Breaking News

ಜಿಲ್ಲೆ

ಮನೆ ಮನೆ ಆರೋಗ್ಯ ಸಮೀಕ್ಷೆಗೆ ಸಚಿವ ಅಶೋಕ್ ಚಾಲನೆ: ಆರೋಗ್ಯ ಪರಿಶೀಲನೆಗೆ ಇನ್ಮುಂದೆ ಮನೆ ಬಾಗಿಲಿಗೇ ಬರುತ್ತಾರೆ ವೈದ್ಯರು!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕನ್ನು ಸಂಪೂರ್ಣವಾಗಿ ನಿಯಂತ್ರಿಸುವ ಗುರಿಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ‘ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಸೋಮವಾರ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕೊರೋನಾ ನಿಯಂತ್ರಣ ಸಂಬಂಧ ಪಾಲಿಕೆ ವೈದ್ಯರು ನಿಮ್ಮ ಮನೆ ಬಾಗಿಲಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಗರದ 29 ಲಕ್ಷ ಮನೆಗಳಿಗೂ ಭೇಟಿ …

Read More »

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ನೀಡಲು ಆರೋಗ್ಯ ಸಂಜೀವಿನಿ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ಮೂಲಕ ಯೋಜನೆ ಜಾರಿಗೆ ತರಲಾಗುತ್ತಿದೆ. ನಿಯಮಗಳನ್ನು ರೂಪಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ದೇಶಕರಿಗೆ ಸರ್ಕಾರ ಆದೇಶಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು, ಅನುದಾನ ಪಡೆಯುವ ಆರೋಗ್ಯ ಸಂಸ್ಥೆ ಮತ್ತು ಸ್ವಾಯತ್ತ ವೈದ್ಯಕೀಯ ಸಂಸ್ಥೆಗಳು, ಆಯುಷ್ ಇಲಾಖೆಗೆ …

Read More »

ಮಹಿಳೆಯರಿಗೆ ಗುಡ್ ನ್ಯೂಸ್: 30 ಸಾವಿರ ರೂ. ಪ್ರೋತ್ಸಾಹಧನಕ್ಕೆ ವಿವಿಧ ಯೋಜನೆಯಡಿ ಅರ್ಜಿ

ಬೀದರ: 2021-22ನೇ ಸಾಲಿನ ಚೇತನಾ, ಧನಶ್ರೀ, ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಡಿ ಪ್ರೋತ್ಸಾಹಧನ ಪಡೆಯಲು ಆಸಕ್ತಿವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಚೇತನಾ ಯೋಜನೆ ಚೇತನಾ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಧನಶ್ರೀ ಯೋಜನೆ ಧನಶ್ರೀ ಯೋಜನೆಯಡಿ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು 30,000 ರೂ. ಪ್ರೋತ್ಸಾಹಧನ ನೀಡಲಾಗುವುದು. ಅದೇ ರೀತಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು …

Read More »

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ ಚಾಲನೆ ನೀಡಿದ ಸಚಿವರು, ಕೊರೋನಾ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ಪತ್ತೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸೋಂಕಿನಿಂದ ಶ್ವಾಸಕೋಶಕ್ಕೆ ಹಾನಿಯಾಗಿರಬಹುದು. ರಾಜ್ಯದಲ್ಲಿ 28 ಲಕ್ಷಕ್ಕೂ ಅಧಿಕ ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಅವರಲ್ಲಿ ಶ್ವಾಸಕೋಶಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿರುತ್ತದೆ. ಕ್ಷಯರೋಗ ಶ್ವಾಸಕೋಶಕ್ಕೆ ಹಾನಿ …

Read More »

ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಆನಂದ್ ಸಿಂಗ್ ಗೆ ಟಾಂಗ್ ನೀಡಿದ ಗೋವಿಂದ ಕಾರಜೋಳ

ಕೊಪ್ಪಳ: ತುಂಗಭದ್ರಾ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಶುಭ ಘಳಿಗೆಯಲ್ಲಿ ಬೃಹತ್ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಗಂಗಾಮಾತೆಗೆ ಬಾಗಿನ ಅರ್ಪಿಸಿದರು. ಡ್ಯಾಂ ಜಲಾಶಯದ ತಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿ, ತುಂಗಭದ್ರಾ ಎಲ್ಲೆಡೆಯೂ ಮಳೆ ಚೆನ್ನಾಗಿ ಆಗುತ್ತಿವೆ. ಹಾಗಾಗಿ ತುಂಗಭದ್ರಾ ಜಲಾಶಯದ ಇತಿಹಾಸದಲ್ಲಿ ಅವಧಿ ಮೊದಲೇ ತುಂಬಿದೆ. ಇದರಿಂದ ಲಕ್ಷಾಂತರ ರೈತರು ಖುಷಿಯಲ್ಲಿದ್ದಾರೆ. ಹಾಗಾಗಿ ಎಲ್ಲ ಜಲಾಶಯಗಳಿಗೆ ಬಾಗಿನ ಅರ್ಪಿಸಲಾಗುತ್ತಿದೆ ಎಂದರು. ಆಲಮಟ್ಟಿ …

Read More »

ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …

Read More »

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಕೊರೊ

ಮಂಗಳೂರು ಹೊರವಲಯದ ಸುರತ್ಕಲ್‌ನ ರಹೇಜಾ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್‌ ಹಾಗೂ ಗುಣಾ ದಂಪತಿಗಳ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್‌ನೋಟ್‌ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್‌ ಫಂಗಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮೃತದೇಹದ ಪರೀಕ್ಷೆಯನ್ನು ನಡೆಸಲಾಗಿದ್ದು, ಕೊರೊನಾ ನೆಗೆಟಿವ್‌ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಡುಬಿದ್ರಿ ಮೂಲದ ರಮೇಶ್‌ ಸುವರ್ಣ ಹಾಗೂ ಗುಣಾ ಆರ್.‌ ಸುವರ್ಣ ದಂಪತಿ ಮನೆಯವರಿಗೆ ಕೊರೊನಾ ಸೋಂಕು …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

    ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …

Read More »

ರಾಜ್ಯದಲ್ಲಿ 3,000 ವೈದ್ಯರು, 7,000 ನರ್ಸ್, 7,000 ಗ್ರೂಪ್ ಡಿ. ಸಿಬ್ಬಂದಿ ನೇಮಕ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು. ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ …

Read More »