Breaking News

ಜಿಲ್ಲೆ

ಬೆಂಗಳೂರು: ಪತಿ ಹತ್ಯೆಗೆ ಸುಪಾರಿ ಕೊಟ್ಟ ಪತ್ನಿ, ಪೊಲೀಸರ ಸಮಯಪ್ರಜ್ಞೆಯಿಂದ ಉಳಿದ ಅಮಾಯಕ ಜೀವ

ಬೆಂಗಳೂರು: ಪ್ರಿಯಕರನ ಜೊತೆಗೆ ಸೇರಿ ಗಂಡನಿಗೆ ಸುಪಾರಿ ನೀಡಿ ಪತ್ನಿಯೇ ಕೊಲೆ ಮಾಡಿಸಲು ಯತ್ನಸಿದ ಘಟನೆ ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಪ್ರಕರಣದಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ಮುಗ್ಧ ವ್ಯಕ್ತಿಯೊಬ್ಬರ ಜೀವ ಉಳಿದಂತಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿ ನಿವಾಸಿಯಾಗಿರುವ ರೂಪ ಮತ್ತು ಗಿರೀಶ್ ಮದುವೆ ಆರು ವರ್ಷಗಳ ಹಿಂದೆ ನಡೆದಿತ್ತು. ಕೆಲ ದಿನಗಳ ಕಾಲ ಮನೆಯಲ್ಲೇ ಇದ್ದ ಪತ್ನಿ ರೂಪ ಇತ್ತೀಚೆಗೆ ಕೆಲಸಕ್ಕೆ ಸೇರಿಕೊಂಡಿದ್ದಳು. ಕೆಲಸಕ್ಕೆ ಸೇರಿದ ನಂತರ ರೂಪಾಗೆ ಕುಮಾರ್ ಜೈನ್ …

Read More »

ಬೆಂಗಳೂರಿಗರೇ ಗಮನಿಸಿ; ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಣೆ

ಬೆಂಗಳೂರು: ಮೆಟ್ರೋ ರೈಲು ಸಂಚಾರದ ಅವಧಿ ರಾತ್ರಿ 9ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಬೆಳಗ್ಗೆ 7ರಿಂದ ರಾತ್ರಿ 8ರವರೆಗೆ ನಮ್ಮ ಮೆಟ್ರೋ ಸಂಚರಿಸುತ್ತಿತ್ತು. ಆದರೆ ಈಗ ರಾತ್ರಿ 9ರವರೆಗೆ ಮೆಟ್ರೋ ಸಂಚಾರ ಸೇವೆಯನ್ನು ಒದಗಿಸವಂತೆ ಅವಧಿ ವಿಸ್ತರಿಸಿ ಬಿಎಂಆರ್​ಸಿಎಲ್ ಆದೇಶಿಸಿದೆ. ಈ ಮೂಲಕ ಬೆಂಗಳೂರು ಮಹಾನಗರದ ಮೆಟ್ರೋ (Bengaluru Namma metro) ಪ್ರಯಾಣಿಕರ ಸಂಚಾರಕ್ಕೆ ಇನ್ನಷ್ಟು ಸೌಲಭ್ಯ ಒದಗಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ ವ್ಯವಸ್ಥಾಪಕ ನಿರ್ದೇಶಕರಾಗಿ …

Read More »

ಇಂದ್ರಜಿತ್‍ಗೆ ಬೆದರಿಕೆ ಕರೆ – ದರ್ಶನ್ ಹಿಂಬಾಲಕರ ವಿರುದ್ಧ ದೂರು

ಬೆಂಗಳೂರು: ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಡುವಿನ ವಾಕ್ಸಮರದ ನಡುವೆ ಇದೀಗ ಇಂದ್ರಜಿತ್ ಗೆ ಬೆದರಿಕೆ ಕರೆಗಳು ಬರಲು ಆರಂಭಿಸಿವೆ. ಈ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಇಂದ್ರಜಿತ್, ಕಳೆದ 24 ಗಂಟೆಗಳಿಂದ ಫೋನ್ ಕರೆಗಳು ನಿರಂತರವಾಗಿ ಬರುತ್ತಿವೆ. ಈ ಮೂಲಕ ದರ್ಶನ್ ಹಿಂಬಾಲಕರು ದುರ್ವರ್ತನೆ ತೋರುತ್ತಿದ್ದಾರೆ. 30 ರಿಂದ 35 ಜನರಿಂದ ರಾತ್ರಿ ಹಗಲು ಫೋನ್ ಮಾಡ್ತಿದ್ದಾರೆ ಎಂದು ದೂರಿದ್ದಾರೆ. ಬೆದರಿಕೆ ಕರೆಗಳು …

Read More »

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ. ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು …

Read More »

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ”: ಉಮೇಶ್ ಕತ್ತಿ

ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …

Read More »

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಅವೈಜ್ಞಾನಿಕ: ಸತೀಶ ಜಾರಕಿಹೊಳಿ

ಬೆಳಗಾವಿ: ಮುಖ್ಯಮಂತ್ರಿ ಹುದ್ದೆಯಿಂದ ಒಬ್ಬರು ಕೆಳಗಿಳಿಯುತ್ತಾರೆ; ಮತ್ತೊಬ್ಬರು ಆ ಹುದ್ದೆಗೇರುತ್ತಾರೆ. ಆದರೆ, ಕೆಳಗಿಳಿಯುವವರಿಂದ ಯಾವ ವಾಣಿ (ಸಂದೇಶ) ಹೊರಬರುತ್ತದೆ ಎಂದು ಕಾಯುತ್ತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಕಾಂಗ್ರೆಸ್‌ಗೆ ಯಾವ ಲಾಭವೂ ಇಲ್ಲ; ನಷ್ಟವೂ ಇಲ್ಲ. ಮುಖ್ಯಮಂತ್ರಿ ಬದಲಾದರೂ ಸರ್ಕಾರ ಅವರದ್ದೇ ಇರುತ್ತದೆ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದರು. ಮಧ್ಯಂತರ ಚುನಾವಣೆ ಬಂದರೂ …

Read More »

ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ

ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …

Read More »

ಯಡಿಯೂರಪ್ಪ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್

ವಿಜಯಪುರ : ಕಾಂಗ್ರೆಸ್ ಪಕ್ಷದ‌ ಲಿಂಗಾಯತ ಸಮುದಾಯದ ಹಿರಿಯ ಶಾಸಕ‌ ಎಂ.ಬಿ.ಪಾಟೀಲ‌ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ. ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ‌ ನಾಡಿಗೆ ನೀಡಿದ …

Read More »

ಸಿಎಂ ಬದಲಾವಣೆ ನಿಶ್ಚಿತ, ಈಶ್ವರಪ್ಪ, ಜಗದೀಶ್‌ ಶೆಟ್ಟರ್‌ ಕೂಡ ಹೊರಕ್ಕೆ – ನಳೀನ್‌ ಕುಮಾರ್‌ ಕಟೀಲ್‌ ಆಡಿಯೋ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಕೆಳಗಿಳಿಯುವುದು ನಿಶ್ಚಿತವಾಗಿದ್ದು ಹಿರಿಯ ನಾಯಕರಾದ ಜಗದೀಶ್‌ ಶೆಟ್ಟರ್‌ ,ಈಶ್ವರಪ್ಪ  ಅವರನ್ನು ಕೂಡ ಹೊರಗಿಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲು ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದು ಬಹಿರಂಗವಾಗಿದೆ. ತಮ್ಮ ಅಪ್ತರ ಬಳಿ ತುಳು ಭಾಷೆಯಲ್ಲಿ ಮಾತುಕತೆ ನಡೆಸಿರುವ ನಳೀನ್‌ ಕುಮಾರ್‌ ಕಟೀಲ್‌ ಅವರು, ಈ ಸಂಗತಿಯನ್ನು ಬಹಿರಂಗಪಡಿಸಿರುವ ರೀತಿ ಯಡಿಯೂರಪ್ಪ ಅವರ ಪದಚ್ಯುತಿಯ ಸುಳಿವು ನೀಡಿದೆಯಲ್ಲದೆ ಸಧ್ಯದಲ್ಲೇ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ಬರಲಿದ್ದಾರೆ …

Read More »

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು. ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ …

Read More »