ಗೋಕಾಕ ನಾಗರಿಕರಲ್ಲಿ ಈ ಮೂಲಕ ತಿಳಿಸುವುದೇನೆಂದರೆ ಗೋಕಾಕ ನಗರಕ್ಕೆ ನೀರು ಪೂರೈಕೆ ಮಾಡುವ ನಗರದ ನದಿಯ ದಡದಲ್ಲಿರುವ ಜಾಕವೆಲ್ ನಲ್ಲಿರುವ 200 ಎಚ್.ಪಿ ಪಂಪಸೆಟ್ ಮೋಟಾರ್ ರಿಪೇರಿ ಇದ್ದ ಕಾರಣ ಗೋಕಾಕ ನಗರದಲ್ಲಿ ಶುಕ್ರವಾರ ದಿ.3-9-2021ಮತ್ತು ಶನಿವಾರ ದಿ.4-9-2021 ರಂದು ನೀರು ಸರಬುರಾಜಿನಲ್ಲಿ ವ್ಯತ್ಯಯವಾಗಲಿದೆ ಕಾರಣ ಸಾರ್ವಜನಿಕರು ಸಹಕರಿಸಲು ನಗರಸಭೆಯ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ,ಪೌರಾಯುಕ್ತರಾದ ಶ್ರೀ ಶಿವಾನಂದ ಹಿರೇಮಠ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ …
Read More »ಗೋಕಾಕ ಸರಣಿ ಮನೆ ಕಳ್ಳತನ ಪ್ರಕರಣ ಹಿನ್ನೆಲೆ ಪೊಲೀಸ್ ಅಧಿಕಾರಿಗಳಿಗೆ ಸಾಹುಕಾರ ತರಾಟೆ
ಗೋಕಾಕ ನಗರದಲ್ಲಿ ಸರಣಿ ಮನೆ ಕಳ್ಳತನ ಪ್ರಕರಣಗಳು ಹಾಗೂ ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಹಿನ್ನೆಲೆ ಗೋಕಾಕ ಪೊಲೀಸ್ ಇಲಾಖೆ ಡಿ.ಎಸ್.ಪಿ ಮನೋಜಕುಮಾರ ನಾಯಿಕಸಿಪಿಐ ಗೋಪಾಲ ರಾಠೋಡ ಸೇರಿದಂತೆ ಪಿಎಸ್ಐ ಗಳ ಸಭೆ ನಡೆಸಿದ ಶಾಸಕರಾದ ಸಾಹುಕಾರ ಶ್ರೀ ರಮೇಶ ಜಾರಕಿಹೊಳಿ ಅವರು ನಗರದಲ್ಲಿ ಸರಣಿ ಮನೆ ಕಳ್ಳತನ,ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳ ತನಿಖೆಗಾಗಿ ಈ ಕೂಡಲೇ ವಿಶೇಷ ಪೊಲೀಸ್ ತಂಡ ರಚಿಸಿ ಕಳ್ಳರನ್ನು ಬಂಧಿಸಿ ಹೆಡೆಮುರಿ …
Read More »ಬೆಲೆ ಏರಿಕೆಯನ್ನು ಸಮರ್ಥನೆ ಮಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ಬೆಂಗಳೂರು: ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ ತಾತ್ಕಾಲಿಕ ಅಷ್ಟೇ. ಮುಂದಿನ ದಿನಗಳಲ್ಲಿ ಬೆಲೆ ಕಡಿಮೆಯಾಗಲಿದೆ. ಟೊಮೆಟೊ, ಪೆಟ್ರೊಲ್, ಡಿಸೆಲ್, ಈರುಳ್ಳಿ ಒಂದು ವಸ್ತುವಿನ ಬೆಲೆ ಮೇಲೆ ಮಾತ್ರ ಪ್ರಶ್ನೆ ಮಾಡಿದರೆ ನಾನು ಉತ್ತರ ನೀಡಲು ಆಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಮೋದಿ ಸರ್ಕಾರ ಅನೇಕ ಯೋಜನೆ ಮಾಡಿದೆ. ರೈತರ ಖಾತೆಗಳಿಗೆ ಆರು ಸಾವಿರ ರೂ. ಹಾಕುತ್ತಿದ್ದಾರೆ. ಆಯುಷ್ಮಾನ್ ಭಾರತ …
Read More »ಎತ್ತಿನ ಬಂಡಿ ಓಟ: ‘ಸುಪ್ರೀಂ’ ಆದೇಶ ಪಾಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ
ಬೆಂಗಳೂರು: ಸುಪ್ರೀಂಕೋರ್ಟ್ ವಿಧಿಸಿರುವ ಷರತ್ತುಗಳ ಪಾಲನೆಯನ್ನು ಖಾತರಿಪಡಿಸಿಕೊಂಡ ಬಳಿಕವೇ ಎತ್ತಿನ ಬಂಡಿಗಳ ಓಟದ ಸ್ಪರ್ಧೆಗೆ ಅನುಮತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮೈಸೂರಿನ ಪೀಪಲ್ ಫಾರ್ ಅನಿಮಲ್ ಎಂಬ ಸರ್ಕಾರೇತರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ‘ಪ್ರಾಣಿಗಳ ಹಿಂಸೆ ತಡೆ ಕಾಯ್ದೆ-2017 (ಎರಡನೇ ತಿದ್ದುಪಡಿ ಕಾಯ್ದೆ)ಯ ಪ್ರಕಾರ, ಎತ್ತಿನ ಬಂಡಿ ಓಟದ ಸ್ಪರ್ಧೆಗೆ …
Read More »ಸೈಟ್, ಮನೆ, ಜಮೀನು, ಫ್ಲ್ಯಾಟ್ ಖರೀದಿಸುವವರಿಗೆ ಸಿಹಿ ಸುದ್ದಿ: ಮಾರ್ಗಸೂಚಿ ದರ ಕಡಿತ ಸಾಧ್ಯತೆ
ಬೆಂಗಳೂರು: ನಿವೇಶನ, ಜಮೀನು, ಫ್ಲಾಟ್ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯ ಸರ್ಕಾರ ಭೂಮಿ ಮಾರ್ಗಸೂಚಿ ದರ ಕಡಿತಗೊಳಿಸಲು ಮುಂದಾಗಿದೆ. ಕೃಷಿ ಜಮೀನು, ಕೃಷಿಯೇತರ ಜಮೀನು, ಮನೆ, ಅಪಾರ್ಟ್ಮೆಂಟ್, ವಾಣಿಜ್ಯ ಮಳಿಗೆಗಳ ಮಾರಾಟ ಮತ್ತು ಖರೀದಿಸುವಾಗ ಮಾರ್ಗಸೂಚಿ ದರ ಹೆಚ್ಚಾಗಿರುವುದರಿಂದ ನಿರೀಕ್ಷಿತ ಪ್ರಮಾಣದಲ್ಲಿ ನೋಂದಣಿ ಆಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿ ದರ ಕಡಿತಗೊಳಿಸಿ ರಿಯಲ್ ಎಸ್ಟೇಟ್ ಉದ್ಯಮ ಚೇತರಿಕೆಗೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕೊರೋನಾದಿಂದಾಗಿ ನೆಲಕಚ್ಚಿರುವ ರಿಯಲ್ ಎಸ್ಟೇಟ್ …
Read More »ಜೆಡಿಎಸ್ದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ: ನಳಿನ್ ಕುಮಾರ್ ಕಟೀಲ್
ಮೈಸೂರು: ಜೆಡಿಎಸ್ ಪಕ್ಷದ್ದು ಹಣದ ಮೇಲೆ ರಾಜಕಾರಣ ಮಾಡುವ ಸಂಸ್ಕೃತಿ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಇಲ್ಲಿ ತಿರುಗೇಟು ನೀಡಿದರು. ‘ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಹಣ ವಸೂಲಿಗಾಗಿ ಆಗಾಗ್ಗೆ ರಾಜ್ಯಕ್ಕೆ ಬರುತ್ತಿರುತ್ತಾರೆ’ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ತಿರುಗೇಟು ನೀಡಿದ್ದಾರೆ. ‘ತಮ್ಮ ಅನುಭವವನ್ನು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುತ್ತದೆ. ರಾಜ್ಯ, ದೇಶ ಆಳಿದ ಇವರ ನಾಲಿಗೆ ಸರಿಯಾಗಿದ್ದಿದ್ದರೆ …
Read More »ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ: ಶ್ರೀಮಂತ ಪಾಟೀಲ್
ಬೆಳಗಾವಿ: ಸರ್ಕಾರ ನೆರೆ ಪರಿಹಾರ ನೀಡದೇ ಇದ್ದರೆ ನನ್ನ ಸ್ವಂತ ಹಣದಿಂದ ಕ್ಷೇತ್ರದ ಜನರಿಗೆ ಪರಿಹಾರ ನೀಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೆಂಪವಾಡ ಗ್ರಾಮದ ನೆರೆ ಪರಿಹಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಈ ಕುರಿತು ನಾನು ಸಿಎಂ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತನಾಡಿದ್ದೇನೆ. …
Read More »ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಆಗುತ್ತಿದೆ. ಗ್ಯಾಸ್, ಆಟೋ ಗ್ಯಾಸ್ ದರ ಸಹಾ ಹೆಚ್ಚಳವಾಗುತ್ತಿರುವುದರ ವಿರುದ್ಧ ಕಾಂಗ್ರೆಸ್ ಹೋರಾಟ ರೂಪಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಸಂಬಂಧ ಸೆಪ್ಟಂಬರ್ 5 ಹಾಗೂ 6 ರಂದು ಪಕ್ಷದ ಮುಖಂಡರ ಸಭೆ ನಡೆಸಿ ತೀರ್ಮಾನ ಮಾಡುತ್ತೇವೆ. ಸದನದಲ್ಲೂ ಈ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಚಾಮರಾಜನಗರದಲ್ಲಿ ನೋ ವ್ಯಾಕ್ಸಿನ್ …
Read More »ಬೆಳಗಾವಿಯಲ್ಲಿ ಒಟ್ಟು ಮೌಲ್ಯ ರೂ. 6.83 ಲಕ್ಷ ರೂ ಮದ್ಯ ವಶ
ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಕೆಲವೇ ಗಂಟೆ ಬಾಕಿ ಇರುವಾಗ ಬೆಳಗಾವಿಯಲ್ಲಿ ಅಪಾರ ಪ್ರಮಾಣದಲ್ಲಿ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ. ಬುಧವಾರ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅಬಕಾರಿ ನಿರೀಕ್ಷಕರು ಹಾಗೂ ಅವರ ಸಿಬ್ಬಂದಿ ಸೇರಿ ಮಜಗಾಂವ ಕ್ರಾಸ್ ಹತ್ತಿರ ರಸ್ತೆಯಲ್ಲಿ ಖಚಿತ ಮಾಹಿತಿ ಮೇರೆಗೆ ರಸ್ತೆಗಾವಲು ಹಾಗೂ ವಾಹನ ತಪಾಸಣೆ ಮಾಡುತ್ತಿರುವಾಗ ಒಂದು ಹುಂಡೈ ಐ-೨೦ ಕಾರ್ (ಸಂಖ್ಯೆ ಜಿಎ-೦೩ ಎಚ್-೮೬೪೪) ತಪಾಸಣೆ ಮಾಡಿದಾಗ ವಾಹನದಲ್ಲಿ ಅಪಾರ …
Read More »ಬೆಂಗಳೂರಿನ ಕಾರು ಅಪಘಾತ ಪ್ರಕರಣ: ಬಾರ್ನಲ್ಲಿ ಮದ್ಯ ಖರೀದಿ, ಕಾರಿನಲ್ಲೇ ಪಾರ್ಟಿ
ಬೆಂಗಳೂರು: ಕೋರಮಂಗಲದ 80 ಅಡಿ ರಸ್ತೆಯಲ್ಲಿ ಔಡಿ ಕ್ಯೂ3 ಕಾರು ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟ ಪ್ರಕರಣದ ಕುರಿತು ಆಗ್ನೇಯ ವಿಭಾಗದ (ಸಂಚಾರ) ಎಸಿಪಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಮೃತರು ಓಡಾಡಿದ್ದ ಸ್ಥಳಗಳ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದೆ. ‘ಕಾರು ಚಾಲಕನ ಅತಿವೇಗದ ಚಾಲನೆ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಚಾಲಕನ ವಿರುದ್ಧವೇ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಏಳು ಮಂದಿಯೂ ಮೃತಪಟ್ಟಿದ್ದಾರೆ. ಹೀಗಾಗಿ, ಅಪಘಾತ …
Read More »
Laxmi News 24×7