Breaking News

ಜಿಲ್ಲೆ

ಕೃಷ್ಣಾ ಹಾಗೂ ಘಟಪ್ರಭಾ ನದಿಯಲ್ಲಿ ತಗ್ಗಿದ ಪ್ರವಾಹ : ಮುಕ್ತವಾದ ಸೇತುವೆ ಹಾಗೂ ರಸ್ತೆಗಳು

ಬನಹಟ್ಟಿ : ಮಹಾರಾಷ್ಟ್ರ ರಾಜ್ಯದಲ್ಲಿನ ಹಾಗೂ ಪಶ್ಚಿಮ ಘಟ್ಟಗಳಲ್ಲಿನ ಮಹಾಮಳೆಯ ಪರಿಣಾಮ ಉಂಟಾದ ಪ್ರವಾಹದಿಂದಾಗಿ ಕಳೆದ 13 ದಿನಗಳಿಂದ ಕೃಷ್ಣಾನದಿ ಹಾಗೂ ಘಟಪ್ರಭಾ ನದಿಯು ಉಕ್ಕಿ ಹರಿದ ಪರಿಣಾಮ ರಬಕವಿ-ಬನಹಟ್ಟಿ ತಾಲೂಕಿನ ನದಿಪಾತ್ರದ ಗ್ರಾಮಗಳು ಜಲಾವೃತವಾಗಿ ಸಾಕಷ್ಟು ಆವಾಂತರಗಳನ್ನು ಸೃಷ್ಠಿಸಿತ್ತು. ಕಳೆದ 3-4 ದಿನಗಳಿಂದ ಕೃಷ್ಣಾ ಹಾಗೂ ಘಟಪ್ರಭಾ ಎರಡು ನದಿಗಳ ನೀರಿನ ಪ್ರಮಾಣ ನದಿಯ ನೀರಿನ ಹರಿವು ಕಡಿಮೆಯಾಗುತ್ತಿದೆ. ಮುಚ್ಚಿಕೊಂಡ ಬಹುತೇಕ ಸೇತುವೆ ಹಾಗೂ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಿವೆ. …

Read More »

KPSC : ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ : ಪ್ರವೇಶ ಪತ್ರ ಬಿಡುಗಡೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು (KPSC) ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟಿಸಿದೆ.   24-06-2020 ರಲ್ಲಿ ಅಧಿಸೂಚಿಸಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಯೋಗವು ದಿನಾಂಕ07-08-2021 ರಂದು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಆಯೋಗದ ವೆಬ್ ಸೈಟ್ https://kpse.kar,nic.in ನಲ್ಲಿ ದಿನಾಂಕ 02-08-2021 …

Read More »

ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ.

ಬೆಳಗಾವಿ – ಪಕ್ಷ ಯಾವುದೇ ಇರಲಿ, ಸರಕಾರ ಯಾವುದೇ ಬರಲಿ. ಆದರೆ ಗೋಕಾಕದ ಜಾರಕಿಹೊಳಿ ಸಹೋದರರಲ್ಲಿ ಒಬ್ಬರು ಸಂಪುಟದಲ್ಲಿರಲೇಬೇಕು. ಇದು ಕಳೆದ ಸುಮಾರು 2 ದಶಕದಿಂದಲೂ ನಡೆದು ಬಂದ ಪದ್ಧತಿ. ಆದರೆ 2004ರಿಂದೀಚೆಗೆ ಇದೇ ಮೊದಲ ಬಾರಿಗೆ ಕುಟುಂಬದ ಮೂವರು ಶಾಸಕರಿದ್ದರೂ, ಬಿಜೆಪಿಯವರೇ ಇಬ್ಬರಿದ್ದರೂ ಯಾರೊಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳದೆ ಸರಕಾರ ಅಸ್ಥಿತ್ವಕ್ಕೆ ಬಂದಿದೆ. ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟು ಸರಕಾರ ರಚಿಸುವ ಸಾಹಸಕ್ಕೆ ಬಿಜೆಪಿ ಹೈಕಮಾಂಡ್ ಕೈಹಾಕಿದೆ. 2004ರಿಂದ ಅಧಿಕಾರಕ್ಕೆ ಬಂದ …

Read More »

ಬಿಎಸ್ವೈ ನಾಯಕತ್ವದ ವಿರುದ್ಧ ಸಡ್ಡು ಹೊಡೆದವರಿಗೆ ಕೈತಪ್ಪಿದ ಮಂತ್ರಿ ಸ್ಥಾನ..!

ಬೆಂಗಳೂರು,ಆ.4- ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವದ ವಿರುದ್ಧ ಸಡ್ಡು ಹೊಡೆದಿದ್ದ ಪ್ರಮುಖ ಮೂವರಿಗೆ ಮಂತ್ರಿ ಸ್ಥಾನ ಕೈ ತಪ್ಪಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಅವರಿಗೆ ಸಚಿವ ಸ್ಥಾನ ತಪ್ಪಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಈ ಮೂವರು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಳಾಗುತ್ತಾರೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಅದರಲ್ಲೂ ಒಕ್ಕಲಿಗ ಸಮುದಾಯದಿಂದ ಸಿ.ಪಿ.ಯೋಗೇಶ್ವರ್, ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದಿಂದ ಅರವಿಂದ ಬೆಲ್ಲದ್ …

Read More »

ಮೋದಿ ಭಕ್ತರಿಗೆ ಮೋದಿಯಿಂದಲೇ ಪಂಗನಾಮ ; ಸಿದ್ದರಾಮಯ್ಯ

ಬೆಂಗಳೂರು, ; ದೇಶದಲ್ಲಿ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ಬಡತನ ಪ್ರಮಾಣ ಮಿತಿಮೀರಿದೆ, ಹಸಿವಿನಿಂದ ಸತ್ತವರ ಬಗ್ಗೆ, ದೇಶದ ಜಿಡಿಪಿ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತನಾಡುವುದಿಲ್ಲ , ಅದನ್ನು ಬಿಟ್ಟು ಪಾಕಿಸ್ತಾನ, ರಾಮಮಂದಿರ ಮುಂತಾದ ಭಾವನಾತ್ಮಕ ವಿಚಾರಗಳ ಬಗ್ಗೆಯಷ್ಟೇ ಜನರ ಗಮನ ಸೆಳೆಯುತ್ತಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಪದ್ಮನಾಭ ನಗರದಲ್ಲಿ ಆಯೋಜಿಸಿದ್ದ ದಿನಸಿ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ …

Read More »

ಸಿಎಂ ಸ್ವಗೃಹದ ಬಳಿ ಅಪಘಾತ; ಎರಡು ಕಾರುಗಳ ನಡುವೆ ಡಿಕ್ಕಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸ್ವಗೃಹದ ಬಳಿ ಲಘು ಅಪಘಾತ ಸಂಭವಿಸಿದೆ. ಯಾವುದೇ ಅನಾಹುತು ಸಂಭವಿಸಿಲ್ಲ. ಆರ್. ಟಿ. ನಗರದ ಮುಖ್ಯಮಂತ್ರಿ (Chief Minister) ನಿವಾಸದ ಬಳಿ ಘಟನೆ ನಡೆದಿದೆ. ಓನ್ ವೇ(one way) ಮಾಡಿರುವ ಹಿನ್ನಲೆ ವಾಹನ ಸವಾರರಿಗೆ ಗೊಂದಲವಾಗಿದ್ದು, ಅಪಘಾತಕ್ಕೆ( Accident) ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಮುಖ್ಯಮಂತ್ರಿ ಜಗನ್​ರೆಡ್ಡಿ ಚಿಕ್ಕಪ್ಪ ಹತ್ಯೆಯಾಗಿ 2ವರ್ಷದ ಬಳಿಕ ಸಿಕ್ಕಿಬಿದ್ದ ಆರೋಪಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್​.ರಾಜಶೇಖರ್​ ರೆಡ್ಡಿ …

Read More »

ಅಂತಿಮವಾಗಿ ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಸ್ಥಾನ ನೀಡಿದಂತಾಗಿದೆ.

ಬೆಳಗಾವಿ – ಯಡಿಯೂರಪ್ಪ ಸಚಿವಸಂಪುಟದಲ್ಲಿ ಉಪಮುಖ್ಯಮಂತ್ರಿ ಸೇರಿ ನಾಲ್ಕು ಸಚಿವಸ್ಥಾನ ಪಡೆದಿದ್ದ ಬೆಳಗಾವಿ ಬೊಮ್ಮಾಯಿ ಸಂಪುಟದಲ್ಲಿ ಕೇವಲ 2 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸ್ಥಾನ ಪಡೆದಿದ್ದ ಉಮೇಶ ಕತ್ತಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜೊತೆಗೆ ಯಡಿಯೂರಪ್ಪ ಸಂಪುಟದಲ್ಲಿ ಆರಂಭದಿಂದಲೂ ಸ್ಥಾನ ಪಡೆದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಯೋಜನೆಗಳನ್ನು ರೂಪಿಸಿದ್ದ ಶಶಿಕಲಾ ಜೊಲ್ಲೆ ಕೂಡ ಮತ್ತೆ ಸ್ಥಾನ ಪಡೆದಿದ್ದಾರೆ. ಜೊಲ್ಲೆ ದಂಪತಿ …

Read More »

ನನಗೆ ಕಾಲ್ ಬಂದಿಲ್ಲ‌ ಸಚಿವ ಸ್ಥಾನ ಸಿಗದಿದ್ದರೆ ಬಂಡಾಯ : ಆನಂದ ಮಾಮನಿ

ಬೆಳಗಾವಿ- ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಕ್ಯಾಬಿನೆಟ್ ರಚನೆ ಆಗಲಿದೆ.ನನಗೆ ಕಾಲ್ ಬಂದಿಲ್ಲ‌.ಈ ಕುರಿತು ಬಿ ಎಸ್ ವೈ ಜೊತೆ ಮಾತನಾಡುವೆ,ಸಚಿವ ಸ್ಥಾನ ಸಿಗದಿದ್ದರೆ ಡೆಪ್ಯುಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ಬೆಳಗಾವಿ ಜಿಲ್ಲೆಯ ಸವದತ್ತಿ ಶಾಸಕ ಆನಂದ ಮಾಮನಿ ಹೇಳಿದ್ದಾರೆ. ಹೊಸ ಮುಖ್ಯಮಂತ್ರಿಯ ಹೊಸ ಕ್ಯಾಬಿನೆಟ್ ಗೆ ಬೆಳಗಾವಿ ಜಿಲ್ಲೆಯಿಂದಲೇ ಬಂಡಾಯ ಶುರುವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರ ಪಟ್ಟಿಯೊಂದಿಗೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದು ಪತ್ರಿಕಾಗೋಷ್ಢಿ ನಡೆಸಿ,ಇಂದು …

Read More »

ಡಾ||ವಿಜಯಸಂಕೇಶ್ವರ ಅವರ ಸಾಧನೆ ಆಧರಿಸಿದ ಈ ಚಿತ್ರಕ್ಕೆ “ವಿಜಯಾನಂದ” ಎಂಬ ಶೀರ್ಷಿಕೆ.

ಹುಬ್ಬಳ್ಳಿ – ಆದರ್ಶ ಉದ್ಯಮಿ, ಪದ್ಮಶ್ರೀ ಪ್ರಶಸ್ತಿ ವಿಜೇತ ಡಾ. ವಿಜಯ ಸಂಕೇಶ್ವರ ಅವರ ಜಾವನ ಮತ್ತು ಸಾಧನೆ ಕುರಿತು ಚಲನಚಿತ್ರವೊಂದು ಸಿದ್ಧವಾಗುತ್ತಿದೆ. ಸಾರಿಗೆ ಕ್ಷೇತ್ರ, ಪತ್ರಿಕೋದ್ಯಮ, ಮಾಧ್ಯಮ ಹಾಗು ಹಲವಾರು ವಿಭಾಗಗಳಲ್ಲಿ ಪರಿಣತಿ ಹೊಂದಿರುವ ಪ್ರತಿಷ್ಠಿತ ವಿ ಆರ್ ಎಲ್ ಸಮೂಹ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಹಾಗು ಪ್ರೊಮೋಟರ್ ಆದ ಡಾ. ವಿಜಯ ಸಂಕೇಶ್ವರರ ಪುತ್ರರಾದ ಆನಂದ ಸಂಕೇಶ್ವರ ಅವರು ಇದೀಗ  ವಿ ಆರ್ ಎಲ್ ಮೀಡಿಯಾ ಸಂಸ್ಥೆಯ …

Read More »

ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ.

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ 10 ಹುದ್ದೆಗಳನ್ನು ರದ್ದುಪಡಿಸಲಾಗಿದೆ. ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಗಳಾಗಿದ್ದ ರೇಣುಕಾಚಾರ್ಯ, ಡಿ.ಎನ್.ಜೀವರಾಜ್, ಎನ್.ಆರ್.ಸಂತೋಷ್ ಅವರ ಹುದ್ದೆ ರದ್ದುಪಡಿಸಲಾಗಿದೆ. ಅಲ್ಲದೇ ಶಿಕ್ಷಣ ಸುಧಾರಣಾ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಯಡಿಯೂರಪ್ಪ ಕಾನೂನು ಸಲಹೆಗಾರರಾಗಿದ್ದ ಮೋಹನ್ ಲಿಂಬಿಕಾಯಿ, ಮಾಧ್ಯಮ ಸಲಹೆಗಾರ ಎನ್.ಭೃಂಗೇಶ್, ಸಿಎಂ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ್, ಮಾಧ್ಯಮ ಸಂಯೋಜಕ ಜಿ.ಎಸ್.ಸುನೀಲ್, ಸಿಎಂ ನೀತಿ ನಿರೂಪಣೆ ಕಾರ್ಯತಂತ್ರ ಸಲಹೆಗಾರ ಪ್ರಶಾಂತ್ ಸೇರಿದಂತೆ …

Read More »