Breaking News

ಜಿಲ್ಲೆ

ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ ಮಧ್ಯರಾತ್ರಿ ಮನೆಯಲ್ಲಿ ಏಕಾಏಕಿ ಸ್ಫೋಟ

ಬೆಂಗಳೂರು: ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.   ಎರಡು ಅಂತಸ್ತಿನ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.   ಇನ್ನು ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ …

Read More »

ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗಣ್ಯರು ಸತ್ಕರಿಸುತ್ತಿರುವುದು.

ಗೋಕಾಕ ;- ವಿದ್ಯಾರ್ಥಿಗಳು ನಿರ್ಧಿಷ್ಠ ಗುರಿಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮದಿಂದ ಪ್ರಯತ್ನಶೀಲರಾದರೆ ಯಶಸ್ಸು ನಿಶ್ಚಿತ ಎಂದು ಮೂಡಲಗಿ ತಾಲೂಕಿನ ತಹಶೀಲ್ದಾರ ಡಿ.ಜಿ. ಮಹಾಂತ ಅವರು ಹೇಳಿದರು. ರವಿವಾರದಂದು ನಗರದ ಎನ್.ಎಸ್.ಎಫ್ ಅತಿಥಿ ಗೃಹದಲ್ಲಿ ಶ್ರೀಮತಿ ಭೀಮವ್ವಾ ಲಕ್ಷ್ಮಣರಾವ್ ಜಾರಕಿಹೊಳಿ ಟ್ರಸ್ಟಿನಿಂದ ಶಾಸಕ ಹಾಗೂ ಟ್ರಸ್ಟಿನ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಆಯೋಜಿಸಿದ್ದ ಮೂಡಲಗಿ ವಲಯದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಹಾಗೂ ಸತ್ಕಾರ …

Read More »

ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ವಿಜಯಪುರ: ಸಿಂದಗಿ ಪಟ್ಟಣದ ವಿರಕ್ತಮಠದ ಪೀಠಾಧಿಕಾರಿಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ (58) ಭಾನುವಾರ ಬೆಳಿಗ್ಗೆ ಲಿಂಗ್ಯೆಕ್ಯರಾದರು. ಸುದೀರ್ಘ ಪರಂಪರೆ ಹೊಂದಿದ ವಿರಕ್ತಮಠದ 18 ನೇ ಪೀಠಾಧಿಕಾರಿಗಳಾಗಿದ್ದರು. 1985 ರಲ್ಲಿ ಶ್ರೀಗಳ ಪಟ್ಟಾಧಿಕಾರ ಅದ್ದೂರಿಯಾಗಿ ನಡೆದಿತ್ತು. ತಪಸ್ವಿಗಳು, ಮಾತೃಹೃದಯಿಗಳಾಗಿದ್ದರು. ಈ ಭಾಗದಲ್ಲಿ ಅಪಾರ ಭಕ್ತರು ಶ್ರೀಮಠದ ಶಿಷ್ಯರಾಗಿದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಭಾನುವಾರ ಸಂಜೆ ಶ್ರೀಮಠದ ಆವರಣದಲ್ಲಿ ವಿರಕ್ತ ಸಂಪ್ರದಾಯದಂತೆ ನೆರವೇರಲಿದೆ.

Read More »

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ : ದೇಶಾದ್ಯಂತ ನಡೆಯಲಿದೆ ಯಾತ್ರೆ

ಬೆಂಗಳೂರು: ರಾಷ್ಟ್ರಾದ್ಯಂತ ಕೇಂದ್ರದ ನೂತನ ಸಚಿವರಿಂದ ಜನಾಶೀರ್ವಾದ ಯಾತ್ರೆಗೆ ಸೋಮವಾರ ಚಾಲನೆ ದೊರೆಯಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) …

Read More »

ನಕಲಿ ಅಂಕಪಟ್ಟಿ ಸರಕಾರಿ, ಖಾಸಗಿ ಕೆಲಸ ಗಿಟ್ಟಿಸಿಕೊಂಡ ಹಲವರು ! ತನಿಖೆಯಲ್ಲಿ ಗೊತ್ತಾಗಿದೆ.

ಬೆಂಗಳೂರು, ಆ.14: ನಕಲಿ ಅಂಕಪಟ್ಟಿ ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಪಂಜಾಬಿ ದಂಪತಿ ಬಂಧನ ಪ್ರಕರಣ ಸಂಬಂಧ ನಕಲಿ ಪದವಿ ಸ್ನಾತಕೋತ್ತರ ಅಂಕಪಟ್ಟಿ ಪಡೆದ ಕೆಲವರು ಖಾಸಗಿ ಹಾಗೂ ಸರಕಾರಿ ಕೆಲಸ ಗಿಟ್ಟಿಸಿಕೊಂಡಿರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ದಂಪತಿಯ ವಿಚಾರಣೆ ವೇಳೆ ನಕಲಿ ಅಂಕಪಟ್ಟಿಯ ಬೃಹತ್ ಜಾಲಪತ್ತೆಯಾಗಿದ್ದು, ದಂಪತಿಯಿಂದ ನಕಲಿ ಅಂಕಪಟ್ಟಿ ಪಡೆದವರ ಸಂಪೂರ್ಣ ಮಾಹಿತಿಯನ್ನು ಸಿಸಿಬಿ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಪಿಯುಸಿ …

Read More »

ಬಸವನಾಡಿನಲ್ಲಿ ಭ್ರಷ್ಟರಿಗೆ ಅವಕಾಶ ಇಲ್ಲ, ನೀವು ಧ್ವಜಾರೋಹಣ ಮಾಡಬಾರದು; ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಮಹಿಳೆಯರ ಆಕ್ರೋಶ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮಕ್ಕೆ ಬರುತ್ತಿದ್ದ ಶಶಿಕಲಾ‌ ಜೊಲ್ಲೆಯವರನ್ನು ಮಹಿಳೆಯರು ತಡೆದು, ಭ್ರಷ್ಟಾಚಾರ ಆರೋಪ ಹೊತ್ತಿರುವ ನೀವು ಧ್ವಜಾರೋಹಣ ಮಾಡಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ. ವಿಜಯಪುರ: ಜಿಲ್ಲೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಚ್ ಮತ್ತು ವಕ್ಫ್ ಹಾಘೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ‌ ಜೊಲ್ಲೆ ಅವರಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸಬಾರದೆಂದು ಒತ್ತಾಯಿಸಿ ಮಹಿಳೆಯರು …

Read More »

21 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಸೇರಿ ರಾಜ್ಯದ 21 ಮಂದಿ ಪೊಲೀಸ್‌ ಅಧಿಕಾರಿಗಳು ಪ್ರಸಕ್ತ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ನಗರದ ಸಿಐಡಿಯ ಆರ್ಥಿಕ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌, ರಾಜ್ಯದ ಆಂತರಿಕಾ ಭದ್ರತಾ ದಳ (ಐಎಸ್‌ಡಿ) ಎಡಿಜಿಪಿ ಜೆ. ಅರುಣ್‌ ಚಕ್ರವರ್ತಿ, ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ ಕಮಾಂಡೆಂಟ್‌ ಎಂ.ವಿ. ರಾಮಕೃಷ್ಣ ಪ್ರಸಾದ್‌, ಮಲ್ಲೇಶ್ವರಂ ಉಪವಿಭಾಗ ಎಸಿಪಿ ಕೆ.ಎಸ್‌.ವೆಂಕಟೇಶ್‌ ನಾಯ್ಡು, ಚಿಕ್ಕಪೇಟೆ ಉಪವಿಭಾಗದ ಎಸಿಪಿ …

Read More »

ಲ್ಲಾಡಳಿತದಿಂದ ಸರಳ 75ನೇ ಸ್ವಾತಂತ್ರ್ಯೋತ್ಸವ ಆಚರಣೆ;

ಬೆಳಗಾವಿ:  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರವಿವಾರ (ಆ.೧೫) ೭೫ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು. ಆಕರ್ಷಕ ಪಥಸಂಚಲನ: ಕವಾಯತ ಕಮಾಂಡರ್ ಆಡಿವೆಪ್ಪ ಎಸ್ ವಾರದ ಹಾಗೂ ಸಹಾಯಕ ಕವಾಯತ ಕಮಾಂಡರ್ ಎ.ಎಸ್ ಬೂದಿಗೊಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ …

Read More »

ಕೋವಿಡ್ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಪುನಾರಂಭವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಶನಿವಾರ ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್‌ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸದೇ …

Read More »

ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ. ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು …

Read More »