ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಸುದ್ದಿಯಲ್ಲಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆಗಳ ಪರೀಕ್ಷೆಯ ಅರ್ಹತಾ ಪಟ್ಟಿಯನ್ನು ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ಬಿಡುಗಡೆ ಮಾಡಿದ್ದು, ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಬಹುಸಂಖ್ಯೆಯಲ್ಲಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಪಿಎಸ್ಸಿ ಬಿಡುಗಡೆ ಮಾಡಿದ ಎಫ್ಡಿಎ ಅರ್ಹತಾ ಪಟ್ಟಿಯಲ್ಲಿ 5241, 42, 43 ನೋಂದಣಿ ಸಂಖ್ಯೆಯಲ್ಲಿರುವ ಒಂದೇ ಸಮುದಾಯದ (ನಾಯ್್ಕ ಸುಮಾರು 70ಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದಾರೆ. ಈ ಎಲ್ಲ ಅಭ್ಯರ್ಥಿಗಳು ಒಂದೇ …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಧಿವೇಶನದ ಅಗ್ನಿ ಪರೀಕ್ಷೆ
ಬೆಂಗಳೂರು: ಮುಖ್ಯಮಂತ್ರಿಯಾಗಿ ನಲವತ್ತೈದು ದಿನಗಳ ಆಡಳಿತ ನಿರ್ವಹಣೆಯಲ್ಲಿ ಸೈ ಎನಿಸಿಕೊಂಡಿರುವ ಬಸವರಾಜ ಬೊಮ್ಮಾಯಿ ಅವರಿಗೆ ವಿಧಾನಮಂಡಲ ಅಧಿವೇಶನ ಅಗ್ನಿಪರೀಕ್ಷೆಯಾಗಲಿದೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಾಗ ತಕ್ಕ ತಿರುಗೇಟು ನೀಡುವ ಮೂಲಕ ಸಿಎಂಗೆ ಬೆಂಬಲ ನೀಡುತ್ತಿದ್ದ ಬಸವರಾಜ ಬೊಮ್ಮಾಯಿ ಅವರೀಗ ಸವಾಲುಗಳಿಗೆ ಸ್ವತಃ ಎದೆಯೊಡ್ಡಬೇಕಾಗಿದೆ. ರಾಜ್ಯ ರಾಜಕಾರಣದಲ್ಲಿ ಮೂರು ದಶಕಗಳಿಗೂ ಹೆಚ್ಚು ಅನುಭವ ಹೊಂದಿರುವ ಮತ್ತು ಉಭಯ ಸದನಗಳಲ್ಲೂ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಬಸವರಾಜ ಬೊಮ್ಮಾಯಿ ಅವರಿಗೆ …
Read More »ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ: ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್-19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಹಬ್ಬಗಳ ಸಾಲುಗಳು ಈ ತಿಂಗಳಲ್ಲಿ ಬರುವುದರಿಂದ ಇತ್ತೀಚೆಗೆ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಕಠಿಣವಾಗಿ ಜಾರಿಗೊಳಿಸಿ ಪಾಲಿಸಬೇಕೆಂದು ಟಿಎಸಿ ಹೇಳಿದೆ. “ಒಂದು ವೇಳೆ ಮಾರ್ಗಸೂಚಿಗಳನ್ನು ಪಾಲಿಸದೇ ಇದ್ದಲ್ಲಿ ಅವ್ಯವಸ್ಥೆ ಉಂಟಾಗಲಿದೆ. ಈ ಹಂತದಲ್ಲಿ ಮಾರ್ಗಸೂಚಿಗಳನ್ನು ಪಾಲಿಸುವುದು ಬಹಳ ಮುಖ್ಯ. ರಾಜ್ಯದಲ್ಲಿ ಈಗ ಕೋವಿಡ್-19 ಸೋಂಕು ಪ್ರಸರಣ ಸಂಖ್ಯೆ …
Read More »ಪುರಾತನ ಹಿಂದೂ ದೇವಾಲಯಗಳ ತೆರವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಮೈಸೂರಿನಲ್ಲಿ ಪುರಾತನ ಹಿಂದೂ ದೇವಾಲಯಗಳನ್ನು ತೆರವುಗೊಳಿಸಲಾಗಿದ್ದು, ಈ ವಿಚಾರವಾಗಿ ಕಿಡಿಕಾರಿರುವ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ದೇವಾಲಯಗಳನ್ನು ಕೆಡವಿದ್ದು ಖಂಡನೀಯ. ಇದು ಹಿಂದೂ ಭಾವನೆಗಳಿಗೆ ನೋವುಂಟುಮಾಡಿದೆ. ಇದಕ್ಕೆ ಸರ್ಕಾರವೇ ಹೊಣೆ. ತೆರವುಗೊಳಿಸಿದ ದೇವಾಲಯವನ್ನು ಪುನರ್ ನಿರ್ಮಾಣಕ್ಕೆ ತಕ್ಷಣ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ನಂಜನಗೂಡಿನ …
Read More »ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು: ಮರಾಠಿಗರನ್ನ ಖುಷಿ ಪಡಿಸಲ ಬಿಜೆಪಿ ಮಾಸ್ಟರ್ ಪ್ಲ್ಯಾನ್!
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆಗಾಗಿ ಸೂತ್ರ ಸಿದ್ಧಪಡಿಸಿರುವ ಬಿಜೆಪಿ, ಮರಾಠ ಸಮುದಾಯವನ್ನು ಖುಷಿ ಪಡಿಸಲು ಪ್ಲ್ಯಾನ್ ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನೇತೃತ್ವದಲ್ಲಿ ಯೋಜನೆ ರೂಪಿಸಿರುವ ಬಿಜೆಪಿ ನಾಯಕರು, ಮರಾಠಿ ಭಾಷಿಕರಿಗೇ ಮೇಯರ್ ಹುದ್ದೆ ನೀಡಲು ಚಿಂತನೆ ನಡೆಸಿದೆ. ಈ ಬಾರಿ ಪಾಲಿಕೆ ಚುನಾವಣೆಯಲ್ಲಿ ಮರಾಠಿ ಭಾಷಿಕರು ಎಂಇಎಸ್ ಬದಲು ಬಿಜೆಪಿಗೆ ಜೈ ಎನ್ನುವ ಗಡಿ, ಭಾಷೆ ವಿಚಾರ ಮುಂದಿಟ್ಟುಕೊಂಡು ಬೆಳಗಾವಿಯಲ್ಲಿ ರಾಜಕೀಯ ಮಾಡುತ್ತಿದ್ದ …
Read More »ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪ್ರಥಮ ವೀರಭದ್ರೇಶ್ವರ ಪ್ರಶಸ್ತಿ
ಬೆಳಗಾವಿ: ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪ್ರಥಮ ವೀರಭದ್ರೇಶ್ವರ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಹುಕ್ಕೇರಿ ಹಿರೇಮಠ ಪ್ರದಾನ ಮಾಡುವ ವೀರಭದ್ರೇಶ್ವರ ಪ್ರಶಸ್ತಿ ಇದಾಗಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು ಬೆಳಗಾವಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 14ರಂದು ವೀರಭದ್ರೇಶ್ವರ ಜಯಂತಿ ಇದೆ. ವೀರಭದ್ರೇಶ್ವರ ಜಯಂತಿಗೆ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಭಾದ್ರಪದ ಮಾಸ ಮೊದಲ ಮಂಗಳವಾರ ವೀರಭದ್ರೇಶ್ವರ ಜಯಂತಿ ಮಾಡಬೇಕೆಂದು ಪುರಾಣದಲ್ಲಿ ಉಲ್ಲೇಖವಾಗಿದೆ. ಆದರೆ …
Read More »ವಿಧಾನ ಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮ ನಿರ್ದೇಶನ
ಬೆಂಗಳೂರು: ವಿಧಾನ ಪರಿಷತ್ ಸಭಾ ನಾಯಕರಾಗಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನ ಪರಿಷತ್ ಸಭಾಪತಿಗೆ ಬಸವರಾಜ ಹೊರಟ್ಟಿ ಅವರಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. ಜಾತಿಗಣತಿ ವರದಿ ಬಿಡುಗಡೆಗೆ ಸರ್ಕಾರ ಮುಕ್ತ ಮನಸ್ಸಿನಿಂದ ಸಿದ್ಧವಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಾತಿಗಣತಿ ವರದಿಗೆ 170 ಕೋಟಿ ರೂಪಾಯಿ ಖರ್ಚಾಗಿದ್ದು, …
Read More »ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ: ಗೋವಿಂದ ಕಾರಜೋಳ
ಬೆಳಗಾವಿಯಲ್ಲಿ ಗಣೇಶೋತ್ಸವ 11 ದಿನ ಮಾಡಬೇಕೆಂದು ಯುವಕರು, ಹಿಂದು ಸಂಘಟನೆಗಳ ಒತ್ತಾಯವಿತ್ತು. ಹೀಗಾಗಿ 11 ದಿನಗಳ ಗಣೇಶೋತ್ಸವಕ್ಕೆ ಸೋಮವಾರ ಆದೇಶ ಬರಲಿದೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಹತ್ವದ ಮಾಹಿತಿ ನೀಡಿದ್ದಾರೆ. ಕೆಲವು ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ. ಐತಿಹಾಸಿಕ ನಗರ ಅನ್ನೋದು ಸಾಬೀತು ಮಾಡಬೇಕು ಎಂದು ನಿರ್ಧರಿಸಿದ್ದೇವೆ. ಇನ್ನು ಏನೇನು ಅಭಿವೃದ್ಧಿ ಕೆಲಸಗಳು ಆಗಬೇಕು, ಅದೆಲ್ಲವನ್ನು ನಾನು ಹಾಗೂ ದಕ್ಷಿಣ …
Read More »ರಾಜಕಾರಣಿಗಳ ಹುಟ್ಟುಹಬ್ಬಕ್ಕಿಲ್ವಾ ಕೊರೊನಾ ನಿಯಮ? ಎಂಎಲ್ಸಿ ಹುಟ್ಟುಹಬ್ಬಕ್ಕೆ ಸಂಗೀತ ಸಂಜೆ
ಬಾಗಲಕೋಟೆ: ವಿಧಾನಪರಿಷತ್ ಸದಸ್ಯ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬ ಹಿನ್ನೆಲೆ, ಕೋವಿಡ್ ನಿಯಮ ಗಾಳಿಗೆ ತೂರಿ ಹುಟ್ಟುಹಬ್ಬದಾಚರಣೆ ಮಾಡಲಾಗಿದೆ. ಸಚಿವ ಮುರುಗೇಶ್ ನಿರಾಣಿ ಸಹೋದರ ಹನಮಂತ ನಿರಾಣಿ ಅವರ 54ನೇ ಹುಟ್ಟು ಹಬ್ಬದ ಹಿನ್ನೆಲೆ, ಬೀಳಗಿಯಲ್ಲಿ ಸಂಗೀತ ಸಂಜೆ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ನೂರಾರು ಜನ ಸಾಮಾಜಿಕ ಅಂತರ, ಮಾಸ್ಕ್ ಧರಿಸದೆ ಭಾಗಿಯಾಗಿದ್ದು ಕಂಡುಬಂತು. ಇನ್ನು ಗಣೇಶ್ ಉತ್ಸವ ಆಚರಣೆಗೆ ಕಠಿಣ ರೂಲ್ಸ್ ಜಾರಿ ಮಾಡಿ ಸರ್ಕಾರ ಆದೇಶವನ್ನ …
Read More »ಕಾಣೆಯಾದ ಅಪ್ಪನ ಹುಡುಕಲು ಹೋದ ಮಗನೂ ವಾಪಸ್ ಬರಲಿಲ್ಲ!; ಪವಾಡಸದೃಶವಾಗಿ ಬದುಕುಳಿದರೂ ಆಕೆಯ ಬಾಳೀಗ ಗೋಳು..
ಬಳ್ಳಾರಿ: ತಂದೆ ಕಾಣೆಯಾಗಿದ್ದಾರೆ ಎಂದು ಹುಡುಕುವ ಸಲುವಾಗಿ ಮನೆಯಿಂದ ಹೋಗಿದ್ದ ಮಗ, ವಾಪಸ್ ಹೆಣವಾಗಿ ಮರಳುವಂತೆ ಆಗಿದೆ. ಜೊತೆಗಿದ್ದ ಪತ್ನಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದರೂ ಆಕೆಯ ಬಾಳೀಗ ಗೋಳು ಎಂಬಂತಾಗಿದೆ. ಬಳ್ಳಾರಿಯ 35ನೇ ವಾರ್ಡ್ ನಿವಾಸಿ ತಿಪ್ಪೇಸ್ವಾಮಿ ( 40) ಮೃತ ಪಟ್ಟ ದುರ್ದೈವಿ. ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಈತ ಮೃತ ಪಟ್ಟಿದ್ದಾನೆ. ತಂದೆ ದೊರೆಸ್ವಾಮಿ ಏಕಾಏಕಿ ಮನೆಯಿಂದ ಕಾಣೆಯಾಗಿದ್ದರಿಂದ ವಿಚಲಿತಗೊಂಡಿದ್ದ ಪುತ್ರ, …
Read More »
Laxmi News 24×7