Breaking News

ಜಿಲ್ಲೆ

ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗರಂ

ಬೆಂಗಳೂರು,ಆ.7- ನನಗೆ ಇನ್ಸಲ್ಟ್ ಮಾಡ್ತೀರಾ? ಎಂದು ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆಂದು ಮಾಹಿತಿ ಸಿಕ್ಕಿದೆ. ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ,ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ನಾನೊಬ್ಬ ಶಾಸಕ, ನನಗೆ ಇನ್ಸಲ್ಟ್ ಮಾಡ್ತೀರಾ? ಇದು ಎರಡನೇ ಸಲ ಈ …

Read More »

ನಿತ್ಯವೂ ಜೆಡಿಎಸ್ ಜತೆ ನಾವು ಗುದ್ದಾಡಿದ್ರೆ, ಇನ್ನೊಬ್ರು ಅಡ್ಜಸ್ಟ್​ಮೆಂಟ್ ಮಾಡ್ಕೋತಾರೆ: ಸಿಎಂ ವಿರುದ್ಧ ಪ್ರೀತಂಗೌಡ ಗರಂ

ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ‌ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ …

Read More »

ಸಿಎಂ ಆದ 24 ಗಂಟೆಯೊಳಗೆ ದೇವೇಗೌಡರ ಮನೆಗೇಕೆ ಹೋಗಬೇಕಿತ್ತು? -ಗುಡುಗಿದ ಬಿಜೆಪಿ ಶಾಸಕ

ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು? ಎಂದು ಶಾಸಕ ಪ್ರೀತಂಗೌಡ ಗುಡುಗಿದ್ದಾರೆ. ನೂರು ಮೀಟರ್ ಓಡೋಕೆ ಬಂದಿಲ್ಲ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನೂರು ಮೀಟರ್ ಓಡಲಿಕ್ಕೆ ಬಂದಿಲ್ಲ, ಮ್ಯಾರಥಾನ್‌ ಓಡಲು ಬಂದಿದ್ದೇನೆ. ಯಾರ ಹತ್ತಿರನೂ ಮಂತ್ರಿ ಮಾಡಿ ಎಂದು ಕೇಳಿಲ್ಲ. ಮಂತ್ರಿ ಮಾಡಿಲ್ಲ ಅನ್ನೋದ್ಕಿಂತ ನಾನು ಕೇಳಿಲ್ಲ. …

Read More »

ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್

ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfwe) ಹಿನ್ನೆಲೆ ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ‌ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ …

Read More »

ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಬೆಂಗಳೂರು: ಅಡ್ಡಾದಿಡ್ಡಿ ಆಟೋ ಚಲಾಯಿಸಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್( 21) ಮೃತ ದುರ್ದೈವಿಗಳು. ಇನ್ನು ಆಟೋದಲ್ಲಿದ್ದ ವಾಸಪ್ಪ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು …

Read More »

ಅತೃಪ್ತರಿಗೆ ಮತ್ತೆ ಜಾರಕಿಹೊಳಿ ನೇತೃತ್ವ; ಬೆಲ್ಲದ್ ಸಾಥ್, ತಡರಾತ್ರಿ ಮೀಟಿಂಗ್!

ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಹಿಸಿಕೊಂಡಿದ್ದಾರೆ. ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್‌ಕುಮಠಳ್ಳಿ, ವಿಧಾನ ಪರಿಷತ್‌ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್‌ ಅವರು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ …

Read More »

‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆ ಮಾಡುವಂತೆ ಸಿಎಂ ಬಳಿ ಕೇಳಿಕೊಂಡ ಸಿಟಿ ರವಿ

ಬೆಂಗಳೂರು: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ’ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದು, ‘ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು …

Read More »

ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಸಚಿವೆ ಹಾಗೇನೂ ಇಲ್ಲ ಎಂದು ಜಾರಿಕೊಂಡರು.

ಮುದ್ದೇಬಿಹಾಳ: ಮುಖ್ಯಮಂತ್ರಿಗಳು ಕೊಟ್ಟಿರುವ ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಸ್ಥಾನ ತೃಪ್ತಿ ನೀಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು. ಮುದ್ದೇಬಿಹಾಳದಲ್ಲಿ ಪ್ರವಾಹ ನಂತರದ ಪರಿಸ್ಥಿತಿ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ ಎಂದರು. ನಿಮಗೆ ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ …

Read More »

ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನ

ಬೆಂಗಳೂರು: ನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಸಿಎಂ ಬೊಮ್ಮಾಯಿಯವರು ಕೊಟ್ಟಿಲ್ಲ, ನಾನು ಬೇರೆ ಉತ್ತಮ ಖಾತೆಯನ್ನು ನಿರೀಕ್ಷೆ ಮಾಡಿದ್ದೆ ಎಂದು ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ ಎಂದು ಆನಂದ್ ಸಿಂಗ್ ಅವರು ಅಸಮಾಧಾನ ಹೊರಹಾಕಿದ್ದು, ಈ ಬಗ್ಗೆ ನಾಳೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಮಾತನಾಡುತ್ತೇನೆ, ನೋಡೋಣ ಏನಾಗುತ್ತದೆ, ಆ ಮೇಲೆ ಏನು ಮಾಡುವುದು ಎಂದು …

Read More »