Breaking News

ಜಿಲ್ಲೆ

ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಸಚಿವೆ ಹಾಗೇನೂ ಇಲ್ಲ ಎಂದು ಜಾರಿಕೊಂಡರು.

ಮುದ್ದೇಬಿಹಾಳ: ಮುಖ್ಯಮಂತ್ರಿಗಳು ಕೊಟ್ಟಿರುವ ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಸ್ಥಾನ ತೃಪ್ತಿ ನೀಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಮುದ್ದೇಬಿಹಾಳದಲ್ಲಿ ಪ್ರವಾಹ ನಂತರದ ಪರಿಸ್ಥಿತಿ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ ಎಂದರು. ನಿಮಗೆ ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ …

Read More »

ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನ

ಬೆಂಗಳೂರು: ನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಸಿಎಂ ಬೊಮ್ಮಾಯಿಯವರು ಕೊಟ್ಟಿಲ್ಲ, ನಾನು ಬೇರೆ ಉತ್ತಮ ಖಾತೆಯನ್ನು ನಿರೀಕ್ಷೆ ಮಾಡಿದ್ದೆ ಎಂದು ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ ಎಂದು ಆನಂದ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ನಾಳೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡುತ್ತೇನೆ, ನೋಡೋಣ ಏನಾಗುತ್ತದೆ, ಆ ಮೇಲೆ ಏನು ಮಾಡುವುದು ಎಂದು …

Read More »

ಮತ್ತೆ ಸಿಡಿಯಲಿದೆಯಾ ಬೆಳಗಾವಿ ಸಾಹುಕಾರ್ ಬಾಂಬ್?

ಬೆಂಗಳೂರು, : ನಾಯಕತ್ವ ಬದಲಾವಣೆಯಾದ ಬಳಿಕ ಮತ್ತೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳಾಗುತ್ತಿವೆ. ಹಿಂದೆ ಮೈತ್ರಿ ಸರ್ಕಾರ ಪತನವಾಗುವಾಗ ಆಯಕ್ಟಿವ್ ಆಗಿದ್ದವರು ಈಗ ಮತ್ತೆ ಆಯಕ್ಟಿವ್ ಆಗಿರುವುದು ಅಚ್ಚರಿಗೆ ಕಾರಣವಾಗಿದೆ. ಜೆಡಿಎಸ್-ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಮೂಲ ಕಾರಣರಾಗಿದ್ದವರಿಗೆ ಈಗ ಅಧಿಕಾರವಿಲ್ಲದಂತಾಗಿದೆ. ಇದೇ ಸಂದರ್ಭದಲ್ಲಿ ಗುರುವಾರ ರಾತ್ರಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹತ್ವವ ಸಭೆ ನಡೆದಿದೆ. ಮುಂಬೈ ಮಿತ್ರ ಮಂಡಳಿಯ ಸದಸ್ಯರು ಈ ಸಭೆಯಲ್ಲಿ …

Read More »

ಇನ್ನೂ ಹಂಚಿಕೆಯಾಗದ ಖಾತೆ: ಸಿಎಂ ಬೊಮ್ಮಾಯಿ ನಿವಾಸದ ಬಳಿ ತಡರಾತ್ರಿವರೆಗೂ ಕಾದು ಕುಳಿತಿದ್ದ ನೂತನ ಸಚಿವರು!

ಬೆಂಗಳೂರು: ನೂತನ ಸಚಿವರಿಗೆ ಶೀಘ್ರದಲ್ಲೆ ಖಾತೆ ಹಂಚಿಕೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರಾದರೂ ಈ ಪ್ರಕ್ರಿಯೆ ಅಷ್ಟು ಸಲೀಸಾಗಿ ನಡೆಯುವಂತೆ ಕಾಣುತ್ತಿಲ್ಲ. ಪ್ರಮುಖ ಖಾತೆಗಾಗಿ ಸಂಪುಟದ ಸದಸ್ಯರು ಒತ್ತಡ ತರುತ್ತಿರುವುದೇ ಇದಕ್ಕೆ ಕಾರಣವಾಗಿದೆ. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿ ಎರಡು ದಿನ ಕಳೆದರೂ ಖಾತೆ ಹಂಚಿಕೆಯಾಗಿಲ್ಲ, ಸಿಎಂ ಬೊಮ್ಮಾಯಿ ಈಗಾಗಲೇ 29 ಸಚಿವರಿಗೂ ಖಾತೆ ಹಂಚಿಕೆ ಪಟ್ಟಿ ತಯಾರುಮಾಡಿ ಕಳುಹಿಸಿದ್ದರೂ ಇನ್ನೂ ಅದಕ್ಕೆ ಅನುಮೋದನೆ ಸಿಕ್ಕಿಲ್ಲ. ಹೊಸದಾಗಿ …

Read More »

ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸಭೆ ಬಿಟು ಅಜ್ಜಿ ನೋವಿಗೆ ಸ್ಪಂದಿಸಿದ ಬೆಳಗಾವಿ ಡಿಸಿ

ಬೆಳಗಾವಿ: ಮನೆ ಸೋರುತ್ತಿರುವುದರಿಂದ ನೆರವು ಕೇಳಲು ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಅಜ್ಜಿಯ ನೋವಿಗೆ ಸ್ಪಂದಿಸಲು ಸ್ವತಃ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಗುರುವಾರ ಸಭೆ ಬಿಟ್ಟು ಬಂದು ಮನವಿ ಆಲಿಸಿ ಕೂಡಲೇ ಕ್ರಮಕ್ಕೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿ ಮಾನವೀಯತೆ ಮೆರೆದರು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಆರೋಗ್ಯ ಇಲಾಖೆಗೆ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಇದ್ದರು. ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಕಚೇರಿಯ ಹೊರ ಭಾಗದಲ್ಲಿ ಗಣಪತಿ ಗಲ್ಲಿಯ …

Read More »

ಗೋಕಾಕ್ ತಹಶೀಲ್ದಾರ್ ನೇತೃತ್ವದಲ್ಲಿ ಅಕ್ರಮವಾಗಿ ನಿರ್ಮಿಸಿದ ಮನೆಗಳ ತೆರವು

ಘಟಪ್ರಭಾ : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಿ.ಸ.ನಂ-120 ರಲ್ಲಿ ನೀರಾವರಿ ನಿಗಮಕ್ಕೆ ಸೇರಿದ ಜಾಗದಲ್ಲಿ ಅತಿಕ್ರಮಣವಾಗಿ ನಿರ್ಮಿಸಿದ್ದ ಮನೆಗಳನ್ನು ಶುಕ್ರವಾರದಂದು ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪನವರ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ನೀರಾವರಿ ನಿಗಮದ ಕಛೇರಿ ಹಿಂದುಗಡೆ ಇರುವ ರಿ.ಸ.ನಂ-120 ರಲ್ಲಿ ಇರುವ ನೀರಾವರಿ ಇಲಾಖೆಗೆ ಸೇರಿದ 82 ಎಕರೆ ಜಮೀನಿನ ಪೈಕಿ ಸುಮಾರು 30 ಎಕರೆ ಜಮೀನು ಅತಿಕ್ರಮಣವಾಗಿತ್ತು. ಸುಮಾರು 30ಕ್ಕೂ ಹೆಚ್ಚು ಅನಧಿಕೃತ ಮನೆಗಳು ತೆರವುಗೊಳಿಸುವ ಕಾರ್ಯ ಮುಂದುವರೆದಿದ್ದು, …

Read More »

ಬಿಜೆಪಿ ಅಧಿಕಾರದಲ್ಲಿರೋವರೆಗೂ ಕೇಂದ್ರದಿಂದ ಅನುದಾನ ಬರಲ್ಲ,ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಸಾಧ್ಯವಿಲ್ಲ

ಬೆಳಗಾವಿ: ನೂತನ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರೇ, ಈಗ ಸಿಎಂ ಬೊಮ್ಮಾಯಿ ಅವರ ಸಂಪುಟದಲ್ಲೂ ಸಚಿವರಾಗಿದ್ದಾರೆ. ಅವರ ಕಾರ್ಯವೈಖರಿಯನ್ನು ಈಗಾಗಲೇ ನಾವು ನೋಡಿದ್ದೇವೆ. ಹೀಗಾಗಿ, ಈಗ ಅಧಿಕಾರ ಸ್ವೀಕರಿಸಿರುವ ಸಚಿವರಿಂದ ಯಾವುದೇ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದರು. ಈ ಹಿಂದೆ ಜಿಲ್ಲೆಯಲ್ಲಿ ಮಂತ್ರಿಗಳಿದ್ದವರು, ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಪಂದಿಸಿರಲಿಲ್ಲ. ಕೊರೊನಾ …

Read More »

ಖಾಲಿ ಜಾಗಗಳೇ ಇವರ ಟಾರ್ಗೆಟ್​; 600 ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಸಿದ ಭೂಗಳ್ಳರ ಜಾಲ ಭೇದಿಸಿದ ಸಿಐಡಿ

ಬೆಂಗಳೂರು: ರಾಜಧಾನಿ ಅಥವಾ ಸುತ್ತಮುತ್ತ ನಿಮ್ಮ ಖಾಲಿ ಜಾಗ ಇದ್ದು ದೀರ್ಘ ಸಮಯದಿಂದ ಆ ಕಡೆ ಹೋಗಿರದಿದ್ದರೆ ಒಮ್ಮೆ ನೋಡಿಕೊಂಡು ಬನ್ನಿ. ಏಕೆಂದರೆ ವಾರಸುದಾರರು ಸುಳಿಯದ ಖಾಲಿ ಜಾಗಗಳನ್ನು ಗುರುತಿಸಿ ಅವುಗಳನ್ನು ಕಬಳಿಸುವ ಭೂಗಳ್ಳರ ಜಾಲವೊಂದಿದೆ. ಹೀಗೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಕಬಳಿಸಿರುವ ಭೂಗಳ್ಳರ ಜಾಲವೊಂದನ್ನು ಸಿಐಡಿ ಪೊಲೀಸರು ಭೇದಿಸಿದ್ದಾರೆ. ಕಂಪನಿಯೊಂದರ ಜಾಗವನ್ನು ಕಬಳಿಸಲು ಯತ್ನಿಸಿದ್ದ ಪ್ರಕರಣವನ್ನು ಭೇದಿಸಿರುವ ಸಿಐಡಿ ಪೊಲೀಸರು, ಭೂಗಳ್ಳರ ಜತೆ ಕೈಜೋಡಿಸಿದ್ದ ನಾಲ್ವರು ವಕೀಲರನ್ನೂ …

Read More »

ಜಿಲ್ಲೆಯಲ್ಲಿ ಪ್ರವಾಹದಿಂದ 7,800 ಕೋಟಿ ರೂಪಾಯಿ ಹಾನಿ: ವಿವರ ನೀಡಿದ ಗೋವಿಂದ ಕಾರಜೋಳ

ಬೆಳಗಾವಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಪ್ರವಾಹದಿಂದ 7800 ಕೋಟಿ ರೂಪಾಯಿ ಹಾನಿ ಆಗಿದೆ ಎಂದು ನೆರೆಪರಿಹಾರ ಕಾಮಗಾರಿ, ಕೊವಿಡ್ ನಿರ್ವಹಣೆ ಪರಿಶೀಲನೆ ಸಭೆ ಬಳಿಕ ಇಂದು (ಆಗಸ್ಟ್ 6) ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. ಈ ಬಾರಿ 51 ಕಾಳಜಿ ಕೇಂದ್ರಗಳಲ್ಲಿ 38 ಸಾವಿರ ಜನ ಆಶ್ರಯ ಪಡೆದಿದ್ದಾರೆ. ನೆರೆ ಸಂತ್ರಸ್ತರಿಗೆ ಕಾಳಜಿ ಕೇಂದ್ರದಲ್ಲಿ ಜನರು, ಜಾನುವಾರುಗಳಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಎಂಟು ಹತ್ತು ದಿನ …

Read More »

ಬೆಳಗಾವಿ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿ

ಬೆಂಗಳೂರು – ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಕೊರೋನಾ ಕರ್ಫ್ಯೂ ಜಾರಿಯಾಗಲಿದ್ದು, ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಇರಲಿದೆ. ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ವೀಕ್ ಎಂಡ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ತಜ್ಞರ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ …

Read More »