Breaking News
Home / ಜಿಲ್ಲೆ (page 60)

ಜಿಲ್ಲೆ

ಇಂದು ಸಂಜೆಯೇ ಕಾಂಗ್ರೆಸ್ ಸೇರುತ್ತೇನೆ:ಲಕ್ಷ್ಮಣ ಸವದಿ

ಬೆಂಗಳೂರು – ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರುವುದಕ್ಕೆ ಮುಹೂರ್ತ ಫಿಕ್ಸ ಆಗಿದೆ. ಇಂದು ಸಂಜೆ 4.30ಕ್ಕೆ ಅವರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆ ಚರ್ಚೆಯ ಬಳಿಕ ಲಕ್ಷ್ಮಣ ಸವದಿ ಉಪಸ್ಥಿತಿಯಲ್ಲಿ ಶಿವಕುಮಾರ ಈ ಕುರಿತು ಮಾಹಿತಿ ನೀಡಿದರು. ಲಕ್ಷ್ಮಣ ಸವದಿ ಯಾವುದೇ ಷರತ್ತಿಲ್ಲದೇ …

Read More »

ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶ

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮತ್ತು ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಹಣ ಹಾಗೂ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ. ಹಾರೂಗೇರಿ ಚೆಕ್ ಪೊಸ್ಟ್ ನಲ್ಲಿ 2.49 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಯಮಕನಮರಡಿಯ ಶೆಟ್ಟಿಹಳ್ಳಿ ಚೆಕ್ ಪೊಸ್ಟ್ ನಲ್ಲಿ 3.25 ಲಕ್ಷ ರೂ ವಶಪಡಿಸಿಕೊಳ್ಳಲಾಗಿದೆ. ಐಗಳಿಯಲ್ಲಿ 188 ಲೀಟರ್ ಲಿಕ್ಕರ್ ವಶಪಡಿಸಿಕೊಳ್ಳಲಾಗಿದೆ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಹಳ್ಳಿ ಗ್ರಾಮದಲ್ಲಿ  ಹನುಮಂತ್ ಹುಲಿಗೆಪ್ಪ ಭಜಂತ್ರಿ ಈತನು ಅಕ್ರಮವಾಗಿ  ಸಾರಾಯಿ ಮಾರಾಟ …

Read More »

ಕಾಂಗ್ರೆಸ್ ಬಿಜೆಪಿ ಬಂಡಾಯ ನೋಡಿದ್ರೆ ಬೆಳಗಾವಿ ಉತ್ತರ ಕ್ಷೇತ್ರ ಮೂರನೇಯವರು ಲಾಭ ಕೊಡುತ್ತಾ..?

ಕರ್ನಾಟಕ ವಿಧಾನಸಭಾ ಚುನಾವಣೆಯ ಕದನ ಇದೀಗ ಆರಂಭವಾಗಿದೆ. ಎಲ್ಲಾ ಆಸಕ್ತ ಅಭ್ಯರ್ಥಿಗಳು ಹಾಗು ರಾಷ್ಟ್ರೀಯ ಪಕ್ಷಗಳಿಂದ ಟಿಕೆಟ್ ಪಡೆದುಕೋಂಡಿರುವ ಅಭ್ಯರ್ಥಿಗಳು ತಮ್ಮ ಮುಂದಿನ ಕಾರ್ಯತಂತ್ರವನ್ನು ರೂಪಿಸುತ್ತಿದ್ದು, ಟಿಕೆಟ್ ಸಿಗದೆ ನೊಂದಿರುವ ಆಕಾಂಕ್ಷಿಗಳು ಬಂಡಾಯ ಎದ್ದಿದ್ದಾರೆ. ಮತದಾನದ ನಂತರ ಅವರೆಲ್ಲರೂ ಅದ್ಭುತ ಫಲಿತಾಂಶಗಳನ್ನು ಎದುರು ನೋಡುತ್ತಿದ್ದಾರೆ. ಅಂದಿನಿಂದ, ಮರಾಠಿ ಮತ್ತು ಮರಾಠ ಮತದಾರರ ಪ್ರಾಬಲ್ಯವನ್ನು ಉಳಿಸಿಕೊಂಡು, ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯ ಅಭ್ಯರ್ಥಿಗಳನ್ನು ಆಯ್ಕೆ ಆಗುತ್ತಿದ್ದರು, ಆದರೆ ಆಂತರಿಕ ರಾಜಕೀಯ, ಪ್ರಾಬಲ್ಯ …

Read More »

ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆ

ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉತ್ತಮ ಪಾಟೀಲ ನಾಮಪತ್ರ ಸಲ್ಲಿಕೆಯಾಗಿದೆ ಹೌದು ಅತೀ ಕುತೂಹಲ ಕೆರಳಿಸಿರು ಮೊದಲ ದಿನವೇ ನಿಪ್ಪಾಣಿ ಮತಕ್ಷೇತ್ರದಲ್ಲಿ ಅರಿಹಂತ್ ಉದ್ಯೋಗ್ ಗ್ರೂಪ್ ಮೂಲಕ ನಿಪ್ಪಾಣಿ ಮತಕ್ಷೇತ್ರದಲ್ಲಿ ಉತ್ತಮ್ ರಾವ್‌ಸಾಹೇಬ ಪಾಟೀಲ ನಾಮಪತ್ರ ಸಲ್ಲಿಸುವ ಮೂಲಕ ಚುನಾವಣಾ ಅಖಾಡಕ್ಕೆ ಇಳಿದ್ದಿದ್ದಾರೆಅವರು ಕಳೆದ ನಾಲ್ಕೈದು ವರ್ಷಗಳಿಂದ ತಮ್ಮ ಕ್ಷೇತ್ರದ ಕಾರ್ಯಕರ್ತರ ವಿಶ್ವಾಸ ಗಳಿಸಿರುವ ಕಳೆದ ವರ್ಷ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ 17 ರಿಂದ 18 ಗ್ರಾಮ …

Read More »

ಸವದಿ ಮನವೊಲಿಸಲು ಬಂದ ಬಿಜೆಪಿ ಮುಖಂಡನ ಎಳೆದಾಡಿ, ಕಾರಿಗೆ ಗುದ್ದಿದ ಕಾರ್ಯಕರ್ತರು

ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು.   ಮತ್ತೆ ಕೆಲವರು ನೇರ್ಲಿ ಅವರ ಕಾರಿಗೆ ಗುದ್ದಿ ಕಿಡಿ ಕಾರಿದರು. ‘ನಮ್ಮ ಸಾಹುಕಾರಗೆ ಯಾಕೆ ಟಿಕಟ್ ತಪ್ಪಿಸಿದ್ದೀರಿ ಎಂದು ಉತ್ತರ ಕೊಟ್ಟೇ ಹೋಗಬೇಕು’ ಎಂದು ಪಟ್ಟು ಹಿಡಿದರು. ‘ಈ …

Read More »

ರಾಮದುರ್ಗ ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್‌ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು

ರಾಮದುರ್ಗ (ಬೆಳಗಾವಿ ಜಿಲ್ಲೆ): ಹಾಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಕಡೆಗಣಿಸಿ, ಕ್ಷೇತ್ರದ ಹೊರಗಿನ ವ್ಯಕ್ತಿಗೆ ಟಿಕೆಟ್‌ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬುಧವಾರ ಶಾಸಕರ ಮನೆ ಮುಂದೆ ಜಮಾವನೆಗೊಂಡ ಅಪಾರ ಸಂಖ್ಯೆಯ ಕಾರ್ಯಕರ್ತರು, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಕ್‌ ರ್‍ಯಾಲಿ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದರು. ‘ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಿದವರು ಮಹಾದೇವಪ್ಪ. ಅವರಿಗೆ ಟಿಕೆಟ್‌ …

Read More »

ಗೋಕಾಕ ಕ್ಷೇತ್ರದಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆ

ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಶುಭ ಮೂಹೂರ್ತ ದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಧಾನ ಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು ಆಗಿದೆ ಇಂದು ರಮೇಶ್ ಜಾರಕಿಹೊಳಿ ಅವರು ಗೋಕಾಕ ನಲ್ಲಿ ತಮ್ಮ ನಾಮ ಪತ್ರ ಸಲ್ಲಿಕೆಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಿದ್ದಾರೆ   ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ …

Read More »

ಬೀದರ್: ಎಕಂಬಾ ಚೆಕ್ ಪೋಸ್ಟ್ ಬಳಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

ಬೀದರ್‌: ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ಬೊಲೆರೋ ವಾಹನದಲ್ಲಿ 1.50 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ಬೀದರ್‌ ಜಿಲ್ಲೆಯ ಔರಾದ ಎಕಂಬಾ ಚೆಕ್ ಪೋಸ್ಟ್ ಬಳಿ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದ 1.50 ಕೋಟಿ ರೂ.ಮೌಲ್ಯದ ಗಾಂಜಾ ಜಪ್ತಿಯಾಗಿದ್ದು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ತೆಲಂಗಾಣದಿಂದ ಬೀದರ್‌ ಮೂಲಕ ಮುಂಬೈಗೆ ಗಾಂಜಾ ಸಾಗಿಸುತ್ತಿದ್ದ ಗ್ಯಾಂಗ್‌ ಇದಾಗಿತ್ತು. ಔರಾದ …

Read More »

ಬೀದರ್: 105 ವರ್ಷ ವಯಸ್ಸಿನ ಅಜ್ಜಿ ಬಾಯಲ್ಲಿ ಮೂಡಿತು ಹೊಸ ಹಲ್ಲು

ಬೀದರ್: ಇತ್ತೀಚಿನ ವರ್ಷಗಳಲ್ಲಿ ನೂರು ವರ್ಷ ಪೂರೈಸುವುದೇ ಅಪರೂಪ. ಅಂಥದ್ದರಲ್ಲಿ, ಶತಾಯುಷಿಯಾದವರಿಗೆ ಹೊಸ ಹಲ್ಲು ಚಿಗುರೊಡೆದರೆ? ಇದೊಂಥರಾ ವಿಶೇಷ ಅಲ್ಲವೇ? ಬೀದರ್ ಜಿಲ್ಲೆಯಲ್ಲೂ ಇಂಥದ್ದೇ ಒಂದು ವಿಶೇಷ ಕಂಡುಬಂದಿದೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಹಾರಕೂಡ ಗ್ರಾಮದ ಶತಾಯುಷಿ ಗಂಗಮ್ಮ ಗುರಪ್ಪ ಕಣ್ಣೂರ್ ಜನವಾಡ್ ಎಂಬ ಅಜ್ಜಿಗೆ ಹೊಸ ಹಲ್ಲು ಮೂಡಿದೆ. ಇಷ್ಟು ಇಳಿ ವಯಸ್ಸಿನಲ್ಲಿ ಹೊಸದಾಗಿ ಹಲ್ಲು ಚಿಗುರೊಡೆದರೆ ಅಂಥವರಿಗೆ ಈ ಭಾಗದಲ್ಲಿ ತೊಟ್ಟಿಲೋತ್ಸವ ಮಾಡಲಾಗುತ್ತದೆ. 105 ವರ್ಷ …

Read More »

ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ

ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ …

Read More »