ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಿನಾಮೆ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಅಧಿಕಾರದಲ್ಲಿತ್ತು, ಯಡಿಯೂರಪ್ಪ ಮಾತ್ರವಲ್ಲ ಇಡೀ ಬಿಜೆಪಿಯೇ ರಾಜ್ಯದಿಂದ ತೊಲಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪಗೆ ಸರಿಸಾಟಿಯಾದ ನಾಯಕ ಬೇರೆ ಯಾರೂ ಇಲ್ಲ. ಆದರೆ ಯಡಿಯೂರಪ್ಪ ಓರ್ವ ಭ್ರಷ್ಟ ಸಿಎಂ ಆಗಿದ್ದರು. ಯಡಿಯೂರಪ್ಪ ರಾಜೀನಾಮೆ ನೀಡುತ್ತಾರೆ ಎಂದು 6 ತಿಂಗಳ ಹಿಂದೆಯೇ ನಾನು ಹೇಳಿದ್ದೆ. ಇದು ಗೊತ್ತಿರುವ ವಿಚಾರ. …
Read More »ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆಂದು ಕಣ್ಣೀರಿಟ್ಟ ಬಿ.ಎಸ್. ಯಡಿಯೂರಪ್ಪ ಮುಂದಿನ ಸಿಎಂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ?
ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಆಯೋಜನೆ ಮಾಡಲಾಗಿದೆ. ಸಾಧನಾ ಸಮಾವೇಶದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಹಿಂದಿನ ಹೋರಾಟ ನೆನಪುಗಳನ್ನು ನೆನದು ಕಣ್ಣೀರಿಟ್ಟಿದ್ದಾರೆ. ನಿಮ್ಮ ಅಪ್ಪಣೆ ಪಡೆದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ತಮ್ಮ ಹೋರಾಟದ ದಿನಗಳನ್ನು ಭಾಷಣದ ವೇಳೆ ನೆನಪಿಸಿದ ಸಿಎಂ ಬಿಎಸ್ವೈ ಅವರು, ನಾನೊಬ್ಬನೇ ವಿಧಾನಸಭೆಯೊಳಗೆ ಹೋರಾಡಿದ್ದೇನೆ. ನನ್ನ ಕರ್ತವ್ಯವನ್ನ ಮಾಡಿದ್ದೇನೆ.. ನನಗೆ …
Read More »ಬೆಂಗಳೂರಿನಲ್ಲಿ ಮಠಾಧೀಶರ ಸಮಾವೇಶ: ಪ್ರಹ್ಲಾದ್ ಜೋಷಿ, ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ
ಬೆಂಗಳೂರು,ಜು.25: ಇಲ್ಲಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಮಠಾಧೀಶರ ಸಮಾವೇಶದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿ.ಎಸ್.ಯಡಿಯೂರಪ್ಪರ ಅವರನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕು. ಯಾವುದೇ ಕಾರಣಕ್ಕೂ ಯಡಿಯೂರಪ್ಪರನ್ನು ಅಧಿಕಾರದಿಂದ ಕೆಳಗಿಳಿಸುವಂತಿಲ್ಲ ಎಂದು ಕೆಲವು ಮಠಾಧೀಶರು, ಬಿಜೆಪಿ ನಾಯಕರು ಘೋಷಣೆ ಕೂಗಿ, ಒತ್ತಾಯಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಬಳಿಕ ಪೊಲೀಸರು ಮಧ್ಯಪ್ರವೇಶ …
Read More »ಗರ್ಭಿಣಿ ನಿಧನದ ನೋವಲ್ಲೇ ಅಂತ್ಯ ಸಂಸ್ಕಾರ ಮುಗಿಸಿ ಬಂದವರಿಗೆ ಪ್ರವಾಹಕ್ಕೆ ಬಲಿಯಾಗಿತ್ತು ಮನೆ..!
ಬಾಗಲಕೋಟೆ: ಇಷ್ಟು ದಿನ ಕೊರೊನಾ ತನ್ನ ಅಟ್ಟಹಾಸ ಮೆರೆದಿತ್ತು. ಸಾಕಷ್ಟು ಸಾವು ಸಂಭವಿಸಿ ಅದೆಷ್ಟೋ ಜನರ ಬದುಕಲ್ಲಿ ನೋವನ್ನೇ ಉಳಿಸಿ ಹೋಗಿದೆ. ಇದೀಗ ಆರಂಭದ ಮಳೆಯೇ ಪ್ರವಾಹ ಸೃಷ್ಟಿಸಿ ಮತ್ತೆ ಸಾವನ್ನ ಹೆಚ್ಚು ಮಾಡಿದೆ. ಹೌದು ಜಿಲ್ಲೆಯ ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಿರ್ಜಿ ಗ್ರಾಮದ ಲಕ್ಷ್ಮೀ ಎಂಬಾಕೆ ಹೆರಿಗೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಜೋರು ಮಳೆಯ ನಡುವೆಯೇ ಹೇಗೋ ಕಷ್ಟಪಟ್ಟು ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಆ ಬಳಿಕ …
Read More »ಅತ್ಯಾಚಾರ ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಿ : ಉಪ್ಪಾರ ನೌಕರರ ಸಂಘದ ಒತ್ತಾಯ
ಚಿತ್ರದುರ್ಗ : ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮದ ನಮ್ಮ ಉಪ್ಪಾರ ಸಮುದಾಯದ ೧೩ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಉಪ್ಪಾರ ನೌಕರರ ಸಂಘದ ರಾಜ್ಯಾಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು. ಭಾನುವಾರ ಚಿತ್ರದುರ್ಗ ತಾಲೂಕಿನ ಭರಮಸಾಗರ ವ್ಯಾಪ್ತಿಯ ಇಸಾಮುದ್ರಾ ಗ್ರಾಮಕ್ಕೆ ಭೇಟಿ ನೀಡಿ ಬಾಲಕಿಯನ್ನು ಕಳೆದಕೊಂಡ ಪೋಷಕರಿಗೆ ವೈಯಕ್ತಿಕ ಧನಸಹಾಯ ನೀಡಿ ಸಾಂತ್ವನ ಹೇಳಿ ಮಾತನಾಡಿದ ಅವರು ನಮ್ಮ …
Read More »ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಜೆ.ಪಿ ನಡ್ಡಾ
ಬೆಂಗಳೂರು/ಗೋವಾ: ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ರಾಜ್ಯದ ಬಿಜೆಪಿಯಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಗೋವಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ನಡ್ಡಾ, ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಯಡ್ಡಿಯವರ ಬೆನ್ನು ತಟ್ಟಿದ್ದಾರೆ. ಜುಲೈ 25 ಕ್ಕೆ ಯಡಿಯೂರಪ್ಪನವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಅಲ್ಲದೇ ಬೆಳಗಾವಿಯಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂದು ಸಂಜೆ ಹೈಕಮಾಂಡ್ನಿಂದ …
Read More »ನೊಂದ ಕುಟುಂಬಗಳಿಗೆ ಆಸರೆಯಾಗೋಣ: ರಾಹುಲ್ ಜಾರಕಿಹೊಳಿ ನಿರ್ಗತಿಕರ ಸಾತ್ವಾಂನ ಹೇಳಿದ ಯುವ ನಾಯಕ ರಾಹುಲ್
ಗೋಕಾಕ: ರಣ ಭೀಕರ ಮಳೆಗೆ ಘಟಪ್ರಭಾ ನದಿಯ ತೀರದ ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಪ್ರವಾಹ ಪೀಡಿತ ಗ್ರಾಮಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೇಟಿ ನೀಡಿ, ರವಿವಾರ ಪರಿಸ್ಥಿತಿ ಅವಲೋಕಿಸಿದರು. ಅರಭಾವಿ ವಿಧಾನ ಸಭಾ ಮತ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಡಿಬಟ್ಟಿ, ಚಿಗದೊಳ್ಳಿ, ಜಾಕ್ವೆಲ್ ಗೌಡನ್ ಕ್ರಾಸ್ ಮೆಳವಂಕಿ, ಕಲಾರ್ಕೊಪ್ಪ, ಹಡಗಿನಾಳ, ತಳಕಟ್ನಾಳ , ಉದಗಟ್ಟಿ ಗ್ರಾಮದ ಗಂಜಿ ಕೇಂದ್ರಗಳಲ್ಲಿರುವ ನಿರ್ಗತಿಕರನ್ನು ಭೇಟಿ ಮಾಡಿ, …
Read More »ಸಿಎಂ ಬಿಎಸ್ವೈ ಕಡೆಯಿಂದ ಕೊಡಲಾದ ಲಕೋಟೆಯಲ್ಲೇನಿತ್ತು?; ಸ್ವಾಮೀಜಿಯೊಬ್ಬರಿಂದ ಸ್ಪಷ್ಟನೆ ಹೊರಬಿತ್ತು..
ಬೆಂಗಳೂರು: ಕಳೆದೆರಡು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸ್ವಾಮೀಜಿಗಳನೇಕರು ಭೇಟಿಯಾಗಿ, ಬೆಂಬಲ ಸೂಚಿಸಿದ್ದ ಸಂದರ್ಭದ ದೃಶ್ಯಾವಳಿಯೊಂದು ಬಹಳಷ್ಟು ಕಡೆ ಹರಿದಾಡಿತ್ತು. ಸಿಎಂ ಭೇಟಿ ವೇಳೆ ಎಲ್ಲ ಸ್ವಾಮೀಜಿಗಳಿಗೂ ಒಂದು ಲಕೋಟೆ ಕೊಡಲಾಗಿದ್ದು, ಆ ಬಗ್ಗೆ ಹಲವರು ಹಲವಾರು ರೀತಿಯಲ್ಲಿ ಪ್ರತಿಕ್ರಿಯಿಸಿದ್ದರಿಂದ ಆ ವಿಡಿಯೋ ಸಾಕಷ್ಟು ಹಂಚಿಕೆ ಆಗಿತ್ತು. ಇದೀಗ ಆ ಕುರಿತು ಸ್ವಾಮೀಜಿಯೊಬ್ಬರು ಮಾತನಾಡಿದ್ದಾರೆ. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮ್ಮೇಳನದಲ್ಲಿ ದಿಂಗಾಲೇಶ್ವರ …
Read More »ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ: ಸಚಿವ ಬಸವರಾಜ ಬೊಮ್ಮಾಯಿ
ಹಾವೇರಿ: ‘ಮನೆ ಕಳೆದು ಕೊಂಡವರಿಗೆ ತಕ್ಷಣ ₹10 ಸಾವಿರ ಪರಿಹಾರ ಪಾವತಿ ನೀಡಬೇಕು. ಅತಿವೃಷ್ಟಿ ಮತ್ತು ನೆರೆಯಿಂದ ಹಾನಿಯ ಕುರಿತು ಸಮೀಕ್ಷೆ ನಡೆಸಲಾಗುವುದು ಹಾಗೂ ತೊಂದರೆಗೊಳದವರಿಗೆ ಪರ್ಯಾಯ ವ್ಯವಸ್ಥೆಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರವಾಹ ಹಾಗೂ ಅತಿವೃಷ್ಟಿ ಪರಿಶೀಲನೆಗಾಗಿ ಶನಿವಾರ ಶಿಗ್ಗಾವಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ದೊಡ್ಡ ಪ್ರಮಾಣದ ಮಳೆ ಕಾರಣ ಜಿಲ್ಲೆಯ …
Read More »ಬೆಂಗಳೂರು; ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರ ದುರ್ಮರಣ
ಬೆಂಗಳೂರು: ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಭದ್ರಪ್ಪ ಲೇಔಟ್ನಲ್ಲಿ ಸಂಭವಿಸಿದೆ. ಓರ್ವ ಪುರುಷ(30) ಮತ್ತು ಓರ್ವ ಮಹಿಳೆ(40) ಮೃತ ಪಟ್ಟಿದ್ದಾರೆ. ರೈಲು ಬರುವುದು ಗಮನಿಸದೆ ಹಳಿ ದಾಟಲು ಯತ್ನಿಸಿದ್ದು ರೈಲಿಗೆ ಸಿಕ್ಕಿ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೈಯಪ್ಪನ ಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಭದ್ರಪ್ಪ ಲೇಔಟ್ನಲ್ಲಿ ಘಟನೆ ನಡೆದಿದೆ. ಸದ್ಯ ಎರಡು ಮೃತದೇಹಗಳನ್ನು ಬೋರಿಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು ಪೊಲೀಸರು …
Read More »
Laxmi News 24×7