ಸಂದರ್ಭದಲ್ಲಿ ಗೈರಾಗುವುದು ಲೋಕಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದಂತೆ. ಆ ರೀತಿ ಆಗುವುದು …

Read More »

ಮಾಜಿ ಸಿಎಂ ಬಿ.ಎಸ್.​​ ಯಡಿಯೂರಪ್ಪಗೆ ‘ಅತ್ಯುತ್ತಮ ಶಾಸಕ’ ಪ್ರಶಸ್ತಿ

ಬೆಂಗಳೂರು: ಲೋಕಸಭೆ ಮಾದರಿಯಲ್ಲಿ ರಾಜ್ಯ ವಿಧಾನ ಮಂಡಲದಲ್ಲೂ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮೊದಲ ಬಾರಿಗೆ ಪ್ರದಾನ ಮಾಡಲಾಗಿದ್ದು, ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ಅವರು ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಕುರಿತು ಮಾತನಾಡಿದ ಸ್ಪೀಕರ್ ಕಾಗೇರಿ ಅವರು, ಹಲವು ರಾಜ್ಯಗಳಲ್ಲಿ ಉತ್ತಮ ಶಾಸಕ ಪ್ರಶಸ್ತಿ ಕೊಡುವ ಸಂಪ್ರದಾಯವಿದೆ. ಅತ್ಯುತ್ತಮ ಶಾಸಕ ಪ್ರಶಸ್ತಿ ಆಯ್ಕೆಗೆ ಸಮಿತಿಯನ್ನು ರಚನೆ ಮಾಡಲಾಗಿದ್ದು, ಸ್ಪೀಕರ್ ನೇತೃತ್ವದ ಸಮಿತಿಯಲ್ಲಿ ಸಿಎಂ ಬೊಮ್ಮಾಯಿ‌, ಸಿದ್ದರಾಮಯ್ಯ, ಮಾಧುಸ್ವಾಮಿ, ದೇಶಪಾಂಡೆ …

Read More »

ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ. ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು …

Read More »

ಎತ್ತಿನಗಾಡಿ ಚಲೋ ಆಯ್ತು, ಸೈಕಲ್ ಜಾಥಾ ಆಯ್ತು, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ!

ಬೆಂಗಳೂರು: ಬೆಲೆ ಏರಿಕೆಯನ್ನೇ ಅಸ್ತ್ರವಾಗಿ ಬಳಸಿಕೊಂಡ ಕೈ ನಾಯಕರು, ಮೇಲಿಂದ ಮೇಲೆ ಪ್ರತಿಭಟನೆ ನಡೆಸುತ್ತಿದ್ದಾರೆ. ಎತ್ತಿನಗಾಡಿ ಚಲೋ, ಸೈಕಲ್ ಜಾಥಾ ಬಳಿಕ, ಇದೀಗ ಕಾಂಗ್ರೆಸ್​ನಿಂದ ಟಾಂಗಾ ಜಾಥಾ ನಡೆಯುತ್ತಿದೆ. ಮೂರನೇ ಬಾರಿ ವಿಧಾನಸೌಧಕ್ಕೆ ಟಾಂಗದಲ್ಲಿ ಬರುವ ಮೂಲಕ ವಿನೂತನ ಹೋರಾಟಕ್ಕೆ ಕೈ ನಾಯಕರು ಮುಂದಾಗಿದ್ದಾರೆ. ವಿಪಕ್ಷ ನಾಯಕ‌ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜಾಥಾ ನಡೆಯುತ್ತಿದೆ. ಟಾಂಗ ಜಾಥಾ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ …

Read More »

ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ತೀವ್ರಗೊಳಿಸಿದ್ದೇವೆ:ಆಯುಕ್ತ ರಂದೀಪ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೂ ಲಸಿಕೆ ಪಡೆಯದವರನ್ನು ಗುರುತಿಸಿ ಪಾಲಿಕೆ ಸಂಚಾರಿ ಲಸಿಕಾ ತಂಡವು ಮನೆ-ಮನೆಗೆ ತೆರಳಿ ಲಸಿಕೆ ನೀಡುತ್ತಿದೆ. ವಿಶೇಷವಾಗಿ ಮನೆಯಿಂದ ಹೊರಗೆ ಬಾರದಂತಹ ಹಿರಿಯರು, ವಿಕಲಚೇತನರು ಹಾಗೂ ವೃದ್ಧಾಶ್ರಮಗಳಿಗೆ ಸಂಚಾರಿ ಮೊಬೈಲ್ ತಂಡ ಭೇಟಿ ನೀಡಿ ಲಸಿಕೆ ನೀಡಲಾಗುತ್ತಿದೆ. ಜೊತೆಗೆ ಕೊಳಗೇರಿ ಪ್ರದೇಶದ ಮನೆ-ಮನೆಗೆ ಭೇಟಿ ನೀಡಿ ಲಿಸಕೆ ಪಡೆಯದವರಿಗೆ ಜಾಗೃತಿ ಮೂಡಿಸಿ ಲಸಿಕೆ ನೀಡುವ ಕೆಲಸ ಮಾಡಲಾಗುತ್ತಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ …

Read More »