Breaking News

ಜಿಲ್ಲೆ

ಬೆಂಗಳೂರಿನಲ್ಲಿ ಸೆ. 25ರವರೆಗೂ ಗುಡುಗು ಸಹಿತ ಭಾರೀ ಮಳೆ; ಸಂಜೆ ಬೇಗ ಮನೆ ಸೇರಿಕೊಳ್ಳಿ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bangalore Rain) ಒಂದು ಗಂಟೆ ಮಳೆ ಸುರಿದರೂ ಜನಜೀವನ ಅಸ್ತವ್ಯಸ್ತವಾಗಿ ಬಿಡುತ್ತದೆ. ಚರಂಡಿ ವ್ಯವಸ್ಥೆ, ರಾಜಕಾಲುವೆಗಳ ಅವ್ಯವಸ್ಥೆ, ತಗ್ಗು ಪ್ರದೇಶದಲ್ಲಿ ಮನೆಗಳನ್ನು ನಿರ್ಮಾಣ ಮಾಡಿರುವುದು ಹೀಗೆ ನಾನಾ ಕಾರಣಗಳಿಂದ ಮಳೆಗಾಲದಲ್ಲಿ ಬೆಂಗಳೂರಿಗರಿಗೆ ನರಕ ದರ್ಶನವಾಗುತ್ತಲೇ ಇರುತ್ತದೆ. ಇಂದಿನಿಂದ ಸೆ. 25ರವರೆಗೂ ಬೆಂಗಳೂರಿನಲ್ಲಿ ಮತ್ತೆ ಮಳೆ (Heavy Rain in Bengaluru) ಜೋರಾಗಲಿದ್ದು, ಇಂದಿನಿಂದ 5 ದಿನ ಗುಡುಗು- ಮಿಂಚು (Bengaluru Rains) ಸಹಿತ ಭಾರೀ ಮಳೆಯಾಗಲಿದೆ. …

Read More »

ಬೆಳಗಾವಿಯಲ್ಲಿ ಎಂಇಎಸ್‌ನಿಂದ ದಿನಕ್ಕೊಂದು ನಾಟಕ; ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ

ಬೆಳಗಾವಿ: ಜಿಲ್ಲೆಯಲ್ಲಿ ಎಂಇಎಸ್‌ನಿಂದ (Maharashtra Ekikaran Samiti -MES) ದಿನಕ್ಕೊಂದು ವಿಚಾರದಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕವೂ ಪದೇಪದೇ ಸಾಮಾಜದ ಸ್ವಾತ್ಯವನ್ನು ಹಾಳು ಮಾಡುವ ಪ್ರಯತ್ನಗಳು ನಡೆಯುತ್ತಿದೆ ಎಂದು ಆರೋಪಗಳು ಕೇಳಿ ಬಂದಿವೆ. ಭಾಷಾ ರಾಜಕಾರಣದ ಹೆಸರಲ್ಲಿ ವಿಷಬೀಜ ಬಿತ್ತಲು ಪ್ರಯತ್ನ ಗಣೇಶ ವಿಸರ್ಜನೆ ವೇದಿಕೆ ಮೇಲೆ ಕನ್ನಡ ನಾಮಫಲಕವಷ್ಟೇ ಇದ್ದಿದ್ದಕ್ಕೆ ಎಂಇಎಸ್ ಖ್ಯಾತೆ ತೆಗೆದಿದೆ. ಇಷ್ಟೇ ಅಲ್ಲದೆ ಎಂಇಎಸ್ ಪುಂಡರ ವಿರುದ್ಧ …

Read More »

ಮೈಸೂರು ರಾಜಮನೆತನದ ಆನೆಗಳನ್ನು ಗುಜರಾತ್​ಗೆ ಕಳುಹಿಸಲು ನಿರ್ಧಾರ; ಕಾರಣ ಇಲ್ಲಿದೆ

ಮೈಸೂರು: ರಾಜಮನೆತನದ ಆನೆಗಳನ್ನು (Elephants) ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಅರಮನೆಯಲ್ಲಿರುವ ಪ್ರತಿ ಆನೆಗಳನ್ನು ನಿರ್ವಹಣೆ ಮಾಡಲು ದಿನಕ್ಕೆ 10 ಸಾವಿರ ರೂ. ಖರ್ಚಾಗುತ್ತಿದೆ. ತಿಂಗಳಿಗೆ 6 ಆನೆಗಳ ನಿರ್ವಹಣೆಗೆ ಸುಮಾರು 18 ಲಕ್ಷ ರೂ. ವೆಚ್ಚವಾಗುತ್ತಿದೆ. ಹೀಗಾಗಿ ನಾಲ್ಕು ಆನೆಗಳನ್ನು ಗುಜರಾತ್​ಗೆ ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಸದ್ಯ ಆರು ಆನೆಗಳಿದ್ದು, ಇದರಲ್ಲಿ ನಾಲ್ಕು ಆನೆಗಳು ಗುಜರಾತ್​ಗೆ ಕಳುಹಿಸಲಾಗುತ್ತದೆ. ಇನ್ನುಳಿದ ಎರಡು ಆನೆಗಳು ಅರಮನೆಯಲ್ಲೇ ಉಳಿದುಕೊಳ್ಳಲಿವೆ. ಅರಮನೆ ಆನೆಗಳು ದಸರಾ …

Read More »

ಕಾರ್ಮಿಕ ಇಲಾಖೆ ಫುಡ್ ಕಿಟ್ ವಿತರಣೆಯಲ್ಲಿ ಅವ್ಯವಹಾರ, ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಬೆಳಗಾವಿ: ಕಾರ್ಮಿಕ ಇಲಾಖೆ ಫುಡ್ ಕಿಟ್ ಅಕ್ರಮ ದಾಸ್ತಾನು ಆರೋಪ ಕೇಳಿ ಬಂದಿದೆ. ಫುಡ್ ಕಿಟ್ಗಳನ್ನು ಹಳೆ ಬೆಳಗಾವಿಯ ಸಾಯಿ ಭವನದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗುತ್ತಿದ್ದು ಲಾಕ್‌ಡೌನ್ ವೇಳೆ ಕಾರ್ಮಿಕರಿಗೆ ನೀಡಬೇಕಿದ್ದ ಫುಡ್ ಕಿಟ್ಗಳನ್ನು ಬಿಜೆಪಿ ಕಾರ್ಯಕರ್ತರ ಮನೆಗೆ ರವಾನೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಅವಧಿ ಮುಗಿದ ಫುಡ್ ಕಿಟ್ ವಿತರಣೆ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತೆ ಸರಳಾ ಸಾತಪೂತೆ ಬೆಳಗಾವಿಯ ಶಹಾಪುರ …

Read More »

ಸದನದಲ್ಲಿ ಬೆಲೆ ಏರಿಕೆ ಗದ್ದಲ: ಬಿಜೆಪಿಯದ್ದು ಲೂಟಿ ಸರ್ಕಾರ ಎಂದ ‘ಸಿದ್ದು’; ‘ಭೂತದ ಬಾಯಲ್ಲಿ ಭಗವದ್ಗೀತೆ’ ಎಂದು ವಿಪಕ್ಷಗಳಿಗೆ ಸಿಎಂ ಬೊಮ್ಮಾಯಿ ‘ಗುದ್ದು’

ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ಪರಸ್ಪರ ವಾಕ್ಸಮರ, ವಾಗ್ದಾಳಿಗಳಿಗೆ ಕಾರಣವಾಗಿದೆ. ಬೆಲೆ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಉತ್ತರಿಸಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು ನಿಜ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ ಅದಕ್ಕೆ ಪೆಟ್ರೋಲ್, ಡಿಸೆಲ್ ಬೆಲೆ ಏರಿಕೆಯಾಗಿರುವುದು ಮಾತ್ರ ಕಾರಣವಲ್ಲ, ಬೇರೆ ಬೇರೆ ಕಾರಣಗಳಿಂದ ಬೆಲೆ …

Read More »

‘ಮೋದಿ ಅಲೆ ಭ್ರಮೆ’ ಬಗ್ಗೆ ಬಿಎಸ್‌ವೈ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ

ಬೆಂಗಳೂರು, ಸೆಪ್ಟೆಂಬರ್‌ 20: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲೆಯ ವಿಚಾರವಾಗಿ ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ನೀಡಿರುವ ಹೇಳಿಕೆಯು ಹಲವಾರು ಕರ್ನಾಟಕ ಬಿಜೆಪಿ ನಾಯಕರು ಹಾಗೂ ಕೇಂದ್ರ ಬಿಜೆಪಿ ನಾಯಕರು ಅಸಮಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ. ಕರ್ನಾಟಕ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ದಾವಣಗೆರೆಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಯಾವ ರೀತಿಯಲ್ಲಿ ಗಟ್ಟಿಗೊಳಿಸುವುದು …

Read More »

ಜನ ಕಲ್ಯಾಣಕ್ಕಾಗಿ ನವ ಚಂಡಿಕಾ ಹೋಮ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕ್ಷೇತ್ರದ ಜನರು, ಕೆಎಂಎಫ್ ಸಂಸ್ಥೆಯ ಪ್ರಗತಿ ಹಾಗೂ ಕುಟುಂಬಸ್ಥರ ಏಳ್ಗೆಗಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ನವ ಚಂಡಿಕಾ ಹೋಮ ನೆರವೇರಿಸಿದರು.   ಕಳೆದ ಭಾನುವಾರ ಮತ್ತು ಸೋಮವಾರದಂದು ಎರಡು ದಿನಗಳವರೆಗೆ ಉಡುಪಿ ಜಿಲ್ಲೆಯ ನಾಡಿನ ಸುಪ್ರಸಿದ್ಧ ದೇವಸ್ಥಾನವಾಗಿರುವ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಹೋಮ-ಹವನ ನೆರವೇರಿಸಿದರು.   ಕಳೆದ ಎರಡು …

Read More »

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ …

Read More »

ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ.

ಬೆಳಗಾವಿ – ಸದಾ ಕಿರಿಕ್ ಮಾಡುತ್ತ ಕನ್ನಡಿಗರನ್ನು ಕೆಣಕುವ ಮಹಾರಾಷ್ಟ್ರ ಏಕೀಕರಣ ಸಮಿತಿ ಫುಡರಿಗೆ ಭಾನುವಾರ ಮಧ್ಯರಾತ್ರಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಪಾಠ ಕಲಿಸಿದ್ದಾರೆ. ಗಣೇಶ ವಿಸರ್ಜನೆ ಸ್ಥಳದಲ್ಲಿ ಕನ್ನಡದಲ್ಲಿ ಮಾತ್ರ ಬ್ಯಾನರ್ ಹಾಕಿದ್ದರಿಂದ ಎಇಎಸ್ ಫುಂಡರು ಗಲಾಟೆ ಶುರು ಮಾಡಿದರು. ಈ ವೇಳೆ ಅವರನ್ನು ಶಾಂತವಾಗಿಯೇ  ಸಮಾಧಾನಪಡಿಸಲು ಪಾಲಿಕೆಯ ಉಪಾಯುಕ್ತೆ ಲಕ್ಷ್ಮಿ ನಿಪ್ಪಾಣಿಕರ್ (ಸುಳಗೆಕರ್) ಪ್ರಯತ್ನಿಸಿದರು. ಆದರೆ ಇದರಿಂದ ಅವರ ಪುಂಡಾಟಿಕೆ ನಿಲ್ಲುವ ಬದಲು ಮತ್ತಷ್ಟು ಜೋರಾಯಿತು. ಅಧಿಕಾರಿಗೆ ಬೆದರಿಕೆ …

Read More »

ವಿದೇಶಿ ಏಜೆನ್ಸಿಗಳಿಗೆ ರಕ್ಷಣಾ ಮಾಹಿತಿ ನೀಡುತ್ತಿದ್ದ ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಬಂಧನ

ಬೆಂಗಳೂರು: ನಗರದ ಸಿಸಿಬಿ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ವಿಭಾಗದ ಅಧಿಕಾರಿಗಳ ಜಂಟಿ ಕಾರ್ಯಾಚಾರಣೆಯಲ್ಲಿ ವಿದೇಶಿ ಏಜೆನ್ಸಿಗಳಿಗೆ ಭಾರತದ ರಕ್ಷಣಾ ಮಾಹಿತಿ ನೀಡುತ್ತಿದ್ದ ಯುವಕನ್ನು ಬಂಧಿಸಲಾಗಿದೆ. ರಾಜಸ್ಥಾನ ಮೂಲದ ಈತ ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ ಎನ್ನಲಾಗಿದೆ. ಆರೋಪಿಯು ರಾಜಸ್ಥಾನದ ಬೆರ್ಮರ್ ಮೂಲದವನು. ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದ. ಸೇನೆಯ ಕಮಾಂಡೋ ಸಮವಸ್ತ್ರ ಧರಿಸಿ ಬಾರ್ಮರ್ ನ ಮಿಲಿಟರಿ ಸ್ಟೇಶನ್ ಮಾಹಿತಿ, ಸೇನಾ ವಾಹನಗಳ ಓಡಾಟದ ಮಾಹಿತಿಯನ್ನು …

Read More »