Breaking News

ಜಿಲ್ಲೆ

ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶ: ಸರ್ಕಾರದ ಆದೇಶ ರದ್ದು

ಬೆಂಗಳೂರು: 2020-21ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಶೇ.15 ರಷ್ಟು ಶಾಲಾ ಶುಲ್ಕ ರಿಯಾಯಿತಿಗೆ ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, ಖಾಸಗಿ ಮತ್ತು ಅನುದಾನಿತ ಶಾಲೆಗಳು ಶೇ.70ರಷ್ಟು ಮಾತ್ರ ಶುಲ್ಕ ಸ್ವೀಕರಿಸಬೇಕು, ಶೇ.30ರಷ್ಟು ರಿಯಾಯಿತಿ ನೀಡಬೇಕೆಂದು ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಕರ್ನಾಟಕದಲ್ಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್ ) ಸೇರಿ ಹಲವು ಸಂಘಟನೆಗಳು ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಆರ್.ದೇವದಾಸ್ ಅವರಿದ್ದ ಏಕಸದಸ್ಯ …

Read More »

ಬೆಳಗಾವಿ :ಆಹಾರ ಕಿಟ್​​ ಅನ್ನು ಬಿಜೆಪಿ ನಾಯಕರ ಮನೆಗಳಿಗೆ ಸಾಗಾಟ ಮಾಡಲಾಗುತ್ತಿದೆ.: ಬಿಜೆಪಿ ನಾಯಕರ ವಿರುದ್ಧ ಗಂಭೀರ ಆರೋಪ

ಬೆಳಗಾವಿ: ಕೊವೀಡ್​​ನಿಂದ ಕೆಲಸ ಕಳೆದುಕೊಂಡು ಸಂಕಷ್ಟಕ್ಕೀಡಾದ ಬಡ ಕೂಲಿ ಕಾರ್ಮಿಕರಿಗೆ ಒಂದಿಷ್ಟು ಅನುಕೂಲವಾಗಲೇಂದು ಕಾರ್ಮಿಕ ಕಲ್ಯಾಣ‌ ಇಲಾಖೆಯಿಂದ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಎಲ್ಲಾ ಕಾರ್ಮಿಕರಿಗೆ ಆಹಾರ ಕಿಟ್​​ ಅನ್ನು ವಿತರಣೆ ಮಾಡಲಾಗುತ್ತಿದೆ. ಆದರೆ ಇಂತಹ ಕಿಟ್​​ಗಳು ಬಡ ಕೂಲಿ ಕಾರ್ಮಿಕರ ಕೈ ಸೇರುವ ಬದಲು ಪ್ರಭಾವಿ ಬಿಜೆಪಿ ನಾಯಕರ ಮನೆಗಳನ್ನು ಸೇರುತ್ತಿವೆ ಎಂಬ ಆರೋಪ ಕೇಳಿ ಬಂದಿವೆ. ಹೌದು, ಬೆಳಗಾವಿ ದಕ್ಷಿಣ ವುಧಾನಸಭಾ ಕ್ಷೇತ್ರದಲ್ಲಿನ ನೋಂದಾಯಿತ ಕಾರ್ಮಿಕರಿಗಾಗಿ ಹಲವು ತಿಂಗಳ …

Read More »

ಸಾರಿಗೆ ಸಚಿವರ ತವರೂರಲ್ಲಿಯೇ ಬಸ್​ಗಾಗಿ ವಿದ್ಯಾರ್ಥಿಗಳ ಪರದಾಟ

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್​ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ. ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬಸ್​ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್​ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್​ ಬಾಗಿಲಲ್ಲಿ ನೇತಾಡುತ್ತ ಸಂಚಾರ …

Read More »

ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶ

ಚಿಕ್ಕೋಡಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರವಾಡಿ ಮತ್ತು ಮಾಂಜರಿವಾಡಿ ಗ್ರಾಮಕ್ಕೆ ಸೇರಿದ 15 ಕ್ಕೂ ಹೆಚ್ಚು ರೈತರ ಜಮೀನುಗಳ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಬೆಳೆ ಹಾನಿಯಿಂದ 15 …

Read More »

ಭಾರೀ ಮಳೆ- ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು

ಬಾಗಲಕೋಟೆ: ಭಾರೀ ಮಳೆ ಹಿನ್ನೆಲೆಯಲ್ಲಿ ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಟ್ಟಿರುವುದರಿಂದ ಜಿಲ್ಲೆಯ ಮಲಪ್ರಭಾ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಪ್ರವಾಹ ಆತಂಕ ಶುರುವಾಗಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮದ ಕೆಳ ಸೇತುವೆ ಮುಳುಗಡೆ ಆಗಿದ್ದು, ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಪಕ್ಕದ ಗದಗ ಜಿಲ್ಲೆಯ ಕೊಣ್ಣೂರ ಹಾಗೂ ಬಾಗಲಕೋಟೆ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಕೆಳ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹೊಸ …

Read More »

ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ

ಚಿಕ್ಕೋಡಿ: ಭಾದ್ರಪದ ಮಾಸದ ಪ್ರಥಮ ಮಂಗಳವಾರ ಪ್ರತಿ ವರ್ಷ ವೀರಭದ್ರೇಶ್ವರ ಜಯಂತಿಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಅತಿ ಸರಳವಾಗಿದೆ ಆಚರಣೆ ಮಾಡಿದರು.   ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರ ದೇವಸ್ಥಾನದಲ್ಲಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಿ ವಿಶ್ವ ಶಾಂತಿಗಾಗಿ ದೇವರಲ್ಲಿ ಆರಾಧಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಕೊರೊನಾ …

Read More »

ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ

ಬೆಳಗಾವಿ: ಗುಟ್ಕಾ ಸಾಲ ಕೊಡಲಿಲ್ಲ ಎಂಬ ಕಾರಣಕ್ಕೆ ಪಾನ್ ಶಾಪ್ ಮಾಲೀಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಘಟನೆಯಿಂದ ಕುಂದಾನಗರಿ ಜನ ಬೆಚ್ಚಿಬಿದ್ದಿದ್ದಾರೆ.   ಮಂಗಳವಾರ ರಾತ್ರಿ ಬೆಳಗಾವಿಯ ವಡಗಾವಿ ಪ್ರದೇಶದ ಲಕ್ಷ್ಮೀ ನಗರದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಜೋರಾಗಿತ್ತು. ಜನರು ಗಣೇಶನ ವಿಸರ್ಜನೆಯಲ್ಲಿಯೇ ತಲ್ಲೀನರಾಗಿದ್ದರು. ಆದರೆ ಇತ್ತ ಆರೋಪಿ ದತ್ತಾತ್ರೇಯ ಶಿವಾನಂದ ಜತ್ತಿನಮಠ ಗುಟ್ಕಾ ಸಾಲ ಕೊಡು ಎಂದು ಬಂದಿದ್ದು, ಉದ್ರಿ ಕೊಡುವುದಿಲ್ಲ ಎಂದು ಪಾನ್ …

Read More »

ನಮಗೆ ಮನೆ ಕಟ್ಟಿಸಿ ಕೊಡಿ- ಘಟಪ್ರಭಾ ಪ್ರವಾಹದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಂದ ಪ್ರತಿಭಟನೆ

ಬೆಳಗಾವಿ: ಗೋಕಾಕ್ ತಾಲೂಕಿನ ಅರಭಾವಿ ಕ್ಷೇತ್ರದಲ್ಲಿ 2019ರಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಈವರೆಗೆ ಸರ್ಕಾರ ಮನೆ ಕಟ್ಟಿ ಕೊಟ್ಟಿಲ್ಲ. ಇದರಿಂದ ಆಕ್ರೋಶಗೊಂಡಿರುವ ಸಂತ್ರಸ್ತರು ಬುತ್ತಿ ಕಟ್ಟಿಕೊಂಡು ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. ನಮಗೆ ಮನೆ ಕಟ್ಟಿಸಿಕೊಡುವ ಆದೇಶ ಬರುವವರೆಗೂ ಇಲ್ಲಿಂದ ಕದಲುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಅರಭಾವಿ ಕ್ಷೇತ್ರದ ಅಡಿಬಟ್ಟಿ, ಚಿಗಡೊಳ್ಳಿ, ಮೇಳವಂಕಿ, ಹಡಗಿನಾಳ, ಉದಗಟ್ಟಿ, ತಿಗಡಿ, ಮಸಗುಪ್ಪಿ, ಕಲಾರಕೊಪ್ಪ, ಅಳ್ಳಿಮಟ್ಟಿ, ಸುಣಧೋಳಿ, ಢವಳೇಶ್ವರ, ಮುನ್ಯಾಳ, ಕಮಲದಿನ್ನಿ, …

Read More »

ಬೆಳಗಾವಿಯ 46 ಅನಧಿಕೃತ ಧಾರ್ಮಿಕ ಕಟ್ಟಡಗಳ ಗುರುತು, ಶೀಘ್ರವೇ ತೆರವು ಎಂದ ಬೆಳಗಾವಿ ಡಿಸಿ….!

    ಬೆಳಗಾವಿ: ಅನಧಿಕೃತ ಧಾರ್ಮಿಕ ಕೇಂದ್ರಗಳ ಕಟ್ಟಡ ತೆರವಿಗೆ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ 46 ಅನಧಿಕೃತ ಧಾರ್ಮಿಕ ಕೇಂದ್ರಗಳನ್ನು ಗುರುತಿಸಲಾಗಿದೆ. ಶೀಘ್ರವೇ ಈ ಎಲ್ಲವನ್ನೂ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ. ಈ ಎಲ್ಲ 46 ಧಾರ್ಮಿಕ ಕೇಂದ್ರ ಕಟ್ಟಡಗಳು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿವೆ. ಈಗಾಗಲೇ ಒಟ್ಟು 17 ಅನಧಿಕೃತ ಧಾರ್ಮಿಕ ಕೇಂದ್ರದ ಕಟ್ಟಡಗಳ ತೆರವು ಮಾಡಲಾಗಿದೆ. ಇನ್ನುಳಿದ 29 ಅನಧಿಕೃತ ಧಾರ್ಮಿಕ ಕೇಂದ್ರ …

Read More »

ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿಯನ್ನು ಚಿಕ್ಕೋಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ

    ಗೋಕಾಕ ಸರಕಾರಿ ಆಸ್ಪತ್ರೆ ಅವಾಚ್ಯ ಶಬ್ದಗಳ ಬಳಕೆ ಪ್ರಕರಣ ಹಿನ್ನೆಲೆ ಗೋಕಾಕ ಶಹರ ಪಿಎಸ್‌ಐ ಅಮ್ಮಿನಭಾವಿ ವರ್ಗಾವಣೆ ಗೋಕಾಕ ಶಹರ ಪೊಲೀಸ್ ಠಾಣೆ ಪಿಎಸ್‌ಐ ಅಮ್ಮಿನಭಾವಿ   ಮಧ್ಯಪಾನ ಮಾಡಿ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಹೋಗಿ ಡ್ಯೂಟಿಯಲ್ಲಿದ್ದ ಡಾ.ವಿಶ್ವನಾಥ ಭೋವಿ ಹಾಗೂ ಸಿಬ್ಬಂದಿಗಳಿಗೆ   ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಯತ್ನ ಮಾಡಿರುವ ಪ್ರಕರಣ ಹಿನ್ನೆಲೆ ಅವರನ್ನು ಗೋಕಾಕ ಶಹರ ಪೊಲೀಸ್ ಠಾಣೆ ಯಿಂದ ಚಿಕ್ಕೋಡಿ ಸಂಚಾರಿ …

Read More »