Breaking News

ಜಿಲ್ಲೆ

ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕರ ಸ್ವೀಕರಿಸಿರುವ ಬೆನ್ನಲ್ಲೇ ದೆಹಲಿಗೆ ತೆರಳಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ನಿರೀಕ್ಷೆಗಳು ಗರಿಗೆದರಿವೆ. ಈ ನಡುವೆ ಸೋಮವಾರ ಸಂಪುಟ ರಚನೆ ಬಗ್ಗೆ ಫೈನಲ್ ಆಗುವುದು ಬಹುತೇಕ ಖಚಿತ ಎನ್ನಲಾಗಿದೆ. ನಿನ್ನೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸಚಿವ …

Read More »

ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …

Read More »

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

ಅಂಕೋಲಾ : ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ಹಾರವಾಡ ಕ್ರಾಸ್ ಬಳಿ ಶುಕ್ರವಾರ ನಡೆದಿದೆ. ತಾಲೂಕಿನ ಹೊನ್ನಳ್ಳಿ ನಿವಾಸಿ ರವಿ ಲೋಕು ಗೌಡ( 29) ಮೃತಪಟ್ಟ ವ್ಯಕ್ತಿ. ಬೇಲೇಕೇರಿ ಸಿಬರ್ಡ್ ಕಾಲೊನಿ ನಿವಾಸಿ ಹರೀಶ ಒಮು ಗೌಡ (28) ಗಂಭೀರ ಗಾಯಗೊಂಡು ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಟಿಪ್ಪರ್ ಚಾಲಕ ಅನಿಸ್ ಅಲಿ …

Read More »

ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …

Read More »

ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣ ಬೆಂಗಳೂರು: ಅಕ್ರಮವಾಗಿ ವಿದೇಶಕ್ಕೆ ಸಾಗಣೆ ಮಾಡಲು ಮುಂದಾಗಿದ್ದ 6 ಕೋಟಿ ರೂ. ಮೌಲ್ಯದ ರಕ್ತ ಚಂದನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇಲ್ಲಿನ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ(ಕೆಐಎಬಿ) ಕಾರ್ಗೋ ಟರ್ಮಿನಲ್‍ನಲ್ಲಿ ರಕ್ತ ಚಂದನ ಜಪ್ತಿ ಮಾಡಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು, …

Read More »

ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​..

ಬೆಂಗಳೂರು: ನೀವು ನಿಮ್ಮ ಬೈಕ್​ನ್ನ ಮನೆ ಹೊರಗಡೆ ನಿಲ್ಲಿಸ್ತಿದ್ದೀರಾ..? ಹಾಗಾದ್ರೆ ಹುಷಾರ್​ ಆಗಿರಿ. ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​ ಒಂದು ಈಗ ನಗರದಲ್ಲಿ ಸಕ್ರಿಯವಾಗಿದೆ. ವೀರಣ್ಣ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬೈಕ್​ನ್ನು ಮನೆಯ ಹೊರಗೆ ನಿಲ್ಲಿಸಿ ತಮ್ಮ ಅಪಾರ್ಟ್​ಮೆಂಟ್​ಗೆ ಹೋಗಿ ಬರೋದ್ರೊಳಗಾಗಿ ನಿಲ್ಲಿಸಿದ ಬೈಕ್​ ನಾಪತ್ತೆಯಾಗಿದೆ. ಒಳಗಡೆ ಹೋಗಿ ಬರೋದ್ರೊಳಗಾಗಿ ಬೈಕ್​ ಕಾಣದ್ದನ್ನ ಕಂಡು ಮಾಲೀಕ ಅರೆ ಕ್ಷಣ ಗಲಿಬಿಲಿಗೊಂಡಿದ್ದಾನೆ. ತದನಂತರ ಸಿಸಿಟಿವಿ …

Read More »

ಹೆಚ್ಚಾಯ್ತು ರೌಡಿಶೀಟರ್​​ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್​ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್​ಡೌನ್ ಸಡಿಲಿಕೆಯಾಗಿ ಅನ್​ಲಾಕ್​ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ‌ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …

Read More »

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್‌ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …

Read More »

ಬೆಂಗಳೂರು ಏರ್​ಪೋರ್ಟ್​ಲ್ಲಿ ಆತಂಕ ಸೃಷ್ಟಿಸಿದ ನಕಲಿ ಗನ್​ಗಳು

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಮ್ಮಿ ಗನ್​ಗಳು ಕೆಲಹೊತ್ತು ಆತಂಕ ಸೃಷ್ಟಿ ಮಾಡಿದ ಘಟನೆ ನಿಲ್ದಾಣದ ಕಾರ್ಗೋ ಟರ್ಮಿನಲ್​ನಲ್ಲಿ ನಡೆದಿದೆ. ವಿದೇಶದಿಂದ ಬಂದ ಪಾರ್ಸಲ್ ಕಂಡು ಕೆಲ ಕಾಲ ನಿಲ್ದಾಣದ ಸಿಬ್ಬಂದಿಗಳು ಗಾಬರಿಗೊಳಗಾಗಿದ್ದಾರೆ. ನಿನ್ನೆ ಇಸ್ತಾಂಬುಲ್​ನಿಂದ ಕಾರ್ಗೋ ಟರ್ಮಿನಲ್​ಗೆ ಪಾರ್ಸ್​ಲ್​ ಬಂದಿದ್ದು, ಅದನ್ನು ವರ್ಗಾವಣೆ ಮಾಡುವ ವೇಳೆಯಲ್ಲಿ ಅನುಮಾನ ವ್ಯಕ್ತಪಡಿಸಿದ ಸಿಬ್ಬಂದಿಗಳು, ತಪಾಸಣೆ ನಡೆಸಿದಾಗ ಗನ್​ಗಳಿರುವುದು ಪತ್ತೆಯಾಗಿದೆ. ತಕ್ಷಣ ಗಾಬರಿಗೊಂಡ ಸಿಬ್ಬಂದಿಗಳು ಗನ್​ಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ …

Read More »