Breaking News

ಜಿಲ್ಲೆ

ಸಚಿವೆ ಶಶಿಕಲಾಗೆ ಝೀರೋ ಟ್ರಾಫಿಕ್‌: ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ನಗರದ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …

Read More »

ಮಿನಿ ರಣ ರಂಗ ವಾಗಲಿದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ

ಬೆಳಗಾವಿ-ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ಚುನಾವಣೆ ಎದುರಿಸಲು ಹಿಂದೇಟು ಹಾಕುವ ಲಕ್ಷಣಗಳು ಕಾಣಿಸುತ್ತಿದ್ದು ಜಾತ್ಯಾತೀತ ಸಿದ್ಧಾಂತ ಎಂದು ಹೇಳಿಕೊಳ್ಳುವ ಆಮ್ ಆದ್ಮೀ‌..ದೆಹಲಿ ಬದಲಾ ಹೈ ಬೆಲಗಾಮ್ ಬದಲೇಗಾ ಎನ್ನುವ ಘೋಷಣೆಯೊಂದಿಗೆ ಪಾಲಿಕೆ ಚುನಾವಣೆಯಲ್ಲಿ ಎಂಟ್ರಿ ಹೊಡೆದಿದೆ. ಜೊತೆಗೆ ಅಕ್ಬರ್ ಓವೈಸಿಯ ಎಂಐಎಂ ಪಾರ್ಟಿಯೂ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ 58 ವಾರ್ಡುಗಳಲ್ಲಿ ಸ್ಪರ್ದಿಸುವ ನಿರ್ಧಾರ ಕೈಗೊಂಡಿದೆ. ಎಂಐಎಂ,ಆಮ್ ಆದ್ಮಿ ಪಾರ್ಟಿಯ ಬೆನ್ನಲ್ಲಿಯೇ ಜೆಡಿಎಸ್ ಪಕ್ಷವೂ ಬೆಳಗಾವಿ ಪಾಲಿಕೆ …

Read More »

ಸಂಸತ್​​ ಕಲಾಪ ಹಾಳು ಮಾಡಿದ ಕಾಂಗ್ರೆಸ್​, ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದೆ: ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ದೇಶದ ಜ್ವಲಂತ ವಿಷಯಗಳ ಚರ್ಚೆ ಮಾಡುವ ಬದಲು ಸಂಸತ್ತಿನ ಕಲಾಪವನ್ನು ಬಲಿ ಕೊಟ್ಟು ಪ್ರಜಾಪ್ರಭುತ್ವಕ್ಕೆ ಕಾಂಗ್ರೆಸ್ ದ್ರೋಹ ಮಾಡಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 22 ರಿಂದ ಆಗಸ್ಟ್ 13 ರವರೆಗೂ ಸಂಸದ ಕಲಾಪ ನಡೆದರೂ, ಅಲ್ಲಿ ವಿರೋಧ ಪಕ್ಷದವರು ಸರಿಯಾದ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ಕರೊನಾ, ದೇಶದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಬೇಕಿತ್ತು. …

Read More »

ಭೂ ಕಬಳಿಕೆಗೆ ನಕಲಿ ದಾವೆ: ವಕೀಲರ ಪರಿಷತ್ತು, ಸಂಘವೂ ಪಾರ್ಟಿ

ಬೆಂಗಳೂರು: ವಾರಸುದಾರರು ಉಪಯೋಗಿಸದ ಖಾಲಿ ಜಾಗವನ್ನು ಕೊಳ್ಳೆ ಹೊಡೆಯಲು ನಕಲಿ ಕಕ್ಷಿದಾರ-ಪ್ರತಿವಾದಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಲಪಟಾಯಿಸುತ್ತಿದ್ದ ಪ್ರಕರಣವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿರುವ ಹೈಕೋರ್ಟ್‌, ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ತು ಮತ್ತು ಬೆಂಗಳೂರು ವಕೀಲರ ಸಂಘವನ್ನು ಪಾರ್ಟಿಗಳಾಗಿ ಒಳಗೊಳ್ಳುವಂತೆ ನಿರ್ದೇಶನ ನೀಡಿದೆ. ಮೋಸದ ಮಾರ್ಗದಿಂದ ಆಸ್ತಿ ಹಕ್ಕಿನ ರಾಜಿ ಡಿಕ್ರಿ ಪಡೆಯುತ್ತಿದ್ದ ಬಗ್ಗೆ ತನಿಖೆ ನಡೆಸಲು ಸಿಐಡಿಗೆ ನ್ಯಾಯಮೂರ್ತಿ …

Read More »

ಸಾಂತ್ವನ ಕೇಂದ್ರದಿಂದ ಸಿನಿಮೀಯ ರೀತಿಯಲ್ಲಿ ಪರಾರಿಯಾದ ಮಹಿಳಾ ಕೈದಿಗಳು!

ಬೆಂಗಳೂರು: ಇಲ್ಲಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದ್ದ ಐವರು ವಿದೇಶಿ ಮಹಿಳಾ ಕೈದಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಧಿಕಾರಿಗಳ ಕಣ್ತಪ್ಪಿಸಿ ಪರಾರಿಯಾಗಿರುವ ಕೈದಿಗಳು ಆಫ್ರಿಕಾದ ಕಾಂಗೊ, ನೈಜೀರಿಯ ದೇಶದ ಮೂಲದವರೆಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ನಡೆಸಿದ ಕಾರ್ಯಾಚರಣೆಯಿಂದ 15 ಕೈದಿಗಳನ್ನು ಬಂಧಿಸಿದ್ದರು. ಅವರಲ್ಲಿ ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ಸಂಬಂಧ 5 ಮಂದಿ ವಿದೇಶಿ ಮಹಿಳೆಯರನ್ನೂ ಬಂಧಿಸಲಾಗಿತ್ತು. ಈ ಐವರನ್ನು ಅವರ ದೇಶನ್ನೆ ವಾಪಸ್‍ ಕಳುಹಿಸುವ …

Read More »

ಮಹಿಳೆಯರಿಗೆ ಗುಡ್ ನ್ಯೂಸ್: 30 ಸಾವಿರ ರೂ. ಪ್ರೋತ್ಸಾಹಧನಕ್ಕೆ ವಿವಿಧ ಯೋಜನೆಯಡಿ ಅರ್ಜಿ

ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಧನಶ್ರೀ ಯೋಜನೆ ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು …

Read More »

ದೇವಸ್ಥಾನಗಳಿಗೆ ಆರ್ಥಿಕ ನೆರವು: ಚೆಕ್ ವಿತರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದ ಶ್ರೀ ಬೀರದೇವರ ಹಾಗೂ ಶ್ರೀ ವಿಠ್ಠಲ ರುಕ್ಮಿಣಿ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಆಯಾ ದೇವಸ್ಥಾನಗಳ ಕಮೀಟಿಯವರಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಧನಸಹಾಯದ ಚೆಕ್ ಗಳನ್ನು ವಿತರಿಸಿದರು. ಗ್ರಾಮೀಣ ಕ್ಷೇತ್ರದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಶಾಸಕರ ಅನುದಾನದಲ್ಲಿ ಹಾಗೂ ಕೆಲವೆಡೆ ವೈಯಕ್ತಿಕವಾಗಿ ಕೂಡ ಲಕ್ಷ್ಮಿ ಹೆಬ್ಬಾಳಕರ್ ನೆರವು ನೀಡುತ್ತಿದ್ದಾರೆ. ಶ್ರೀ ಬೀರದೇವರ ದೇವಸ್ಥಾನಕ್ಕೆ 6.50 ಲಕ್ಷ ರೂ,ಗಳ ಪೈಕಿ ಮೊದಲ ಕಂತಾಗಿ 3.50 …

Read More »

ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ ಚಾಲನೆ :

ಬೆಳಗಾವಿ –  ಬೆಳಗಾವಿ ನಗರದಲ್ಲಿ ನಾಲ್ಕು ದಿನಕ್ಕೊಮ್ಮೆ, ಕೆಲವು ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರು ಬರುತ್ತಿರುವುದನ್ನು ಗಂಭೀರವಾಗಿ ತೆಗೆದುಕೊಂಡ ಶಾಸಕ ಅಭಯ ಪಾಟೀಲ ರದ್ದಾಗಿದ್ದ ಯೋಜನೆಯನ್ನು ಪುನರ್ ಮಂಜೂರು ಮಾಡಿಸಿ ಬೆಳಗಾವಿ ನಗರದ ಪ್ರತಿಯೊಂದು ಮನೆಗೂ 24 X 7 ನಿರಂತರವಾಗಿ ನೀರು ಪೂರೈಸುವ ಕಾಮಗಾರಿಗೆ  ಚಾಲನೆ ನೀಡಿದ್ದಾರೆ‌. ಮೂರು ವರ್ಷದ ಹಿಂದೆ ಈ ಯೋಜನೆ ರದ್ದಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾಗಿದ್ದು ಅಭಯ ಪಾಟೀಲ ಕೇಂದ್ರ ಸಚಿವರಾಗಿದ್ದ ದಿ.ಅನಂತಕುಮಾರ್ ಅವರ ನೆರವಿನಿಂದ, ಆಗಿನ …

Read More »

ಆಟೊ ಚಾಲಕರಿಗೆ ಮಹತ್ವದ ಮಾಹಿತಿ : ಸೆ. 1 ರಿಂದ ಆಟೊಗಳಿಗೆ ಮೀಟರ್ ಕಡ್ಡಾಯ

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 1 ರಿಂದ ಆಟೊ ಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿ ರಾಜ್ಯದ ಹಲವೆಡೆ ಇನ್ನೂ 4 ದಿನ ಭಾರೀ ಮಳೆ : ಹೈ ಅಲರ್ಟ್ ಸೆಪ್ಟೆಂಬರ್ 1 ರಿಂದ ಜಿಲ್ಲೆಯಲ್ಲಿ ಆಟೊ ಗಳಿಗೆ ಮೀಟರ್ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಆಟೋ ಚಾಲಕ, ಮಾಲೀಕರು ತಮ್ಮ ಆಟೊಗಳಿಗೆ ಅನುಮತಿ ಇರುವ ಫ್ಲಾಗ್ ಮೀಟರ್ ಗಳನ್ನು ಅಳವಡಿಸಿಕೊಂಡು ದರಕ್ಕೆ …

Read More »

ರಾಜಧಾನಿಯಲ್ಲಿ ಮುಂದಿನ ಆಗಸ್ಟ್‌ 3೦ ರ ವರೆಗೆ ನೈಟ್‌ ಕರ್ಫ್ಯೂ ಮುಂದುವರಿಕೆ

ಬೆಂಗಳೂರು: ನಗರದಲ್ಲಿ ಆಗಸ್ಟ್ 30 ರ ವರೆಗೆ ನೈಟ್‌ ಕರ್ಫ್ಯೂ ವಿಸ್ತರಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು (ಆಗಸ್ಟ್ 17) ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ವರೆಗೆ ನೈಟ್‌ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದಂತ ರಾತ್ರಿ ಕರ್ಫ್ಯೂ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ, ಗಡಿಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಹಾಕಲಾಗಿತ್ತು. ನೈಟ್ ಕರ್ಫ್ಯೂ ವಿಧಿಸಿರುವುದರಿಂದ ಮೆಟ್ರೋ ಸಂಚಾರ …

Read More »